ಕೃಷಿ ಚಟುವಟಿಕೆಗಳಿಗೆ ಅನುವು ಮಾಡಿಕೊಡಲು ಸೂಚನೆ

ಕುಂದಾಪುರ: ಶಾಸಕರಿಂದ ಸಭೆ

Team Udayavani, Apr 14, 2020, 5:05 AM IST

ಕೃಷಿ ಚಟುವಟಿಕೆಗಳಿಗೆ ಅನುವು ಮಾಡಿಕೊಡಲು ಸೂಚನೆ

ಕುಂದಾಪುರ: ಕೃಷಿ ಚಟುವಟಿಕೆಗಳಿಗೆ ಲಾಕ್‌ಡೌನ್‌ ಉಲ್ಲಂಘನೆ ಯಾಗದಂತೆ, ಕಾನೂನು ಮೀರದಂತೆ ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕು ಪಂಚಾಯತ್‌ನಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ಕೃಷಿಗೆ ಸಂಬಂಧಪಟ್ಟ ಅಂಗಡಿಗಳನ್ನು ತೆರೆಯಲು, ವಾಹನಗಳನ್ನು ಕೊಂಡೊ ಯ್ಯಲು, ಕೃಷಿ ಹಾಗೂ ತೋಟಗಾರಿಕೆ ಬೆಳೆ ಗಳ ಸಾಗಾಟದ ವಾಹನಕ್ಕೆ ರೈತರಿಗೆ ಪಾಸ್‌ ನೀಡಲಾಗಿದೆ. ಕುಂದಾಪುರ ಹೋಬಳಿ ಯಲ್ಲಿ ಕೃಷಿ ಸಂಬಂಧಿ 7 ಅಂಗಡಿಗಳಿಗೆ ಪಾಸ್‌ ನೀಡಲಾಗಿದೆ ಎಂದು ಕೃಷಿ ಹಾಗೂ ತೋಟಗಾರಿಕೆ ಇಲಾಖೆಯವರು ಹೇಳಿ ದರು. ಸ್ಥಳೀಯವಾಗಿ ಅನುಮತಿ ಬೇಕಿದ್ದರೆ ಆಯಾ ಠಾಣಾ ವ್ಯಾಪ್ತಿಯಲ್ಲಿ ಮಾಹಿತಿ ನೀಡಿ ಪಡೆಯಲು ಶಾಸಕರು ಎಎಸ್‌ಪಿ ಅವರಿಗೆ ಸೂಚಿಸಿದರು. ಲಾಕ್‌ಡೌನ್‌ ಆರಂಭವಾದ ಬಳಿಕ ಕುಂದಾಪುರ ಹೋಬಳಿಗೆ 11,539, ಕೋಟ ಹೋಬಳಿಗೆ 4,124 ಮಂದಿ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿದ್ದಾರೆ. 339 ಮಂದಿ ವಿದೇಶದಿಂದ ಬಂದವರ ಪೈಕಿ ಕುಂದಾಪುರ ಹೋಬಳಿ 2, ಕೋಟ ಹೋಬಳಿ 15 ಹೈ ರಿಸ್ಕ್ ಪ್ರಕರಣಗಳು, ಕ್ರಮವಾಗಿ 22 ಹಾಗೂ 130 ಲೋ ರಿಸ್ಕ್ ಪ್ರಕರಣಗಳಿದ್ದವು. ಇನ್ನು 12 ಜನರ ವರದಿ ಬರಬೇಕಿದೆ. ಒಂದು ಹಂತದ ಹೋಮ್‌ ಕ್ವಾರಂಟೈನ್‌ ಅವಧಿ ಪೂರ್ಣವಾಗಿದ್ದು ಎರಡನೇ ಹಂತದಲ್ಲಿ ಕೆಲವರು ಇದ್ದಾರೆ. ಪುರುಷ ಆರೋಗ್ಯ ಸಹಾಯಕರು, ಲ್ಯಾಬ್‌ ಟೆಕ್ನಿಶಿಯನ್‌ ಸೇರಿದಂತೆ ಹುದ್ದೆಗಳ ಕೊರತೆ ಇದೆ ಎಂದು ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಶಾಸಕರ ಗಮನಕ್ಕೆ ತಂದರು. ತೂಕ ಮತ್ತು ಅಳತೆಗೆ ಸಂಬಂಧಿಸಿ ಕುಂದಾಪುರದಲ್ಲಿ 4 ಪ್ರಕರಣ ದಾಖಲಿಸಲಾಗಿದೆ ಎಂದು ಇಲಾಖೆ ಅಧಿಕಾರಿ ಮಾಹಿತಿ ನೀಡಿದರು.

