ನಡಂಬೂರು ಸರಕಾರಿ ಕಿ.ಪ್ರಾ. ಶಾಲೆ: ಖಾಯಂ ಶಿಕ್ಷಕರು ಇಲ್ಲ; ಪ್ರಭಾರ ಶಿಕ್ಷಕರು ಬಂದಿಲ್ಲ

ಇನ್ನೂ ಕರ್ತವ್ಯಕ್ಕೆ ಹಾಜರಾಗದ ಪ್ರಭಾರ ಶಿಕ್ಷಕಿ ; ಶಿಕ್ಷಕರಿಲ್ಲದೆ ಪಾಠ- ಪ್ರವಚನಕ್ಕೆ ಮಕ್ಕಳಿಗೆ ಸಮಸ್ಯೆ

Team Udayavani, Jun 14, 2022, 2:59 PM IST

13

ಹಾಲಾಡಿ: ತೀರಾ ಗ್ರಾಮೀಣ ಭಾಗವಾದ ಅಮಾಸೆಬೈಲು ಗ್ರಾ.ಪಂ. ವ್ಯಾಪ್ತಿಯ ರಟ್ಟಾಡಿ ಗ್ರಾಮದ ನಡಂಬೂರಿನ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈಗ ಶಿಕ್ಷಕರೇ ಇಲ್ಲದ ಶೂನ್ಯ ಶಾಲೆಯಾಗಿದೆ. ಇಲ್ಲಿಗೆ ಈ ಸಾಲಿನಲ್ಲಿ ಇಲಾಖೆಯಿಂದ ವಾರಕ್ಕೆರಡು ದಿನ ತಾತ್ಕಾಲಿಕ ನೆಲೆಯಲ್ಲಿ ನಿಯೋಜಿಸಿದರೂ, ಅವರಿನ್ನೂ ಈ ಶಾಲೆಗೆ ಬಂದೇ ಇಲ್ಲ.

ಕುಂದಾಪುರ ವಲಯದ ನಡಂಬೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಸಾಲಿನಲ್ಲಿ ಬೇರೊಂದು ಶಾಲೆಯಿಂದ ಇಲ್ಲಿಗೆ ಶಿಕ್ಷಕರೊಬ್ಬರನ್ನು ಪ್ರಭಾರ ನೆಲೆಯಲ್ಲಿ ನಿಯೋಜಸಲಾಗಿತ್ತು. ಆದರೆ ಈ ಬಾರಿ ಅವರು ಬೇರೆಡೆಗೆ ವರ್ಗವಾಗಿದ್ದು, ಈಗ ಈ ಶಾಲೆಯಲ್ಲಿ ಖಾಯಂ ಶಿಕ್ಷಕರೇ ಇಲ್ಲ. ಈಗಿರುವುದು ಕೇವಲ ಗೌರವ ಶಿಕ್ಷಕಿ ಮಾತ್ರ.

ದಾಖಲಾತಿಗೂ ತೊಂದರೆ: ಇಲ್ಲಿ ಖಾಯಂ ಶಿಕ್ಷಕರಿಲ್ಲದೆ ಈ 2022-23ನೇ ಸಾಲಿನ ದಾಖಲಾತಿ ಪ್ರಕ್ರಿಯೆಗೆ ಸಮಸ್ಯೆಯಾಗಿದೆ. ಇದರಿಂದ ಈ ಬಾರಿಯ ದಾಖಲಾತಿಯು ಕುಂಠಿತಗೊಂಡಿದೆ. ಸದ್ಯ ಶಾಲೆಯಲ್ಲಿ 16 ಮಕ್ಕಳಿದ್ದು, ಒಬ್ಬರೇ ಗೌರವ ಶಿಕ್ಷಕಿಯಿದ್ದಾರೆ.

ಇದರಿಂದಾಗಿ ಪಾಠ- ಪ್ರವಚನಕ್ಕೆ ಮಕ್ಕಳಿಗೆ ಸಮಸ್ಯೆಯಾಗುತ್ತಿದೆ. ಕಳೆದ 3 ವರ್ಷಗಳಿಂದ ಈ ಶಾಲೆಯಲ್ಲಿ ಖಾಯಂ ಶಿಕ್ಷಕರಿಲ್ಲ. ಅಲ್ಲಿಂದೀಚೆಗೆ ಇಲ್ಲಿಗೆ ಬೇರೊಂದು ಶಾಲೆಯ ಶಿಕ್ಷಕರನ್ನು ಪ್ರಭಾರ ನೆಲೆಯಲ್ಲಿ ನಿಯೋಜಿಸಲಾಗುತ್ತಿದೆ. 2 ಶಿಕ್ಷಕ ಹುದ್ದೆಗಳು ಖಾಲಿಯಿವೆ.

