ನಾಮಪತ್ರ ಸಲ್ಲಿಕೆ ಜತೆಗೆ ಮನೆಮನೆ ಪ್ರಚಾರವೂ ಬಿರುಸು


Team Udayavani, Dec 15, 2020, 4:36 AM IST

ನಾಮಪತ್ರ ಸಲ್ಲಿಕೆ ಜತೆಗೆ ಮನೆಮನೆ ಪ್ರಚಾರವೂ ಬಿರುಸು

ಕುಂದಾಪುರ: ಹಳ್ಳಿ ಹಳ್ಳಿಗಳಲ್ಲೂ ಚುನಾವಣ ಕಣ ರಂಗೇರುತ್ತಿದೆ. ನಾಮಪತ್ರ ಸಲ್ಲಿಕೆ ಹಾಗೂ ಪ್ರಚಾರ ಕಾರ್ಯ ಬಿರುಸು ಪಡೆದಿದೆ. ಡಿ. 27ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ಕುಂದಾಪುರ ತಾಲೂಕಿನ ಹಾರ್ದಳ್ಳಿ – ಮಂಡಳ್ಳಿ, ಹೊಂಬಾಡಿ – ಮಂಡಾಡಿ, ಮೊಳಹಳ್ಳಿ, ಹಾಲಾಡಿ, ಶಂಕರನಾರಾಯಣ ಹಾಗೂ ಅಂಪಾರು ಗ್ರಾ.ಪಂ.ಗಳ ಪೈಕಿ ಕೆಲವೆಡೆ ಬಿಜೆಪಿ ಮತ್ತು ಕಾಂಗ್ರೆಸ್‌ ಬೆಂಬಲಿತರ ನಡುವೆ ನೇರ ಸ್ಪರ್ಧೆಯಿದ್ದರೆ, ಮತ್ತೆ ಕೆಲವೆಡೆ ಪಕ್ಷೇತರರೂ ಸೇರಿ ತ್ರಿಕೋನ ಸ್ಪರ್ಧೆಯ ವಾತಾವರಣವಿರುವುದು “ಉದಯವಾಣಿ’ಯ ಗ್ರಾಮ ಸುತ್ತಾಟದಲ್ಲಿ ಕಂಡುಬಂತು.

ಹಾಲಾಡಿ: ಪಕ್ಷೇತರರ ಪ್ರಬಲ ಪೈಪೋಟಿ?
ಈ ಭಾಗದ ದೊಡ್ಡ ಪಂಚಾಯತ್‌ಗಳಲ್ಲಿ ಒಂದಾಗಿರುವ ಹಾಲಾಡಿಯಲ್ಲಿ 4 ವಾರ್ಡ್‌ಗಳಿದ್ದು, 11 ಸ್ಥಾನಗಳಿವೆ. ಕಳೆದ ಬಾರಿ 8 ಮಂದಿ ಬಿಜೆಪಿ ಬೆಂಬಲಿತರು ಹಾಗೂ ಮೂವರು ಕಾಂಗ್ರೆಸ್‌ ಬೆಂಬಲಿತರು ಗೆದ್ದಿದ್ದರು. ಹಿಂದಿನಿಂದಲೂ ಈ ಎರಡು ಪಕ್ಷಗಳ ಬೆಂಬಲಿತರ ಮಧ್ಯೆಯೇ ಪೈಪೋಟಿ ನಡೆಯುತ್ತಿತ್ತು. ಆದರೆ ಈ ಬಾರಿ 8 ಮಂದಿ ಪಕ್ಷೇತರರು ಕಣಕ್ಕಿಳಿದಿದ್ದು, ಇಡೀ ಚಿತ್ರಣವೇ ಬದಲಾಗುವ ಸಾಧ್ಯತೆ ಕಂಡು ಬರುತ್ತಿದೆ.

ಪ್ರಮುಖವಾಗಿ ಜಾಗದ ಸಮಸ್ಯೆಯಿಂದಾಗಿ ಹಾಲಾಡಿ ಸರ್ಕಲ್‌ ನಿರ್ಮಾಣದ ಬೇಡಿಕೆ ಈಡೇರಿಲ್ಲ. ಬೀದಿ ದೀಪದ ಸಮಸ್ಯೆಯೂ ತೀವ್ರವಾಗಿದ್ದು, ಮಾರುಕಟ್ಟೆ ನಿರ್ಮಾಣಕ್ಕೂ ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

