ಹೆಮ್ಮಾಡಿ: ಅಂಗವಿಕಲರ ಚಿಕಿತ್ಸಾ ಕೊಠಡಿ ಅವ್ಯವಸ್ಥೆ ಆಗರ

ವಿಕಲಚೇತನ ಪುನರ್ವಸತಿ ಕೇಂದ್ರ ಸಿಬಂದಿಗೆ ಸಂಕಟ

Team Udayavani, May 10, 2022, 10:18 AM IST

treatment

ಹೆಮ್ಮಾಡಿ: ಇಲ್ಲಿನ ಸರಕಾರಿ ಹಿ.ಪ್ರಾ. ಶಾಲೆಯ ಹಳೆಯ ಕಟ್ಟಡದಲ್ಲಿ ತಿಂಗಳಿಗೆ 3 ಬಾರಿ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರ ಸಿಬಂದಿಯಿಂದ ನಡೆಯುವ ಚಿಕಿತ್ಸಾ ಶಿಬಿರದ ಕೊಠಡಿ ಅವ್ಯವಸ್ಥೆಯ ಆಗರವಾಗಿದೆ. ಕೊಠಡಿಗೆ ಸರಿಯಾದ ಬೆಳಕಿನ ವ್ಯವಸ್ಥೆಯಿಲ್ಲ. ನೀರಿನ ಸೌಕರ್ಯವೂ ಇಲ್ಲ. ಇನ್ನೂ ಕನಿಷ್ಠ ಶೌಚಾಲಯವೂ ಇಲ್ಲ.

ಕುಂದಾಪುರ, ಬ್ರಹ್ಮಾವರ, ಕಾರ್ಕಳ ಸೇರಿದಂತೆ ಉಡುಪಿ ಜಿಲ್ಲೆಯ ಎಲ್ಲ ಶೈಕ್ಷಣಿಕ ವಲಯದಲ್ಲಿ ತಿಂಗಳಿಗೆ 3 ಬಾರಿ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರ ಸಿಬಂದಿಯಿಂದ ಚಿಕಿತ್ಸಾ ಶಿಬಿರ ನಡೆಯುತ್ತದೆ. ಅದೇ ರೀತಿ ಬೈಂದೂರು ವಲಯದ ಹೆಮ್ಮಾಡಿಯಲ್ಲಿ ಇಲ್ಲಿನ ಶಾಲೆಯ ಹಳೆಯ ಕಟ್ಟಡದಲ್ಲಿ ತಿಂಗಳಿಗೆ 3 ಶನಿವಾರ ಶಿಬಿರ ನಡೆಯುತ್ತದೆ.

ಈ ಚಿಕಿತ್ಸಾ ಶಿಬಿರದಲ್ಲಿ ಪುನರ್ವಸತಿ ಕೇಂದ್ರದ ಫಿಸಿಯೋಥೆರಪಿಸ್ಟ್‌, ಕ್ಲಿನಿಕಲ್‌ ಸೈಕಾಲಜಿಸ್ಟ್‌, ಅಡಿಯೋಲಜಿಸ್ಟ್‌/ ಸ್ಪೀಚ್‌ ಥೆರಪಿಸ್ಟ್‌ ಭಾಗವಹಿಸುತ್ತಾರೆ. ಈ ಭಾಗದ ಸುತ್ತಮುತ್ತಲಿನ ಗ್ರಾಮದ ವಿಕಲ ಚೇತನರು, ವೃದ್ಧರು ಸೇರಿದಂತೆ ಶಿಬಿರಕ್ಕೆ ಹತ್ತಾರು ಮಂದಿ ಆಗಮಿಸುತ್ತಾರೆ.

