ಜು. 15ಕ್ಕೆ “ಸ್ಕಿಲ್‌ ಕನೆಕ್ಟ್’ ಜಾಲತಾಣ ಲೋಕಾರ್ಪಣೆ: ಸಚಿವ ಡಾ| ಅಶ್ವತ್ಥ ನಾರಾಯಣ

ಕುಂದಾಪುರದಲ್ಲಿ ಬೃಹತ್‌ ಉದ್ಯೋಗ ಮೇಳ

Team Udayavani, Jun 30, 2022, 6:25 AM IST

ಜು. 15ಕ್ಕೆ “ಸ್ಕಿಲ್‌ ಕನೆಕ್ಟ್’ ಜಾಲತಾಣ ಲೋಕಾರ್ಪಣೆ: ಸಚಿವ ಡಾ| ಅಶ್ವತ್ಥ ನಾರಾಯಣ

ಕುಂದಾಪುರ: ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರನ್ನು ಒಂದೇ ವೇದಿಕೆಯಡಿ ತರಲು ಹೆಚ್ಚು ಪರಿಣಾಮಕಾರಿಯಾಗಿ ರೂಪಿಸಿದ ಕೌಶಲಾಭಿವೃದ್ಧಿ ಇಲಾಖೆಯ ಪರಿಷ್ಕೃತ “ಸ್ಕಿಲ್‌ ಕನೆಕ್ಟ್ ಪೋರ್ಟಲ್‌’ ಅನ್ನು ವಿಶ್ವ ಯುವಜನ ಕೌಶಲಾಭಿವೃದ್ಧಿ ದಿನವಾದ ಜು. 15ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಕೌಶಲಾಭಿವೃದ್ಧಿ, ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌. ಅಶ್ವತ್ಥ ನಾರಾಯಣ ಹೇಳಿದರು.

ಅವರು ಬುಧವಾರ ಭಂಡಾರ್‌ಕಾರ್ಸ್‌ ಕಾಲೇಜಿನಲ್ಲಿ ಕೌಶಲಾಭಿವೃದ್ಧಿ ಇಲಾಖೆ ಏರ್ಪಡಿಸಿದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ಅತ್ಯಂತ ಹೆಚ್ಚಿನ ಸಂಖ್ಯೆಯ ಪ್ರತಿಭಾವಂತರು ರಾಜ್ಯದಲ್ಲಿದ್ದಾರೆ. ಅವರ ಇಚ್ಛೆಯ ಶಿಕ್ಷಣ ಪಡೆದರೂ ಕನಸಿನ ಉದ್ಯೋಗ ಪಡೆಯಲು ಬೇಕಾದ ಮಾಹಿತಿಯ ಕೊರತೆಯಿದೆ. ಉದ್ಯೋಗಾ ಕಾಂಕ್ಷಿಗಳು, ಉದ್ಯೋಗದಾತರು, ಕೌಶಲಾಭಿವೃದ್ಧಿ ಮಾಹಿತಿಗಳು ಒಂದೇ ಕಡೆ ದೊರೆಯುವ ಸ್ಕಿಲ್‌ ಕನೆಕ್ಟ್ ಪೋರ್ಟಲ್‌ನಿಂದ ವರ್ಚುವಲ್‌ ಮೂಲಕ ಯುವ ಜನತೆಯು ತಮ್ಮಿಷ್ಟದ ಉದ್ಯೋಗ ಪಡೆಯಲು ಬೇಕಿರುವ ಅರ್ಹತೆ, ಕೌಶಲ, ಲಭ್ಯವಿರುವ ಉದ್ಯೋಗಗಳು ಮತ್ತು ಅಂತಹ ಉದ್ಯೋಗ ನೀಡುವ ಸಂಸ್ಥೆಗಳ ಸಂಪೂರ್ಣ ವಿವರಗಳನ್ನು ಸರಳ ರೀತಿಯಲ್ಲಿ ಪಡೆಯಬಹುದಾಗಿದೆ ಎಂದರು.

