ಹೆಮ್ಮಾಡಿ-ತಲ್ಲೂರು: ಬಸ್‌ ನಿಲ್ದಾಣ, ಸರ್ವೀಸ್‌ ರಸ್ತೆಗೆ ಬೇಡಿಕೆ

ಶಿರೂರಿನಲ್ಲಿ ಸುಂಕ ಸಂಗ್ರಹ ಆರಂಭವಾಗಿ 8 ತಿಂಗಳು

Team Udayavani, Oct 9, 2020, 1:37 AM IST

ಹೆಮ್ಮಾಡಿ-ತಲ್ಲೂರು: ಬಸ್‌ ನಿಲ್ದಾಣ, ಸರ್ವೀಸ್‌ ರಸ್ತೆಗೆ ಬೇಡಿಕೆ

ಹೆಮ್ಮಾಡಿಯಲ್ಲಿ ಬಸ್‌ ನಿಲ್ದಾಣವಿಲ್ಲದೆ ರಸ್ತೆ ಬದಿ ನಿಂತಿರುವ ಜನ.

ಕುಂದಾಪುರ: ಶಿರೂರಲ್ಲಿ ಟೋಲ್‌ಗೇಟಲ್ಲಿ ಸುಂಕ ಸಂಗ್ರಹ ಆರಂಭವಾಗಿ 8 ತಿಂಗಳು ಕಳೆದರೂ ಇನ್ನೂ ಕೂಡ ಕುಂದಾಪುರದಿಂದ ಶಿರೂರು ವರೆಗಿನ ಹೆದ್ದಾರಿಯಲ್ಲಿ ಆಗಬೇಕಾದ ಅನೇಕ ಕಾಮಗಾರಿ ಮಾತ್ರ ನಡೆದಿಲ್ಲ. ಇದರಲ್ಲಿ ಹೆಮ್ಮಾಡಿ – ತಲ್ಲೂರಿನಲ್ಲಿ ಬಸ್‌ ನಿಲ್ದಾಣಗಳು, ಸರ್ವೀಸ್‌ ರಸ್ತೆ ನಿರ್ಮಾಣ ಬೇಡಿಕೆ ಪ್ರಮುಖವಾಗಿವೆ.

ಐಆರ್‌ಬಿ ಸಂಸ್ಥೆ ಗುತ್ತಿಗೆ ವಹಿಸಿಕೊಂಡಿರುವ ಕಾರವಾರ-ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿಯಿಂದಾಗಿ ಬೈಂದೂರು, ಕುಂದಾಪುರ, ವಂಡ್ಸೆ, ಕೊಲ್ಲೂರು, ನೇರಳಕಟ್ಟೆ, ಆಜ್ರಿ, ಸಿದ್ದಾಪುರ ಮತ್ತಿತರ ಕಡೆಗಳಿಗೆ ಸಂಪರ್ಕ ಕಲ್ಪಿಸುವ ಎರಡು ಪ್ರಮುಖ ಜಂಕ್ಷನ್‌ಗಳಾದ ಹೆಮ್ಮಾಡಿ ಹಾಗೂ ತಲ್ಲೂರಲ್ಲಿ ಇದ್ದ ಬಸ್‌ ನಿಲ್ದಾಣ ತೆರವಾಗಿತ್ತು. ಈಗ ಹೆದ್ದಾರಿ ಕಾಮಗಾರಿ ಮುಗಿದಿದೆ. ತಲ್ಲೂರಲ್ಲಿ ಜಂಕ್ಷನ್‌ ಆಗಿದ್ದರೆ, ಹೆಮ್ಮಾಡಿಯಲ್ಲಿ ಜಂಕ್ಷನ್‌ ನಿರ್ಮಾಣವಾಗಿಲ್ಲ. ಆದರೆ ಇಲ್ಲಿ ಬಸ್‌ ನಿಲ್ದಾಣ ವಿಲ್ಲದೆ ಜನ ಸಂಕಷ್ಟಪಡುವಂತಾಗಿದೆ.

