Govt ಅನಿರ್ದಿಷ್ಟಾವಧಿ ಮುಷ್ಕರ; ಅಧಿವೇಶನ ಸಂದರ್ಭ ಪ್ರತಿಭಟನೆ

ರಾಜ್ಯಾದ್ಯಂತ ಕೆಲಸ ನಿಲ್ಲಿಸಿದ ಸಂಜೀವಿನಿ ಮೇಲ್ವಿಚಾರಕಿಯರು

Team Udayavani, Dec 6, 2023, 6:11 AM IST

ಅನಿರ್ದಿಷ್ಟಾವಧಿ ಮುಷ್ಕರ; ಅಧಿವೇಶನ ಸಂದರ್ಭ ಪ್ರತಿಭಟನೆ

ಕುಂದಾಪುರ: ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ರಾಜ್ಯದಲ್ಲಿ ಸಂಜೀವಿನಿ ಯೋಜನೆಯಲ್ಲಿ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಒಕ್ಕೂಟ ರಚಿಸಿ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂಬಿಕೆ, ಎಲ್‌ಸಿಆರ್‌ಪಿಗಳು ಡಿ. 1ರಿಂದ ರಾಜ್ಯಾದ್ಯಂತ ಕೆಲಸ ನಿಲ್ಲಿಸಿ ಪ್ರತಿಭಟನೆ ಆರಂಭಿಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 6 ಸಾವಿರ ಎಂಬಿಕೆಗಳು, 12 ಸಾವಿರ ಎಲ್‌ಸಿಆರ್‌ಪಿಗಳು ಕೆಲಸ ನಿಲ್ಲಿಸಿದ ಕಾರಣ ಸ್ವಸಹಾಯ ಸಂಘಗಳಿಗೆ ಸಾಲ, ಕಂತು ಪಾವತಿ, ತರಬೇತಿ, ಉತ್ಪನ್ನಗಳ ಮಾರಾಟ ಸೇರಿ ದಂತೆ ಒಟ್ಟು ವ್ಯವಸ್ಥೆಯಲ್ಲಿ ಸಮಸ್ಯೆ ಯಾಗಿದೆ.

ಗ್ರಾಮೀಣ ಪ್ರದೇಶದ ಸ್ವ-ಸಹಾಯ ಗುಂಪುಗಳು ಮತ್ತು ಸದಸ್ಯರಿಗೆ ಸುಲಭವಾಗಿ ಜೀವನ ಪೋಷಣೆ ಮತ್ತು ಜೀವನೋಪಾಯ ಚಟುವಟಿಕೆಗಳಿಗೆ ಸಾಲ ಸೌಲಭ್ಯವನ್ನು ಹಣಕಾಸು ಸಂಸ್ಥೆಗಳಿಂದ ಪಡೆಯುವಂತೆ ಮಾಡು ವ ಯೋಜನೆಯನ್ನು ಗ್ರಾಮಗಳಲ್ಲಿ ಅನುಷ್ಠಾನ ಮಾಡುವವರೇ ಮುಖ್ಯ ಪುಸ್ತಕ ಬರಹಗಾರರು (ಎಂಬಿಕೆ) ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು (ಎಲ್‌ಸಿಆರ್‌ಪಿ). ಇವರು ಸ್ತ್ರೀಶಕ್ತಿ, ಸಂಜೀವಿನಿ ಸೇರಿದಂತೆ ಸ್ವಸಹಾಯ ಸಂಘಗಳನ್ನು ರಚಿಸಿ ಅಗತ್ಯವಿದ್ದವರಿಗೆ ಬ್ಯಾಂಕ್‌ಗಳಿಂದ ಸಾಲದ ನೆರವು ಕೊಡಿಸಿ, ಬ್ಯಾಂಕ್‌ಗಳಿಗೆ ಮರುಪಾವತಿಗೆ ಸದಸ್ಯರಿಂದ ಕಂತು ಸಂಗ್ರಹಿಸುತ್ತಾರೆ. ಸದಸ್ಯರು ತಯಾರಿಸಿದ ಉತ್ಪನ್ನಗಳನ್ನು ಆನ್‌ಲೈನ್‌ ಮೂಲಕ ಅಥವಾ ನೇರ ಮಾರಾಟಕ್ಕೆ ನೆರವಾಗುತ್ತಾರೆ. ತರಬೇತಿ ಕೊಡಿಸುತ್ತಾರೆ.

40ಕ್ಕೂ ಹೆಚ್ಚು ಕೆಲಸ
ಉದ್ಯೋಗ ಖಾತರಿಯ ಸೌಲಭ್ಯ ಸದಸ್ಯರಿಗೆ ತಲುಪಿಸುವುದು, ಕಿರು ಆಹಾರ ಉದ್ಯಮ ಮಾಹಿತಿ ಪಡೆದು ಸಾಲ ಸೌಲಭ್ಯ ಒದಗಿಸುವುದು, ಉತ್ಪಾದಕ ಗುಂಪುಗಳ ರಚನೆ ಮತ್ತು ನಿರ್ವಹಣೆ, ಬ್ಯಾಂಕ್‌, ಪಶು ಹೀಗೆ ಬೇರೆ ಬೇರೆ ಸಖೀಗಳ ಮತ್ತು ಮಹಿಳಾ ಪ್ಲಂಬರ್‌ಗಳ ಆಯ್ಕೆ, ಉನ್ನತಿ ಯೋಜನೆಯ ಫಲಾನುಭವಿಗಳಿಗೆ ತರಬೇತಿ ಕೊಡಿಸುವುದು, ಹಳ್ಳಿ ಸಂತೆ ಆಯೋಜನೆ ಮಾಡುವುದು, ಘನತ್ಯಾಜ್ಯ ನಿರ್ವಹಣೆ ಜವಾಬ್ದಾರಿ, ಲಕ್‌ ಪತಿ ದೀದೀ, ಲೋಕೋಸ್‌ ಮೂಲಕ ಸದಸ್ಯರ ಸಂಪೂರ್ಣ ಮಾಹಿತಿ ಅಪ್ಲೋಡ್‌ ಮಾಡುವುದು, ಒಕ್ಕೂಟಗಳ ನೋಂದಣಿ ಮಾಡಿಸುವುದು, ಒಕ್ಕೂಟ ಸಭೆಗಳ ಆಯೋಜನೆ ಹೀಗೆ 40ಕ್ಕೂ ಅಧಿಕ ಕೆಲಸಗಳನ್ನು ಪ್ರತೀ ತಿಂಗಳು ನಿರ್ವಹಿಸುವ ಜವಾಬ್ದಾರಿ ಹೊಂದಿದ್ದಾರೆ.

