ಹಾರ್ಮಣ್ಣು -ಮಾರಣಕಟ್ಟೆ ಸಂಪರ್ಕ ರಸ್ತೆ: ಅಪಾಯಕಾರಿ ಸೇತುವೆಗೆ ಮುಕ್ತಿ ಎಂದು ?
ವರ್ಷ ಹಲವು ಕಳೆದರೂ ಕೈಗೂಡದ ಕಿರುಸೇತುವೆ ನಿರ್ಮಾಣ ಕಾಮಗಾರಿ
Team Udayavani, Jun 2, 2023, 3:46 PM IST
ವಂಡ್ಸೆ: ಚಿತ್ತೂರು ಗ್ರಾ.ಪಂ. ವ್ಯಾಪ್ತಿಯ ನೈಕಂಬ್ಲಿ ಗ್ರಾಮಸ್ಥರ ಬಹಳಷ್ಟು ವರ್ಷಗಳ ಬೇಡಿಕೆಗಳಲ್ಲೊಂದಾದ ಕಿರುಸೇತುವೆ ನಿರ್ಮಾಣ ಕಾಮಗಾರಿ ಈ ವರ್ಷವೂ ಈಡೇರದಿರುವುದರಿಂದ ಈ ಭಾಗದ ನಿವಾಸಿಗಳಿಗೆ ಈ ಮಳೆಗಾಲದಲ್ಲಿ ಹೊಳೆ ದಾಟಿ ಪೇಟೆಗೆ ತೆರಳಲು ಮತ್ತೆ ಮರದ ದಿಣ್ಣೆಯನ್ನೆ ಅವಲಂಬಿಸಬೇಕಾದ ಪರಿಸ್ಥಿತಿ ಎದುರಾಗಿದೆ.
ಗ್ರಾಮಸ್ಥರಿಂದ ಮರದ ಸೇತುವೆ ನಿರ್ಮಾಣ
ಶಿಥಿಲಗೊಂಡ ಹಳೆಯ ಮರದಿಂದ ನಿರ್ಮಿಸಿದ ಸೇತುವೆ ದಾಟಲು ಕಷ್ಟಸಾಧ್ಯ ಆಗಿರುವ ಹಿನ್ನೆಲೆಯಲ್ಲಿ ಊರವರು ಸೇರಿ ಮರದ ದಿಣ್ಣೆಯ ಸೇತುವೆ ನಿರ್ಮಿಸಿದ್ದಾರೆ.
ಆದರೆ ಅದರ ಇಕ್ಕೆಲಗಳಲ್ಲಿ ನಡೆದಾಡಲು ತಡೆಬೇಲಿ ನಿರ್ಮಿಸದಿರುವುದರಿಂದ ಹರಿಯುವ ನೀರಿನ ರಭಸಕ್ಕೆ ಆ ಮಾರ್ಗವಾಗಿ ಸಾಗುವ ಮಂದಿಗೆ ಆತಂಕದ ಸನ್ನಿವೇಷ ಎದುರಾಗಿದೆ. ಹಾರ್ಮಣ್ಣು, ನೈಕಂಬ್ಲಿ , ಮಾರಣಕಟ್ಟೆ ನಡುವಿನ ಸಂಪರ್ಕ ಕೊಂಡಿ ಯಂತಿರುವ ರಸ್ತೆ ಇದಾಗಿದ್ದು, ಇಲ್ಲಿನ ನಿವಾಸಿಗಳು ಮರದ ದಿಣ್ಣೆಯ ಮೇಲೆ ಈ ವರ್ಷವೂ ಸಾಗಬೇಕಾಗಿದೆ.
70ಕ್ಕೂ ಮಿಕ್ಕಿ ಮನೆಗಳಿವೆ
ಇಲ್ಲಿ 70ಕ್ಕೂ ಹೆಚ್ಚು ಮನೆಗಳಿದ್ದು, ಸುಮಾರು 400 ರಿಂದ 500 ಗ್ರಾಮಸ್ಥರು ವಾಸವಾಗಿದ್ದಾರೆ. ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಮತ್ತಿತರರು ಕೆಲಸ ಕಾರ್ಯಗಳಿಗೆ ತೆರಳಲು, ಈ ಮಾರ್ಗವನ್ನೇ ಅವಲಂಬಿಸಿದ್ದಾರೆ. ಮಲೆಗಾಲದಲ್ಲಂತೂ ಇಲ್ಲಿನವರ ಬವಣೆ ಹೇಳತೀರದು.
