ಆಜ್ರಿ: ಮಲ್ಲಿಗೆ ಕೃಷಿಯಲ್ಲಿ ಖುಷಿ ಕಂಡ ಕನಕಕ್ಕ

ನರೇಗಾದಡಿ ಮಲ್ಲಿಗೆ ಕೃಷಿಯಲ್ಲಿ ಬದುಕು ಹಸನು

Team Udayavani, May 18, 2022, 9:41 AM IST

ajri

ಕುಂದಾಪುರ: ಮಲ್ಲಿಗೆ ಕೃಷಿಗೆ ಹೆಚ್ಚೇನು ಜಾಗದ ಆವಶ್ಯಕತೆಯಿಲ್ಲ. ಲಕ್ಷಾಂತರ ರೂ. ಬಂಡವಾಳವೂ ಬೇಕಿಲ್ಲ. ಇರುವ ಅಲ್ಪ ಭೂಮಿಯಲ್ಲಿಯೇ ಬಂಗಾರ ಅರಳಿಸುವ ಬೆಳೆ ಮಲ್ಲಿಗೆಯಾಗಿದೆ. ಇದೇ ಮಲ್ಲಿಗೆ ಕೃಷಿಯೂ ಈಗ ಆಜ್ರಿಯ ಕನಕಕ್ಕನಿಗೂ ಸ್ವಾವಲಂಬಿ ಬದುಕು ಕಟ್ಟಿಕೊಟ್ಟಿದೆ.

ಆಜ್ರಿ ಗ್ರಾ.ಪಂ. ವ್ಯಾಪ್ತಿಯ ನಿವಾಸಿ ಕನಕ ಅವರು ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಸಹಾಯದಿಂದ ಮಲ್ಲಿಗೆ ಕೃಷಿ ಮಾಡಿ, ಅದರಿಂದ ಉತ್ತಮ ಆದಾಯ ಗಳಿಸುತ್ತಿದ್ದು, ತನ್ನಂತೆ ಇತರರಿಗೂ ಮಾದರಿಯಾಗಿದ್ದಾರೆ.

ಮಾಸಿಕ 10 ಸಾವಿರ ರೂ.

ಕನಕಾ ಅವರು ತನ್ನ ಒಂದೂವರೆ ಎಕರೆ ಜಮೀನಿನ ಪೈಕಿ 12 ಸೆಂಟ್ಸ್‌ ಜಾಗದಲ್ಲಿ ವೈಜ್ಞಾನಿಕವಾಗಿ ಮಲ್ಲಿಗೆ ಬೆಳೆದು ಉತ್ತಮ ಆದಾಯ ಗಳಿಸುತ್ತಿದ್ದಾರೆ. ಉದ್ಯೋಗ ಖಾತರಿ ಯೋಜನೆಯಿಂದ 8 ಸಾವಿರ ರೂ. ಸಹಾಯಧನ ಪಡೆದು 120 ಗಿಡಗಳನ್ನು ಬೆಳೆಸಿದ್ದು, ಅದರಿಂದ ಪ್ರಸ್ತುತ ಮಾಸಿಕ 10 ಸಾವಿರ ರೂ. ಆದಾಯ ಗಳಿಸುತ್ತಿದ್ದಾರೆ.

ಇತರ ಕಾಮಗಾರಿಗೂ ನೆರವು

ಇವರು ನರೇಗಾ ಯೋಜನೆಯಡಿ ಮಲ್ಲಿಗೆ ಕೃಷಿಗೆ ಮಾತ್ರವಲ್ಲದೆ, ಅಡಿಕೆ ಕೃಷಿ, ದನದ ಹಟ್ಟಿ, ಕೋಳಿ ಶೆಡ್‌ಗಳನ್ನು ಮಾಡಲು ಮುಂದಾಗಿದ್ದು, ಗ್ರಾ.ಪಂ.ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಸ್ವಾವಲಂಬಿ ಬದುಕಿನ ಕನಸು ಕಂಡ ಬಡ ಮಹಿಳೆ ಕನಕ ಅವರ ಕನಸಿಗೆ ನರೇಗಾ ಯೋಜನೆ ಆಸರೆಯಾಗಿದ್ದು, ಇತರ ಗ್ರಾಮೀಣ ಮಹಿಳೆಯರಿಗೆ ಪ್ರೇರಣೆಯಾಗಿದ್ದಾರೆ. ‌

ನರೇಗಾದಿಂದ ಅನುಕೂಲ

ಮಲ್ಲಿಗೆ ಕೃಷಿ ಮಾಡಬೇಕು ಎಂಬ ಬಗ್ಗೆ ನನಗೆ ಮೊದಲಿನಿಂದಲೂ ಅಪೇಕ್ಷೆಯಿತ್ತು. ಆದರೆ ಆರ್ಥಿಕ ಸಮಸ್ಯೆಯಿಂದ ಸಾಧ್ಯ ವಾಗಿರಲಿಲ್ಲ. ಆದರೆ ಈಗ ನರೇಗಾ ಯೋಜನೆಯಿಂದ ಸಹಾಯಧನ ಪಡೆದು ಮಲ್ಲಿಗೆ ಕೃಷಿ ಮಾಡಿದ್ದೇವೆ. ಇದರಿಂದ ಉತ್ತಮ ಆದಾಯ ಬರುತ್ತಿದೆ. ನರೇಗಾದಿಂದ ಬಹಳಷ್ಟು ಅನುಕೂಲವಾಗಿದೆ. – ಕನಕಾ ಆಜ್ರಿ

ಇತರರಿಗೂ ಮಾದರಿ

ನರೇಗಾ ಯೋಜನೆಯನ್ನು ಕನಕ ಅವರು ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಂಡಿದ್ದಾರೆ. ಆಜ್ರಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಇದು ಮೊದಲ ಪ್ರಯತ್ನವಾಗಿದೆ. ಉದ್ಯೋಗ ಖಾತರಿ ಯೋಜನೆಯಡಿ ಬರುವ ಅಡಿಕೆ ಕೃಷಿ, ದನದ ಹಟ್ಟಿ, ಕೋಳಿ ಶೆಡ್‌ ಗಳಿಗೂ ಈಗಾಗಲೇ ಅರ್ಜಿ ಸಲ್ಲಿಸಿರುವ ಇವರು, ಇತರ ಮಹಿಳೆಯರಿಗೆ ಮಾದರಿ. – ಗೋಪಾಲ್‌ ದೇವಾಡಿಗ, ಆಜ್ರಿ ಗ್ರಾ.ಪಂ. ಪಿಡಿಒ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.