ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ


Team Udayavani, May 21, 2024, 7:30 AM IST

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಕುಂದಾಪುರ: ಒಂದು ಕಾಲದಲ್ಲಿ ವರ್ಷಪೂರ್ತಿ ನೀರಿನಿಂದ ಕಂಗೊಳಿಸುತ್ತಿದ್ದ ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹಡವು ಗ್ರಾಮದ ಗೋರ್ಕಲ್ಲು ಮನೆ ಕೆರೆಯೀಗ ಹೂಳು ತುಂಬಿದ ಕೊಂಪೆಯಾಗಿದೆ. ಸುತ್ತಲಿನ ಹತ್ತಾರು ಎಕರೆ ಕೃಷಿ ಭೂಮಿಗೆ ನೀರುಣಿಸುತ್ತಿದ್ದ ಈ ಕೆರೆ ಈಗ ನಿಷ್ಪ್ರಯೋಜಕವಾಗಿದೆ.

ಹಡವು ಗ್ರಾಮದ ಗೋರ್ಕಲ್ಲುಮನೆ ಕೆರೆ ಬೈಂದೂರು ತಾಲೂಕಿನ ದೊಡ್ಡ ಕೆರೆಗಳಲ್ಲಿ ಒಂದು. ಅಂದಾಜು 50 ಸೆಂಟ್ಸ್‌ಗೂ ಅಧಿಕ ಪ್ರದೇಶದಲ್ಲಿ ವ್ಯಾಪಿಸಿದ್ದು, ಈಗ ಮಾತ್ರ ಹೂಳು ತುಂಬಿದೆ.

ಹಡವು ಗ್ರಾಮಕ್ಕೆ ಪ್ರಯೋಜನ
ಈ ಗೋರ್ಕಲ್ಲುಮನೆ ಕೆರೆ ಪುನರುಜ್ಜೀವನಗೊಂಡು, ಸಮೃದ್ಧ ನೀರು ಸಂಗ್ರಹಗೊಂಡರೆ ಸುಮಾರು 10-15 ಎಕರೆ ಕೃಷಿ ಭೂಮಿಗೆ ಪ್ರಯೋಜನವಾಗಲಿದೆ. ಈ ಭಾಗದ ಬಹುತೇಕ ರೈತರು ಭತ್ತದ ಕೃಷಿಯನ್ನೇ ನೆಚ್ಚಿಕೊಂಡಿದ್ದಾರೆ. ತುಂಬಾ ವರ್ಷಗಳ ಹಿಂದೆ ಈ ಕೆರೆಯಲ್ಲಿ ನೀರು ತುಂಬಿರುತ್ತಿದ್ದ ಕಾಲದಲ್ಲಿ ಮುಂಗಾರು ಹಾಗೂ ಹಿಂಗಾರು ಎರಡೂ ಬೆಳೆಗಳನ್ನು ಮಾಡುತ್ತಿದ್ದ ರೈತರು, ಈಗ ಮುಂಗಾರಲ್ಲಿ ಮಾತ್ರ ಭತ್ತದ ಬೆಳೆಯುತ್ತಿದ್ದಾರೆ. ಹಿಂಗಾರಿನಲ್ಲಿ ನೀರಿನ ಕೊರತೆಯಾಗುತ್ತಿದೆ. ಹಡವು ಗ್ರಾಮದ ಜನ ಪ್ರತೀ ಬೇಸಗೆಯಲ್ಲಿ ನೀರಿನ ಅಭಾವ ಎದುರಿಸುತ್ತಿದ್ದಾರೆ.
ಸುತ್ತ ನದಿಯಿದ್ದರೂ ಉಪ್ಪು ನೀರಿನ ಪ್ರಭಾವದಿಂದ ನೀರು ಕುಡಿಯಲು ಯೋಗ್ಯ ವಾಗಿಲ್ಲ. ಈ ಕೆರೆಯನ್ನು ಅಭಿವೃದ್ಧಿಪಡಿಸಿ ವರ್ಷಪೂರ್ತಿ ನೀರು ತುಂಬಿರುವಂತೆ ಮಾಡಿದರೆ ಅದನ್ನು ಶುದ್ಧೀಕರಿಸಿ ಗ್ರಾಮದ ಎಲ್ಲ 270ಕ್ಕೂ ಹೆಚ್ಚಿನ ಮನೆಗಳಿಗೆ ನಳ್ಳಿ ಮೂಲಕ ಪೂರೈಸಬಹುದು. ಈ ಕೆರೆಯಲ್ಲಿ ನೀರು ತುಂಬಿದ್ದರೆ ಆಸುಪಾಸಿನ 30ಕ್ಕೂ ಹೆಚ್ಚಿನ ಮನೆಗಳ ಬಾವಿಗಳ ಅಂತರ್ಜಲ ಮಟ್ಟವೂ ಉತ್ತಮವಾಗಿರಲಿದೆ.

ಏನೆಲ್ಲ ಆಗಬೇಕು?
ಈ ಕೆರೆಯ ಹೂಳೆತ್ತದೇ 40 ವರ್ಷಗಳಿಗೂ ಹೆಚ್ಚು ಕಾಲ ಆಗಿರಬಹುದು. ಕೆರೆ ಅಭಿವೃದ್ಧಿ ಯೋಜನೆಯಡಿ ಹೂಳೆತ್ತಿದರೆ ಸಮೃದ್ಧ ನೀರು ಸಂಗ್ರಹಗೊಳ್ಳಬಹುದು. ಸುತ್ತಲೂ ಸುಂದರ ದಂಡೆ ನಿರ್ಮಿಸಿದರೆ ಉತ್ತಮ.

