ಹೆಮ್ಮಾಡಿಯಲ್ಲಿ ನೆಲಮಂಗಲ ಸೇವಂತಿಗೆ ಬೆಳೆ

ಹೆಮ್ಮಾಡಿ ರೈತರಿಂದ "ಟೆಂಟ್‌ ಯೆಲ್ಲೊ' ಸೇವಂತಿಗೆ ಬೆಳೆಯಲು ಮೊದಲ ಬಾರಿಗೆ ಪ್ರಯತ್ನ

Team Udayavani, Jan 25, 2022, 5:12 PM IST

ಹೆಮ್ಮಾಡಿಯಲ್ಲಿ ನೆಲಮಂಗಲ ಸೇವಂತಿಗೆ ಬೆಳೆ

ಹೆಮ್ಮಾಡಿ: ಕುಂದಾಪುರ ಭಾಗದಲ್ಲಿ ಹೆಮ್ಮಾಡಿಯಲ್ಲಿ ಮಾತ್ರ ಬೆಳೆಯುವ ಸೇವಂತಿಗೆ ಹೂವು ವಿಶಿಷ್ಟವಾದ ತಳಿ. ಈ ತಳಿಯ ಸೇವಂತಿಗೆ ಹೂವನ್ನು ಬೇರೆಲ್ಲೂ ಬೆಳೆಯುವುದಿಲ್ಲ. ಆದರೆ ಇಲ್ಲೊಬ್ಬರು ಬೆಳೆಗಾರರು ಈ ಭಾಗದಲ್ಲಿ ಇದೇ ಮೊದಲ ಬಾರಿಗೆ ಹೆಮ್ಮಾಡಿ ಸೇವಂತಿಗೆ ಜತೆಗೆ ನೆಲಮಂಗಲ ಸೇವಂತಿಗೆ (ಟೆಂಟ್‌ ಯೆಲ್ಲೊ) ಯನ್ನು ಬೆಳೆಯುವ ಮೂಲಕ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.

ಹೆಮ್ಮಾಡಿಯ ಪ್ರಶಾಂತ್‌ ಭಂಡಾರಿ ಅವರು ಹೆಮ್ಮಾಡಿ ಸೇವಂತಿಗೆ ಹೂವಿನ ಬೆಳೆಯೊಂದಿಗೆ ಈ ಬಾರಿ ನೆಲಮಂಗಲ ಸೇವಂತಿಗೆಯನ್ನು ಬೆಳೆಯುವ ಮೂಲಕ ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ಹೆಮ್ಮಾಡಿ ಸೇವಂತಿಗೆ ವಿಶಿಷ್ಟ ತಳಿ
ಹೆಮ್ಮಾಡಿ ಸೇವಂತಿಗೆ ಹೂವು ಸೇವಂತಿಗೆ ತಳಿಗಳ ಲ್ಲಿಯೇ ವಿಶಿಷ್ಟವಾದುದಾ ಗಿದೆ. ಆಕರ್ಷಕವಾದ, ಕಣ್ಮನ ಸೆಳೆಯುವ ಬಣ್ಣ, ಚಿಕ್ಕ ಗಾತ್ರ, ಘಮ-ಘಮ ಸುವಾಸನೆ, ಮೋಹಕ ಚೆಲುವು, ಹೆಚ್ಚು ಬಾಳಿಕೆಯ ಗುಣ ಈ ರೀತಿಯ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿದೆ ಹೆಮ್ಮಾಡಿ ಸೇವಂತಿ ಹೂವು.

ಸಾಧಾರಣ ಬೆಲೆ
ಈಗ ಸರಕಾರ ವಾರಾಂತ್ಯ ಕರ್ಫ್ಯೂ ಸಹ ತೆರವು ಮಾಡಿರುವುದರಿಂದ ಜಾತ್ರೆ, ಕೆಂಡ ಸೇವೆಗಳಿಗೆ ಅನುಕೂಲ ವಾಗಿದ್ದು, ಇದು ಹೆಮ್ಮಾಡಿ ಸೇವಂತಿಗೆ ಬೆಳೆಗಾರರಿಗೆ ವರದಾನವಾಗಿದೆ. ವ್ಯಾಪಾರ ತಕ್ಕಮಟ್ಟಿಗೆ ಪರವಾಗಿಲ್ಲ. ಆದರೆ ಬೆಲೆ ಕಳೆದ ವರ್ಷ 1 ಸಾವಿರ ಹೂವಿಗೆ 400 ರೂ. ಇದ್ದರೆ, ಈ ಸಲ 300 ರೂ. ಬೆಲೆಯಲ್ಲಿ ಮಾರಾಟವಾಗುತ್ತಿದೆ.

