Karkala: ಪ್ರವಾಸಿಗರ ಕೊರತೆ, ಚುನಾವಣೆ- ಪ್ರವಾಸಿ ತಾಣ ನಿರ್ಜನ!

ವಾರಾಂತ್ಯದ ಶನಿವಾರ, ರವಿವಾರ ತುಸು ಹೆಚ್ಚಿರುತ್ತದೆ. ಬಿಟ್ಟರೆ ಉಳಿದ ದಿನಗಳಲ್ಲಿ ಕಡಿಮೆ ಇದ್ದಾರೆ.

Team Udayavani, Apr 26, 2023, 3:15 PM IST

Karkala: ಪ್ರವಾಸಿಗರ ಕೊರತೆ, ಚುನಾವಣೆ- ಪ್ರವಾಸಿ ತಾಣ ನಿರ್ಜನ!

ಕಾರ್ಕಳ: ಬೇಸಗೆ ರಜೆ ಎಂದರೆ ಸಾಕು, ಶಿಲ್ಪ ಕಲೆಗಳ ತವರೂರು ಕಾರ್ಕಳಕ್ಕೆ ಪ್ರವಾಸಿಗರು ಲಗ್ಗೆ ಇಡುತ್ತಿದ್ದರು. ಆದರೆ ಈ ಬಾರಿ ಚುನಾವಣೆಯ ಕಾವಿನ ಜತೆಗೆ ಸುಡುಬಿಸಿಲು ಕೂಡ ಇರುವುದರಿಂದ ಪ್ರವಾಸಿಗರ ಕೊರತೆ ಕಂಡುಬಂದಿದೆ. ಇದರಿಂದ ಪ್ರವಾಸೋಧ್ಯಮಕ್ಕೆ ಜತೆಗೆ ಸ್ಥಳೀಯ ವ್ಯಾಪಾರಿಗಳ ಆದಾಯಕ್ಕೂ ಕತ್ತರಿ ಬಿದ್ದಿದೆ.

ರಾಜ್ಯದ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಕಾರ್ಕಳವೂ ಆದ್ಯತೆ ಪಡೆದುಕೊಂಡಿದೆ. ಇತ್ತೀಚೆಗಷ್ಟೆ ಪರಶುರಾಮನ ಥೀಂ ಪಾರ್ಕ್‌
ನಿರ್ಮಾಣಗೊಂಡ ಬಳಿಕವಂತೂ ಇನ್ನಷ್ಟು ಆಕರ್ಷಣೆ ಪಡೆದುಕೊಂಡಿದೆ. ಇಲ್ಲಿನ ಭಗವಾನ್‌ ಶ್ರೀ ಬಾಹುಬಲಿ ಬೆಟ್ಟ, ಚತುರ್ಮುಖ ಬಸದಿ, ಕೋಟಿಚೆನ್ನಯ ಥೀಂ ಪಾರ್ಕ್‌, ವರಂಗ ಬಸದಿ, ಆನೆಕೆರೆ ಇತ್ಯಾದಿಗಳನ್ನು ಕಣ್ತುಂಬಿ ಕೊಳ್ಳಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದರು. ಆದರೆ ಈ ಸಲ ಈ ಪರಿಸರವೆಲ್ಲ ಈಗ ನಿರ್ಜನವಾಗಿವೆ.

ಕಾರ್ಕಳ ಕರಿಯ ಕಲ್ಲುಗಳಿಂದ ಆವೃತ ಪ್ರದೇಶ. ಉರಿ ಬಿಸಿಲಿನಿಂದಾಗಿ ಬಂಡೆಗಲ್ಲು ಗಳು ಕಾದು ಹೆಂಚಿನಂತಾಗಿವೆ. ಸದಾ ಬಿಸಿ
ಗಾಳಿ ಇಲ್ಲಿ ಬೀಸುತ್ತಿರುತ್ತದೆ. ಸಹಸ್ರಾರು ಇದ್ದ ಪ್ರವಾಸಿಗರ ಸಂಖ್ಯೆ ನೂರಾರು ಆಸುಪಾಸಿಗೆ ಇಳಿದಿದೆ. ಬಂದ ಪ್ರವಾಸಿಗರು ಕೂಡ ಬಿಸಿಲ ತಾಪಕ್ಕೆ ಬಳಲಿ ಸಿಕ್ಕಲ್ಲೆಲ್ಲ ನೀರು ಕುಡಿದು ದಣಿವಾರಿಸಿ ಕೊಳ್ಳುತ್ತಿದ್ದಾರೆ.

