ಸಾಲಿಗ್ರಾಮ ಗುರುನರಸಿಂಹ ದೇಗುಲಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ
Team Udayavani, Apr 24, 2022, 2:00 PM IST
ಕೋಟ: ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಎ. 23ರಂದು ಸಾಲಿಗ್ರಾಮ ಗುರುನರಸಿಂಹ ಹಾಗೂ ಆಂಜನೇಯ ದೇಗುಲಕ್ಕೆ ಭೇಟಿ ನೀಡಿದರು.
ಈ ಸಂದರ್ಭ ದೇಗುಲದ ಆಡಳಿತ ಮಂಡಳಿ ವತಿಯಿಂದ ಸಚಿವರನ್ನು ಸ್ವಾಗತಿಸಲಾಯಿತು. ಅನಂತರ ಗೃಹ ಸಚಿವರು ಗುರುನರಸಿಂಹ, ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿ ದೇಗುಲದ ವಿಶೇಷತೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಗುರುನರಸಿಂಹ ದೇಗುಲದ ಆಡಳಿತ ಮಂಡಳಿ ಸದಸ್ಯ ಅನಂತ ಪದ್ಮನಾಭ ಐತಾಳ, ಸಾಲಿಗ್ರಾಮ ಪ.ಪಂ. ಅಧ್ಯಕ್ಷೆ ಸುಲತಾ ಹೆಗ್ಡೆ, ಉಪಾಧ್ಯಕ್ಷೆ ಅನಸೂಯಾ ಹೇಳ್ರೆ, ಪ.ಪಂ. ಸದಸ್ಯ ರಾಜು ಪೂಜಾರಿ ಕಾರ್ಕಡ, ಸಂಜೀವ ದೇವಾಡಿಗ, ದೇವೇಂದ್ರ ದೇವಾಡಿಗ, ಬಿಜೆಪಿ ಕುಂದಾಪುರ ಮಂಡಲದ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಸಾಲಿಗ್ರಾಮ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಜಯೇಂದ್ರ ಪೂಜಾರಿ, ಕುಂದಾಪುರ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸತೀಶ್ ಬಾರಿಕೆರೆ, ಹಿಂದೂ ಜಾಗರಣ ವೇದಿಕೆ ಕೋಟ ಗೌರವಾಧ್ಯಕ್ಷ ಸುರೇಶ್ ಹಾಗೂ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ನೇತೃತ್ವದಲ್ಲಿ ಪೊಲೀಸ್ ಸಿಬಂದಿ ಕಾನೂನು ಸುವ್ಯವಸ್ಥೆ ಕುರಿತು ನಿಗಾ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…