ತೋಟಗಾರಿಕೆ ವಿವಿ ದೇಶಕ್ಕೆ ಮಾದರಿ; ಫಲಶ್ರೇಷ್ಠ ರೈತರಿಗೆ ಪ್ರಶಸ್ತಿ ಪ್ರದಾನ

ರಾಸಾಯನಿಕ ಬಳಸಿದ್ದರ ಪರಿಣಾಮ ಇಂದು ಭೂಮಿ ವಿಷವಾಗಿ ಪರಿವರ್ತನೆಗೊಂಡಿದೆ.

Team Udayavani, Dec 31, 2022, 1:11 PM IST

ತೋಟಗಾರಿಕೆ ವಿವಿ ದೇಶಕ್ಕೆ ಮಾದರಿ; ಫಲಶ್ರೇಷ್ಠ ರೈತರಿಗೆ ಪ್ರಶಸ್ತಿ ಪ್ರದಾನ

ಬಾಗಲಕೋಟೆ: ದೇಶದಲ್ಲಿಯೇ ತೋಟಗಾರಿಕೆ ಬೆಳೆಗಳಲ್ಲಿ 2ನೇ ಸ್ಥಾನ, ಹೂ ಬೆಳೆಗಳಲ್ಲಿ 2ನೇ ಸ್ಥಾನ, ಹಣ್ಣು ಬೆಳೆಗಳಲ್ಲಿ 6ನೇ ಸ್ಥಾನ, ಸಾಂಬಾರ ಪದಾರ್ಥದಲ್ಲಿ 6ನೇ ಸ್ಥಾನ ಹಾಗೂ ತರಕಾರಿ ಬೆಳೆಯಲ್ಲಿ 8ನೇ ಸ್ಥಾನ ಪಡೆಯುವ ಮೂಲಕ ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ದೇಶಕ್ಕೆ ಮಾದರಿಯಾಗಿದೆ ಎಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು. ತೋವಿವಿಯ ಉದ್ಯಾನಗಿರಿಯಲ್ಲಿ ಜರುಗಿದ ತೋಟಗಾರಿಕೆ ಮೇಳದ 2ನೇ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯ ನೆಲ-ಜಲ, ಮಣ್ಣಿನ ಮಾದರಿ ಪರಿಶೀಲಿಸಿಕೊಂಡು 2008ರಲ್ಲಿ ಅಂದಿನ ಸಿಎಂ ಬಿ.ಎಸ್‌. ಯಡಿಯೂರಪ್ಪ ಬೆಳಗಾವಿ ಅ ಧಿವೇಶನದಲ್ಲಿ ಘೋಷಣೆ ಮಾಡಿದ್ದರ ಫಲವಾಗಿ ತೋಟಗಾರಿಕೆ ವಿಶ್ವವಿದ್ಯಾಲಯ ಅಸ್ತಿತ್ವಕ್ಕೆ ಬಂದಿದೆ ಎಂದರು.

ರಾಜ್ಯದಲ್ಲಿ ತೋಟಗಾರಿಕೆ ವಿಸ್ತೀರ್ಣ 23.25 ಲಕ್ಷ ಹೆಕ್ಟೇರ್‌ ಇದ್ದು, 183.46 ಲಕ್ಷ ಟನ್‌ ಉತ್ಪಾದನೆ ಹೊಂದಿದೆ. ತೋಟಗಾರಿಕೆ ಕೃಷಿ ಜಿಡಿಪಿ ಶೇ.30 ಕೊಡುಗೆ ನೀಡುವ ಮೂಲಕ 44254 ಕೋಟಿ ರೂ. ಆದಾಯ ನೀಡುತ್ತಿದೆ. ಕೇವಲ ಶೇ.18.12 ಪ್ರದೇಶ ಮಾತ್ರ ತೋಟಗಾರಿಕೆ ಪ್ರದೇಶ 308 ಮಿಲಿಯನ್‌ ಟನ್‌, 128 ಮಿಲಿಯನ್‌ ಹೆಕ್ಟೇರ್‌ ಇದ್ದರೆ, ಅದಕ್ಕಿಂತ ಕಡಿಮೆ ಕ್ಷೇತ್ರ 25.7 ಮಿಲಿಯನ್‌ ಹೆಕ್ಟೇರ್‌ ಹೊಂದಿರುವ ತೋಟಗಾರಿಕೆ ಉತ್ಪಾದನೆ 325 ಮಿಲಿಯನ್‌ ಟನ್‌ ಇರುವುದು ವಿಶೇಷ ಎಂದರು.