ಶ್ರೀ ಭಗವಾನ್‌ ಬಾಹುಬಲಿ ಬೆಟ್ಟ ಹಾಗೂ ಅಲ್ಲಿಗೆ ತೆರಳುವ ಮೆಟ್ಟಿಲುಗಳಲ್ಲಿ ಜನವೇ ಕಾಣುತ್ತಿಲ್ಲ. ಚತುರ್ಮುಖ ಬಸದಿ, ಕೋಟಿ
ಚೆನ್ನಯ ಥೀಂ ಪಾರ್ಕ್‌ ಕೂಡ ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿವೆ.

ಹೊರ ಜಿಲ್ಲೆ, ರಾಜ್ಯದಿಂದ ಬರುವ ಪ್ರವಾಸಿ ಗರ ಸಂಖ್ಯೆ ಗಣನೀಯ ಇಳಿಕೆಯಾಗಿದೆ. ಕಾರ್ಕಳ, ಅಕ್ಕಪಕ್ಕದ ಊರುಗಳ ಪ್ರವಾಸಿಗರು ಸಂಜೆ ಈ ತಾಣಗಳಿಗೆ ಮಕ್ಕಳೊಂದಿಗೆ ಆಗಮಿಸುವುದಷ್ಟೇ ಕಾಣುತ್ತಿದೆ. ವಾರಾಂತ್ಯದ ಶನಿವಾರ, ರವಿವಾರ ತುಸು ಹೆಚ್ಚಿರುತ್ತದೆ. ಬಿಟ್ಟರೆ ಉಳಿದ ದಿನಗಳಲ್ಲಿ ಕಡಿಮೆ ಇದ್ದಾರೆ.

ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿದ್ದು, ಅಧಿಕಾರಿಗಳು ಅದರ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಇನ್ನೊಂದೆಡೆ ಆಯಾ ಕ್ಷೇತ್ರಗಳಲ್ಲಿ ರಾಜಕೀಯ ಪ್ರಚಾರ ಪ್ರಕ್ರಿಯೆ ಚುರುಕುಗೊಂಡಿವೆ. ಈ ಎಲ್ಲ ಕಾರಣಕ್ಕೆ ಮಕ್ಕಳಿಗೆ ರಜೆ ಇದ್ದರೂ ಜನರು ಪ್ರವಾಸ
ಕೈಗೊಳ್ಳುತ್ತಿಲ್ಲ. ಮಕ್ಕಳು ಬೇಸಗೆ ಶಿಬಿರಗಳಲ್ಲಿ ಕಳೆಯುತ್ತಿರುವುದು ಇನ್ನೊಂದು ಕಾರಣ.

ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಹೊರಗಿ ನಿಂದ ಬರುವ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದೆ. ಹಿಂದೆ ದಿನಕ್ಕೆ 500ರ ವರೆಗೆ ಬರುತ್ತಿದ್ದ ಪ್ರವಾಸಿಗರ ಸಂಖ್ಯೆ ಈ ಬಾರಿ 100ರ ಆಸುಪಾಸಿಗೆ ಇಳಿದಿದೆ. ಸ್ಥಳೀಯರು ಮಾತ್ರ ಬೆಳಗ್ಗೆ – ಸಂಜೆ ಹೊತ್ತು ಬರುತ್ತಾರೆ.ಹಗಲು ಬಿಸಿಲಿನ ಝಳ ಹೆಚ್ಚಿರುವ ಕಾರಣ ಪ್ರವಾಸಿಗರೇ ಇರುವುದಿಲ್ಲ. ತಾಪ ಇಳಿದ ಬಳಿಕ, ಮಳೆಗಾಲ ಆರಂಭದ ಹೊತ್ತಲ್ಲಿ ಪ್ರವಾಸಿಗರು ಬರುವ ನಿರೀಕ್ಷೆಯಿದೆ.
ಸುರೇಂದ್ರ ಪೂಜಾರಿ ಗೈಡ್‌, ಕೋಟಿ ಚೆನ್ನಯ ಥೀಂ ಪಾಕ್‌

*ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.