Villagers; ಹೆಸ್ಕುತ್ತೂರು: ಗ್ರಾಮಸ್ಥರಿಂದಲೇ ದುರಸ್ತಿಗೊಂಡ ಹಾರ್ಯಾಡಿ ಸಂಪರ್ಕ ರಸ್ತೆ 

ಸುಮಾರು 30 ಮನೆಗಳಿಗೆ ಸಂಪರ್ಕ ಕಲ್ಪಿಸುವ 1.5 ಕಿ.ಮೀ. ರಸ್ತೆ; ತಮ್ಮ ಸ್ವಂತ ಖರ್ಚಿನಿಂದಲೇ ನಿರ್ಮಿಸಿದ ಗ್ರಾಮಸ್ಥರು

Team Udayavani, Nov 6, 2023, 9:05 AM IST

3-thekkatte

ತೆಕ್ಕಟ್ಟೆ: ಕೊರ್ಗಿ ಗ್ರಾ. ಪಂ. ವ್ಯಾಪ್ತಿಯ ಹೆಸ್ಕುತ್ತೂರು ಗ್ರಾಮದ ಹಾರ್ಯಾಡಿ ಎಂಬಲ್ಲಿ ಕಳೆದ ಹಲವು ವರ್ಷಗಳಿಂದಲೂ ಮೂಲ ಸಂಪರ್ಕ ರಸ್ತೆಗಳ ಸಮಸ್ಯೆಯಿಂದಾಗಿ ಇಲ್ಲಿನ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಈ ಬಗ್ಗೆ ಗ್ರಾ.ಪಂ.ನ ಗಮನಕ್ಕೆ ತಂದರೂ ಸಮರ್ಪಕ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ಒಂದಾಗಿ ತಮ್ಮ ಸ್ವಂತ ಖರ್ಚಿನಲ್ಲಿಯೇ ಸುಮಾರು 1.5 ಕಿ.ಮೀ. ದೂರದ ರಸ್ತೆ ನಿರ್ಮಿಸುವ ಕಾರ್ಯಕ್ಕೆ ಮುಂದಾಗಿದ್ದು , ಕೊನೆಗೂ ಶ್ರೀ ಬ್ರಹ್ಮಸ್ಥಾನ ದೇಗುಲದ ಸಂಪರ್ಕ ರಸ್ತೆಗೆ ಗ್ರಾಮಸ್ಥರಿಂದಲೇ ದುರಸ್ತಿ ಭಾಗ್ಯ ಪಡೆದುಕೊಂಡಿದೆ.

ಏನಿದು ಸಮಸ್ಯೆ ?

ಹೆಸ್ಕುತ್ತೂರು ಗ್ರಾಮದ ಹಾರ್ಯಾಡಿಯ ಬಸ್‌ ಸ್ಟಾಂಡ್‌ ಸಮೀಪದಲ್ಲಿಯೇ ಶ್ರೀ ಬ್ರಹ್ಮಸ್ಥಾನ ದೇಗುಲ ರಸ್ತೆಯೊಂದು ಇದುವರೆಗೆ ಯಾವುದೇ ದುರಸ್ತಿ ಭಾಗ್ಯ ಕಾಣದೇ ಮಳೆಗಾಲದಲ್ಲಿ ನೀರಿನ ತೋಡಿನಂತೆ, ಬೇಸಗೆಯಲ್ಲಿ ಕಲ್ಲುಮಯ ಹೊಂಡವಾಗಿ ಸಾರ್ವಜನಿಕ ಸಂಚಾರಕ್ಕೆ ದುಸ್ತರವಾಗಿತ್ತು. ಸಂಬಂಧಪಟ್ಟ ಗ್ರಾ.ಪಂ.ಗೆ ಇಲ್ಲಿನ ನಿವಾಸಿಗಳು ಮನವಿ ನೀಡಿದರೂ ಯಾವುದೇ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ಸ್ಥಳೀಯ ಗ್ರಾಮಸ್ಥರು ಜೆಸಿಬಿ ಯಂತ್ರಗಳ ಮೂಲಕ ತಮ್ಮ ಸ್ವಂತ ಖರ್ಚಿನಲ್ಲಿಯೇ ಸುಮಾರು 1 ಲಕ್ಷಕ್ಕೂ ಅಧಿಕ ಮೊತ್ತವನ್ನು ವಿನಿಯೋಗಿಸಿ ರಸ್ತೆ ದುರಸ್ತಿ ಕಾರ್ಯಕ್ಕೆ ಮುಂದಾದರು.

