ಗುಜ್ಜಾಡಿ ಸರಕಾರಿ ಹಿ. ಪ್ರಾ. ಶಾಲೆ; ಶತಕ ದಾಟಿದ ದಾಖಲಾತಿ: ಬೇಕಿದೆ ಅಗತ್ಯ ಸೌಲಭ್ಯ


Team Udayavani, Sep 24, 2021, 3:20 AM IST

Untitled-2

ಗುಜ್ಜಾಡಿ: ಶತಮಾನೋತ್ಸವ ಪೂರೈಸಿದ ಗುಜ್ಜಾಡಿಯ ಸರಕಾರಿ ಹಿ.ಪ್ರಾ. ಶಾಲೆಯಲ್ಲಿಗ ಮಕ್ಕಳದ್ದೇ ಕಲರವ. ಈ ಶಾಲೆ ದಾಖಲಾತಿಯಲ್ಲಿ ಸತತ ಎರಡು ವರ್ಷ ಶತಕದ ದಾಖಲೆ ನಿರ್ಮಿಸಿದೆ. ಬೈಂದೂರು ವಲಯದ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ಗುಜ್ಜಾಡಿಗೆ ಕೆಲವೊಂದು ಸೌಕರ್ಯಗಳಿದ್ದರೂ, ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಇನ್ನಷ್ಟು ಸೌಲಭ್ಯಗಳು ಅಗತ್ಯ ಇವೆ.

1919ರಲ್ಲಿ ಗುಜ್ಜಾಡಿಯ ಪುಟ್ಟ ಊರಿನಲ್ಲಿ ದಿ| ಶಾಬುದ್ದೀನ್‌ ಅಬ್ದುಲ್‌ ಖಾದಿರ್‌ ಮಾಸ್ತರ್‌ (ಮೊದಲ ಮುಖ್ಯೋಪಾಧ್ಯಾಯರು) ಅವರಿಂದ ಆರಂಭಗೊಂಡ ಶಾಲೆಯಿದು. ಯಶಸ್ವಿ 102 ವರ್ಷಗಳ ಇತಿಹಾಸವಿರುವ ಈ ಶಾಲೆಯಲ್ಲಿಗ 1ರಿಂದ 8ನೇ ತರಗತಿಯವರೆಗೆ 366, ಎಲ್‌ಕೆಜಿ, ಯುಕೆಜಿಯಲ್ಲಿ 60 ಮಕ್ಕಳು ಸೇರಿದಂತೆ ಒಟ್ಟಾರೆ 426 ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ. ಕಳೆದ ವರ್ಷ 325 ವಿದ್ಯಾರ್ಥಿಗಳು ಶಿಕ್ಷಣ ಪಡೆದಿದ್ದರು.

ನೂರರ ಗಡಿ ದಾಟಿದ ದಾಖಲಾತಿ:

ನೂರು ವರ್ಷ ಪೂರೈಸಿದ ಅನಂತರದ 2 ವರ್ಷಗಳ ಲ್ಲಿಯೂ ದಾಖಲಾತಿ ಶತಕದ ದಾಟಿರುವುದು ಶಾಲೆಯ ಹೆಗ್ಗಳಿಕೆಯಾಗಿದೆ. ಕಳೆದ ವರ್ಷ 102 ಮಕ್ಕಳು ಸೇರ್ಪಡೆ ಯಾಗಿದ್ದರೆ, ಈ ವರ್ಷ ಈ ಶಾಲೆಗೆ 103 ಮಂದಿ ಹೊಸದಾಗಿ ಸೇರಿದ್ದಾರೆ. ಈ ಪೈಕಿ 1ನೇ ತರಗತಿಗೆ 66 ಮಕ್ಕಳ ದಾಖಲಾತಿಯಾಗಿದೆ.

ದಾನಿಗಳ ನೆರವು:

ಗಣಪತಿ ಮೇಸ್ತ-ಸಹೋದರರು, ದಿ| ಕೊಂಚಾಡಿ ಗಣಪತಿ ಶೆಣೈ ಟ್ರಸ್ಟ್‌ ನಿಂದ ಶಾಲೆಯ ಕಟ್ಟಡ ನವೀಕರಣ, ಶತಮಾನೋತ್ಸವ ಸಮಿತಿ, ಎಸ್‌ಡಿಎಂಸಿ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘವು ಕಟ್ಟಡ, ಶಾಲಾ ವಾಹನ ಸೇರಿದಂತೆ ಅನೇಕ ರೀತಿಯಲ್ಲಿ ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಇದಲ್ಲದೆ ಇನ್ನು ಅನೇಕ ಮಂದಿ  ದಾನಿಗಳು ನೆರವಾಗಿದ್ದಾರೆ.

