ಕೈಗೂಡದ ಕೋಡಿ ಹೊಸಬೆಂಗ್ರೆ ನಿವಾಸಿಗಳ ಹಕ್ಕುಪತ್ರದ ಕನಸು

ಅರ್ಜಿ ಸಲ್ಲಿಸಿದವರು 489 ಮಂದಿ, ಹಕ್ಕುಪತ್ರ ಸಿಕ್ಕಿದ್ದು 18 ಮಂದಿಗೆ

Team Udayavani, Oct 23, 2020, 4:15 AM IST

ಕೈಗೂಡದ ಕೋಡಿ ಹೊಸಬೆಂಗ್ರೆ ನಿವಾಸಿಗಳ ಹಕ್ಕುಪತ್ರದ ಕನಸು

ಕೋಡಿ ಹೊಸಬೆಂಗ್ರೆ ಪ್ರದೇಶ

ಕೋಟ: ಕೋಡಿ ಗ್ರಾ.ಪಂ. ವ್ಯಾಪ್ತಿಯ ಹೊಸಬೆಂಗ್ರೆಯ ಕಡಲ ತಡಿಯಲ್ಲಿ ವಾಸಿಸುವ ಸುಮಾರು 471 ಕುಟುಂಬಗಳು ನಾಲ್ಕು ದಶಕಗಳಿಂದ ಹಕ್ಕುಪತ್ರಕ್ಕಾಗಿ ಹೋರಾಟ ನಡೆಸುತ್ತಿವೆ. ಆದರೆ ಸಿ.ಆರ್‌.ಝಡ್‌. ಕಠಿನ ನಿಯಮದಿಂದಾಗಿ ಇವರಿಗೆ ಹಕ್ಕುಪತ್ರ ಸಿಗುತ್ತಿಲ್ಲ ಮತ್ತು ಸರಕಾರದ ವಸತಿ ಯೋಜನೆ, ವಿದ್ಯುತ್‌, ಶೌಚಾಲಯ, ಸಾಲ ಸೌಲಭ್ಯಗಳು ಸಿಗುತ್ತಿಲ್ಲ.

ಈ ಕುಟುಂಬಗಳಿಗೆ ಸಿ.ಆರ್‌.ಝಡ್‌. ನಿರಾಪೇಕ್ಷಣಾ ಪತ್ರ ನೀಡಬೇಕಾದರೆ 1991ಕ್ಕಿಂತ ಮೊದಲಿನ ಕಂದಾಯ ಪಾವತಿ ರಶೀದಿ ಅಥವಾ ವಿದ್ಯುತ್‌ ಬಿಲ್‌ ಮುಂತಾದ ದಾಖಲೆಗಳನ್ನು ಹಾಜರುಪಡಿಸುವಂತೆ ಕೇಳುತ್ತಿದೆ. ಆದರೆ 1991ಕ್ಕೆ ಮೊದಲು ಇಲ್ಲಿನ ಹೆಚ್ಚಿನ ಮನೆಗಳಲ್ಲಿ ವಿದ್ಯುತ್‌ ಇರಲಿಲ್ಲ. ಕಂದಾಯ ಪಾವತಿಯ ರಶೀದಿ ಜೋಪಾನವಾಗಿಟ್ಟಿಲ್ಲ. ಹೀಗಾಗಿ ಇಪ್ಪತ್ತು ವರ್ಷ ಹಿಂದಿನ ದಾಖಲೆಗಳನ್ನು ಹಾಜರುಪಡಿಸಲಾಗಿತ್ತು. ಆದರೆ ಅವೆಲ್ಲವೂ ತಿರಸ್ಕೃತಗೊಂಡಿವೆ.

