“ದೇವರ ಸೇವೆ ಮಾಡುವ ಅವಕಾಶ ಸಿಕ್ಕಿದಂತಾಯಿತು’

 ಸೋಂಕಿತರ ಶುಶ್ರೂಷೆಗೈದ ದಾದಿಯರ ಮಾತು

Team Udayavani, Jun 1, 2020, 5:10 AM IST

“ದೇವರ ಸೇವೆ ಮಾಡುವ ಅವಕಾಶ ಸಿಕ್ಕಿದಂತಾಯಿತು’

ಕುಂದಾಪುರ: ಕೋವಿಡ್‌- 19 ಸೇವೆಗೆ ಆಹ್ವಾನಿಸಿದಾಗ ನಾನು ಹೆದರಿದ್ದೆ. ಎಷ್ಟೋ ಮಂದಿ ಕೋವಿಡ್‌-19 ಇದೆ, ಕರ್ತವ್ಯಕ್ಕೆ ಹೋಗಬೇಡ ಎಂದು ಹೆದರಿಸಿದ್ದರು. ಆದರೆ ನಾನು ಗಟ್ಟಿಮನಸ್ಸು ಮಾಡಿ ಇಲ್ಲಿ ಸೇವೆಗೆ ಸೇರಿದೆ.

ಸಿದ್ದಾಪುರದಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ತಾಳ್ಮೆ ಕಡಿಮೆಯಿತ್ತು. ವೈದ್ಯರಿಂದ, ಶುಶ್ರೂಷಕಿಯರಿಂದ ತಾಳ್ಮೆಯನ್ನು ಕಲಿತೆ. ಕೋವಿಡ್‌- 19 ಪೀಡಿತರ ಸೇವೆ ಮಾಡುವ ಮೂಲಕ ನನಗೆ ದೇವರ ಸೇವೆ ಮಾಡಲು ಅವಕಾಶ ದೊರೆತಂತಾಯಿತು. ಇದು ನನ್ನ ಜೀವನದ ಭಾಗ್ಯವೇ ಸರಿ. ಹೀಗಂತ ಹೇಳುತ್ತಾ ಕಣ್ಣಾಲಿಗಳಲ್ಲಿ ನೀರು ತುಂಬಿಕೊಂಡವರು ಕೋವಿಡ್‌-19 ಸರಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕೊರೊನಾ ವಾರಿಯರ್‌ ಮಂಜುಳಾ ಅವರು.

ರವಿವಾರ ಮೊದಲ ತಂಡದ 14 ಮಂದಿ ಗುಣಮುಖರಾಗಿ ಬಿಡುಗಡೆಯಾದಾಗ ಈ ಆಸ್ಪತ್ರೆಯ ಕೋವಿಡ್‌- 19 ವಾರಿಯ ರ್ಸ್‌ಗಳ ಮುಖದಲ್ಲಿ ಹರ್ಷ ತಾಂಡವವಾಡುತ್ತಿತ್ತು. ಹಿರಿಯ ಅಧಿಕಾರಿಗಳು ಗುಣಮುಖರಾದವರಿಗೆ ಹೂವು, ಹೂಗಿಡ, ಮಕ್ಕಳಿಗೆ ಚಾಕಲೇಟ್‌ ನೀಡಿ ಅಭಿನಂದಿಸುತ್ತಿದ್ದರೆ ಅಲ್ಲಿ ಸೇರಿದ್ದ ಅಷ್ಟೂ ಮಂದಿ ಸಿಬಂದಿ ಚಪ್ಪಾಳೆ ಮೂಲಕ ಜೀವನೋಲ್ಲಾಸ ಹೆಚ್ಚಿಸುತ್ತಿದ್ದರು.

ಮೊದಲು ಮಾತ್ರೆಗಳನ್ನು ಸೇವಿಸಿಯೇ ಸೇವೆಗೆ ತೆರಳುತ್ತಿದ್ದೆವು. ಅನಂತರ ಭಯವೆಲ್ಲ ಹೊರಟು ಹೋಯಿತು. ಯಾವುದೇ ಭಯವಿಲ್ಲದೆ ಕೆಲಸ ಮಾಡುವುದು ಅಭ್ಯಾಸವಾಯಿತು ಎನ್ನುತ್ತಾರೆ ದಾದಿ ಸುರೇಖಾ.

ಗುಣಮುಖರಾಗಿ ಬಂದ ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿ, ರೋಗದ ಕುರಿತಾಗಿ ಭಯ ಬೇಡ. ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಅತ್ಯುತ್ತಮ ಚಿಕಿತ್ಸೆ ದೊರೆತಿದೆ. ಈ ನಿಟ್ಟಿನಲ್ಲಿ ಕೂಡಾ ಆತಂಕ ಅನಗತ್ಯ ಎಂದು ಪ್ರತಿಕ್ರಿಯಿಸಿದರು.

