ಸೋಲಿಲ್ಲದ ಸರದಾರ ಹಾಲಾಡಿ ಶ್ರೀನಿವಾಸ ಶೆಟ್ಟಿ


Team Udayavani, Apr 4, 2023, 7:02 AM IST

ಸೋಲಿಲ್ಲದ ಸರದಾರ ಹಾಲಾಡಿ ಶ್ರೀನಿವಾಸ ಶೆಟ್ಟಿ

ಕುಂದಾಪುರ: ಕುಂದಾಪುರ ಕ್ಷೇತ್ರ ಎಂದರೆ ಹಾಲಾಡಿ ಶ್ರೀನಿವಾಸ ಶೆಟ್ಟಿ ಎನ್ನುವಷ್ಟರ ಮಟ್ಟಿಗೆ ರಾಜಕೀಯವಾಗಿ ಹೆಗ್ಗುರುತು ಮೂಡಿಸಿದೆ. ಇದಕ್ಕೆ ಕಾರಣ ಹಾಲಾಡಿ ಅವರು ಚುನಾವಣೆಗೆ ನಿಂತ ಎಲ್ಲ ಸಂದರ್ಭಗಳಲ್ಲಿಯೂ ಜಯ ಸಾಧಿಸಿರುವುದು. ಹಾಲಾಡಿ ಅವರು ಪಕ್ಷದ ಚಿಹ್ನೆ ಅಡಿ ಮತ್ತು ಪಕ್ಷೇತರರಾಗಿಯೂ ಸ್ಪರ್ಧಿಸಿ ಜಯ ಸಾಧಿಸಿರುವುದು ವಿಶೇಷ.

ಸಚಿವರಾಗಲಿಲ್ಲ
5 ಬಾರಿ ಗೆದ್ದಿರುವ ಹಾಲಾಡಿ ಶ್ರೀನಿವಾಸ ಶೆಟ್ಟರನ್ನು ಯಾವುದೇ ಸರಕಾರ ಸಚಿವರ ನ್ನಾಗಿಸಲಿಲ್ಲ. ಕುಂದಾಪುರ ಕ್ಷೇತ್ರಕ್ಕೆ ಈವರೆಗೆ ಸಚಿವ ಪದವಿ ದೊರೆಯಲಿಲ್ಲ. ಹಾಲಾಡಿ ಯವರು ಸಚಿವರಾಗುತ್ತಾರೆ ಎಂದೇ ಜನ ನಂಬಿದ್ದರು. ಅದಕ್ಕಾಗಿ ಅವರನ್ನು ಬೆಂಗಳೂರಿಗೂ ಕರೆಸಲಾಗಿತ್ತು. ಆದರೆ ಸಚಿವ ಪದ ದೊರೆಯಲಿಲ್ಲ. ಅವರು ಪಕ್ಷದಲ್ಲಿ ಮುಂದುವರಿಯಲಿಲ್ಲ. ಪಕ್ಷೇತರನಾಗಿ ಸ್ಪರ್ಧಿಸಿ ಮತದಾರರ ಒಲವನ್ನು ತೋರಿಸಿಕೊಟ್ಟರು. ಮರಳಿ ಬಿಜೆಪಿ ಸೇರಿ ಗೆದ್ದರು.