ನಿರಂತರ ಹೋರಾಟ
ಮೀನುಗಾರ ಮುಖಂಡರಾದ ಡಾ| ಜಿ.ಶಂಕರ್‌ ಅವರ ನೇತೃತ್ವದಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮುಂತಾದ ಜನಪ್ರತಿನಿಧಿಗಳ ಮೂಲಕ ಇವರ ಸಮಸ್ಯೆಗಳನ್ನು ಸರಕಾರಕ್ಕೆ ಮುಟ್ಟಿಸಲಾಗಿತ್ತು ಮತ್ತು 2012ರಲ್ಲಿ ಸರ್ವೇ ಕಾರ್ಯ ನಡೆಸಲಾಗಿತ್ತು. ಸಂತತಿ ನಕ್ಷೆ, ವಂಶವೃಕ್ಷ, ತೋಟಗಾರಿಕೆ ಇಲಾಖೆ ಜತೆಗೂಡಿ ತೆಂಗು ಮುಂತಾದ ಮರಗಳ ವರ್ಷವನ್ನು ಅವಲೋಕಿಸಿ, ವರದಿ ರಚಿಸಿ ಸರಕಾರಕ್ಕೆ ಕಳುಹಿಸಲಾಗಿತ್ತು. ಆದರೆ ಆರಂಭದಲ್ಲಿ ಒಂದು ಕುಟುಂಬವಿದ್ದ ಮನೆಗಳು ಇದೀಗ ನಾಲ್ಕೈದು ಕುಟುಂಬವಾಗಿ ಬದಲಾಗಿದ್ದರಿಂದ ಸಂತತಿ ನಕ್ಷೆ ತಯಾರಿಸಲು ಸಾಕಷ್ಟು ಸಮಸ್ಯೆಯಾಗಿತ್ತು. ಕೆಲವರು ವಾಸಿಸುತ್ತಿರುವ ಜಾಗಕ್ಕೆ ಸರ್ವೆ ನಂಬ್ರವೇ ಇರಲಿಲ್ಲ. ಹೀಗಾಗಿ ಪರಂಬೋಕು, ಸಮುದ್ರ ಎಂದು ನಕ್ಷೆಯಲ್ಲಿ ಉಲ್ಲೇಖಗೊಂಡ ಪ್ರದೇಶವನ್ನು ಆ ಶೀರ್ಷಿಕೆಯಿಂದ ವಿರಹಿತಗೊಳಿಸಿ ಹೊಸ ಸರ್ವೇ ನಂಬರ್‌ ನೀಡುವಂತೆ 2018ರಲ್ಲಿ ಆದೇಶವಾಯಿತು. ಆದರೆ ಅದು ಕೂಡ ನನೆಗುದಿಗೆ ಬಿತ್ತು. ಅನಂತರ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಸಮಸ್ಯೆಯನ್ನು ಅರ್ಜಿ ಸಮಿತಿಯಲ್ಲಿ ಚರ್ಚಿಸಿ, ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ಆದರೆ ದಾಖಲೆಗಳನ್ನು ಸಲ್ಲಿಸಿದ ಪೈಕಿ ಕೇವಲ 18 ಕುಟುಂಬಗಳಿಗೆ ಮಾತ್ರ ಹಕ್ಕುಪತ್ರ ಸಿಕ್ಕಿದ್ದು ಮಿಕ್ಕುಳಿದ 471 ಕುಟುಂಬಗಳು ವಂಚಿತವಾಗಿವೆ.

ಮೀನುಗಾರರೇ ಹೆಚ್ಚು
ಮೊಗವೀರ ಹಾಗೂ ಖಾರ್ವಿ ಸಮಾಜದವರು ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿ ದ್ದಾರೆ. ಇವರ ಮುಖ್ಯ ಕಸುಬು ಮೀನುಗಾರಿಕೆ. ಹೀಗಾಗಿ ಈ ಕಡಲ ಪ್ರದೇಶವನ್ನು ತೊರೆದು ಬೇರೆ ಕಡೆ ವಲಸೆ ಹೋಗಲು ಇವರಿಗೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಇದೇ ಭೂಮಿಯ ಹಕ್ಕನ್ನು ತಮಗೆ ನೀಡಬೇಕು ಎನ್ನುವುದು ಇವರ ಬೇಡಿಕೆಯಾಗಿದೆ.

ನಿಯಮ ಸಡಿಲಿಕೆ ಒತ್ತಾಯ
ಸಿ.ಆರ್‌.ಝಡ್‌. ಇಲಾಖೆ ಕೇಳುತ್ತಿರುವ 1991ಕ್ಕಿಂತ ಹಿಂದಿನ ದಾಖಲೆಗಳನ್ನು ನೀಡಲು ಅಸಾಧ್ಯವಾಗಿರುವುದು ಈ ಎಲ್ಲ ಸಮಸ್ಯೆಗೆ ಮೂಲ ಕಾರಣ. ಆದ್ದರಿಂದ ನಿಯಮಗಳನ್ನು ಸರಳೀಕರಿಸಿ ವಿಶೇಷ ಪ್ರಕರಣವಾಗಿ ಪರಿಗಣಿಸಿ ಹಕ್ಕುಪತ್ರ ನೀಡಬೇಕು ಎನ್ನುವುದು ಸ್ಥಳೀಯರ ಬೇಡಿಕೆ.

