ಬೇಸಗೆಯಲ್ಲೇ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಳ


Team Udayavani, May 28, 2020, 6:58 AM IST

ಬೇಸಗೆಯಲ್ಲೇ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಳ

ಸೂರ್ಗೋಳಿಯ ಸೀತಾ ನದಿಯಲ್ಲಿ ನೀರಿನ ಪ್ರಮಾಣ ಉತ್ತಮವಾಗಿದೆ.

ಕುಂದಾಪುರ: ಲಾಕ್‌ಡೌನ್‌ ಕಾರಣದಿಂದಾಗಿ ನೀರಿನ ಬಳಕೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿರುವುದರಿಂದ, ಸಭೆ, ಸಮಾರಂಭಗಳೇ ನಡೆಯದೇ ಇರುವುದರಿಂದ, ಆಗಾಗ ಬರುತ್ತಿದ್ದ ಮಳೆಯಿಂದಾಗಿ ಉಡುಪಿ ಜಿಲ್ಲೆಯ ಅಂತರ್ಜಲ ಮಟ್ಟ ಈ ಬಾರಿ ಕಳೆದ ಬಾರಿಗಿಂತ ಉತ್ತಮವಾಗಿದೆ.

ಜಿಲ್ಲೆಯಲ್ಲಿ ಕಳೆದ ವರ್ಷಕ್ಕಿಂತ ಎರಡೂವರೆ ಅಡಿಯಷ್ಟು ನೀರಿನ ಮಟ್ಟ ಹೆಚ್ಚಳವಾಗಿದೆ. ಕಳೆದ ಬಾರಿ ಮೇ ತಿಂಗಳಲ್ಲಿ ಉಡುಪಿ ಜಿಲ್ಲೆಯ ಅಂತರ್ಜಲ ಮಟ್ಟ 11.39 ಮೀಟರ್‌ನಷ್ಟಿದ್ದರೆ, ಈ ವರ್ಷದ ಮೇ ತಿಂಗಳಲ್ಲಿ ಅಂತರ್ಜಲ ಮಟ್ಟ 10.54 ಮೀ. ನಷ್ಟಿದೆ. 0.85 ಮೀ. ಹೆಚ್ಚಿದ್ದು ಅಂದರೆ ಸರಿ ಸುಮಾರು 1 ಮೀಟರ್‌ (1 ಮೀ. ಅಂದರೆ 3 ಅಡಿಗೆ ಸಮ) ನಷ್ಟು ನೀರಿನ ಮಟ್ಟ ಹೆಚ್ಚಳವಾಗಿದೆ.

ಕಾರಣಗಳೇನು?
ಈ ಬಾರಿ ಕಳೆದ ಬಾರಿಗಿಂತ ಅಂತರ್ಜಲ ಮಟ್ಟ ಹೆಚ್ಚಾಗಲು ಅನೇಕ ಕಾರಣಗಳಿವೆ. ಲಾಕ್‌ಡೌನ್‌ನಿಂದಾಗಿ ಹೊಟೇಲ್‌, ಬಾರ್‌, ರೆಸ್ಟೋರೆಂಟ್‌ಗಳು ಹಲವು ಸಮಯದಿಂದ ಮುಚ್ಚಿದ್ದರಿಂದ, ಮದುವೆ ಮತ್ತಿತರ ಶುಭ ಸಮಾರಂಭಗಳು ಇಲ್ಲದಿರುವುದರಿಂದ ನೀರಿನ ಬಳಕೆ ಕಡಿಮೆಯಾಗಿದೆ.

ಜಿಲ್ಲೆಯಲ್ಲಿ ಈ ವರ್ಷ ಉತ್ತಮ ಮುಂಗಾರು ಪೂರ್ವ ಮಳೆಯಾಗಿದ್ದು, ಕಾರ್ಕಳ, ಹೆಬ್ರಿ ಭಾಗದಲ್ಲಿ 8-10 ಸಲ ಉತ್ತಮ ಮಳೆಯಾಗಿದೆ. ಕುಂದಾಪುರ, ಬೈಂದೂರು ಭಾಗದಲ್ಲಿ ಸ್ವಲ್ಪ ಮಟ್ಟಿಗೆ ಮಳೆ ಪ್ರಮಾಣ ಕಡಿಮೆ ಯಾಗಿದ್ದರೂ, ಉಡುಪಿ ಹಾಗೂ ಕಾರ್ಕಳ ತಾಲೂಕು ವ್ಯಾಪ್ತಿಯಲ್ಲಿ ಅನೇಕ ಬಾರಿ ಮಳೆ ತಂಪೆರೆದಿದೆ. ಆಗಾಗ ಮಳೆ ಬರುತ್ತಿದ್ದುದರಿಂದ ತೋಟ, ತರಕಾರಿ ಕೃಷಿಗೆ ಕೆರೆ, ಬಾವಿ, ಬೋರ್‌ವೆಲ್‌, ನದಿ ನೀರಿನ ಬಳಕೆ ಸ್ವಲ್ಪ ಕಡಿಮೆಯಾಗಿದೆ.