ಈ ವಿಶ್ವವಿದ್ಯಾಲಯ ರಾಜ್ಯದ 23 ಜಿಲ್ಲೆಗಳಿಗೆ ಒಳಪಟ್ಟಿದ್ದರಿಂದ ಪ್ರತಿ ಜಿಲ್ಲೆಗೆ ಒಬ್ಬರಂತೆ ತೋಟಗಾರಿಕೆ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ರೈತರನ್ನು ಕರೆಸಿ ಸತ್ಕರಿಸುತ್ತಿರುವ ಮೂಲಕ ಕೃಷಿಕರ ಸಾಮಾಜಿಕ ಮಾನ್ಯತೆ ನೀಡಲಾಗುತ್ತಿದೆ. ಇಂತಹ ಮಹತ್ವದ ಕಾರ್ಯ ಸಾಧಿಸುತ್ತಿರುವ ವಿಶ್ವವಿದ್ಯಾಲಯದ ಪ್ರಯೋಜನ ರೈತರು, ರೈತ ಮಹಿಳೆಯರು, ಬೆಳೆಗಾರರು, ವಿಸ್ತೀರ್ಣಕಾರರು, ರೈತ ವಿಜ್ಞಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ
ತಿಳಿಸಿದರು.

ಬದಲಾವಣೆಗಾಗಿ ಪ್ರಶಸ್ತಿ: ಸಾವಯವ ಕೃಷಿಕ ಮಹಿಮಾ ಪಟೇಲ ಮಾತನಾಡಿ, ಇಂದು ಸಾವಯವ ಕೃಷಿ, ಸಾವಯವ ರಾಜಕಾರಣ ಹಾಗೂ ಸಾವಯವ ಬದುಕು ಪ್ರತಿಯೊಬ್ಬರಿಗೂ ಅವಶ್ಯ. ನಾನು ಸಾವಯವ ಕೃಷಿಕನಾಗಿ, ಸಾವಯವ ರಾಜಕಾರಣಿಯಾಗಿದ್ದೇನೆ. ಫಲಶ್ರೇಷ್ಠ ರೈತರ ಗುರುತಿಸಿ ಪ್ರಶಸ್ತಿ-ಸನ್ಮಾನ ಮಾಡುವ ಮೂಲಕ ಸಮಾಜದಲ್ಲಿ ಬದಲಾವಣೆ ತರುವ ಉದ್ದೇಶದಿಂದ ತೋಟಗಾರಿಕೆ ಕ್ಷೇತ್ರದಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ ಎಂದರು.

ಮುಂದಿನ ಜನಸಂಖ್ಯೆ, ಕೃಷಿ, ಸರ್ಕಾರ, ಅಧಿಕಾರಿಗಳು ಹೇಗಿರುವರೆಂಬ ವಿಷಯ ಗಮನದಲ್ಲಿಟ್ಟುಕೊಂಡು ಬದುಕಬೇಕಿದೆ. 1962ರಲ್ಲಿ ಕೃಷಿ ಕ್ರಾಂತಿ ದಿನವೆಂದು
ಘೋಷಿಸಿದ್ದು, ಅಂದು ಹೆಚ್ಚುತ್ತಿರುವ ಜನಸಂಖ್ಯೆಗೆ ಪೂರಕ ಬೆಳೆಗಳಿಗೆ ಹಾಗೂ ಹೆಚ್ಚು ಇಳುವರಿ ಬರಲೆಂಬ ಉದ್ದೇಶದಿಂದ ರಾಸಾಯನಿಕ ಬಳಸಿದ್ದರ ಪರಿಣಾಮ ಇಂದು ಭೂಮಿ ವಿಷವಾಗಿ ಪರಿವರ್ತನೆಗೊಂಡಿದೆ. ಇದನ್ನು ಸರಿಪಡಿಸಿಕೊಳ್ಳಬೇಕಾದರೆ ಸಾವಯವ ಹಾಗೂ ನೈಸರ್ಗಿಕ ಪದ್ಧತಿ ಬಳಕೆ ಅಗತ್ಯ ಎಂದು ಹೇಳಿದರು.