ಸ್ವಯಂ ಪ್ರೇರಿತರಾಗಿ ರಸ್ತೆ ದುರಸ್ತಿ ಮಾಡಿದ ಯುವಪಡೆ

ಆಡಳಿತ ವ್ಯವಸ್ಥೆ ಮೇಲಿನ ಭರವಸೆ ಕಳೆದುಕೊಂಡ ಬೆಂಗಳೂರಿನ ಐಟಿ ಬಿಟಿಯಲ್ಲಿ ಉದ್ಯೋಗದಲ್ಲಿರುವ ಪ್ರಸ್ತುತ ವರ್ಕ್‌ ಫ್ರಂ ಹೋಮ್‌ನಲ್ಲಿರುವ ಸಮಾನ ಮನಸ್ಕರ ಯುವಕರ ತಂಡವು ಸ್ಥಳೀಯ ಗ್ರಾಮಸ್ಥರ ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಿಂದ ತಮ್ಮ ಸ್ವಂತ ಖರ್ಚಿನಲ್ಲಿಯೇ ಕಳೆದೆರಡು ದಿನಗಳಿಂದಲೂ ರಸ್ತೆ ದುರಸ್ತಿ ಕಾಮಗಾರಿಗೆ ಮುಂದಾಗಿದ್ದಾರೆ.

ಇಲ್ಲಿನ ಸ್ಥಳೀಯ ನಿವಾಸಿಗಳಾದ ಸುಭಾಷ್‌ ಶೆಟ್ಟಿ, ಸತೀಶ್‌ ಕೆದ್ಲಾಯ, ಮಹೇಶ್‌, ರಾಮಚಂದ್ರ, ಪ್ರಸನ್ನ, ಭಾಸ್ಕರ್‌, ಸೂರ್ಯ ನಾರಾಯಣ, ಸುಮಿತ್ರಾ, ಸರೋಜಾ, ಲಕ್ಷ್ಮಿನಾರಾಯಣ ಕೆದ್ಲಾಯ, ದಿನೇಶ್‌ ಆಚಾರ್ಯ, ಸತೀಶ್‌ ಕೆದ್ಲಾಯ, ರಾಜಕೃಷ್ಣ, ಶಿವರಾಮ ಭಟ್‌ ಹಾಗೂ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ಶ್ರಮಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.

ತುರ್ತು ಕಾಮಗಾರಿ ನಡೆಸುವ ಪರಿಸ್ಥಿತಿ ಇಲ್ಲ: ಕೊರ್ಗಿ ಗ್ರಾ.ಪಂ. ವ್ಯಾಪ್ತಿಯ ಶ್ರೀ ಬ್ರಹ್ಮಸ್ಥಾನ ದೇಗುಲ ಸಂಪರ್ಕ ರಸ್ತೆ ನಿರ್ಮಿಸುವಂತೆ ಕಳೆದ ಎರಡು ದಿನಗಳ ಹಿಂದೆ ಅಷ್ಟೇ ಹಾರ್ಯಾಡಿ ನಿವಾಸಿಗಳು ಮನವಿ ನೀಡಿದ್ದರು. ಸರಕಾರ ಅನುದಾನ ಬಿಡುಗಡೆ ಮಾಡಿದಾಗ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡುತ್ತೇವೆ. ಇಡೀ ಕುಂದಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಎಷ್ಟೋ ಗ್ರಾಮಗಳಿದ್ದು ಅಲ್ಲಿನ ಸಮಸ್ಯೆಗಳಿಗೂ ಸ್ಪಂದಿಸಬೇಕಿದ್ದು ಈಗಿನ ಪರಿಸ್ಥಿತಿಯಲ್ಲಿ ತುರ್ತು ಕಾಮಗಾರಿ ನಡೆಸುವ ಪರಿಸ್ಥಿತಿ ಇಲ್ಲ . -ಕಿರಣ್‌ ಕುಮಾರ್‌ ಕೊಡ್ಗಿ, ಶಾಸಕರು, ಕುಂದಾಪುರ ವಿಧಾನಸಭಾ ಕ್ಷೇತ್ರ