ಬಿಸಿಲಲ್ಲೇ ನಿಲ್ಲುವ ಜನ
ಹೆಮ್ಮಾಡಿ ಹಾಗೂ ತಲ್ಲೂರು ಎರಡು ಕಡೆಗಳಲ್ಲೂ ಕುಂದಾಪುರ, ಬೈಂದೂರು, ಕೊಲ್ಲೂರು ಕಡೆಗೆ ಹೋಗುವ ಜನ ಬಸ್‌ ನಿಲ್ದಾಣವಿಲ್ಲದೆ ರಸ್ತೆ ಬದಿಯೇ ನಿಂತು ಬಸ್‌ಗಾಗಿ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಮಳೆ ಬಂದರೂ ಹೊರಗೆಯೇ ಕಾಯಬೇಕಾಗಿದೆ. ಬಿಸಿಲಿದ್ದರೂ ಪರ್ಯಾಯ ವ್ಯವಸ್ಥೆಯಿಲ್ಲ. ಕೆಲವರು ಅಲ್ಲಿಯೇ ಪಕ್ಕದಲ್ಲಿರುವ ಅಂಗಡಿಗಳ ಆಶ್ರಯ ಪಡೆಯುತ್ತಾರೆ. ಬಾಕಿ ಉಳಿದವರು ಬಿಸಿಲಲ್ಲಿಯೇ ನಿಂತು ಪ್ರಯಾಸ ಪಡುವಂತಾಗಿದೆ.

ಅಪಾಯಕಾರಿ ಜಂಕ್ಷನ್‌
ಅರಾಟೆಯಲ್ಲಿ ಸೇತುವೆ ಬಿರುಕು ಬಿಟ್ಟ ಪರಿ ಣಾಮ ಮುಳ್ಳಿಕಟ್ಟೆಯಿಂದ ಹೆಮ್ಮಾಡಿಯವರೆಗೆ ಒಂದೇ ರಸ್ತೆಯಿಂದ ಎರಡೂ ಕಡೆಗಳ ವಾಹನಗಳನ್ನು ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ. ಆದರೆ ಅದೀಗ ಹೆಮ್ಮಾಡಿಯಲ್ಲಿ ಗೊಂದಲಮಯ ಹಾಗೂ ಅಪಾಯಕಾರಿಯಾಗಿ ಪರಿಣಮಿಸಿದೆ. ಅದರಲ್ಲೂ ರಸ್ತೆ ದಾಟುವ ಜನರಿಗಂತೂ ವಾಹನಗಳು ಯಾವ ಕಡೆಯಿಂದ ಬರುತ್ತವೋ ಎಂದು ಗೊತ್ತೇ ಆಗದ ಸ್ಥಿತಿಯಿದೆ. ಇಲ್ಲಿ ವಾಹನ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಿ, ವಾಹನ ಸವಾರರು, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎನ್ನುವುದಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

ಈಡೇರದ ಅನೇಕ ಬೇಡಿಕೆ
ಕುಂದಾಪುರದಿಂದ ಶಿರೂರುವರೆಗಿನ ಹೆದ್ದಾರಿಯ ತಲ್ಲೂರು, ಹೆಮ್ಮಾಡಿಯಲ್ಲಿ ಇನ್ನೂ ಕೂಡ ಸರ್ವೀಸ್‌ ರಸ್ತೆ ನಿರ್ಮಾಣ, ಅದಕ್ಕೆ ಬೇಕಾದ ಭೂಸ್ವಾಧೀನ ಪ್ರಕ್ರಿಯೆಯೇ ಇನ್ನೂ ಆರಂಭಗೊಂಡಿಲ್ಲ. ತಲ್ಲೂರು ಜಂಕ್ಷನ್‌ನಲ್ಲಿ ಬೀದಿದೀಪಗಳೇ ಇಲ್ಲ. ಇದರಿಂದ ರಾತ್ರಿ ವೇಳೆ ತುಂಬಾ ಸಮಸ್ಯೆಗಳಾಗುತ್ತಿವೆ. ಹೆಮ್ಮಾಡಿ, ತಲ್ಲೂರು, ತ್ರಾಸಿ, ಸೇರಿದಂತೆ ಹಲವೆಡೆ ಬಸ್‌ ಬೇಗಳನ್ನೇ ನಿರ್ಮಿಸಿಲ್ಲ. ಇದರಿಂದ ಬಸ್‌ಗಳು ಹೆದ್ದಾರಿಯಲ್ಲಿಯೇ ನಿಂತು ಪ್ರಯಾಣಿಕ ರನ್ನು ಹತ್ತಿಸಿ, ಇಳಿಸಬೇಕಾಗಿದೆ. ಜಾಲಾಡಿ- ಸಂತೋಷನಗರ ಮಧ್ಯೆ ಕ್ರಾಸಿಂಗ್‌ ಅಗತ್ಯ ವಿದ್ದು, ಆ ಕಾರ್ಯವೂ ಆಗಿಲ್ಲ. ಕೆಲವೆಡೆ ಅನಧಿಕೃತ ಕ್ರಾಸಿಂಗ್‌ಗಳಿವೆ.

