“ತಿಂಗಳಾಂತ್ಯದೊಳಗೆ ಹೆದ್ದಾರಿಯ ಸಣ್ಣ-ಪುಟ್ಟ  ಸಮಸ್ಯೆ ಇತ್ಯರ್ಥ’ 


Team Udayavani, Sep 19, 2021, 3:20 AM IST

“ತಿಂಗಳಾಂತ್ಯದೊಳಗೆ ಹೆದ್ದಾರಿಯ ಸಣ್ಣ-ಪುಟ್ಟ  ಸಮಸ್ಯೆ ಇತ್ಯರ್ಥ’ 

ಕುಂದಾಪುರ:  ಇಲ್ಲಿನ ಶಾಸ್ತ್ರಿ ಸರ್ಕಲ್‌ ಸುತ್ತಮುತ್ತಲಿನ ಹೆದ್ದಾರಿಯ ಮರು ಡಾಮರು ಕಾಮ ಗಾರಿ ಹಾಗೂ ಅಂಡರ್‌ಪಾಸ್‌ ಬಳಿಯ ಸಣ್ಣ- ಪುಟ್ಟ ಸಮಸ್ಯೆಗಳೆಲ್ಲವೂ ಈ ತಿಂಗಳಾಂತ್ಯದೊಳಗೆ ಇತ್ಯರ್ಥಪಡಿಸುವ ಭರವಸೆಯನ್ನು ನವಯುಗ ಸಂಸ್ಥೆಯ ಎಂಜಿನಿಯರ್‌ ಹಾಗೂ ಅಧಿಕಾರಿಗಳು ನೀಡಿದ್ದಾರೆ ಎಂದು ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ರಾಜು ಕೆ. ಅವರು ಸ್ಪಷ್ಟಪಡಿಸಿದರು.

ಅವರು ಶನಿವಾರ ಇಲ್ಲಿನ ಮಿನಿವಿಧಾನಸೌಧದಲ್ಲಿ ಫ್ಲೈಓವರ್‌, ಅಂಡರ್‌ಪಾಸ್‌ ಹಾಗೂ ರಾಷ್ಟ್ರೀಯ ಹೆದ್ದಾರಿ ಕುರಿತ ಕೆಲವೊಂದು ಸಮಸ್ಯೆಗಳ ಕುರಿತಂತೆ ನವಯುಗ ಸಂಸ್ಥೆಯ ಎಂಜಿನಿಯರ್‌, ಸಿಬಂದಿ, ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯ ಬಳಿಕ ಮಾತನಾಡಿದರು.

4 ದಿನಗಳ ಗಡುವು:

ಇಲ್ಲಿನ ಪುರಸಭೆ ವ್ಯಾಪ್ತಿ ಹಾಗೂ ಅದರ ಆಸುಪಾಸಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವೊಂದು ಸಮಸ್ಯೆಗಳಿದ್ದು, ಈ ಬಗ್ಗೆ ಸಾರ್ವಜನಿಕರು, ಜನಪ್ರತಿನಿಧಿಗಳು ಹಾಗೂ ಮಾಧ್ಯಮದವರ ಅಭಿಪ್ರಾಯಗಳನ್ನು ಪರಿಗಣಿಸಿ ಈ ಸಭೆಯನ್ನು ಕರೆಯಲಾಗಿತ್ತು.

ಸಭೆಯಲ್ಲಿ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್‌ ಕೊಡ್ಗಿ, ತಹಶೀಲ್ದಾರ್‌ ಕಿರಣ್‌ ಗೌರಯ್ಯ, ಡಿವೈಎಸ್‌ಪಿ ಶ್ರೀಕಾಂತ್‌, ವೃತ್ತ ನಿರೀಕ್ಷಕ ಗೋಪಿಕೃಷ್ಣ, ಎಸ್‌ಐಗಳಾದ ಸದಾಶಿವ ಗವರೋಜಿ, ಸುದರ್ಶನ್‌, ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಕಂದಾಯ ಅಧಿಕಾರಿ ದಿನೇಶ್‌, ಬಿಜೆಪಿ ಮಂಡಲದ ಅಧ್ಯಕ್ಷ ಶಂಕರ್‌ ಅಂಕದಕಟ್ಟೆ, ಮುಖಂಡರಾದ ಕಾಡೂರು ಸುರೇಶ್‌ ಶೆಟ್ಟಿ, ಸುನೀಲ್‌ ಶೆಟ್ಟಿ, ಸುರೇಶ್‌ ಶೆಟ್ಟಿ, ಸತೀಶ್‌ ಪೂಜಾರಿ, ಸಂತೋಷ್‌ ಶೆಟ್ಟಿ, ಹೆದ್ದಾರಿ ಹೋರಾಟ ಸಮಿತಿಯ ಕೆಂಚನೂರು ಸೋಮಶೇಖರ್‌ ಶೆಟ್ಟಿ, ಬಂಟರ ಸಂಘದ ಆವರ್ಸೆ ಸುಧಾಕರ ಶೆಟ್ಟಿ, ಮತ್ತಿತರರು ಪಾಲ್ಗೊಂಡಿದ್ದರು.