ಲಭ್ಯತೆಯ ಆಧಾರದ ಮೇಲೆ ಕಾಮಗಾರಿ ಕೊಳ್ಳಲಾಗುವುದು: ಗ್ರಾ.ಪಂ.ನ ಅನುದಾನದ ಲಭ್ಯತೆಯ ಆಧಾರದ ಒಂದು ಹಂತದ ಕಾಮಗಾರಿ ಕೈಗೆತ್ತಿ ಕೊಂಡಿದ್ದೇವೆ. ಮಣ್ಣಿನ ರಸ್ತೆಯಾದ್ದರಿಂದ ಮಳೆಗಾಲದಲ್ಲಿ ರಸ್ತೆ ಹಾಳಾಗುತ್ತಿದೆ. ಈ ಕುರಿತು ಈ ಹಿಂದೆ ಶಾಸಕರಿಗೆ ಶಿಫಾರಸು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸುವ್ಯವಸ್ಥಿತ ರಸ್ತೆ ನಿರ್ಮಿಸುವ ನಿಟ್ಟಿನಿಂದ ಕ್ರಿಯಾಯೋಜನೆ ರೂಪಿಸಿ 15ನೇ ಹಣಕಾಸು ಯೋಜನೆ ಅಡಿಯಲ್ಲಿ ಅನುದಾನದ ಲಭ್ಯತೆಯ ಆಧಾರದ ಮೇಲೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು.- ಸುಧಾಕರ ಶೆಟ್ಟಿ ಗುಡಮ್ಮಾಡಿ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು ಗ್ರಾ.ಪಂ. ಕೊರ್ಗಿ

ಕಾಂಕ್ರೀಟ್‌: ಈ ಹಿಂದೆ ಸಂಪರ್ಕ ರಸ್ತೆ ನಿರ್ಮಾಣಕ್ಕಾಗಿ ಇಲ್ಲಿನ ನಿವಾಸಿಗಳು ತಮ್ಮ ಸ್ವಂತ ಜಾಗ ಬಿಟ್ಟಿದ್ದು, ಸ್ಥಳೀಯಾಡಳಿತ ನಿರ್ಲಕ್ಷ್ಯ ಧೋರಣೆ ತೋರಿದ ಹಿನ್ನೆಲೆಯಲ್ಲಿ ಈ ಹಿಂದೆಯೂ ಸ್ಥಳೀಯ ನಿವಾಸಿಗಳು ತಮ್ಮ ಸ್ವಂತ ಖರ್ಚಿನಿಂದಲೇ ರಸ್ತೆ ದುರಸ್ತಿ ಮಾಡಿದ್ದು, ಈ ಬಾರಿಯೂ ನಾವೆಲ್ಲ ಒಂದಾಗಿ ರಸ್ತೆ ದುರಸ್ತಿಗೆ ಮುಂದಾಗಿದ್ದೇವೆ. ಮುಂದಿನ ದಿನಗಳಲ್ಲಿ ಸುವ್ಯವಸ್ಥಿತವಾದ ಕಾಂಕ್ರೀಟ್‌ ರಸ್ತೆ ಜತೆಗೆ ಒಳಚರಂಡಿ ನಿರ್ಮಿಸಿಕೊಡುವಂತೆ ಕುಂದಾಪುರ ಶಾಸಕ ಕಿರಣ್‌ ಕುಮಾರ್‌ ಕೊಡ್ಗಿ ಅವರಿಗೆ ಮನವಿ ಸಲ್ಲಿಸಲಾಗಿದೆ. –ಸುಭಾಷ್‌ ಶೆಟ್ಟಿ , ಸ್ಥಳೀಯ ನಿವಾಸಿಗಳು  

 ಲೋಕೇಶ್‌ ಆಚಾರ್ಯ ತೆಕ್ಕಟೆ

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.