ಆ್ಯಪ್‌ ಬಿಡುಗಡೆ: ಇದೇ ವೇಳೆ ಯುಎಚ್‌ಎಸ್‌ಬಿ ಆ್ಯಪ್‌ ಬಿಡುಗಡೆಗೊಳಿಸಲಾಯಿತು. ಇದರ ಜೊತೆಗೆ ತೋಟಗಾರಿಕೆ ಬೆಳೆಗಳ ಮಾಹಿತಿಯುಳ್ಳ ವಿವಿಧ ಪ್ರಕಟಣೆ ಅನಾವರಣಗೊಳಿಸಲಾಯಿತು. ಈ ವೇಳೆ ಸಾವಯವ ಕೃಷಿಕ ಶಂಕರಗೌಡ ಪಾಟೀಲ, ತೋವಿವಿಯ ಕುಲಪತಿ ಡಾ| ಕೆ.ಎಂ. ಇಂದಿರೇಶ, ತೋವಿವಿಯ ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಡಾ|ಎಂ. ಶಿವಮೂರ್ತಿ, ಎನ್‌.ಕೆ. ಹೆಗಡೆ, ಡಾ| ರವೀಂದ್ರ ಮುಲಗೆ, ಡಾ| ಟಿ.ಬಿ. ಅಳ್ಳೊಳ್ಳಿ ಇತರರಿದ್ದರು.

10 ಜನ ಫಲಶ್ರೇಷ್ಠರಿಗೆ ಪ್ರಶಸ್ತಿ ಪ್ರದಾನ
ಉತ್ತಮ ಸಾಧನೆ ಮಾಡಿದ 10 ಜನ ಫಲಶ್ರೇಷ್ಠ ರೈತರಾದ ಗದಗ ಜಿಲ್ಲೆಯ ಗರುಡಪ್ಪ ಜಂತ್ಲಿ, ಹಾವೇರಿ ಜಿಲ್ಲೆಯ ಭೀಮಪ್ಪ ಚಿಗರಿ, ಧಾರವಾಡ ಜಿಲ್ಲೆಯ ಶಿವಾನಂದ ಬಸಯ್ಯ ಹಿರೇಮಠ, ಬೀದರ ಜಿಲ್ಲೆಯ ನಾಮದೇವ ಚಂದ್ರಪ್ಪ ಮೇತ್ರೆ, ಕಲಬುರಗಿ ಜಿಲ್ಲೆಯ ಶೈಲಶ್ರೀ ಸಂಗನಗೌಡ, ಯಾದಗಿರಿ ಜಿಲ್ಲೆಯ ದೇವರಾಜ ನಾಯ್ಕ ರಾಠೊಡ, ರಾಯಚೂರು ಜಿಲ್ಲೆಯ ವಿ. ವೆಂಕಟೇಶ ಶ್ರೀನಿವಾಸರಾವ್‌, ಬಳ್ಳಾರಿ ಜಿಲ್ಲೆಯ ಬಸಪ್ಪ ಮರಿಯಪ್ಪ ಗೋಸ್ಬಾಳ, ವಿಜಯನಗರ ಜಿಲ್ಲೆಯ ಶರಣಬಸವ ಎತ್ತಿನಮನಿ ಹಾಗೂ ಕೊಪ್ಪಳ ಜಿಲ್ಲೆಯ ಮಹಾಂತೇಶಗೌಡ ಪಾಟೀಲ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.