ಗುಜರಿ ವಸ್ತು ತೆರವು ಕಾರ್ಯ: 4 ದಿನ ಗಳ ಗಡುವು :

ಫ್ಲೈಓವರ್‌ ಕೆಳಗೆ ರಾಶಿ ಹಾಕಲಾದ ಗುಜರಿ ವಸ್ತುಗಳನ್ನು ತೆರವು ಮಾಡುವ ಕಾರ್ಯವನ್ನು ಶನಿವಾರ ಆರಂಭಿಸಲಾಗಿದೆ. ಎ.ಸಿ. ರಾಜು ಕೆ. ಅವರೇ ಸ್ವತಃ ಸ್ಥಳದಲ್ಲಿ ನಿಂತು, ನವಯುಗದವರಿಂದ ವಾಹನ ಕರೆಯಿಸಿ, ತೆರವು ಮಾಡಲು ಸೂಚಿಸಿದ್ದಾರೆ. ಈ ವೇಳೆ ಕಳೆದ 6 ತಿಂಗಳಿನಿಂದ ಈ ಬಗ್ಗೆ ತಿಳಿಸಿದ್ದರೂ, ತೆರವು ಮಾಡದಿರುವ ಬಗ್ಗೆ ಎಸಿ ಹಾಗೂ ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಅವರು ನವಯುಗದವರ ವಿರುದ್ಧ ಗರಂ ಆದರು. ಇನ್ನು 4 ದಿನದೊಳಗೆ ಇಲ್ಲಿನ ಎಲ್ಲ ವಸ್ತುಗಳನ್ನು ತೆರವು ಮಾಡು ವಂತೆ ಸೂಚಿಸ ಲಾಗಿದೆ.

ಮರು ಡಾಮರು ಕಾಮಗಾರಿ:

ಶಾಸ್ತ್ರಿ ಸರ್ಕಲ್‌ ಆಸುಪಾಸಿನ ಹೆದ್ದಾರಿಯು ಸಂಪೂರ್ಣ ಹೊಂಡ- ಗುಂಡಿಗಳಿಂದ ಕೂಡಿದ್ದು, ಕೂಡಲೇ ಮರು ಡಾಮರು ಕಾಮಗಾರಿ ಮಾಡಬೇಕು ಎಂದು ಎಸಿಯುವರು ಸೂಚಿಸಿದ್ದಾರೆ. ಅದಕ್ಕೆ ಮಳೆ ಕಡಿಮೆಯಾದ ಕೂಡಲೇ ಅಂದರೆ ಈ ತಿಂಗಳಾಂತ್ಯದೊಳಗೆ ಕಾಮಗಾರಿ ಮುಗಿಸುವ ಭರವಸೆ ನೀಡಿದ್ದಾರೆ. ಇದರೊಂದಿಗೆ ಅಂಡರ್‌ಪಾಸ್‌, ಫ್ಲೈಓವರ್‌ನಿಂದ ಕೆಳಕ್ಕೆ ಮಳೆ ನೀರು ಬೀಳುತ್ತಿದ್ದು, ಅದನ್ನು ಸರಿಪಡಿಸುವಂತೆ ನವಯುಗದವರಿಗೆ ಸೂಚನೆ ನೀಡಲಾಗಿದೆ.

ಸುದಿನ ವರದಿ :

ಫ್ಲೈಓವರ್‌ ಕೆಳಗೆ ರಾಶಿ ಹಾಕಲಾದ ಗುಜರಿ ವಸ್ತುಗಳ ಬಗ್ಗೆ, ಕಾಮಗಾರಿ ಮುಗಿಯುತ್ತ ಬಂದರೂ, ಅದನ್ನು ತೆರವು ಮಾಡದಿರುವುದು, ಅಂಡರ್‌ಪಾಸ್‌, ಫ್ಲೈಓವರ್‌ ಮೇಲಿನಿಂದ ಸರ್ವಿಸ್‌ ರಸ್ತೆಗೆ ಮಳೆ ನೀರು ಬೀಳುವ ಬಗ್ಗೆ “ಉದಯವಾಣಿ ಸುದಿನ’ವು ಅನೇಕ ಬಾರಿ ವಿಶೇಷ ವರದಿಗಳ ಮೂಲಕ ಗಮನಸೆಳೆದಿತ್ತು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.