ಸಿಬಂದಿ, ರೋಗಿಗಳಿಗೆ ಸಂಕಷ್ಟ

ಆದರೆ ಈ ಕೊಠಡಿಗೆ ವಿದ್ಯುತ್‌ ಸಂಪರ್ಕವನ್ನೇ ಕಲ್ಪಿಸಿಲ್ಲ. ಹಾಗಾಗಿ ಸರಿಯಾದ ಬೆಳಕಿನ ವ್ಯವಸ್ಥೆಯಿಲ್ಲ. ಈಗ ಬೇಸೆಗೆಯೂ ಆಗಿರುವುದರಿಂದ ಫ್ಯಾನ್‌ ಇಲ್ಲದೆ, ಸೆಕೆಗೆ ಒಳಗೆ ಕುಳಿತುಕೊಳ್ಳುವುದೇ ಕಷ್ಟಕರವಾಗಿದೆ. ಎಲ್ಲ ಕಿಟಕಿಗಳ ಬಾಗಿಲು ಸಹ ತೆಗೆಯಲು ಆಗದಷ್ಟು ನಾದುರಸ್ತಿಯಲ್ಲಿದೆ. ಇನ್ನು ಇಲ್ಲಿ ಶೌಚಾಲಯವಿಲ್ಲದೆ ಮಹಿಳಾ ಸಿಬಂದಿಯ ಗೋಳು ಹೇಳತೀರದಾಗಿದೆ. ನೀರಿನ ವ್ಯವಸ್ಥೆಯೂ ಇಲ್ಲ. ಸ್ಥಳೀಯ ಗ್ರಾ.ಪಂ. ಕನಿಷ್ಠ ಮೂಲ ಸೌಕರ್ಯವನ್ನು ಸಹ ಕಲ್ಪಿಸಿ ಕೊಡದಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಅನಾರೋಗ್ಯ ಭೀತಿ

ಸ್ವಚ್ಛ ಮಾಡದೇ ಕೊಠಡಿಯು ಅಸ್ತವ್ಯಸ್ತವಾಗಿದೆ. ಇಲ್ಲಿಗೆ ಬಂದು ಹೋಗುವ ರೋಗಿಗಳು ಹಾಗೂ ಸಿಬಂದಿಗೆ ಮೈಯೆಲ್ಲ ತುರಿಕೆ ಶುರುವಾಗುತ್ತದೆ. ಚಿಕಿತ್ಸೆ ಕೊಡಲು ಬರುವ ನಮಗೆ ಅನಾರೋಗ್ಯ ಭೀತಿ ಕಾಡುತ್ತಿದೆ. ಸಂಬಂಧಪಟ್ಟವರು ಈ ಕೊಠಡಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಿಕೊಡಿ ಎನ್ನುವುದಾಗಿ ಇಲ್ಲಿನ ಶಿಬಿರಕ್ಕೆ ಆಗಮಿಸುವ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರದ ಸಿಬಂದಿ ಮನವಿ ಮಾಡಿಕೊಂಡಿದ್ದಾರೆ.

ಕ್ರಮಕೈಗೊಳ್ಳಲಾಗುವುದು

ವಿಕಲಚೇತನ ಪುನರ್ವಸತಿ ಕೇಂದ್ರ ಸಿಬಂದಿಯಿಂದ ನಡೆಯುವ ಚಿಕಿತ್ಸಾ ಶಿಬಿರದ ಕೊಠಡಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಈಗಾಗಲೇ ಕ್ರಮಕೈಗೊಳ್ಳಲು ಸಂಬಂಧಪಟ್ಟವರಿಗೆ ತಿಳಿಸಲಾಗಿದೆ. ನೀರಿನ ಸಂಪರ್ಕ ಸದ್ಯಕ್ಕೆ ಕಷ್ಟ. ಹೊಸತಾಗಿ ಪೈಪ್‌ ಲೈನ್‌ ಆಗಬೇಕಿದೆ. ಇದು ಶಿಕ್ಷಣ ಇಲಾಖೆ ಅಧೀನದ ಕೊಠಡಿಯಾಗಿದ್ದು, ಅವರಿಂದ ನಮಗೆ ಯಾವುದೇ ರೀತಿಯ ಸಹಕಾರ ಸಿಗುತ್ತಿಲ್ಲ. -ಯು. ಸತ್ಯನಾರಾಯಣ ರಾವ್‌, ಹೆಮ್ಮಾಡಿ ಗ್ರಾ.ಪಂ. ಅಧ್ಯಕ್ಷರು

ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.