ಹಾವೇರಿಯಿಂದ ಮಂಗಳೂರಿಗೆ ಹಿಂಸಾತ್ಮಕ ರೀತಿಯಲ್ಲಿ ಕಂಟೈನರ್ ನಲ್ಲಿ ಜಾನಾವಾರು ಸಾಗಾಟ
Team Udayavani, Jul 25, 2020, 10:40 AM IST
ಸಿದ್ದಾಪುರ: ಕಂಟೈನರ್ ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಒಟ್ಟು 17 ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಜಾಲವೊಂದು ಹೊಸಗಂಡಿ ಚೆಕ್ ಪೋಸ್ಟ್ ಬಳಿ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಘಟನೆಯಲ್ಲಿ ದಾವಣಗೆರೆ ಜಿಲ್ಲೆಯ ಮೆಹಬೂಬ್, ಹಾನಗಲ್ ನ ಅಲ್ಲಾ ಭಕ್ಷಿ, ಮಂಗಳೂರಿನ ಹನೀಫ್ ಮತ್ತು ಜಾಫರ್ ಸಾಧಿಕ್ ಎಂಬವರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಆರೋಪಿಗಳು ಮೂರು ಕೋಣಗಳು , 13 ಎಮ್ಮೆಗಳು, ಮತ್ತು ಒಂದು ಹೋರಿ ಒಟ್ಟು 17 ಜಾನುವಾರುಗಳನ್ನು ಹಾವೇರಿಯಿಂದ ಮಂಗಳೂರಿಗೆ ಯಾವುದೇ ಪರವಾನಗಿ ಇಲ್ಲದೆ, ಹಿಂಸಾತ್ಮಕ ರೂಪದಲ್ಲಿ ಕಂಟೈನರ್ ನಲ್ಲಿ ತುಂಬಿಸಿ ಸಾಗಿಸುತ್ತಿದ್ದರು. ಹೊಸಂಗಡಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಅಮಾಸೆಬೈಲು ಪೊಲೀಸರು ಆರೋಪಿಗಳನ್ನು, ಜಾನುವಾರುಗಳನ್ನು ಮತ್ತು ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