ಹೆಚ್ಚುವರಿ ಕಟ್ಟಡ ಬೇಡಿಕೆ:

ಶಾಲೆಯಲ್ಲಿ ಮಕ್ಕಳ ಸಂಖ್ಯೆಯೂ ಜಾಸ್ತಿಯಾಗಿದ್ದು, ಈ ಶೈಕ್ಷಣಿಕ ವರ್ಷದಿಂದ ಇಂಗ್ಲಿಷ್‌ ಮಾಧ್ಯಮವು ಆರಂಭಗೊಂಡಿರುವುದರಿಂದ ಈಗ 16 ತರಗತಿಗಳಿವೆ. ಶತಮಾನೋತ್ಸವ ಸಮಿತಿ ನೇತೃತ್ವದಲ್ಲಿ ನಿರ್ಮಾಣಗೊಂಡ ಹೊಸ ಕಟ್ಟಡವು ಸೇರಿದಂತೆ ಒಟ್ಟು 13 ಕೋಣೆಗಳಿವೆ. ಇನ್ನು ಹೆಚ್ಚುವರಿಯಾಗಿ 3 ತರಗತಿ ಕೋಣೆಗಳ ಅಗತ್ಯವಿದೆ. ಪ್ರಸ್ತುತ 9 ಮಂದಿ ಖಾಯಂ, ಮೂವರು ಗೌರವ ಶಿಕ್ಷಕಿಯರಿದ್ದಾರೆ. ತರಗತಿವಾರು, ಮಕ್ಕಳ ಸಂಖ್ಯೆಗೆ ಅನುಗುಣವಾಗಿ ನೋಡಿದರೆ ಇನ್ನು 2-3 ಮಂದಿ ಶಿಕ್ಷಕರ ಅಗತ್ಯವಿದೆ. ಲ್ಯಾಬೋರೇಟರಿ ಬೇಕಾಗಿದೆ.

ಮೈದಾನ ವಿಸ್ತರಣೆ:

ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗು ತ್ತಿರುವುದರಿಂದ  ಈಗಿರುವ ಆಟದ ಮೈದಾನದ ವಿಸ್ತರಣೆ ಯಾಗಬೇಕಿದೆ. ಆವರಣ ಗೋಡೆಯೂ ಪೂರ್ಣ ಪ್ರಮಾಣ ದಲ್ಲಿ ಆಗಬೇಕಿದೆ. ಇನ್ನು ಈಗಿರುವ ಬಾಲಕ- ಬಾಲಕಿಯರ ಶೌಚಾಲಯ ಮಕ್ಕಳ ಸಂಖ್ಯೆಗೆ ಅನು ಗುಣ ವಾಗಿ ಸಾಲದೇ ಇರುವುದರಿಂದ ಒಂದೆರಡು ಹೆಚ್ಚಿಸಬೇಕಿದೆ.

ಪ್ರಸ್ತಾವನೆ ಸಲ್ಲಿಕೆ:

ಕಳೆದ ಎರಡು ವರ್ಷಗಳಿಂದ ಶಾಲೆಯಲ್ಲಿ ಉತ್ತಮ ದಾಖಲಾತಿಯಾಗುತ್ತಿದೆ. ಗಂಗೊಳ್ಳಿಯಿಂದಲೂ ಇಲ್ಲಿಗೆ ಮಕ್ಕಳು ಬರುತ್ತಿದ್ದಾರೆ. ಶಿಕ್ಷಕರ ನೇಮಕ, ಕೊಠಡಿ, ಆವರಣ ಗೋಡೆ, ಶೌಚಾಲಯ, ಲ್ಯಾಬ್‌ನಂತಹ ಕೆಲವೊಂದು ಅಗತ್ಯ ಸೌಲಭ್ಯಗಳು ಬೇಕಾಗಿವೆ. ಈ ಬಗ್ಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ.

ಶಾಸಕರಿಗೂ ಮನವಿ:

ಗುಜ್ಜಾಡಿ ಶಾಲೆಯು ಈಗ ಈ ಭಾಗದ ಉತ್ತಮ ಶಾಲೆಗಳಲ್ಲಿ ಒಂದಾಗಿದ್ದು, ಈಗಿರುವ ಸೌಲಭ್ಯಗಳೊಂದಿಗೆ ಇನ್ನೊಂದಷ್ಟು ಅಗತ್ಯ ಸೌಕರ್ಯಗಳು ಬೇಕಾಗಿವೆ. ಈ ಬಗ್ಗೆ ಇಲ್ಲಿಗೆ ಭೇಟಿ ನೀಡಿದ್ದ ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟರಿಗೂ ಮನವಿ ಮಾಡಿದ್ದೇವೆ. ಮಾಡಿಕೊಡುವ ಭರವಸೆ ನೀಡಿದ್ದಾರೆ.- ಇಂದಿರಾ, ಎಸ್‌ಡಿಎಂಸಿ ಅಧ್ಯಕ್ಷರು

 

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.