ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ


Team Udayavani, Mar 28, 2024, 8:00 AM IST

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕುಂದಾಪುರ: ಕನ್ನಡಕುದ್ರು, ಮೂವತ್ತುಮುಡಿ ಪರಿಸರದಲ್ಲಿ ಕೀಟ ಬಾಧೆಯಿಂದ ತೆಂಗಿನ ಮರಗಳು ಸಾಯುವ ಸ್ಥಿತಿಗೆ ತಲುಪಿ ಬೆಳೆಗಾರರು ಕಂಗಾಲಾಗಿರುವ ಬಗೆಗಿನ ಉದಯವಾಣಿ ವರದಿಗೆ ಸ್ಪಂದಿಸಿರುವ ಕೃಷಿ ವಿಜ್ಞಾನಿಗಳು ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

“ಉದಯವಾಣಿ’ಯು ಮಾ. 25 ರಂದು ಈ ಸಂಬಂಧ ವಿಶೇಷ ವರದಿ ಪ್ರಕಟಿಸಿ, ಗಮನಸೆಳೆದಿತ್ತು.

ಬ್ರಹ್ಮಾವರದ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ಕೀಟ ಶಾಸ್ತ್ರ ವಿಜ್ಞಾನಿಗಳಾದ ಡಾ| ರೇವಣ್ಣ ರೇವಣ್ಣನವರ್‌, ಡಾ| ಮೋಹನ್‌ ಕುಮಾರ್‌ ವಿ. ಹಾಗೂ ತೋಟಗಾರಿಕಾ ಇಲಾಖೆಯ ಕುಂದಾಪುರದ ಹಿರಿಯ ಸಹಾಯಕ ನಿರ್ದೇಶಕ ನಿಧೀಶ್‌ ಕೆ.ಜಿ. ಅವರ ತಂಡವು ಪರಿಶೀಲಿಸಿ, ಗರಿಗಳನ್ನು ತಿನ್ನುವ ಕಪ್ಪು ತಲೆ ಹುಳ ಹಾಗೂ ಕೆಲ ಮರಗಳಿಗೆ ಬಿಳಿ ನೊಣಗಳ ಬಾಧೆಯಿದೆ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನೀರು, ಗೊಬ್ಬರ ಕೊರತೆ ಕಾರಣ
ಕನ್ನಡಕುದ್ರು ಸುತ್ತಮುತ್ತ ಎರಡು ವರ್ಷಗಳಿಂದ ಬೇಸಗೆಯಲ್ಲಿ ಶೇ. 80-95 ರಷ್ಟು ತೆಂಗಿನ ಗರಿಗಳಿಗೆ ಈ ಹುಳುಗಳು ಹಾನಿ ಮಾಡಿವೆ. ಇವುಗಳು ತಮಗೆ ಪೂರಕವಾದ ವಾತಾವರಣವಿದ್ದರೆ ವರ್ಷದಲ್ಲಿ 5-6 ಸಂತತಿ ಪೂರ್ಣಗೊಳಿಸುವ ಸಾಮರ್ಥ್ಯವಿದೆ. ಹೆಚ್ಚು ಬಿಸಿಲು, ಸೆಕೆ, ನೀರು ಹಾಗೂ ಪೋಷಕಾಂಶದ (ಪ್ರಮುಖವಾಗಿ ಪೊಟ್ಯಾಷ್‌)ಕೊರತೆಯಿಂದ ಬಳಲುತ್ತಿರುವ ತೆಂಗಿನ ಮರಗಳಿಗೆ ಈ ಹುಳದ ಬಾಧೆ ಹೆಚ್ಚು. ಈ ಹುಳಗಳು ಎಲೆಗಳ ಪತ್ರಹರಿತ್ತನ್ನು ಕೆದರಿ ತಿನ್ನುತ್ತವೆ. ಇದರಿಂದ ಗರಿಗಳು ಸುಟ್ಟಂತಾಗಿ ಒಣಗುತ್ತವೆ. ಇಲ್ಲಿ ಈ ಹುಳು ಗೂಡು ಹಾಗೂ ಚಿಟ್ಟೆಯ ಹಂತದಲ್ಲಿದೆ. ಈಗಾಗಲೇ ಬಾಧೆಗೊಳಪಟ್ಟ ಗರಿಗಳಲ್ಲಿ ಮರಿ-ಹುಳುಗಳಿಗೆ ಆಹಾರದ ಕೊರತೆಯಿದೆ. ಆದ್ದರಿಂದ ಪೋಷಕಾಂಶಗಳಿಲ್ಲದೇ ಸೊರಗಿದ ತೆಂಗಿನ ತೋಟಗಳಿಗೆ ಈ ಹುಳಗಳು ರಾತ್ರಿ ಹಾರಿ ಹೋಗಿ ಮೊಟ್ಟೆಯಿಟ್ಟು ದಾಳಿ ಮಾಡುತ್ತವೆ ಎಂದಿದ್ದಾರೆ.

ರೈತರಿಗೆ ಪ್ರಾತ್ಯಕ್ಷಿಕೆ
ಕನ್ನಡಕುದ್ರು ಭಾಗದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಸಿಹಿ ನೀರು ಇರುವುದರಿಂದ ಅಷ್ಟೊಂದು ಪ್ರಮಾಣದಲ್ಲಿ ತೆಂಗಿನ ಮರಗಳಿಗೆ ಹಬ್ಬಿಲ್ಲ. ಆದರೆ ಮೂವತ್ತು ಮುಡಿ ಪರಿಸರದಲ್ಲಿ ಉಪ್ಪು ನೀರಿನಾಂಶವೇ ಹೆಚ್ಚಿರುವ ಕಾರಣ ಬಾಧೆ ಹೆಚ್ಚಿದೆ. ಇದರ ನಿಯಂತ್ರಣದ ಬಗ್ಗೆ ರೈತರಿಗೆ ಶೀಘ್ರವೇ ತೋಟಗಾರಿಕಾ ಇಲಾಖೆ ನೇತೃತ್ವದಲ್ಲಿ ಕೃಷಿ ವಿಜ್ಞಾನಿಗಳಿಂದ ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು ನಿಧೀಶ್‌ ಕೆ.ಜಿ. ತಿಳಿಸಿದ್ದಾರೆ.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.