ಈಡೇರದ ಬೇಡಿಕೆ
ಕಳೆದ ಹಲವು ವರ್ಷಗಳಿಂದ ಸಂಸದರು, ಶಾಸಕರು ಸಹಿತ ವಿವಿಧ ಜನಪ್ರತಿನಿಧಿ ಗಳಿಗೆ ಮನವಿ ಸಲ್ಲಿಸಿ, ಕಿರುಸೇತುವೆ ನಿರ್ಮಾಣ ಕಾರ್ಯಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಬೇಡಿಕೆ ಇಡಲಾಗಿತ್ತು. ಆದರೆ ಈವರೆಗೆ ಕೇವಲ ಭರವಸೆಯ ಆಶ್ವಾಸನೆ ನೀಡಿದರೇ ಹೊರತು ಅನುದಾನ ಬಿಡುಗಡೆಗೊಳಿಸದಿರುವುದು ಗ್ರಾಮಸ್ಥರಲ್ಲಿ ನಿರಾಸೆ ಉಂಟುಮಾಡಿದೆ.
ಈಡೇರದ ರಸ್ತೆ ನಿರ್ಮಾಣ ಕಾಮಗಾರಿ
ಮುಲ್ಲಿ ಮನೆಯಿಂದ ಮಲ್ಲೋಡು ಹರಿಜನ ಕಾಲನಿವರೆಗಿನ ಸುಮಾರು ಒಂದೂವರೆ ಕಿ.ಮೀ. ವ್ಯಾಪ್ತಿಯ ರಸ್ತೆ ನಿರ್ಮಾಣ ಕಾಮಗಾರಿಗೆ ಬೇಡಿಕೆ ಸಲ್ಲಿಸಲಾಗಿದ್ದರೂ ಈವರೆಗೆ ಯಾವುದೇ ಕ್ರಮ ಕೈಗೊಳ್ಳಲಿಲ್ಲವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಹಳಿಯಮ್ಮ ದೇಗುಲ ಹಾಗೂ ಮಹಾಲಿಂಗೇಶ್ವರ ದೇಗುಲದ ಸಂಪರ್ಕ ಕೊಂಡಿಯಾಗಿರುವ ನೈಕಂಬ್ಲಿ ಕಿರುಸೇತುವೆ ನಿರ್ಮಾಣ ಕಾಮಗಾರಿಗೆ ಇನ್ನೂ ಕಾಲ ಕೂಡಿ ಬಾರದಿರುವುದು ಮಳೆಗಾಲದಲ್ಲಿ ದುರಂತಕ್ಕೆ ಆಹ್ವಾನಿಸುವಂತಿದೆ.
ಕಿರು ಸೇತುವೆ ನಿರ್ಮಾಣಕ್ಕೆ ಮನವಿ ಸಲ್ಲಿಸಲಾಗಿದೆ
ಲೋಕಸಭಾ ಸದಸ್ಯರು ಹಾಗೂ ಶಾಸಕರಿಗೆ ಕಿರು ಸೇತುವೆ ನಿರ್ಮಾಣದ ಬಗ್ಗೆ ಮನವಿ ಸಲ್ಲಿಸಿದ್ದೇವೆ. ಅಲ್ಲಿನ ಕಾಲು ಸೇತುವೆ ಬಗ್ಗೆ ಪರಿಶೀಲನೆ ನಡೆಸಲು ಜಿ.ಪಂ.ನಿಂದ ಪತ್ರ ಬಂದಿದೆ. ಮಳೆ ಆರಂಭದ ಮೊದಲು ಕಾಲು ಸೇತುವೆ ನಿರ್ಮಾಣವಾಗುವುದು ಸೂಕ್ತ. -ಜಯಂತಿ ಪೂಜಾರಿ, ಅಧ್ಯಕ್ಷರು, ಚಿತ್ತೂರು ಗ್ರಾ.ಪಂ.
ಮನವಿ ನೀಡಿದರೂ ಅನುದಾನ ಬಿಡುಗಡೆಗೊಂಡಿಲ್ಲ
ಶಾಸಕರು, ಸಂಸದರಿಗೆ ಮನವಿ ಸಲ್ಲಿಸಿ ಕಿರುಸೇತುವೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಹಲವು ಬಾರಿ ಬೇಡಿಕೆ ಇಟ್ಟಿದ್ದರೂ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಗ್ರಾಮಸ್ಥರ ನೆರವಿನಿಂದ ತಾತ್ಕಾಲಿಕ ಮರದ ದಿಣ್ಣೆಯ ಸೇತುವೆ ನಿರ್ಮಿಸಲಾಗಿದೆ.-ರಾಘು ಶೆಟ್ಟಿ, ಪ್ರೇರಣ, ನೈಕಂಬ್ಲಿ.
-ಡಾ| ಸುಧಾಕರ ನಂಬಿಯಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