ಟೋಲ್‌ ವಸೂಲಿ ಮನ್ನಾ  ಹೊಣೆ ಸಿಎಂ ಹೆಗಲಿಗೆ: ಹೆಗ್ಡೆ 


Team Udayavani, Dec 5, 2022, 7:50 AM IST

tdy-35

ಕುಂದಾಪುರ: ಹೆಜಮಾಡಿಯಲ್ಲಿ ಸುರತ್ಕಲ್‌ನ ಟೋಲ್‌ ದರವನ್ನೂ ಸೇರಿಸಿ ವಸೂಲಿ ಮಾಡುವ ಕ್ರಮಕ್ಕೆ ವ್ಯಾಪಕ ಜನಾಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಟೋಲ್‌ ದರ ಮನ್ನಾ ಮಾಡುವ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಹೇಳಿದ್ದಾರೆ.

ರವಿವಾರ ಇಲ್ಲಿ “ಉದಯವಾಣಿ’ ಜತೆ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳು, ಶಾಸಕರು, ಸಚಿವರು ಇದ್ದು ಉಡುಪಿಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದೆ. ಎರಡೂ ಟೋಲ್‌ ದರ ಒಟ್ಟಾಗಿ ಪಡೆಯುವ ಹೆದ್ದಾರಿ ಇಲಾಖೆಯ ನಿರ್ಧಾರವನ್ನು ವಿರೋಧಿಸಲಾಗಿದೆ. ವಿವಿಧ ಟೋಲ್‌ಗ‌ಳಿಗೆ ಹಂಚಿ ಹಾಕುವುದಕ್ಕೂ ವಿರೋಧ ಇದೆ. ರಸ್ತೆ ನಿರ್ಮಾಣ ಕುರಿತು ಒಟ್ಟು 400 ಕೋ.ರೂ. ಪಾವತಿಸಬೇಕಿದ್ದು ಈಗಾಗಲೇ 250 ಕೋ.ರೂ. ಟೋಲ್‌ ಮೂಲಕ ಸಂಗ್ರಹಿಸಿ ಪಾವತಿಸಲಾಗಿದೆ. ಇನ್ನುಳಿದ 150 ಕೋ.ರೂ.ಗಳನ್ನು ಮನ್ನಾ ಮಾಡಬೇಕೆಂದು ಕೇಂದ್ರಕ್ಕೆ ಮನವಿ ಮಾಡಲು ನಿರ್ಧರಿಸಲಾಗಿದೆ. ಆಡಳಿತ ಶಿಷ್ಟಾಚಾರದಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯೇ ಈ ಕುರಿತು ಕೇಂದ್ರಕ್ಕೆ ಪತ್ರ ಬರೆಯಬೇಕಾದ ಕಾರಣ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆದು ಅಲ್ಲೇ ಸ್ಪಷ್ಟ ತೀರ್ಮಾನ ಆಗಲಿದೆ. ಸಾಸ್ತಾನ ಹಾಗೂ ಹೆಜಮಾಡಿ ಟೋಲ್‌ ಗೇಟ್‌ನ ಅಂತರ ನಿಗದಿಗಿಂತ ಕಡಿಮೆ ಇದೆ ಎನ್ನುವುದನ್ನೂ ಚರ್ಚೆ ವೇಳೆ ಗಮನಕ್ಕೆ ತರಲಾಗಿದೆ ಎಂದರು.

ಪಕ್ಷದ ತೀರ್ಮಾನಕ್ಕೆ ಬದ್ಧ:

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಇರಾದೆ ಇದೆಯೇ ಎಂದಾಗ, ಜನರಿಂದ ಒತ್ತಡ ಬರುತ್ತಿದೆ. ಈಗ ಸಾಂವಿಧಾನಿಕ ಹುದ್ದೆಯಲ್ಲಿ ಇರುವುದರಿಂದ ಯಾವುದೇ ತೀರ್ಮಾನ ಮಾಡಿಲ್ಲ. ಪಕ್ಷ ಸೂಚಿಸಿದರೆ ಈ ಹುದ್ದೆಗೆ ರಾಜೀನಾಮೆ ನೀಡಿ ಪಕ್ಷ ಹೇಳಿದ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಿದ್ಧನಿದ್ದೇನೆ. ಯಾವ ಕ್ಷೇತ್ರ ಮೊದಲಾದವುಗಳ ಕುರಿತು ಯಾವುದೇ ಚರ್ಚೆ ನಡೆದಿಲ್ಲ, ಪಕ್ಷದಲ್ಲಿ ಈ ಕುರಿತಾದ ಬೆಳವಣಿಗೆ ನನ್ನ ಗಮನಕ್ಕೆ ಬಂದಿಲ್ಲ ಎಂದರು.

ಕೆಲಸ ಮಾಡುವ ಜನಪ್ರತಿನಿಧಿ ಬೇಕು ಎಂದು ಜನ ಬಯಸುತ್ತಿದ್ದಾರೆ. ಆದ್ದರಿಂದ ಯಾವುದಾದರೂ ಕ್ಷೇತ್ರದ ಶಾಸಕರ ಕೆಲಸ ಕಡಿಮೆ ಎಂದು ಜನರಿಗೆ ಹಾಗೂ ಪಕ್ಷಕ್ಕೆ ಅನಿಸಿದರೆ ಅಲ್ಲಿ ಸ್ಪರ್ಧಿಸಲು ಸೂಚಿಸಿದರೆ ನಾನು ನಿರಾಕರಿಸುವುದಿಲ್ಲ ಎಂದರು.

ಆಯ್ಕೆ ಮಾಡುವಾಗಲೇ ಯೋಚಿಸುವ ಅನಿವಾರ್ಯ:

ಕಾರ್ಯಾಂಗ ಹೇಳಿದಂತೆಯೇ ಎಲ್ಲವನ್ನೂ ಕೇಳುವುದಾದರೆ ಶಾಸಕಾಂಗದ ಅಗತ್ಯವೇನು. ಜನರಿಂದ ಆಯ್ಕೆಯಾದ ಜನಪ್ರತಿನಿಧಿ ಎನ್ನುವುದರಲ್ಲಿ ಅರ್ಥವೇ ಇಲ್ಲ. ಆದ್ದರಿಂದ ಆರಿಸುವಾಗಲೂ ಯೋಗ್ಯರನ್ನು ಆಯ್ಕೆ ಮಾಡಬೇಕು. ಅನಂತರ ಚಿಂತಿಸಿ ಪ್ರಯೋಜನ ಇಲ್ಲ ಎಂದು ಜಯಪ್ರಕಾಶ್‌ ಹೆಗ್ಡೆ ಹೇಳಿದರು.

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.