ಮೊಳಹಳ್ಳಿ: ನೇರಾನೇರ ಸ್ಪರ್ಧೆ
ಮೊಳಹಳ್ಳಿ ಪಂಚಾಯತ್‌ನಲ್ಲಿ 4 ವಾರ್ಡ್‌ಗಳಿದ್ದು, 11 ಸದಸ್ಯರಿದ್ದಾರೆ. ಕಳೆದ ಬಾರಿ 6ರಲ್ಲಿ ಕಾಂಗ್ರೆಸ್‌ ಹಾಗೂ 5ರಲ್ಲಿ ಬಿಜೆಪಿ ಬೆಂಬಲಿತರು ಜಯಿಸಿದ್ದರು. ಆದರೆ ಹೊಂದಾಣಿಕೆ ಸೂತ್ರ ಹಾಗೂ ಮೀಸಲಾತಿ ಆಧಾರದಲ್ಲಿ ಬಿಜೆಪಿ ಬೆಂಬಲಿತರು ಅಧ್ಯಕ್ಷರಾಗಿದ್ದು, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್‌ನಲ್ಲಿತ್ತು. ಈ ಬಾರಿ ಎರಡು ಪಕ್ಷಗಳ ಬೆಂಬಲಿತರ ನಡುವೆ ನೇರಾನೇರ ಸ್ಪರ್ಧೆ ಕಂಡು ಬರುತ್ತಿದೆ. ಕೃಷಿಗೆ ಕಾಡು ಪ್ರಾಣಿಗಳ ಹಾವಳಿ, ನೀರಿನ ಕೊರತೆ ಹಾಗೂ ಬೀದಿ ದೀಪ ಸಮಸ್ಯೆ ಇಲ್ಲಿ ಎದ್ದು ಕಾಣುತ್ತಿದೆ.

ಶಂಕರನಾರಾಯಣ: ಯಾರಿಗೆ ಲಾಭ-ನಷ್ಟ?
ಶಂಕರನಾರಾಯಣ ಗ್ರಾ.ಪಂ.ನಲ್ಲಿ 7 ವಾರ್ಡ್‌ಗಳಿದ್ದು, 18 ಸದಸ್ಯರಿದ್ದಾರೆ. ಕಳೆದ ಬಾರಿ ಇಲ್ಲಿ 10ರಲ್ಲಿ ಕಾಂಗ್ರೆಸ್‌ ಬೆಂಬಲಿಗರು ಹಾಗೂ 8ರಲ್ಲಿ ಬಿಜೆಪಿ ಬೆಂಬಲಿತರು ಗೆದ್ದಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಳೆದ ಬಾರಿಯ ಅಧ್ಯಕ್ಷರು ಈಗ ಬಿಜೆಪಿ ಸೇರಿದ್ದಾರೆ. ಈ ಕಾರಣದಿಂದ ಲಾಭ-ನಷ್ಟದ ಲೆಕ್ಕಾಚಾರ ಜೋರಾಗಿದೆ. ಜತೆಗೆ ಕಳೆದ ಬಾರಿ ಸದಸ್ಯರಾಗಿದ್ದು, ಕೆಲವು ದಿನಗಳ ಹಿಂದೆ ಸಾವಿಗೀಡಾಗಿರುವ ಈ ಭಾಗದ ಪ್ರಭಾವಿ ಬಿಜೆಪಿ ಮುಖಂಡ ಹದ್ದೂರು ರಾಜೀವ ಶೆಟ್ಟಿ ಅವರ ಅನುಪಸ್ಥಿತಿ ಎದ್ದು ಕಾಣುತ್ತಿದೆ. ಕೆಲವೆಡೆಗಳಲ್ಲಿ ಪಕ್ಷೇತರರು ಕಣಕ್ಕಿಳಿಯುವ ಸಾಧ್ಯತೆಯೂ ಇದೆ. ಎತ್ತರದ ಪ್ರದೇಶಕ್ಕೆ ಸರಿಯಾಗಿ ನೀರು ಪೂರೈಕೆ ಯಾಗುತ್ತಿಲ್ಲ ಎಂಬುದು ಇಲ್ಲಿನ ಒಂದು ಪ್ರಮುಖ ಸಮಸ್ಯೆಯಾಗಿದೆ.

