ಕೆರಾಡಿ ಗ್ರಾ.ಪಂ.: ಚೀಟಿ ಎತ್ತಿ ಅಧ್ಯಕ್ಷ ಸ್ಥಾನದ ಆಯ್ಕೆ : ಕೈಗೆ ಒಲಿದ ಅದೃಷ್ಟ
ಉಪಾಧ್ಯಕ್ಷ ಸ್ಥಾನ ಬಿಜೆಪಿಗೆ
Team Udayavani, Feb 17, 2021, 3:50 PM IST
ಕುಂದಾಪುರ: ಕೆರಾಡಿ ಗ್ರಾ.ಪಂ.ನ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆ ಜಿದ್ದಾಜಿದ್ದಿನ ಪೈಪೋಟಿಗೆ ಕಾರಣವಾಯಿತು. ಅದೃಷ್ಟದಾಟದಲ್ಲಿ ಕಾಂಗ್ರೆಸ್ ಬೆಂಬಲಿತ ಗಿರಿಜಾ ಶೆಟ್ಟಿ ಅವರು ಅಧ್ಯಕ್ಷೆಯಾಗಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸುದರ್ಶನ್ ಬಿ.ಆರ್. ಅವರು ಆಯ್ಕೆಯಾಗಿದ್ದಾರೆ.
14 ಸದಸ್ಯ ಬಲದ ಕೆರಾಡಿ ಗ್ರಾ.ಪಂ.ನಲ್ಲಿ 8 ಬಿಜೆಪಿ ಬೆಂಬಲಿತ ಹಾಗೂ 6 ಕಾಂಗ್ರೆಸ್ ಬೆಂಬಲಿತ ಸದಸ್ಯರು ಗೆದ್ದಿದ್ದರು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ನಿಂದ ಗಿರಿಜಾ ಶೆಟ್ಟಿ ಹಾಗೂ ಬಿಜೆಪಿ ಬೆಂಬಲಿತರಾಗಿ ಜ್ಯೋತಿ ವಿ. ಶೆಟ್ಟಿ ಸ್ಪಧಿಸಿದ್ದರು. ಮತದಾನ ನಡೆದಾಗ ಒಬ್ಬ ಬಿಜೆಪಿ ಬೆಂಬಲಿತ ಸದಸ್ಯರು ಕಾಂಗ್ರೆಸ್ಗೆ ಮತ ಹಾಕಿದ್ದು, ಹಾಗಾಗಿ ಇಬ್ಬರಿಗೂ ತಲಾ 7 ಮತ ಪಡೆದು ಸಮಬಲ ಸಾಧಿಸಿದ್ದರು. ಅಂತಿಮವಾಗಿ ಚೀಟಿ ಎತ್ತುವ ಮೂಲಕ ಆಯ್ಕೆ ನಡೆದಿದ್ದು, ಇದರಲ್ಲಿ ಕಾಂಗ್ರೆಸ್ ಬೆಂಬಲಿತ ಗಿರಿಜಾ ಶೆಟ್ಟಿ ಅವರಿಗೆ ಅದೃಷ್ಟ ಒಲಿದಿತ್ತು.
ಇದನ್ನೂ ಓದಿ : ಮೀಸಲು ಹೋರಾಟದಲ್ಲಿ ಪಾಲ್ಗೊಳ್ಳುವ ನಾಯಕರಿಗೆ ನಿರ್ಬಂಧವಿಲ್ಲ- ನಳಿನ್ ಕುಮಾರ್ ಕಟೀಲ್
ಉಪಾ‘ಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಬಿ.ಆರ್. ಸುದರ್ಶನ್ ಶೆಟ್ಟಿ ಅವರು 8 ಮತ ಪಡೆದರೆ, ಕಾಂಗ್ರೆಸ್ ಬೆಂಬಲಿತರಾಗಿ ಕಣಕ್ಕಿಳಿದಿದ್ದ ಮಂಜು ಕೊಠಾರಿ ಅವರು 6 ಮತ ಪಡೆದರು.
ಕುಂದಾಪುರ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕೇಶವ ಶೆಟ್ಟಿಗಾರ್ ಅವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