ಈ ಬಾರಿ ಆನ್‌ಲೈನ್‌ನಲ್ಲಿ ಮೂಡಿಬರಲಿದೆ ಕುಂದಾಪ್ರ ಕನ್ನಡದ ಕಂಪು


Team Udayavani, Jul 18, 2020, 11:49 AM IST

ಈ ಬಾರಿ ಆನ್‌ಲೈನ್‌ನಲ್ಲಿ ಮೂಡಿಬರಲಿದೆ ಕುಂದಾಪ್ರ ಕನ್ನಡದ ಕಂಪು

ಕುಂದಾಪುರ: ಕುಂದ ಗನ್ನಡದ ಭಾಷೆ, ಸಂಸ್ಕೃತಿಯ ಸೊಬ ಗನ್ನು ವಿಶ್ವದೆಲ್ಲೆಡೆ ಪಸರಿಸುವ, ಮುಂದಿನ ಪೀಳಿಗೆಗೆ ತಲುಪಿಸುವ ಸಲುವಾಗಿ ಕಳೆದ ವರ್ಷದಿಂದ ಕುಂದಾಪ್ರ ಕನ್ನಡ ದಿನಾಚರಣೆ ಎನ್ನುವ ವಿಶಿಷ್ಟ ಕಾರ್ಯಕ್ರಮ ಕುಂದಗನ್ನಡಿಗರಿಂದ ಆಯೋಜಿಸಲ್ಪ ಡುತ್ತಿದೆ. ಆಸಾಡಿ ಅಮಾಸಿ ಬಂತು ಎಂದರೆ ಈಗ ನೆನಪಾಗೋದು ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ. ಈ ಬಾರಿ ಕೊರೊನಾ ಲಾಕ್‌ಡೌನ್‌, ಗಡಿ ಸೀಲ್‌ಡೌನ್‌, ಸೆಕ್ಷನ್‌ 144 ಜಾರಿ ಮೊದಲಾದ ನಿರ್ಬಂಧಗಳು ಇರುವ ಕಾರಣ ಆನ್‌ಲೈನ್‌ ಮೂಲಕ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಜು.20ರಂದು ಜಾಲತಾಣ ಗಳಲ್ಲಿ ನಡೆಯಲಿದೆ.

ಹೇಗಾಯ್ತು
ಕಳೆದ ವರ್ಷ ಒಂದಷ್ಟು ಮಂದಿ ಯುವಕರು ತಮ್ಮ ತಮ್ಮಲ್ಲೇ ಚರ್ಚಿಸಿ ಹೀಗೊಂದು ದಿನಾಚರಣೆ ಮಾಡುವ ಬಗೆಯನ್ನು ಮಾತನಾಡಿಕೊಂಡರು. ದಿನ ಹೋದಂತೆ ಅದು ಬೃಹದಾಕಾರವಾಯಿತು. ಪ್ರಪಂಚದ ನಾನಾ ಕಡೆಗಳಿಂದ, ಕುಂದಾಪುರದ ಬೇರಿ ನಿಂದ ಹೊರಟು ಎಲ್ಲೆಡೆ ಚದುರಿದ ಚಟು ವಟಿಕೆ ನಿರತರಿಂದ, ಸೆಲೆಬ್ರಿಟಿಗಳಿಂದ, ಸಂಘಟನೆಗಳಿಂದ ಅಭೂತಪೂರ್ವ ಬೆಂಬಲ ದೊರೆಯಿತು. ಉಡುಪಿ ಜಿಲ್ಲೆಯ ನಾನಾ ಕಡೆ ಮಾತ್ರವಲ್ಲ ದ.ಕ., ಬೆಂಗಳೂರು, ಮುಂಬಯಿ, ಪುಣೆ, ಬಹ್ರೈನ್‌, ದುಬಾೖ ಹೀಗೆ ವಿಶ್ವದ ನಾನಾ ಕಡೆ ವಿಶ್ವ ಕುಂದಾಪ್ರ ಕನ್ನಡ ದಿನದ ಆಚರಣೆ ನಡೆಯಿತು. ಕುಂದಾಪ್ರ ಕನ್ನಡದ ಕುರಿತು ಚರ್ಚೆಗಳು ನಡೆದವು. ಭಾಷಾ ಸೊಗಡಿನ ಗಾದೆ, ಸಾಹಿತ್ಯ, ಕಥೆ, ಕವನ, ಪ್ರೇಮಪತ್ರ, ಅಬ್ಬಿಗೊಂದು ಪತ್ರ, ಲೇಖನ, ಮಾತು, ಹಳೆಯದಾದ ಬಳಕೆಯಲ್ಲಿಲ್ಲದ ಶಬ್ದಗಳು ಚಾಲನೆಗೆ ಬಂದವು. ಅನಂತರದ ದಿನಗಳಲ್ಲಿ ಕುಂದಗನ್ನಡ ನಿಘಂಟು ಆ್ಯಪ್‌ ಬಂತು. ಯಾವುದೇ ಒಂದು ನಿರ್ದಿಷ್ಟ ಸಂಘಟನೆಯಿಲ್ಲದೆ, ಎಲ್ಲರೂ ಮುಕ್ತವಾಗಿ, ಸಾಮೂಹಿಕವಾಗಿ ಆಚರಿಸುವ ದಿನವಾಗಿ ಮಾರ್ಪಾಡಾಯಿತು.