ಹೊಂಬಾಡಿ- ಮಂಡಾಡಿ: ತ್ರಿಕೋನ ಸ್ಪರ್ಧೆ ಸಾಧ್ಯತೆ
ಹೊಂಬಾಡಿ – ಮಂಡಾಡಿ, ಯಡಾಡಿ – ಮತ್ಯಾಡಿ ಹಾಗೂ ಜಪ್ತಿಯನ್ನೊಳಗೊಂಡ ಹೊಂಬಾಡಿ – ಮಂಡಾಡಿ ಗ್ರಾ.ಪಂ.ನಲ್ಲಿ 6 ವಾರ್ಡ್‌ಗಳಿದ್ದು, 17 ಸದಸ್ಯರಿದ್ದಾರೆ. ಕಳೆದ ಬಾರಿ 11ರಲ್ಲಿ ಬಿಜೆಪಿ ಬೆಂಬಲಿತರು ಹಾಗೂ 6ರಲ್ಲಿ ಕಾಂಗ್ರೆಸ್‌ ಬೆಂಬಲಿತರು ಗೆದ್ದಿದ್ದರು. ಈ ಬಾರಿ ಹೆಚ್ಚಿನ ಕಡೆಗಳಲ್ಲಿ ಪಕ್ಷೇತರರೂ ಕಣದಲ್ಲಿರುವ ಕಾರಣ ತ್ರಿಕೋನ ಸ್ಪರ್ಧೆಯ ಲಕ್ಷಣ ಕಂಡುಬರುತ್ತಿದೆ. ಯಡಾಡಿ – ಮತ್ಯಾಡಿ ಭಾಗದಲ್ಲಿ ನೀರಿನ ಸಮಸ್ಯೆ ಸಹಿತ ಕೆಲವು ಮೂಲಸೌಕರ್ಯ ಸಮಸ್ಯೆಗಳಿವೆ.

ಹಾರ್ದಳ್ಳಿ – ಮಂಡಳ್ಳಿ: ನಿಕಟ ಸ್ಪರ್ಧೆ
ಹಾರ್ದಳ್ಳಿ – ಮಂಡಳ್ಳಿಯಲ್ಲಿ 5 ವಾರ್ಡ್‌ಗಳಿದ್ದು, 13 ಸದಸ್ಯರಿದ್ದಾರೆ. ಕಳೆದ ಬಾರಿ 8ರಲ್ಲಿ ಬಿಜೆಪಿ ಹಾಗೂ 5ರಲ್ಲಿ ಕಾಂಗ್ರೆಸ್‌ ಬೆಂಬಲಿತರು ಗೆದ್ದಿದ್ದರು. ಇಲ್ಲಿ 10 ವರ್ಷಗಳಿಂದ ಬಿಜೆಪಿ ಆಡಳಿತದಲ್ಲಿದೆ. ಈ ಬಾರಿ ಎರಡು ಪಕ್ಷಗಳ ಬೆಂಬಲಿತರ ಮಧ್ಯೆಯೇ ನಿಕಟ ಪೈಪೋಟಿಯಿದೆ. ಪಂಚಾಯತ್‌ ಹೊಸ ಕಟ್ಟಡ ನಿರ್ಮಾಣ, ನಿವೇಶನ ಮಂಜೂರಾಗದೆ ಇರುವುದು, ರಸ್ತೆ ಸಮಸ್ಯೆ ಪ್ರಮುಖವಾಗಿದೆ.

ಅಂಪಾರು: ನೇರ ಪೈಪೋಟಿ
ಅಂಪಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ 4 ವಾರ್ಡ್‌ಗಳಿದ್ದು, 12 ಸದಸ್ಯರಿದ್ದಾರೆ. ಕಳೆದ ಬಾರಿ 9ರಲ್ಲಿ ಕಾಂಗ್ರೆಸ್‌ ಬೆಂಬಲಿತರು ಹಾಗೂ 3ರಲ್ಲಿ ಬಿಜೆಪಿ ಬೆಂಬಲಿತರು ಗೆದ್ದಿದ್ದರು. ಹಿಂದಿನ ಎರಡು ಅವಧಿಯಲ್ಲಿಯೂ ಕಾಂಗ್ರೆಸ್‌ ಅಧಿಕಾರದಲ್ಲಿತ್ತು. ಈ ಬಾರಿ ಹೆಚ್ಚಿನ ಕಡೆಗಳಲ್ಲಿ ನೇರ ಪೈಪೋಟಿಯಿದ್ದರೂ 2-3 ಕಡೆಗಳಲ್ಲಿ ಪಕ್ಷೇತರರೂ ಕಣದಲ್ಲಿದ್ದಾರೆ. ಕೊನೆಯ ಕ್ಷಣಗಳಲ್ಲಿ ಚಿತ್ರಣ ಬದಲಾದರೂ ಅಚ್ಚರಿಯಿಲ್ಲ.

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.