ಒಬ್ಬರ ನಿಯೋಜನೆ: ಈ ಶೈಕ್ಷಣಿಕ ಸಾಲಿನಲ್ಲಿ ಈ ಶಾಲೆಯನ್ನು ಶೂನ್ಯ ಶಿಕ್ಷಕರಿರುವ ಶಾಲೆಯೆಂದು ಗುರುತಿಸಿ, 2022-23ನೇ ಸಾಲಿನಲ್ಲಿ ಇಲ್ಲಿಗೆ ಬೆಪ್ಡೆ ಶಾಲೆಯ ಶಿಕ್ಷಕಿಯೊಬ್ಬರನ್ನು ತತ್‌ಕ್ಷಣದಿಂದ ಜಾರಿಗೆ ಬರುವಂತೆ ವಾರದಲ್ಲಿ 2 ದಿನ (ಸೋಮವಾರ ಹಾಗೂ ಗುರುವಾರ) ಈ ಶಾಲೆಗೆ ಕರ್ತವ್ಯಕ್ಕೆ ಹಾಜರಾಗುವಂತೆ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಮೇ 30ರಂದು ಆದೇಶ ಹೊರಡಿಸಿದ್ದರು. ಆದರೆ ನಿಯೋಜನೆಗೊಂಡ ಶಿಕ್ಷಕಿ ಈ ಶಾಲೆಗೆ ಒಂದು ದಿನವೂ ಕರ್ತವ್ಯಕ್ಕೆ ಹಾಜರಾಗಿಲ್ಲ. ಇದರಿಂದ ಮಕ್ಕಳಿಗೆ ಮಾತ್ರ ನಿತ್ಯವೂ ತೊಂದರೆಯಾಗುತ್ತಿದೆ.

ಶೀಘ್ರ ಕ್ರಮ: ನಡಂಬೂರು ಶಾಲೆಗೆ ಮುಖ್ಯ ಶಿಕ್ಷಕರ ನೆಲೆಯಲ್ಲಿ ಪ್ರವೀಣ್‌ ಕುಮಾರ್‌ ಶೆಟ್ಟಿ ಹಾಗೂ ಶಿಕ್ಷಕಿಯಾಗಿ ಪ್ರಭಾರ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಆದೇಶ ಹೊರಡಿಸಲಾಗಿದೆ. ಇವರು ಅಲ್ಲಿಗೆ ಬರದ ಬಗ್ಗೆ ಕೂಡಲೇ ಪರಿಶೀಲನೆ ನಡೆಸಿ ಸರಿಪಡಿಸಲಾಗುವುದು. -ಅರುಣ್‌ ಕುಮಾರ್‌ ಶೆಟ್ಟಿ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ

ಸುದಿನ ವರದಿ:

ನಡಂಬೂರು ಶಾಲೆಯಲ್ಲಿ ಖಾಯಂ ಶಿಕ್ಷಕರಿಲ್ಲದೆ ಬಗ್ಗೆ “ಉದಯವಾಣಿ ಸುದಿನ’ವು 2022ರ ಎ. 4ರಂದು ವಿಶೇಷ ವರದಿ ಪ್ರಕಟಿಸಿ, ಗಮನಸೆಳೆದಿತ್ತು. ಆ ಬಳಿಕ ಕಳೆದ ಮೇಯಲ್ಲಿ ಶಿಕ್ಷಣಾಧಿಕಾರಿಗಳು ಪ್ರಭಾರ ನೆಲೆಯಲ್ಲಿ ಶಿಕ್ಷಕಿಯೊಬ್ಬರನ್ನು ನಿಯೋಜಿಸಿ ಆದೇಶ ಹೊರಡಿಸಿದ್ದರು. ಆದರೆ ಆ ಶಿಕ್ಷಕಿ ಮಾತ್ರ ಇನ್ನೂ ಶಾಲೆಗೆ ಬಂದಿಲ್ಲ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.