ಬೇಡಿಕೆಗಳು
ಪ್ರಸ್ತುತ ಎಂಬಿಕೆಗೆ 5 ಸಾವಿರ ರೂ., ಎಲ್‌ಸಿಆರ್‌ಪಿಗೆ 2,500 ರೂ. ಮಾಸಿಕ ಗೌರವಧನ ಮಾತ್ರ ಇದ್ದು ಇತರ ಯಾವುದೇ ಭತ್ತೆ, ವೇತನ ಇರುವುದಿಲ್ಲ. ಒಂದು ದಿನಕ್ಕೆ 161 ರೂ. ನೀಡುತ್ತಿದ್ದಾರೆ. ನರೇಗಾ ಯೋಜನೆಯ ಕೂಲಿ ಕೂಡ 309 ರೂ. ಇದೆ. ಅರೆಕಾಲಿಕ ಕೆಲಸ ಮಾಡಲು ಅವಕಾಶ ಇಲ್ಲ. ಪಂಚಾಯತ್‌ ವ್ಯಾಪ್ತಿಯ 4ರಿಂದ 5 ಗ್ರಾಮಗಳ ಎಲ್ಲ ಸಂಘಗಳಿಗೆ ಭೇಟಿ ನೀಡಬೇಕಾಗುತ್ತದೆ. ಅದಕ್ಕಾಗಿಯೇ ನೂರಾರು ರೂ. ವ್ಯಯಿಸ ಬೇಕಾಗುತ್ತದೆ. ಎಂಬಿಕೆಗಳಿಗೆ 20 ಸಾವಿರ ರೂ., ಎಲ್‌ಸಿಆರ್‌ಪಿಗಳಿಗೆ 15 ಸಾವಿರ ರೂ.ಗೆ ಏರಿಕೆ, ಎಲ್ಲೆಡೆ ಏಕರೂಪದ ವೇತನ ಶ್ರೇಣಿ ನಿಗದಿಪಡಿಸುವುದು, ಸೇವಾ ಹಿರಿತನದ ಮೇಲೆ ವೇತನ ನಿಗದಿಪಡಿಸುವುದು, ಟಿಎ, ಡಿಎ ಸೌಲಭ್ಯ ಒದಗಿಸುವುದು, ಕಚೇರಿಗೆ ಕಂಪ್ಯೂಟರ್‌, ಪ್ರಿಂಟರ್‌ ಒದಗಣೆ ಮೊದಲಾದ ಬೇಡಿಕೆಗಳಿವೆ.

ಪ್ರತಿಭಟನೆ
ಡಿ. 14ರಂದು ಬೆಳಗಾವಿಯಲ್ಲಿ ಸುವರ್ಣ ಅಧಿವೇಶನ ಸಂದರ್ಭ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್‌ ಮಟ್ಟದ ಮುಖ್ಯ ಪುಸ್ತಕ ಬರಹಗಾರರ ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟದಿಂದ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ ಎಂಬಿಕೆ, ಎಲ್‌ಸಿಆರ್‌ಪಿಗಳು ಪ್ರತಿಭಟನೆ ನಡೆಸಲಿದ್ದಾರೆ. ಬಳಿಕ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಯಲಿದೆ.

ಗೌರವಧನ ಏರಿಕೆ ಸೇರಿದಂತೆ ನಮ್ಮ ಬೇಡಿಕೆ ಈಡೇರಿಕೆ ಕುರಿತು ಸರಕಾರದಿಂದ ಸ್ಪಷ್ಟ ಭರವಸೆ ಬೇಕು. ಅಲ್ಲಿವರೆಗಂತೂ ಕೆಲಸ ಮಾಡುವುದಿಲ್ಲ. ಅಧಿವೇಶನ ಸಂದರ್ಭ ನಡೆಸುವ ಪ್ರತಿಭಟನೆಯಲ್ಲಿ ದೊರೆಯುವ ಭರವಸೆ ಮೇಲೆ ಮುಂದಿನ ಹೋರಾಟದ ನಿರ್ಧಾರ ಮಾಡಲಿದ್ದೇವೆ.
– ರುದ್ರಮ್ಮ ಶಿವಮೊಗ್ಗ,
ರಾಜ್ಯಾಧ್ಯಕ್ಷೆ, ಎಂಬಿಕೆ ಎಲ್‌ಸಿಆರ್‌ಪಿಗಳ ಮಹಾ ಒಕ್ಕೂಟ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.