ಅರಾಟೆ ದೇಗುಲ ಸಂಪರ್ಕಿಸುವ ರಸ್ತೆ ಕಾಮಗಾರಿಗೆ ಶಿಲಾನ್ಯಾಸ
ಕಾಮಗಾರಿ ಪೂರ್ಣಗೊಂಡರೆ 30ಕ್ಕೂ ಅಧಿಕ ಮನೆಯ ನಿವಾಸಿಗಳಿಗೆ ಅನುಕೂಲ
Team Udayavani, Apr 5, 2022, 10:54 AM IST
ಮುಳ್ಳಿಕಟ್ಟೆ: ಹೊಸಾಡು ಗ್ರಾಮದ ಅರಾಟೆಯ ನಾವಡರ ಕೇರಿಯ ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಕಂಬಾಳಬೆಟ್ಟು, ಶೇಡಿಗುಡಿ ಮಕ್ಕಿ ಮತ್ತಿತರ ಭಾಗಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿಯವರು ರವಿವಾರ ಗುದ್ದಲಿಪೂಜೆ ನೆರವೇರಿಸಿದರು.
ಒಂದು ಕೋ.ರೂ. ಅನುದಾನ
ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನವನ್ನು ಸಂಪರ್ಕಿಸುವ ರಸ್ತೆಯ ಅಭಿವೃದ್ಧಿಗೆ ಬೈಂದೂರು ಶಾಸಕರ ಮುತುವರ್ಜಿಯಲ್ಲಿ ಒಂದು ಕೋಟಿ ರೂ. ಅನುದಾನ ಮಂಜೂರಾಗಿದೆ.
ಈ ಸಂದರ್ಭದಲ್ಲಿ ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಮೇಶ್ ಆಚಾರ್ಯ, ಸುರೇಶ್ ಶೆಟ್ಟಿ ಕಮ್ಮಾರಕೊಡ್ಲು, ರಾಘವೇಂದ್ರ ಶೆಟ್ಟಿ ಕಾಡೇರಿ ಮನೆ, ರವಿ ಶೆಟ್ಟಿಗಾರ್ ತ್ರಾಸಿ, ವಿಶ್ವನಾಥ್ ಶೆಟ್ಟಿ, ರಾಘವೇಂದ್ರ ಆಚಾರ್ಯ ಅರಾಟೆ, ಶೇಖರ ಶೆಟ್ಟಿ, ಶಿವರಾಮ ಶೆಟ್ಟಿ, ರಾಜು ಶೆಟ್ಟಿ, ವಿಶ್ವಂಭರ ಐತಾಳ್, ಜ್ಯೋತಿ ಐತಾಳ್ ಮತ್ತಿತರರು ಉಪಸ್ಥಿತರಿದ್ದರು.
ದಶಕಕ್ಕೂ ಹೆಚ್ಚು ಕಾಲದ ಬೇಡಿಕೆ
ಕಂಬಾಳಬೆಟ್ಟು, ನಾವಡರ ಕೆರೆ, ಶೇಡಿಗುಡಿ ಮಕ್ಕಿ ಹಾಗೂ ಅರಾಟೆಯ ಗೋಪಾಲಕೃಷ್ಣ ದೇವಸ್ಥಾನಕ್ಕೆ ಹೋಗುವ ಮಣ್ಣಿನ ರಸ್ತೆ ಇದಾಗಿದ್ದು, ಹದೆಗಟ್ಟ ರಸ್ತೆಯಿಂದಾಗಿ ವಾಹನ ಸವಾರರು ಸಂಕಷ್ಟ ಅನುಭವಿಸುವಂತಾಗಿತ್ತು. 10 ವರ್ಷಗಳಿಗೂ ಹೆಚ್ಚು ಕಾಲದಿಂದ ಈ ರಸ್ತೆಯ ಅಭಿವೃದ್ಧಿಗೆ ಬೇಡಿಕೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