ಸಹಾಯಕ ಕಮಿಷನರ್‌ ಕೆ. ರಾಜು, ಎಎಸ್‌ಪಿ ಹರಿರಾಮ್‌ ಶಂಕರ್‌, ಕುಂದಾಪುರ ಇಒ ಕೇಶವ ಶೆಟ್ಟಿಗಾರ್‌, ಬೈಂದೂರು ಇಒ ಭಾರತಿ, ಕುಂದಾಪುರ ತಹಶೀಲ್ದಾರ್‌ ತಿಪ್ಪೇಸ್ವಾಮಿ, ಬ್ರಹ್ಮಾವರ ತಹಶೀಲ್ದಾರ್‌ ಕಿರಣ್‌ ಗೌರಯ್ಯ, ತಾಲೂಕು ಆರೋಗ್ಯಾಧಿಕಾರಿ ಡಾ| ನಾಗಭೂಷಣ್‌ ಉಡುಪ, ಪಶುವೈದ್ಯಾಧಿಕಾರಿ ಡಾ| ಸೂರ್ಯನಾರಾಯಣ ಉಪಾಧ್ಯಾಯ, ಕೃಷಿ ಸಹಾಯಕ ನಿರ್ದೇಶಕಿ ರೂಪಾ ಮಾಡ, ತೋಟಗಾರಿಕೆ ಸಹಾಯಕ ನಿರ್ದೇಶಕ ಸಂಜೀವ ನಾಯ್ಕ, ಎಪಿಎಂಸಿ ಕಾರ್ಯದರ್ಶಿ ದೀಪ್ತಿ, ಸರ್ಕಲ್‌ ಇನ್‌ಸ್ಪೆಕ್ಟರ್‌ ಗೋಪಿಕೃಷ್ಣ, ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ವಿವಿಧ ಠಾಣೆಗಳ ಎಸ್‌ಐಗಳು, ಇತರ ಅಧಿಕಾರಿಗಳಿದ್ದರು.

ಜ್ವರ ಚಿಕಿತ್ಸಾಲಯ
ಉಡುಪಿ ಜಿಲ್ಲೆಯ 10 ಕಡೆ ಜ್ವರ ಚಿಕಿತ್ಸಾಲಯ ಮಾಡಲು ಸೂಚನೆ ಬಂದಿದ್ದು ಸಾಕಷ್ಟು ಪ್ರಮಾಣದಲ್ಲಿ ಕಿಟ್‌ಗಳ ಲಭ್ಯತೆ ಇಲ್ಲದ ಕಾರಣ ಉಡುಪಿ, ಕಾರ್ಕಳ, ಕುಂದಾಪುರ ಸರಕಾರಿ ಆಸ್ಪತ್ರೆಗಳಲ್ಲಿ ಜ್ವರ ಚಿಕಿತ್ಸಾಲಯ ಆರಂ ಭಿಸಲಾಗಿದೆ. ಆರ್‌ಆರ್‌ ಕಿಟ್‌ಗಳನ್ನು ನೀಡಿದ ಕೂಡಲೇ ಜಿಲ್ಲೆಯ 70 ಪ್ರಾ.ಆ. ಕೇಂದ್ರಗಳಲ್ಲೂ ಜ್ವರ ರೋಗಿಗಳ ತಪಾಸಣೆ ನಡೆಸಬಹುದು. ಅಲ್ಲಿವರೆಗೆ ಜ್ವರ ರೋಗಿಗಳ ತಪಾಸಣೆ ಈ ಮೂರು ಕಡೆ ಮಾತ್ರ ನಡೆಸಲಾಗುತ್ತದೆ ಎಂದು ಉಡುಪಿ ತಾಲೂಕು ಆರೋಗ್ಯಾಧಿಕಾರಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.