ಕಂಡ್ಲೂರು: ಅಕ್ರಮ ಮರಳು ಅಡ್ಡೆಗೆ ದಾಳಿ
Team Udayavani, Mar 18, 2019, 5:07 AM IST
ಕುಂದಾಪುರ: ಕಾವ್ರಾಡಿ ಗ್ರಾಮದ ಕಂಡ್ಲೂರಿನ ಜೆ.ಎಂ. ರಸ್ತೆಯ ವಾರಾಹಿ ಹೊಳೆಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ಮಾ. 17ರಂದು ಬೆಳಗ್ಗೆ 6 ಗಂಟೆ ಸುಮಾರಿಗೆ ದಾಳಿ ನಡೆಸಿದ ಎಸ್ಐ ಶ್ರೀಧರ್ ನಾಯ್ಕ ನೇತೃತ್ವದ ಕುಂದಾಪುರ ಗ್ರಾಮಾಂತರ ಪೊಲೀಸರ ತಂಡ ನಾಲ್ವರನ್ನು ಬಂಧಿಸಿದ್ದಾರೆ.
ಕಂಡ್ಲೂರಿನ ನಿಸಾರ್ ಅಹಮದ್ (32), ಖಲೀಫಾ ಖಾಲಿದ್ (30), ಖಲೀಫಾ ಖುರೇಶಿ (46), ಹಾವೇರಿ ಜಿಲ್ಲೆಯ ವಿರೂಪಾಕ್ಷಪ್ಪ ಯಾನೆ ಹರೀಶ (48) ಬಂಧಿತರು.
ಸ್ಥಳದಲ್ಲಿದ್ದ ಕಂಡ್ಲೂರಿನ ಕರಾಣಿ ಬಿಲಾಲ್, ಸಮೀರ್, ಅಫಾನ್ ಹಾಗೂ ಮುತಾಯಿಬ್ ಪರಾರಿಯಾಗಿದ್ದಾರೆ.
ಸ್ಥಳದಿಂದ 2 ಪಿಕಪ್ ವಾಹನ, 1 ಆಮ್ನಿ ಕಾರು, ಮೊಬೈಲ್ ಫೋನ್ಗಳು, ಮರಳು ಸಾಗಾಟ ಮಾಡಿ ಸಂಗ್ರಹಿಸಿದ್ದ 37 ಸಾ.ರೂ., ಚೀಲಗಳಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 3 ಯುನಿಟ್ ಮರಳು, ವಾಹನದಲ್ಲಿದ್ದ 1 ಯೂನಿಟ್ ಮರಳು ಹಾಗೂ ದೋಣಿಯನ್ನು ವಶಪಡಿಸಿಕೊಳ್ಳಲಾಗಿದೆ. ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿಸಿ, ಎಸ್ಪಿ ಭೇಟಿ ನೀಡಿದ್ದರು
ಕಂಡ್ಲೂರಿಗೆ ಇದೇ ವಿಚಾರವಾಗಿ ಮಾ. 14ರಂದು ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಹಾಗೂ ಎಸ್ಪಿ ನಿಶಾ ಜೇಮ್ಸ್ ಭೇಟಿ ನೀಡಿದ್ದರು ಎನ್ನಲಾಗಿದೆ.
ಡಿಸಿ, ಎಸಿಗೆ ಹಲ್ಲೆ ನಡೆದಿದ್ದ ಸ್ಥಳ
ಇದೇ ಸ್ಥಳವು ಸುಮಾರು 2 ವರ್ಷಗಳ ಹಿಂದೆ ಅಕ್ರಮ ಮರಳು ದಂಧೆಕೋರರು ಡಿಸಿ ಹಾಗೂ ಎಸಿ ಮೇಲೆ ಹಲ್ಲೆ ನಡೆಸಿ ರಾಜ್ಯ ಮಟ್ಟದಲ್ಲಿ ಕುಖ್ಯಾತಿ ಗಳಿಸಿತ್ತು. 2017ರ ಎ. 2ರಂದು ರಾತ್ರಿ ಇಲ್ಲಿಗೆ ಆಗಿನ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಕುಂದಾಪುರದ ಆಗಿನ ಉಪ ವಿಭಾಗಾಧಿಕಾರಿ ಶಿಲ್ಪಾ ನಾಗ್, ಅಂಪಾರು ಗ್ರಾಮ ಕರಣಿಕ ಕಾಂತರಾಜು ಹಾಗೂ ಇತರ ಅಧಿಕಾರಿಗಳು ದಾಳಿ ನಡೆಸಿದ್ದು, ಅವರ ಮೇಲೆಯೇ ದಂಧೆಕೋರರು ಹಲ್ಲೆ ನಡೆಸಿದ್ದರು. ಬಳಿಕ ಇಲ್ಲಿ ಮರಳುಗಾರಿಕೆ ಕಡಿಮೆಯಾಗಿದ್ದು, ಈಗ ಮತ್ತೆ ಆರಂಭಗೊಂಡಿತ್ತು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapur: ಕುಸಿದು ಬಿದ್ದು ಸಾವು
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