ಉದ್ಯೋಗ ಕೊರತೆ ಇಲ್ಲ;
ಸೇರುವವರ ಕೊರತೆ !
ರಾಜ್ಯದಲ್ಲಿ ಉದ್ಯೋಗಗಳಿಗೆ ಕೊರತೆ ಇಲ್ಲ, ಉದ್ಯೋಗಕ್ಕೆ ಸೇರುವವರ ಕೊರತೆ ಇದೆ. ಬೇರೆ ರಾಜ್ಯಗಳಿಂದ ಹೆಚ್ಚಿನ ಜನತೆ ಉದ್ಯೋಗ ಅರಸಿ ರಾಜ್ಯಕ್ಕೆ ಬರುತ್ತಿದ್ದಾರೆ. ಹೊರದೇಶಗಳಿಗೆ ಉದ್ಯೋಗಕ್ಕೆ ತೆರಳುವವರಿಗೆ ಉಡುಪಿ ಐಎಂಸಿ ಕೇಂದ್ರದಲ್ಲಿ ಮಾಹಿತಿ, ನೆರವು ನೀಡಲಾಗುತ್ತಿದೆ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿಯಡಿ ತಾಂತ್ರಿಕತೆಯ ಜ್ಞಾನಶಾಖೆಗಳಾದ ಡ್ಯಾಟಾ ಅನಾಲಿಟಿಕ್ಸ್‌, ಕೃತಕ ಬುದ್ಧಿಮತ್ತೆ, ಸೈಬರ್‌ ಸೆಕ್ಯುರಿಟಿ ಕಲಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಇದಕ್ಕಾಗಿ ನ್ಯಾಸ್ಕಾಂ ಜತೆ ಒಪ್ಪಂದ ಮಾಡಿಕೊಂಡಿರುವ ಮೊದಲ ರಾಜ್ಯ ಕರ್ನಾಟಕ. ಇನ್ಫೋಸಿಸ್‌ ಸ್ಪ್ರಿಂಗ್‌ ಬೋರ್ಡ್‌ ಜತೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಅದರಲ್ಲಿ 5 ಸಾವಿರ ಆ್ಯಡ್‌ ಆನ್‌ ಕೋರ್ಸ್‌ಗಳಿವೆ. ಸರಕಾರಿ ಕಾಲೇಜುಗಳಿಗೆ ಐಟಿ ಸಂಸ್ಥೆಗಳಿಂದ 27 ಸಾವಿರ ಕಂಪ್ಯೂಟರ್‌ಗಳನ್ನು ಕೊಡಿಸಲಾಗಿದೆ ಎಂದರು.

2,000ಕ್ಕೂ ಹೆಚ್ಚು
ಉದ್ಯೋಗಾವಕಾಶ
ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಇಂದಿನ ಉದ್ಯೋಗ ಮೇಳದಲ್ಲಿ 2,000ಕ್ಕೂ ಅಧಿಕ ಮಂದಿಗೆ ಉದ್ಯೋಗ ನೀಡಲು ಸಾಧ್ಯವಿದ್ದು 2,800ಕ್ಕೂ ಹೆಚ್ಚು ಆನ್‌ಲೈನ್‌ ನೋಂದಣಿಯಾಗಿವೆ. 59ಕ್ಕೂ ಅಧಿ ಕ ಕಂಪೆನಿಗಳು ಭಾಗವಹಿಸಿದ್ದು, ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಕಂಪೆನಿಗಳು ಶೀಘ್ರದಲ್ಲಿ ನೇಮಕ ಆದೇಶ ನೀಡಬೇಕು ಎಂದರು.

ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್‌ ಮೆಂಡನ್‌ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ನಾಗರಿಕ ಆಹಾರ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್‌ ಕೊಡ್ಗಿ, ಪುರಸಭೆ ಉಪಾಧ್ಯಕ್ಷ ಸಂದೀಪ್‌ ಖಾರ್ವಿ, ಭಂಡಾರ್‌ಕಾರ್ಸ್‌ ಕಾಲೇಜಿನ ಆಡಳಿತ ಮಂಡಳಿ ವಿಶ್ವಸ್ತ ಶಾಂತಾರಾಮ ಪ್ರಭು, ಭಂಡಾರ್‌ಕಾರ್ಸ್‌ ಪಿಯು ಕಾಲೇಜಿನ ಪ್ರಾಂಶುಪಾಲ ಡಾ| ಜಿ.ಎಂ. ಗೊಂಡ ಉಪಸ್ಥಿತರಿದ್ದರು.

ಜಿಲ್ಲಾ ಕೌಶಲಾಭಿವೃದ್ಧಿ ಅಧಿ ಕಾರಿ ಜಗದೀಶ್‌ ಸ್ವಾಗತಿಸಿ, ಭಂಡಾರ್‌ಕಾರ್ಸ್‌ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಎನ್‌.ಪಿ. ನಾರಾಯಣ ಶೆಟ್ಟಿ ವಂದಿಸಿದರು. ಅಕ್ಷಯ್‌ ಹೆಗ್ಡೆ ಮೊಳಹಳ್ಳಿ ನಿರೂಪಿಸಿದರು.

