ಹರ್ಕೆಬಾಳು – ಬೆಚ್ಚಳ್ಳಿ ರಸ್ತೆಗೆ ಇನ್ನೂ ಕೂಡಿ ಬಂದಿಲ್ಲ ಡಾಮರು ಭಾಗ್ಯ


Team Udayavani, Dec 5, 2021, 3:10 AM IST

ಹರ್ಕೆಬಾಳು – ಬೆಚ್ಚಳ್ಳಿ ರಸ್ತೆಗೆ ಇನ್ನೂ ಕೂಡಿ ಬಂದಿಲ್ಲ ಡಾಮರು ಭಾಗ್ಯ

ಹೊಸಂಗಡಿ: ಇಲ್ಲಿನ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹರ್ಕೆಬಾಳಿನಿಂದ ಬೆಚ್ಚಳಿಗೆ ಸಂಪರ್ಕ ಕಲ್ಪಿಸುವ ಮಣ್ಣಿನ ರಸ್ತೆಯು ಕಲ್ಲು – ಮಣ್ಣಿನಿಂದ ಕೂಡಿದ್ದು, ದುರ್ಗಮವಾಗಿದೆ. ಕಳೆದ ಹಲವು ವರ್ಷಗಳಿಂದ ಇಲ್ಲಿನ ಜನ ಒತ್ತಾಯಿಸುತ್ತಿದ್ದರೂ, 5-6 ಕಿ.ಮೀ. ದೂರದ ಈ ಮಣ್ಣಿನ ರಸ್ತೆಗೆ ಇನ್ನೂ ಅಭಿವೃದ್ಧಿ ಭಾಗ್ಯ ಮಾತ್ರ ಕೂಡಿ ಬಂದಿಲ್ಲ.

ಹರ್ಕೆಬಾಳಿನಿಂದ ಮುಖ್ಯವಾಗಿ ಬೆಚ್ಚಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಇಲ್ಲಿನ ಬೆಚ್ಚಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಹೋಗುವ ಮಕ್ಕಳು ಸಹ ನಡೆದುಕೊಂಡು ಹೋಗಲು ಇದೇ ಮಾರ್ಗವನ್ನು ಆಶ್ರಯಿಸಿದ್ದಾರೆ. ಮಕ್ಕಳ ಸಹಿತ ಎಲ್ಲರೂ ಇದೇ ರಸ್ತೆಯಲ್ಲಿ ದಿನಾಲೂ ಪ್ರಯಾಸಪಟ್ಟು ನಡೆದುಕೊಂಡು ಹೋಗುತ್ತಿದ್ದರೂ, ಇದನ್ನು ನೋಡಿಕೊಂಡು ಸಹ ಸ್ಥಳೀಯಾಡಳಿತ ಮಾತ್ರ ಕಣ್ಣು ಮುಚ್ಚಿ ಕುಳಿತಂತಿದೆ ಎನ್ನುವ ಆರೋಪ ಜನರದ್ದಾಗಿದೆ.

50ಕ್ಕೂ ಮಿಕ್ಕಿ ಮನೆ:

ಈ ಮಾರ್ಗದಲ್ಲಿ ಹರ್ಕೆಬಾಳಿನಿಂದ ಬೆಚ್ಚಳ್ಳಿಯವರೆಗೆ ಸುಮಾರು 50ಕ್ಕೂ ಅಧಿಕ ಮನೆಗಳಿದ್ದು, ನಿತ್ಯ ಅನೇಕ ಮಂದಿ ಹೊಸಂಗಡಿ, ಸಿದ್ದಾಪುರ ಪೇಟೆಗೆ ತೆರಳಲು ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ಮುಖ್ಯವಾಗಿ ಶಾಲೆಗೆ ಹೋಗುವ ಮಕ್ಕಳು, ಬೆಳಗ್ಗೆ ಹಾಗೂ ಸಂಜೆ ವೇಳೆ ಡೇರಿಗೆ ಹಾಲು ಹಾಕಲು ಹೋಗುವ ಹೈನುಗಾರರ ಸಂಕಷ್ಟ ಮಾತ್ರ ಹೇಳತೀರದಾಗಿದೆ.