ಹತ್ತಕ್ಕೂ ಹೆಚ್ಚು ಕೆರೆಗಳು
ನಾಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಹತ್ತಕ್ಕೂ ಮಿಕ್ಕಿ ಸರಕಾರಿ ಕೆರೆಗಳಿವೆ. ಅವುಗಳನ್ನು ಗುರುತಿಸಿ, ಹೂಳೆತ್ತಿ, ಅಭಿವೃದ್ಧಿಪಡಿಸಿದ್ದರೆ ಈಗ ನೀರಿನ ಸಮಸ್ಯೆಯೆ ಉದ್ಭವವೇ ಆಗುತ್ತಿರಲಿಲ್ಲ. ಈ ಗೋರ್ಕಲ್ಲುಮನೆ ಕೆರೆ ಇರುವ 1 ಕಿ.ಮೀ. ವ್ಯಾಪ್ತಿಯಲ್ಲಿಯೇ ಕೆಂಪು ಹೊಳೆ ಕೆರೆ, ಬಂಡಾÕಲೆ ಕೆರೆ, ಗುಂಡಿಕೆರೆ ಸೇರಿದಂತೆ 4 ಕೆರೆಗಳಿವೆ. ಇನ್ನು ನಾಡ ಪಂಚಾಯತ್‌ ವ್ಯಾಪ್ತಿಯಲ್ಲಿ ಅಂಗಡಿಹಿತ್ಲು ಕೆರೆ, ಹೆಮ್ಮುಂಜೆ ಮದಗ, ಹೆಬ್ಟಾರ್‌ಕೆರೆ, ಚುಂಗಿಗುಡ್ಡೆ ಕೆರೆ, ಬಡಿನಮಕ್ಕಿ ಮದಗ, ಅಂಗಡಿಬೆಟ್ಟು ಕೆರೆ, ಶೇಡಿಗುಂಡಿ ಮದಗ, ಜೋಯಿಸರಬೆಟ್ಟು ಮದಗ, ಶೇಡುRಳಿ ಮದಗ, ಪಾತನಮಕ್ಕಿ ಮದಗಗಳ ಪುನಶ್ಚೇತನ ಆಗಬೇಕಿದೆ.

ನೀರಿನ ಸಮಸ್ಯೆಗೆ ಮುಕ್ತಿ
ಗೋರ್ಕಲ್ಲುಮನೆ ಕೆರೆ ಅಭಿವೃದ್ಧಿಯಾದರೆ ಈ ಭಾಗದ ನೀರಿನ ಸಮಸ್ಯೆ ಬಹುತೇಕ ನೀಗಲಿದೆ. ಅನೇಕ ಬಾರಿ ಈ ಕೆರೆಯ ಅಭಿವೃದ್ಧಿಗಾಗಿ ಸಂಬಂಧಪಟ್ಟ ಎಲ್ಲರನ್ನೂ ಆಗ್ರಹಿಸಿದ್ದೇವೆ. ಆದರೆ ಅಭಿವೃದ್ಧಿಗೆ ಯಾವುದೇ ಯೋಜನೆ ರೂಪಿಸಿಲ್ಲ. ಈಗಲಾದರೂ ಪುನಶ್ಚೇತನಗೊಳಿಸಿದರೆ ಕೃಷಿಗೆ, ಕುಡಿಯುವ ನೀರಿಗೂ ಪ್ರಯೋಜನವಾಗಲಿದೆ.
– ಶೀಲಾವತಿ ಪಡುಕೋಣೆ,
ಸ್ಥಳೀಯರು

ಅಭಿವೃದ್ಧಿಗೆ ಪ್ರಯತ್ನ
ಗೋರ್ಕಲ್ಲುಮನೆ ಕೆರೆ ನಮ್ಮ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವುದಿಲ್ಲ. ಸ್ಥಳೀಯ ಪಂಚಾಯತ್‌ನಿಂದ ಪ್ರಸ್ತಾವನೆ ಸಲ್ಲಿಸಿದರೆ ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು.
– ಅರುಣ್‌ ಭಂಡಾರಿ,
ಎಇಇ,ಸಣ್ಣ ನೀರಾವರಿ ಇಲಾಖೆ ಉಡುಪಿ

- ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

Screenshot (3) copy

Kundapura: ಮಕ್ಕಳನ್ನು ಹೊತ್ಕೊಂಡೇ ಹೊಳೆ ದಾಟಿಸಬೇಕು!ಅಮಾಸೆಬೈಲಿನ ಕುಡಿಸಾಲು ಪರಿಸರದ ಸಮಸ್ಯೆ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

9-uv-fusion

College Days: ಕಾಲೇಜೆಂಬ ನೆನಪಿನ ದೋಣಿಯಲಿ

new-parli

Lok Sabha, Assembly ಕ್ಷೇತ್ರಗಳ ಪುನರ್ವಿಂಗಡಣೆ: ದಕ್ಷಿಣ ತಕರಾರು ಏನು?ಮಾಹಿತಿ ಇಲ್ಲಿದೆ

8-uv-fusion

UV Fusion: ತುಳುನಾಡಿನ ಹೆಮ್ಮೆ ಕಂಬಳ

7-uv-fusion

UV Fusion: ಮಂಗನ ಕೈಯಲ್ಲಿದೆ ಮಾಣಿಕ್ಯ

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.