“ಸವಾಲುಗಳನ್ನು ಎದುರಿಸುವ ಶಕ್ತಿ ದೇಶಕ್ಕಿದೆ’
ಕುಂದಾಪುರ: ಭಾರತೀಯರು “ವಸುಧೈವ ಕುಟುಂಬಕಂ’ ಕಲ್ಪನೆಯೊಂದಿಗೆ ಶಾಂತಿಯುತವಾಗಿ ಬಾಳುತ್ತಿದ್ದು ನೂರಾರು ಸವಾಲುಗಳನ್ನು ಎದುರಿಸಿರುವ ದೇಶಕ್ಕೆ ಅಪಾರ ಶಕ್ತಿ ಇದೆ. ಉದಯಪುರದ ಘಟನೆ ಖಂಡನೀಯ.
ಹತ್ಯೆಕೋರರು ಪ್ರಧಾನಿಯವರಿಗೆ ಬೆದರಿಕೆಯೊಡ್ಡಿದ್ದಾರೆ. ಅದಕ್ಕೆ ಹೆದರುವವರು ನಾವಲ್ಲ. ಅವರಿಂದ ಪ್ರಧಾನಿಯವರ ಕಣ್ಣು ಹಾಗೂ ಕೂದಲು ಕೂಡ ಮುಟ್ಟಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ| ಸಿ. ಅಶ್ವತ್ಥನಾರಾಯಣ್‌ ಹೇಳಿದರು.

ಕುಂದಾಪುರದಲ್ಲಿ ಬುಧವಾರ ಉದ್ಯೋಗಮೇಳದಲ್ಲಿ ಪಾಲ್ಗೊಂಡಿದ್ದ ಅವರು ಪತ್ರಕರ್ತರ ಜತೆ ಮಾತನಾಡಿ, ಅಮಾಯಕನ ಶಿರಚ್ಛೇದದ ಮೂಲಕ ತಮ್ಮ ಕೀಳು ಮನಸ್ಥಿತಿ ಮತ್ತು ಸಂಸ್ಕೃತಿಯನ್ನು ಪ್ರದರ್ಶಿಸಿದ್ದಾರೆ ಎಂದರು.

ನಾವು ನಮ್ಮ ಧರ್ಮದ ಪರವಾಗಿ ಒಳ್ಳೆಯ ಸಂದೇಶ ನೀಡಬೇಕು. ಪ್ರಜಾ ಪ್ರಭುತ್ವದಲ್ಲಿ ಎಲ್ಲ ಸಂಸ್ಕೃತಿ, ಧರ್ಮವನ್ನು ಕಾಪಾಡಿಕೊಂಡು, ಅನುಷ್ಠಾನಿಸಿಕೊಂಡು ಹೋಗಲು ಅವಕಾಶವಿದೆ. ಆದರೆ ಕಾನೂನನ್ನು ಕೈಗೆ ತೆಗೆದುಕೊಳ್ಳಲು ಅವಕಾಶವಿಲ್ಲ. ಇದನ್ನು ಯಾವ ಧರ್ಮವೂ ಹೇಳಿಲ್ಲ. ಅಧರ್ಮಿಗಳು, ಮೂಢರು ಕೃತ್ಯ ಎಸಗಿದ್ದಾರೆ. ಇಂತಹ ಕ್ರೌರ್ಯ ಮರುಕಳಿಸದಂತೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದರು.

ಸರಕಾರಿ ಮೆಡಿಕಲ್‌ ಕಾಲೇಜು
ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್‌ ಕಾಲೇಜು ಸ್ಥಾಪನೆಯ ಬಗ್ಗೆ ಹಂತ ಹಂತವಾಗಿ ಯೋಜನೆ ನಡೆಯುತ್ತಿದೆ. ಮುಖ್ಯಮಂತ್ರಿಗಳ ನಾಯಕತ್ವದಲ್ಲಿ ಉಡುಪಿ ಜಿಲ್ಲೆಯ ಬಗ್ಗೆ ವಿಶೇಷ ಯೋಜನೆ ರೂಪಿಸುತ್ತೇವೆ ಎಂದರು.

ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಕಾಲೇಜಿಗೆ ಬರಲು ಸರಕಾರಿ ಬಸ್‌ಗಳ ಕೊರತೆ ಕುರಿತು ಗಮನಕ್ಕೆ ತಂದಾಗ, ಸಂಬಂಧಪಟ್ಟವರ ಜತೆ ಮಾತನಾಡುವುದಾಗಿ ಹೇಳಿದರು. ಗೋಳಿಯಂಗಡಿಯಲ್ಲಿ ನೂತನ ಪದವಿ ಕಾಲೇಜು ಸ್ಥಾಪನೆಗೆ ಬೇಡಿಕೆ ಕುರಿತು ಗಮನ ಸೆಳೆದಾಗ, ಸದ್ಯ ಯಾವುದೇ ಹೊಸ ಕಾಲೇಜುಗಳ ರಚನೆ ಪ್ರಸ್ತಾವ ಸರಕಾರದ ಮುಂದೆ ಇಲ್ಲ. ಈಗ ಇರುವ ಕಾಲೇಜುಗಳ ಸ್ಥಿತಿಗತಿ ಸುಧಾರಣೆಗೆ ಒತ್ತು ನೀಡಲಾಗುವುದು ಎಂದರು.

 

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.