ಕಂಚುಗೋಡು: ಕತ್ತಲೆಯಲ್ಲೇ ಕಾಲ ಕಳೆಯುತ್ತಿರುವ ಕುಟುಂಬ


Team Udayavani, Dec 15, 2021, 5:36 PM IST

ಕಂಚುಗೋಡು: ಕತ್ತಲೆಯಲ್ಲೇ ಕಾಲ ಕಳೆಯುತ್ತಿರುವ ಕುಟುಂಬ

ತ್ರಾಸಿ: ಸರಕಾರ ಪ್ರತಿ ಮನೆಗೂ ವಿದ್ಯುತ್‌ ಸಂಪರ್ಕ ನೀಡಲು ಮುಂದಾಗಿದ್ದರೆ, ಇಲ್ಲೊಂದು ಕುಟುಂಬವು 8 ವರ್ಷಗಳಿಂದ ಕತ್ತಲೆಯಲ್ಲೇ ಕಾಲ ಕಳೆಯುತ್ತಿದೆ.

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಸಾಡು ಗ್ರಾಮದ ಕಂಚುಗೋಡು ಖಾರ್ವಿಕೇರಿ ನಿವಾಸಿ ನಾಗರಾಜ ಖಾರ್ವಿ ಕುಟುಂಬ ಮನೆಗೆ ವಿದ್ಯುತ್‌ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿ 8 ವರ್ಷ ಕಳೆದರೂ ವಿದ್ಯುತ್‌ ಸಂಪರ್ಕ ಭಾಗ್ಯ ಇನ್ನೂ ದೊರೆತಿಲ್ಲ.

ಕ್ಯಾಂಡಲ್‌ ದೀಪದಡಿ ಓದು
ಮೀನುಗಾರಿಕೆಯನ್ನೇ ನಂಬಿರುವ ನಾಗರಾಜ ಖಾರ್ವಿ ಕಂಚುಗೋಡು ಖಾರ್ವಿಕೇರಿ ಎಂಬಲ್ಲಿ ಪುಟ್ಟ ಮನೆ
ಯೊಂದರಲ್ಲಿ ಪತ್ನಿ ಗೀತಾ ಖಾರ್ವಿ ಮತ್ತು ಇಬ್ಬರು ಪುಟ್ಟ ಹೆಣ್ಣು ಮಕ್ಕಳೊಂದಿಗೆ ಬಡತನದಲ್ಲಿಯೇ ಜೀವನ ನಡೆಸುತ್ತಿದ್ದಾರೆ. ಮನೆಯಲ್ಲಿ ವಿದ್ಯುತ್‌ ಸಂಪರ್ಕ ಇಲ್ಲದಿರುವುದರಿಂದ ಕತ್ತಲೆ ಯಲ್ಲೇ ದಿನ ಕಳೆಯುವ ಪರಿಸ್ಥಿತಿ ಈ ಬಡ ಕುಟುಂಬದ್ದಾಗಿದೆ. ಪುಟ್ಟ ಮಕ್ಕಳು ಕ್ಯಾಂಡಲ್‌ ದೀಪದಡಿಯೇ ರಾತ್ರಿ ಓದುವಿಕೆ, ಬರೆಯಬೇಕಾದ ಪರಿಸ್ಥಿತಿಯಿದೆ.

ಸೀಮೆಎಣ್ಣೆಯು ಸಿಗುತ್ತಿಲ್ಲ
ವಿದ್ಯುತ್‌ ಸಂಪರ್ಕವೂ ಇಲ್ಲದಿರುವುದ ರಿಂದ ಚಿಮಿಣಿ ದೀಪದ ಬೆಳಕೇ ಆಸರೆಯಾಗಿದ್ದು, ಆದರೆ ಈಗ ಪಡಿತರದಲ್ಲಿ ಸೀಮೆಎಣ್ಣೆ ಸಹ ಕೊಡದ ಕಾರಣ ರಾತ್ರಿ ಚಿಮಿಣಿ ದೀಪ ಹಚ್ಚಲು ಸೀಮೆಎಣ್ಣೆ ಕೂಡ ಸಿಗುತ್ತಿಲ್ಲ. ಹೀಗಾಗಿ ಮೇಣದಬತ್ತಿ ಹಚ್ಚಿಕೊಂಡು ರಾತ್ರಿಯೆಲ್ಲ ಕಾಲ ಕಳೆಯುವಂತಾಗಿದೆ.