ತಹಶೀಲ್ದಾರ್‌ ನೇತೃತ್ವದಲ್ಲಿ ಸಮಿತಿ
ಅರ್ಹ ಫಲಾನುಭವಿಗಳನ್ನು ಗುರುತಿಸಿ ಹಕ್ಕುಪತ್ರಕ್ಕೆ ವ್ಯವಸ್ಥೆ ಮಾಡುವ ಸಲುವಾಗಿ ಜಿಲ್ಲಾಧಿಕಾರಿಗಳ ಸೂಚನೆಯಂತೆ ಬ್ರಹ್ಮಾವರ ತಹಶೀಲ್ದಾರ್‌ ಕಿರಣ್‌ ಗೌರಯ್ಯ ಅವರ ಅಧ್ಯಕ್ಷತೆಯಲ್ಲಿ ಸಿ.ಆರ್‌.ಝಡ್‌. ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿ, ಮೀನುಗಾರಿಕೆ ಇಲಾಖೆ ಅಧಿಕಾರಿಗಳು, ಸ್ಥಳೀಯ ಪಿ.ಡಿ.ಒ. ಸರ್ವೇ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗಿದ್ದು ಇದಕ್ಕೆ ದಾಖಲೆಗಳನ್ನು ಕಲೆಹಾಕಲಾಗುತ್ತಿದೆ.

ಶೀಘ್ರ ವರದಿ ನೀಡಲಿದ್ದೇವೆ
ಅಗತ್ಯ ದಾಖಲೆಗಳ ಕೊರತೆಯಿಂದ ಕೋಡಿ ಕನ್ಯಾಣ ಗ್ರಾಮಸ್ಥರಿಗೆ ಹಕ್ಕುಪತ್ರ ಪಡೆಯಲು ಹಿನ್ನಡೆಯಾಗಿದೆ. ಈ ಕುರಿತು ಪರಿಶೀಲಿಸಲು ಜಿಲ್ಲಾಧಿಕಾರಿಗಳು ನನ್ನ ನೇತೃತ್ವದ ಸಮಿತಿಯೊಂದನ್ನು ನೇಮಿಸಿದ್ದು ಒಂದೆರಡು ಸಭೆಗಳನ್ನು ನಡೆಸಲಾಗಿದೆ. ಶೀಘ್ರವಾಗಿ ಎಲ್ಲ ಇಲಾಖೆಯ ಅಧಿಕಾರಿಗಳನ್ನು ಜತೆ ಸೇರಿಸಿ ಸಭೆ ನಡೆಸಿ ವರದಿ ಸಿದ್ಧಪಡಿಸಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಿದ್ದೇವೆ.
-ಕಿರಣ್‌ ಗೌರಯ್ಯ, ತಹಶೀಲ್ದಾರರು, ಬ್ರಹ್ಮಾವರ

ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ
ನಮ್ಮ ಬಳಿ ಇರುವ ಎಲ್ಲ ದಾಖಲೆ ಹಾಜರುಪಡಿಸಿದ್ದು ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ . ಸಿ.ಆರ್‌.ಝಡ್‌. ಕೇಳುವ ದಾಖಲೆ ನಮ್ಮ ಬಳಿ ಇಲ್ಲದಿರುವುದರಿಂದ ಜಿಲ್ಲಾಧಿಕಾರಿಗಳು ನೇಮಕ ಮಾಡಿದ ತಹಶೀಲ್ದಾರರ ನೇತೃತ್ವದ ಸಮಿತಿಯಿಂದಲೂ ಹೆಚ್ಚಿನ ಪ್ರಯೋಜನವಾಗುವ ಲಕ್ಷಣ ಕಾಣುತ್ತಿಲ್ಲ. ಈ ಕುರಿತು ಚರ್ಚೆ ನಡೆಸಲು ಗ್ರಾಮಸ್ಥರ ಸಭೆ ಕರೆಯಲಾಗಿದ್ದು ಈ ಬಾರಿಯ ಗ್ರಾ.ಪಂ. ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದೇವೆ.
-ಲಕ್ಷ್ಮಣ ಸುವರ್ಣ, ಸ್ಥಳೀಯರು

ರಾಜೇಶ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.