ಸಹಾಯಕ ಕಮಿಷನರ್‌ ಕೆ. ರಾಜು, ಇಲ್ಲಿನ ಆಸ್ಪತ್ರೆಯಲ್ಲಿ 78 ಜನರ ಪೈಕಿ 14 ಮಂದಿಯ ವರದಿ ನೆಗೆಟಿವ್‌ ಬಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಮುಂದಿನ ದಿನಗಳಲ್ಲಿ ಸಾಮಾಜಿಕ ವೈಯಕ್ತಿಕ ಅಂತರ ಕಾಪಾಡುವುದೂ ಸೇರಿದಂತೆ ಕೋವಿಡ್‌- 19 ಹರಡುವುದನ್ನು ತಡೆಗಟ್ಟಲು ಪ್ರಯತ್ನಗಳು ಮುಂದುವರಿಯಲಿ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀರ್‌ಚಂದ್ರ ಸೂಡ, ಜಿಲ್ಲೆಯಲ್ಲಿ 175 ಪ್ರಕರಣಗಳನ್ನು ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದ್ದು ಜನರಿಗೆ ಚಿಕಿತ್ಸೆ ಕುರಿತು ಆತಂಕ ಅನಗತ್ಯ. ಎಷ್ಟೇ ಪ್ರಕರಣ ಬಂದರೂ ಜಿಲ್ಲೆಯಲ್ಲಿ ಸಮರ್ಥವಾಗಿ ಎದುರಿಸಲು ವೈದ್ಯಕೀಯ ತಂಡ ಸದಾ ಸಿದ್ಧವಿದೆ. ಜನರು ಭಯಪಡಬೇಕಿಲ್ಲ, ಆದರೆ ಮುಂಜಾಗೃತ ಕ್ರಮ ವಹಿಸಿ ಸಮುದಾಯಕ್ಕೆ ಹರಡದಂತೆ ತಡೆಯಬೇಕು ಎಂದರು.

ಕೋವಿಡ್‌-19 ಜಿಲ್ಲಾ ನೋಡೆಲ್‌ ಅಧಿಕಾರಿ ಡಾ| ಪ್ರಶಾಂತ್‌ ಭಟ್‌, ಉಡುಪಿ ಜಿಲ್ಲೆಯಲ್ಲಿ ಮಾರ್ಚ್‌ನಿಂದ ಕೋವಿಡ್‌ ಸಂಬಂಧ ಅಭಿಯಾನ ನಡೆಯುತ್ತಿದೆ. ಬೇರೆ ರಾಜ್ಯಗಳಿಂದ ಬಂದವರಿಗೆ ತಪಾಸಣೆ ನಡೆಸಿ ಅವರನ್ನು ಕ್ವಾರಂಟೈನ್‌ನಲ್ಲಿ ಇಟ್ಟು ಜಿಲ್ಲೆಯ 13 ಲಕ್ಷ ಜನರಿಗೆ ಸೋಂಕು ತಗಲದಂತೆ ಪ್ರಯತ್ನ ಮಾಡಿದೆ. ಶನಿವಾರದ ವರೆಗೆ 50, ರವಿವಾರ 14 ಗುಣಮುಖರಾಗಿದ್ದು ಮೊದಲೇ ಆತಂಕವಿದ್ದ ಒಂದು ಪ್ರಕರಣದಲ್ಲಿ ಮಾತ್ರ ಸಾವು ಸಂಭವಿಸಿದೆ. ಉಡುಪಿ ಟಿಎಂಎಪೈ ಆಸ್ಪತ್ರೆಯಲ್ಲಿ 100 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದ್ದು ನಂತರದ ದಿನಗಳಲ್ಲಿ ಹೊರರಾಜ್ಯಗಳಿಂದ ಬರುವವರಲ್ಲಿ ಸೋಂಕು ಲಕ್ಷಣ ಹೆಚ್ಚಾಗಿ ಕಂಡುಬಂದ ಕಾರಣ ಕುಂದಾಪುರ, ಕಾರ್ಕಳದಲ್ಲಿ ಸರಕಾರಿ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಎಲ್ಲ ವೈದ್ಯರು, ವೈದ್ಯಕೀಯ ಸಿಬಂದಿಯ ಅವಿರತ ಪರಿಶ್ರಮದಿಂದ ಉತ್ತಮ ಚಿಕಿತ್ಸೆ ದೊರೆಯುತ್ತಿದೆ ಎಂದರು.

ಮೊದಲ ಸರಕಾರಿ ಆಸ್ಪತ್ರೆ
ಕೋವಿಡ್‌ 19ಗೆ ಚಿಕಿತ್ಸೆ ನೀಡಿ ಪಾಸಿಟಿವ್‌ ಬಂದವರನ್ನು ಗುಣಮುಖರಾಗಿಸಿ ಕಳುಹಿಸಿದ ಜಿಲ್ಲೆಯ ಮೊದಲ ಸರಕಾರಿ ಆಸ್ಪತ್ರೆ ಇದಾಗಿದೆ. ಹೊರರಾಜ್ಯಗಳಿಂದ ಆಗಮಿಸಿದ ಕುಂದಾಪುರ ತಾ|ನ ವಿವಿಧೆಡೆಯ ಮಕ್ಕಳು, ಮಹಿಳೆಯರು, ಹಿರಿಯರು ಸೇರಿದಂತೆ ಇಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ ಎಂದರು.

ಸದಾ ಎಚ್ಚರ ವಹಿಸಿ
ಕ್ವಾರಂಟೈನ್‌ನಿಂದ ಬಿಡುಗಡೆಗೊಂಡವರು, ಗಂಟಲ ದ್ರವ ವರದಿ ಬಾರದೇ ಇದ್ದವರು ಅನವಶ್ಯಕವಾಗಿ ಸುತ್ತಾಡಿ ಒಂದೊಮ್ಮೆ ಸೋಂಕು ಇದ್ದರೆ ಅದು ಹರಡಲು ಕಾರಣವಾಗಬೇಡಿ. ಹೋಂ ಕ್ವಾರಂಟೈನ್‌ ವಿಧಿಸಿದ್ದರೆ ಕಟ್ಟುನಿಟ್ಟಾಗಿ ಪಾಲಿಸಿ. ಸಾಮಾಜಿಕ ಅಂತರ, ಮಾಸ್ಕ್ ಧಾರಣೆ ಸೇರಿದಂತೆ ನಿಯಮಗಳನ್ನು ಪಾಲಿಸಿ.
– ಹರೀಶ್‌ ಆರ್‌. ನಾಯ್ಕ,
ಎಸ್‌ಐ, ಕುಂದಾಪುರ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.