ಸ್ಪರ್ಧೆ
1999ರಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿಯಲ್ಲಿ ಸ್ಪರ್ಧಿಸಿ ಕಾಂಗ್ರೆಸ್‌ನ ಪ್ರತಾಪಚಂದ್ರ ಶೆಟ್ಟಿ ಅವರಿಗೆ, 2004ರಲ್ಲಿ ಕಾಂಗ್ರೆಸ್‌ನ ಅಶೋಕ್‌ ಕುಮಾರ್‌ ಹೆಗ್ಡೆ, 2008ರಲ್ಲಿ ಕಾಂಗ್ರೆಸ್‌ನ ಕೆ. ಜಯಪ್ರಕಾಶ್‌ ಹೆಗ್ಡೆ, 2013ರಲ್ಲಿ ಪಕ್ಷೇತರರಾಗಿ ಕಾಂಗ್ರೆಸ್‌ನ ಮಲ್ಯಾಡಿ ಶ್ರೀನಿವಾಸ ಶೆಟ್ಟಿ, 2018ರಲ್ಲಿ ಮತ್ತೆ ಬಿಜೆಪಿಯಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ರಾಕೇಶ್‌ ಮಲ್ಲಿಗೆ ಸೋಲಿನ ರುಚಿ ತೋರಿಸಿದ್ದರು.

ಗೆಳೆಯ
1994ರಲ್ಲಿ ಬಿಜೆಪಿಯಲ್ಲಿ ಸ್ಪರ್ಧಿಸಿದ್ದ ಎ.ಜಿ. ಕೊಡ್ಗಿ ಅವರು ಕಾಂಗ್ರೆಸ್‌ನ ಪ್ರತಾಪಚಂದ್ರ ಶೆಟ್ಟರ ಎದುರು ಸೋತರು. ಅನಂತರದ ಚುನಾವಣೆಯಲ್ಲಿ ಕೊಡ್ಗಿ ಅವರೇ ಹಾಲಾಡಿ ಅವರನ್ನು ಬಿಜೆಪಿಯಲ್ಲಿ ಸ್ಪರ್ಧಿಸುವಂತೆ ಮಾಡಿ ಜಯ ಬಿಜೆಪಿ ಪಾಲಾಯಿತು. ಅನಂತರ ಈ ಕ್ಷೇತ್ರ ಕಾಂಗ್ರೆಸ್‌ ಪಾಲಿಗೆ ಕಹಿಗುಳಿಗೆಯಾಗಿತ್ತು.

ಒತ್ತಾಯ
ಸ್ಪರ್ಧೆಗೆ ನಿರಾಕರಣೆ ಬೆಳವಣಿಗೆ ಹಾಲಾಡಿ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ. ಹಾಲಾಡಿಯವರೇ ಸ್ಪರ್ಧಿಸಬೇಕು ಎನ್ನುವ ಒತ್ತಡವನ್ನು ಅವರಿಗೆ ಅನೇಕ ಅಭಿಮಾನಿಗಳು, ಹಿತೈಷಿಗಳು ಹಾಕಿದ್ದಾರೆ. ಸೋಮವಾರ ಬೆಳಗ್ಗಿನಿಂದಲೇ ಶಾಸಕರ ಮನೆ ಬಳಿ ಅಭಿಮಾನಿಗಳು ಜಮಾಯಿಸುತ್ತಿದ್ದರು.

ಮತ ಲೆಕ್ಕಾಚಾರ
1989ರಲ್ಲಿ ಬಿಜೆಪಿಗೆ ದೊರೆತ ಮತಗಳು 3,086. 1994ರಲ್ಲಿ ಎ.ಜಿ.ಕೊಡ್ಗಿ ಸ್ಪರ್ಧೆ ಮಾಡಿದಾಗ ದೊರೆತ ಮತಗಳು 37,770. 2013ರಲ್ಲಿ ಪಕ್ಷೇತರನಾಗಿ ನಿಂತಾಗಿ ಹಾಲಾಡಿ ಗೆಲುವಿನ ಅಂತರ 40,611. ಆಗ ಬಿಜೆಪಿಗೆ ದೊರೆತ ಮತಗಳು 14,524. ಹಾಲಾಡಿಯವರು ಗಳಿಸಿದ್ದು 80,563. ಕಳೆದ ಬಾರಿ ಅಂದರೆ 2018ರಲ್ಲಿ ಹಾಲಾಡಿಗೆ ದೊರೆತ ಮತಗಳು 1,03,434. ಗೆಲುವಿನ ಅಂತರ 56,405.

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.