ಎಪ್ರಿಲ್‌ ಮೊದಲ ವಾರದೊಳಗೆ ಮಾರುಕಟ್ಟೆಗೆ “ಕಲ್ಪರಸ’


Team Udayavani, Mar 5, 2020, 4:07 AM IST

kalparasa

ಸಾಂದರ್ಭಿಕ ಚಿತ್ರ

ಕುಂದಾಪುರ: ತೆಂಗಿನ ಮರಗಳಿಂದ “ಕಲ್ಪರಸ’ ಉತ್ಪಾದಿಸುವ ಸಂಬಂಧ, ರಾಜ್ಯದ 2ನೇ ತೆಂಗು ಸಂಸ್ಕರಣ ಘಟಕವನ್ನು ಕುಂದಾಪುರದ ಜಪ್ತಿಯಲ್ಲಿ ಆರಂಭಿಸುವ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಎಪ್ರಿಲ್‌ ಮೊದಲ ವಾರದಲ್ಲಿ ನೀರಾ ಮಾದರಿಯ “ಕಲ್ಪರಸ’ ಮಾರುಕಟ್ಟೆಗೆ ಬರಲಿದೆ.

ಉಡುಪಿ ಜಿಲ್ಲೆಯ 54 ತೆಂಗು ಬೆಳೆಗಾರರ ಸೊಸೈಟಿಗಳ 4,820 ಸದಸ್ಯರನ್ನು ಒಳಗೊಂಡ ಉಡುಪಿ ಕಲ್ಪರಸ ತೆಂಗು ಮತ್ತು ಸರ್ವ ಸಂಬಾರ ಉತ್ಪಾದಕರ ಕಂಪೆನಿ (ಉಕಸ) ಆರಂಭಿಸುವ ಯೋಜನೆಯನ್ನು ಉಡುಪಿಯ ಭಾರತೀಯ ಕಿಸಾನ್‌ ಸಂಘ ಹಾಕಿಕೊಂಡಿತ್ತು.

ಏನಿದು “ಕಲ್ಪರಸ’?
ಕಾಸರಗೋಡಿನ ಸಿಪಿಸಿಆರ್‌ಐ ಮಾರ್ಗ ದರ್ಶನದಲ್ಲಿ ತೆಂಗಿನ ಮರದ ಕೊಂಬನ್ನು ಟ್ಯಾಪಿಂಗ್‌ ಮಾಡಿ ನೀರಾದಂಥ ರಸ ತೆಗೆಯಲಾಗುತ್ತದೆ. ಅದನ್ನು ಸಂಸ್ಕರಣ ಘಟಕದಲ್ಲಿ
60 ಡಿಗ್ರಿ ಸೆ. ಉಷ್ಣತೆಯಲ್ಲಿ ಪ್ಯಾಶ್ಚರೀಕರಿಸಿ, ಹುಳಿಯ ಅಂಶ ತೆಗೆದು ತಂಪು ಪಾನೀಯವಾಗಿ ಮಾರುಕಟ್ಟೆಗೆ ಬಿಡಲಾಗುತ್ತದೆ.

ವಾರ್ಷಿಕ 2.40 ಲಕ್ಷ ರೂ. ಆದಾಯ
ಜಿಲ್ಲೆಯ ತೆಂಗು ಬೆಳೆಗಾರರ ಸೊಸೈಟಿಗಳಲ್ಲಿ ನೋಂದಾಯಿಸಿದ 4,820 ಬೆಳೆಗಾರರಿದ್ದು, 3.88 ಲಕ್ಷ
ತೆಂಗಿನ ಮರಗಳಿವೆ. ಕಲ್ಪರಸ ತೆಗೆಯಲು ರೈತರು 8 ಮರಗಳನ್ನು ನೀಡಿದರೆ ಅದರಿಂದ ವರ್ಷಕ್ಕೆ 2.40 ಲಕ್ಷ ರೂ. ಆದಾಯ ಸಿಗಲಿದೆ. ಮರ ಹತ್ತುವುದಕ್ಕೆ ಏಣಿ, ಕಲ್ಪರಸವನ್ನು ಇಳಿಸುವ ವಿಶಿಷ್ಟ ರೀತಿವಿನ್ಯಾಸ ಗೊಳಿಸಿರುವ ಪಾತ್ರೆ, ಅದನ್ನು ಸಂಗ್ರಹಿಸಿಡಲು ತಾಪಮಾನ ನಿಯಂತ್ರಿತ ಬಾಕ್ಸ್‌ಗಳನ್ನು ಘಟಕವೇ ಪೂರೈಸುತ್ತದೆ.

ಉದಯವಾಣಿ ವರದಿ
ಶಿವಮೊಗ್ಗದ ಭದ್ರಾವತಿ ಬಳಿಕ ರಾಜ್ಯದ 2ನೇ ತೆಂಗು ಘಟಕ ಜಪ್ತಿಯಲ್ಲಿ ಆರಂಭವಾಗುವ ಬಗ್ಗೆ, ನೀರಾ ಮಾದರಿಯ “ಕಲ್ಪರಸ’ ಮಾರುಕಟ್ಟೆಗೆ ಬರುವ ಕುರಿತಂತೆ “ಉದಯವಾಣಿ’ ಜ. 6ರಂದು ವಿಶೇಷ ವರದಿಯನ್ನು ಪ್ರಕಟಿಸಿತ್ತು.

ತಾಂತ್ರಿಕ ಅನುಮೋದನೆ
ಇದು ನೀರಾ ಮಾದರಿಯದಾಗಿದ್ದರೂ ಸಂಸ್ಕರಿಸುವುದರಿಂದ ಅಮಲು ಇರುವುದಿಲ್ಲ. ಈಗಾಗಲೇ ಅಬಕಾರಿ ಇಲಾಖೆಯಿಂದ ತಾಂತ್ರಿಕ ಅನುಮೋದನೆ ಸಿಕ್ಕಿದೆ. ಪ್ರಾಯೋಗಿಕವಾಗಿ ಕಲ್ಪರಸ ತೆಗೆಯಲಾಗುತ್ತಿದೆ. ಸದ್ಯಕ್ಕೆ ಜಪ್ತಿಯಲ್ಲಿ ತಾತ್ಕಾಲಿಕ ಕಟ್ಟಡವನ್ನು ನಿರ್ಮಿಸಿ, ಅಲ್ಲಿ ಸಂಸ್ಕರಣ ಘಟಕ ಕಾರ್ಯಾರಂಭಿಸಲಿದೆ. ಆ ಬಳಿಕ ಇಲ್ಲೇ ದೊಡ್ಡ ಮಟ್ಟದಲ್ಲಿ ಆರಂಭವಾಗಲಿದೆ. ಎಪ್ರಿಲ್‌ ಮೊದಲ ವಾರದಲ್ಲಿ ಕಲ್ಪರಸ ಮಾರುಕಟ್ಟೆಗೆ ಬರಲಿದೆ.
– ಸತ್ಯನಾರಾಯಣ ಉಡುಪ ಜಪ್ತಿ, ಪ್ರ. ಕಾರ್ಯದರ್ಶಿ, ಭಾರತೀಯ ಕಿಸಾನ್‌ ಸಂಘ ಉಡುಪಿ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.