10 ಸೆಂಟ್ಸ್‌ ಜಾಗದಲ್ಲಿ ಬೆಳೆ
ಹಲವಾರು ವರ್ಷಗಳಿಂದ ಹೆಮ್ಮಾಡಿ ಸೇವಂತಿಗೆ ಕೃಷಿಯನ್ನು ಮಾಡುತ್ತಿರುವ ಇವರು ಒಟ್ಟಾರೆ 1 ಎಕರೆ ಜಾಗದಲ್ಲಿ ಸೇವಂತಿಗೆ ಬೆಳೆದಿದ್ದಾರೆ. ಆ ಪೈಕಿ 10 ಸೆಂಟ್ಸ್‌ ಜಾಗದಲ್ಲಿ ನೆಲಮಂಗಲ ಸೇವಂತಿಗೆ ಬೆಳೆದಿದ್ದರೆ, ಬಾಕಿ ಜಾಗದಲ್ಲಿ ಹೆಮ್ಮಾಡಿ ಸೇವಂತಿಗೆ ಕೃಷಿ ಮಾಡಿದ್ದಾರೆ.

ನೆಲಮಂಗಲ ಸೇವಂತಿಗೆ: ಇಳುವರಿ ಕಡಿಮೆ
ಪ್ರಶಾಂತ್‌ ಭಂಡಾರಿ ಅವರು ಹೇಳುವ ಪ್ರಕಾರ ಹೆಮ್ಮಾಡಿ ಸೇವಂತಿಗೆಗೆ ಹೋಲಿಸಿದರೆ ನೆಲಮಂಗಲ ಹೂವಿನ ಇಳುವರಿ ಕಡಿಮೆ. ಹೆಮ್ಮಾಡಿ ಸೇವಂತಿಗೆ 1 ಗಿಡದಲ್ಲಿ ಕನಿಷ್ಠ 100 ಹೂವು ಆದರೆ, ನೆಲಮಂಗಲ ಸೇವಂತಿಗೆ 1 ಗಿಡದಲ್ಲಿ ಕೇವಲ 20 ಹೂವಷ್ಟೇ ಆಗುತ್ತದೆ. ಇನ್ನು ಇಲ್ಲಿನ ಹವಾಗುಣಕ್ಕೆ ತಕ್ಕುದಾದ ಹೂವಲ್ಲ. ಹೆಚ್ಚು ಮಳೆ, ಹೆಚ್ಚು ಬಿಸಿಲಿರುವುದರಿಂದ ಅದಕ್ಕೆ ಹೊಂದಿಕೆಯಾಗುವುದು ಕಷ್ಟ ಎನ್ನುತ್ತಾರವರು.

ಇಳುವರಿ ಅಷ್ಟಿಲ್ಲ
ಈ ಬಾರಿ ಹೆಮ್ಮಾಡಿ ಸೇವಂತಿಗೆ ಹೂವಿನ ಜತೆಗೆ ಮೊದಲ ಬಾರಿಗೆ ನೆಲಮಂಗಲ ಹೂವನ್ನು ಸಹ ಬೆಳೆದಿದ್ದೇನೆ. ಇದೊಂದು ಹೊಸ ಪ್ರಯತ್ನ. ಆದರೆ ಇಲ್ಲಿನ ಹವಾಗುಣಕ್ಕೆ ಇದು ಸರಿ ಹೊಂದುವಂತೆ ಕಾಣುತ್ತಿಲ್ಲ. ಮಳೆ ಜಾಸ್ತಿ, ಬಿಸಿಲಿನಿಂದಾಗಿ ಇಳುವರಿ ಅಷ್ಟೇನು ಬಂದಿಲ್ಲ. ಒಂದು ಗಿಡದಲ್ಲಿ 20 ಹೂವಷ್ಟೇ ಆಗಿದೆ. ಮುಂದಿನ ಬಾರಿ ಇನ್ನಷ್ಟು ಸಮರ್ಪಕವಾಗಿ ಬೆಳೆಯಲು ಪ್ರಯತ್ನಿಸಲಾಗುವುದು.
– ಪ್ರಶಾಂತ್‌ ಭಂಡಾರಿ,
ಸೇವಂತಿಗೆ ಬೆಳೆಗಾರರು

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.