ಆಸಾಡಿ ಅಮಾಸಿ
ಮಳೆಗಾಲದಲ್ಲಿ ಹಬ್ಬಗಳು ಇರುವುದಿಲ್ಲ, ಜಾತ್ರೆಯಂತಹ ಆಚರಣೆ ಕೆಲವು ಕಡೆಗಷ್ಟೇ ಸೀಮಿತ. ಆಸಾಡಿ ಅಮಾವಾಸ್ಯೆ ಅಂದರೆ ಕರ್ಕಾಟಕ ಅಮಾವಾಸ್ಯೆ ಇಲ್ಲಿನ ಜನರ ಪಾಲಿಗೆ ಶ್ರೇಷ್ಠ ದಿನ. ಹಾಗಾಗಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಅಂದೇ ಪ್ರತಿವರ್ಷ ನಡೆಸುವುದು ಎಂದು ಆರಂಭಿಸಲಾಗಿದೆ.
ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಎಲ್ಲಿಯೂ ಸಭಾ ಕಾರ್ಯಕ್ರಮ ನಡೆಯುವುದಿಲ್ಲ. ಆದರೆ ಆನ್‌ಲೈನ್‌ನಲ್ಲಿ ಅನೇಕ ಕಾರ್ಯಕ್ರಮಗಳನ್ನು ಸಂಘಟಕರು ಹಮ್ಮಿಕೊಂಡಿದ್ದಾರೆ. ಕುಂದಾಪ್ರ ಕನ್ನಡದ ಮೇಲೆ ಅಭಿಮಾನ ಉಳ್ಳ ಯಾರು ಬೇಕಾದರೂ ಎಲ್ಲಿ ಬೇಕಾದರೂ ಅವರದ್ದೇ ಮಾದರಿಯಲ್ಲಿ ಅನುಸರಿಸಬಹುದಾದ ಕಾರ್ಯಕ್ರಮವಾಗಿದೆ. ಕುಂದಾಪ್ರ ಕನ್ನಡ ನಮ್ಮದು ಎಂಬ ಹೆಮ್ಮೆಯಿಂದ ಮೆರೆಸುವ ಕಾರ್ಯವಾಗಬೇಕು ಎಂಬ ನಿಟಿ rನಲ್ಲಿ ಈ ದಿನ ಆಚರಿಸಲು ಜನರೆಲ್ಲ ಮುಂದಾಗಿದ್ದಾರೆ.

ಈ ಬಾರಿ ಏನೆಲ್ಲ ವಿಶೇಷ ?
ಕುಂದಗನ್ನಡವನ್ನು ಬರಹದ ಭಾಷೆಯಾಗಿ ಬಳಕೆ ಮಾಡಬೇಕು ಹಾಗೂ ನಮ್ಮ ಸಂಸ್ಕೃತಿ, ಸಂಪ್ರದಾಯಗಳನ್ನು ನೆನಪಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಅಬ್ಬಿಗೊಂದು ಪತ್ರ ಎನ್ನುವ ಲೇಖನ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. ಕುಂದಾಪ್ರದ ಖಾದ್ಯಗಳನ್ನು ಮನೆಯಲ್ಲೇ ಮಾಡಿ ಅದನ್ನು ತಯಾರಿಸುವ ವಿಧಾನ ಹೇಗೆ ಎನ್ನುವುದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಸ್ಪರ್ಧೆ ಹಾಗೂ ಮರೆಯಾಗುತ್ತಿರುವ ಗ್ರಾಮೀಣ ಕ್ರೀಡೆಗಳಾದ ಚೆನ್ನಮಣೆ, ಪೇಡಗಾ ಮುಂತಾದ ಆಟಗಳನ್ನು ಮಕ್ಕಳ ಮೂಲಕ ಆಡಿಸಿ ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವುದು, ಕುಂದಾಪ್ರ ಭಾಷೆಯ ಡಬ್‌ಮ್ಯಾಶ್‌, ವೀಡಿಯೋಗಳನ್ನು ಹಂಚಿಕೊಳ್ಳುವ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.