ನಿರಾಕ್ಷೇಪಣಾ ಪತ್ರ ನೀಡುತ್ತಿಲ್ಲ
ಮನೆಯ ವಿದ್ಯುತ್‌ ಸಂಪರ್ಕದ ನಿರಾಕ್ಷೇಪಣ ಪತ್ರಕ್ಕಾಗಿ ಕಳೆದ 5 ತಿಂಗಳಿನಿಂದ ಗ್ರಾಮ ಪಂಚಾಯತ್‌ಗೆ ಅರ್ಜಿ
ಹಿಡಿದು ಅಲೆದಾಡುತ್ತಿದ್ದರೂ ಈವರೆಗೂ ಈ ಪತ್ರ ಸಿಕ್ಕಿಲ್ಲ. ವಿದ್ಯುತ್‌ ಸಂಪರ್ಕ ನೀಡುವಂತೆ ಮೆಸ್ಕಾಂಗೆ ಅರ್ಜಿ ಸಲ್ಲಿಸಿ ದ್ದರೂ ಕೂಡ ಈವರೆಗೆ ಯಾವುದೇ ಪ್ರಗತಿ ಕಂಡುಬಂದಿಲ್ಲ. ಮೆಸ್ಕಾಂ ಮಾರ್ಗದಾಳುಗಳು ಬಂದು ಪರಿಶೀಲನೆ ಮಾಡಿ ಹೋಗಿರುವುದು ಬಿಟ್ಟರೆ ವಿದ್ಯುತ್‌ ಸಂಪರ್ಕ ಇನ್ನೂ ಮರೀಚಿಕೆಯಾಗಿಯೇ ಉಳಿದಿದೆ. ಇವರು ವಾಸಿಸುತ್ತಿರುವ ಜಾಗದ ಮಾಲಕರು ವಿದ್ಯುತ್‌ ಸಂಪರ್ಕ ಪಡೆಯಲು ಯಾವುದೇ ತಕರಾರು ಇಲ್ಲ ಎಂದು ಹೇಳಿದ್ದರೂ, ಈವರೆಗೆ ವಿದ್ಯುತ್‌ ಸಂಪರ್ಕ ನೀಡಲು ಸ್ಥಳೀಯಾಡಳಿತ ಮತ್ತು ಮೆಸ್ಕಾಂ ಮೀನಾಮೇಷ ಎಣಿಸುತ್ತಿರುವುದರ ವಿರುದ್ಧ ಸಾರ್ವಜನಿಕ ವಲಯದಿಂದ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ:ಅಂದರ್‌-ಬಾಹರ್‌ ಚದುರಂಗದಲ್ಲಿ ದಡ ಸೇರಿದ ಬಿಜೆಪಿ

ವಿದ್ಯುತ್‌ ಸಂಪರ್ಕಕ್ಕೆ ಸ್ಥಳೀಯಾಡಳಿತದ ನಿರಾಕ್ಷೇಪಣಾ ಪತ್ರ ಬೇಡ ಎಂದು ಸರಕಾರ ಒಂದೆಡೆ ಹೇಳುತ್ತಿದ್ದರೂ ಈ ಪತ್ರ ಇಲ್ಲದೆ ವಿದ್ಯುತ್‌ ಸಂಪರ್ಕ ನೀಡಲು ಮೆಸ್ಕಾಂ ನಿರಾಕರಿಸುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಒಪ್ಪಿಗೆ ಪತ್ರ ಸಿಕ್ಕಿಲ್ಲ
ನಾಗರಾಜ ಖಾರ್ವಿ ಅವರು ಮನೆಯ ಜಾಗದ ಮಾಲಕರ ಒಪ್ಪಿಗೆ ಪತ್ರ ನೀಡಿಲ್ಲ. ಹೀಗಾಗಿ ಅವರಿಗೆ ವಿದ್ಯುತ್‌ ಸಂಪರ್ಕದ ನಿರಾಕ್ಷೇಪಣಾ ಪತ್ರ ನೀಡಲು ಸಮಸ್ಯೆಯಾಗಿದೆ. ಜಾಗದ ಮಾಲಕರ ಒಪ್ಪಿಗೆ ಪತ್ರ ನೀಡಿದಲ್ಲಿ ನಿರಾಕ್ಷೇಪಣಾ ಪತ್ರ ನೀಡಲು ಕ್ರಮಕೈಗೊಳ್ಳಲಾಗುವುದು.
-ಪಾರ್ವತಿ, ಪಿಡಿಒ, ಹೊಸಾಡು ಗ್ರಾ.ಪಂ.

ಮಂಜೂರಾತಿಗೆ ಕಳುಹಿಸಲಾಗಿದೆ
ಆ ಮನೆಗೆ ವಿದ್ಯುತ್‌ ಸಂಪರ್ಕ ನೀಡಲು ಈಗಾಗಲೇ ಅಂದಾಜು ಪಟ್ಟಿ ಸಿದ್ಧಪಡಿಸಿ, ಮಂಜೂರಾತಿಗೆ ಕಳುಹಿಸಿ ಕೊಡಲಾಗಿದೆ. ಸಾಮಗ್ರಿಗಳು ಸರಬರಾಜು ಆದ ತತ್‌ಕ್ಷಣ ವಿದ್ಯುತ್‌ ಸಂಪರ್ಕ ನೀಡಲಾಗುವುದು. ಸಾಮಾಗ್ರಿ ಸರಬರಾಜು ಆಗಲು ಸ್ವಲ್ಪ ವಿಳಂಬವಾಗಬಹುದು.
-ರಾಘವೇಂದ್ರ, ಜೆಇ, ಮೆಸ್ಕಾಂ ಗಂಗೊಳ್ಳಿ ಶಾಖೆ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.