ನದಿಗಳಲ್ಲಿ ಒಳ ಹರಿವು
ಹಿಂದಿನ ವರ್ಷಗಳಲ್ಲಿ ಮಾರ್ಚ್‌, ಎಪ್ರಿಲ್‌ನಲ್ಲೇ ನದಿಗಳ ಒಳ ಹರಿವು ನಿಲ್ಲುತ್ತಿದ್ದರೆ, ಈ ವರ್ಷ ಜಿಲ್ಲೆಯ ಅನೇಕ ನದಿಗಳಲ್ಲಿ ಈಗಲೂ ಅಲ್ಪ ಪ್ರಮಾಣದ ಒಳ ಹರಿವು ಇದೆ. ಕುಂದಾಪುರದ ವಾರಾಹಿಯಲ್ಲಂತೂ ಒಳ ಹರಿವು ಉತ್ತಮವಾಗಿದೆ.

ಸೌಪರ್ಣಿಕದಲ್ಲೂ ಕೂಡ ನೀರಿನ ಒಳ ಹರಿವು ಇದೆ. ಕಾರ್ಕಳದ ನದಿಗಳಲ್ಲಂತೂ ಒಳ ಹರಿವು ಕಡಿಮೆಯೇ ಆಗಿಲ್ಲ. ಬಜಗೋಳಿ, ಮಾಳ, ಕೆರ್ವಾಶೆ ಮತ್ತಿತರ ಕಡೆ ಗದ್ದೆಗಳಲ್ಲಿ ಈಗಲೂ ನೀರಿದೆ. ಉಡುಪಿಯ ಸ್ವರ್ಣೆಯಲ್ಲೂ ಈ ಬಾರಿ ನೀರಿನ ಮಟ್ಟ ಉತ್ತಮವಾಗಿದೆ. ಹೆಬ್ರಿಯ ಸೀತಾನದಿಯಲ್ಲೂ ನೀರಿನ ಪ್ರಮಾಣ ಉತ್ತಮವಾಗಿದೆ.

ತಾಲೂಕುವಾರು ಹೇಗಿದೆ?
ತಾಲೂಕುವಾರು ಅಂತರ್ಜಲ ಮಟ್ಟ ನೋಡುವುದಾದರೆ ಕಾರ್ಕಳದಲ್ಲಿ ಕಳೆದ ವರ್ಷದ ಮೇ ತಿಂಗಳಲ್ಲಿ 9.91 ಮೀ.ನಷ್ಟಿದ್ದರೆ ಈ ಬಾರಿಯ ಜನವರಿಯಲ್ಲಿ 7.08 ಮೀ., ಮೇಯಲ್ಲಿ 9.05 ಮೀ. ಇದೆ. ಕುಂದಾಪುರದಲ್ಲಿ ಕಳೆದ ವರ್ಷದ ಮೇಯಲ್ಲಿ 9.20 ಮೀ., ಜನವರಿಯಲ್ಲಿ 7.01 ಮೀ. ನಷ್ಟಿದ್ದರೆ, ಮೇಯಲ್ಲಿ 8.49 ಮೀ. ನಷ್ಟಿದೆ. ಉಡುಪಿಯಲ್ಲಿ ಕಳೆದ ವರ್ಷದ ಮೇಯಲ್ಲಿ 11.39 ಮೀ., ಜನವರಿಯಲ್ಲಿ 8.8 ಮೀ. ಹಾಗೂ ಈ ವರ್ಷದ ಮೇಯಲ್ಲಿ 10.54 ಮೀ. ಇದೆ.

ಉತ್ತಮ ಬೆಳವಣಿಗೆ
ಈ ಬೇಸಗೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಸಂಚರಿಸಿ, ಅಧ್ಯಯನ ನಡೆಸಿದಾಗ ಜಿಲ್ಲೆಯ ಅಂತರ್ಜಲ ಮಟ್ಟ ಕಳೆದ ಬಾರಿಗಿಂತ ಈ ಬಾರಿ ಉತ್ತಮವಾಗಿರುವುದು ಕಂಡು ಬಂದಿದೆ. ಕಳೆದ ಬಾರಿಗಿಂತ ನೀರಿನ ಮಟ್ಟ ತುಂಬಾ ಮೇಲಿದೆ. ಇದಕ್ಕೆ ಲಾಕ್‌ಡೌನ್‌, ಆಗಾಗ ಬರುತ್ತಿದ್ದ ಮುಂಗಾರು ಪೂರ್ವ ಮಳೆ, ತೋಟಕ್ಕೆ ನೀರಿನ ಬಳಕೆ ಕಡಿಮೆಯಾಗಿದ್ದು ಪ್ರಮುಖ ಕಾರಣ. ನದಿಗಳಲ್ಲೂ ನೀರಿನ ಮಟ್ಟ ಆಶಾದಾಯಕವಾಗಿದೆ.
-ಡಾ| ಎಂ. ದಿನಕರ ಶೆಟ್ಟಿ, ಹಿರಿಯ ಭೂ ವಿಜ್ಞಾನಿ, ಅಂತರ್ಜಲ ವಿಭಾಗ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಉಡುಪಿ

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.