ಇದಲ್ಲದೆ ಪುರಾಣ ಪ್ರಸಿದ್ಧ ಹೊಳೆ ಶಂಕರನಾರಾಯಣ ದೇವಸ್ಥಾನವನ್ನು ಸಂಪರ್ಕಿಸಲು ಸಿದ್ದಾಪುರ ಮಾರ್ಗವಾಗಿ ಮುಖ್ಯ ರಸ್ತೆಯಿದ್ದರೂ, ಹರ್ಕೆಬಾಳು, ಬೆಚ್ಚಳ್ಳಿ ಮಾರ್ಗವಾಗಿ ಇದು ಹತ್ತಿರದ ದಾರಿಯಾಗಿದೆ. ಆದರೂ ಈ ಮಾರ್ಗದಲ್ಲಿ ವಾಹನ ಸಂಚಾರ ಮಾತ್ರ ದುಸ್ತರವಾಗಿರುವುದರಿಂದ ಕಷ್ಟಪಟ್ಟು ಸಂಚರಿಸುವಂತಾಗಿದೆ.

ಬಾಡಿಗೆಗೂ ಬರಲ್ಲ..

ಇಲ್ಲಿನ ಜನರಿಗೆ ಪಡಿತರ ಅಥವಾ ಅಗತ್ಯ ವಸ್ತುಗಳನ್ನು ಹೊಸಂಗಡಿಯಿಂದ ತೆಗೆದುಕೊಂಡು ಹೋಗಬೇಕಾಗಿದೆ. ಈ ದುರ್ಗಮ ಹಾದಿಯಲ್ಲಿ ರಿಕ್ಷಾ ಅಥವಾ ಇನ್ನಿತರ ವಾಹನಗಳನ್ನು ಬಾಡಿಗೆಗೆ ಕರೆದರೆ ಬರುವುದಿಲ್ಲ ಎನ್ನುವುದೇ ಹೆಚ್ಚಿನವರ ಚಾಳಿಯಾಗಿ ಬಿಟ್ಟಿದೆ. ಬಂದರೂ ದುಬಾರಿ ಬಾಡಿಗೆ ದರವನ್ನು ತೆರಬೇಕಾದ ಅನಿವಾರ್ಯತೆ ಇಲ್ಲಿನ ಜನರದ್ದಾಗಿದೆ.

ರಿಕ್ಷಾ ಬಾಡಿಗೆಗೆ ಕರೆದರೆ ಬರುವುದಿಲ್ಲ ಅನ್ನುತ್ತಾರೆ. ಬಂದರೂ ಹೆಚ್ಚು ಬಾಡಿಗೆ ಕೊಡಬೇಕು. ಯಾರಿಗಾದರೂ ಅನಾರೋಗ್ಯ ಉಂಟಾದರೆ ನಮ್ಮ ಪರಿಸ್ಥಿತಿ ಹೇಳತೀರದಾಗಿದೆ. ರಾಜೇಂದ್ರ ಬೆಚ್ಚಳ್ಳಿ, ಸ್ಥಳೀಯರು 

ಬೆಚ್ಚಳ್ಳಿ ಭಾಗದ ಜನರು ದುರ್ಗಮ ಹಾದಿಯಿಂದಾಗಿ ಸಂಕಷ್ಟ ಅನುಭವಿಸುತ್ತಿರುವ ಬಗ್ಗೆ ಅರಿವಿದ್ದು, ಈ ರಸ್ತೆಯ ಅಭಿವೃದ್ಧಿಗೆ ಈಗಾಗಲೇ 2 ಕೋ.ರೂ. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮಂಜೂರಾಗುವ ನಿರೀಕ್ಷೆಯಿದೆ. ಆದಷ್ಟು ಬೇಗ ಈ ರಸ್ತೆಯ ಡಾಮರು ಕಾಮಗಾರಿ ಆರಂಭಕ್ಕೆ ಕ್ರಮಕೈಗೊಳ್ಳಲಾಗುವುದು.  ಶಾರದಾ ಗೊಲ್ಲ, ಅಧ್ಯಕ್ಷೆ, ಹೊಸಂಗಡಿ ಗ್ರಾ.ಪಂ.

ಟಾಪ್ ನ್ಯೂಸ್

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Kundapura ಭಾಗದ ಅಪರಾಧ ಸುದ್ದಿಗಳು

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.