ಬಸ್‌ ನಿಲ್ದಾಣ ಅಗತ್ಯ ಬೇಕು
ಹಿಂದೆ ಹೆಮ್ಮಾಡಿಯಲ್ಲಿ ಬಸ್‌ ನಿಲ್ದಾಣವಿತ್ತು. ಹೆದ್ದಾರಿ ಕಾಮಗಾರಿ ಆದ ಬಳಿಕ ಅದನ್ನು ತೆಗೆದು ಹಾಕಿದ್ದಾರೆ. ಆದರೆ ಈಗ ಕಾಮಗಾರಿ ಮುಗಿದಿದೆ. ಆದರೆ ಬಸ್‌ ನಿಲ್ದಾಣ ಮಾತ್ರ ಇನ್ನೂ ಮಾಡಿಕೊಟ್ಟಿಲ್ಲ. ಕಾಮಗಾರಿಯಿಂದಾಗಿ ತೆಗೆಸಿದ್ದರಿಂದ ಐಆರ್‌ಬಿ ಸಂಸ್ಥೆಯವರೇ ಮಾಡಿಕೊಡಬೇಕು. ಅರಾಟೆ ಸೇತುವೆ ದುರಸ್ತಿ ಮಾಡುತ್ತಿರುವುದರಿಂದ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದ್ದು, ಇದರಿಂದ ಹೆಮ್ಮಾಡಿ ಜಂಕ್ಷನ್‌ ಈಗ ಅಪಾಯಕಾರಿಯಾಗಿದೆ. ಯಾವ ಕಡೆಯಿಂದ ವಾಹನಗಳು ಬಂದು, ಕ್ರಾಸ್‌ ಮಾಡುತ್ತವೋ ಅನ್ನುವುದೇ ಗೊತ್ತಾಗುತ್ತಿಲ್ಲ. ಈ ಬಗ್ಗೆಯೂ ಸಂಬಂಧಪಟ್ಟವರು ಶೀಘ್ರ ಗಮನಹರಿಸಬೇಕಾಗಿದೆ.
– ದಿನೇಶ್‌ ಹೆಮ್ಮಾಡಿ, ಸ್ಥಳೀಯರು

ಪರಿಶೀಲಿಸುತ್ತೇನೆ
ಕುಂದಾಪುರ – ಕಾರವಾರ ಹೆದ್ದಾರಿ ಚತುಷ್ಪಥ ಕಾಮಗಾರಿಯಿಂದಾಗಿ ತೆಗೆದ ಬಸ್‌ ನಿಲ್ದಾಣಗಳನ್ನು ಮರು ನಿರ್ಮಿಸುವ ಕುರಿತಂತೆ ಪರಿಶೀಲಿಸುತ್ತೇನೆ. ಜನರಿಗೆ ತೊಂದರೆಯಾಗದಂತೆ ವ್ಯವಸ್ಥೆ ಕಲ್ಪಿಸಲಾಗುವುದು.
– ಕೆ. ರಾಜು, ಸಹಾಯಕ ಆಯುಕ್ತರು, ಕುಂದಾಪುರ

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.