3 ವರ್ಷ ಹಿಂದೆ 18; ಈಗ ನೂರು ವಿದ್ಯಾರ್ಥಿಗಳು
Team Udayavani, Sep 16, 2021, 3:10 AM IST
ಕುಂದಾಪುರ: ಶತಮಾನೋತ್ಸವ ಹೊಸ್ತಿಲ ಲ್ಲಿರುವ ಕೊಡ್ಲಾಡಿಯ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ 3 ವರ್ಷದ ಹಿಂದೆ 18 ಮಕ್ಕಳಿದ್ದ ಶಾಲೆಯಲ್ಲಿ ಈಗ ಬರೋಬ್ಬರಿ 100 ಮಕ್ಕಳಿದ್ದಾರೆ. ಕಿರಿಯ ಪ್ರಾಥಮಿಕದಿಂದ ಹಿರಿಯ ಪ್ರಾಥಮಿಕ ಶಾಲೆಯಾಗಿ ಮೇಲ್ದರ್ಜೆಗೇರಿದ್ದು, ಕಳೆದೆರಡು ವರ್ಷಗಳಿಂದ ಮಕ್ಕಳ ದಾಖಲಾತಿ ಪ್ರಮಾಣವು ಗಣನೀಯವಾಗಿ ಏರಿಕೆಯಾಗಿದೆ. ಇದರೊಂದಿಗೆ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡಲು ಸರಕಾರ ಮುಂದಾಗಬೇಕಿದೆ.
1926ರಲ್ಲಿ ಪ್ರಾರಂಭವಾದ ಕೊಡ್ಲಾಡಿಯ ಕಿರಿಯ ಪ್ರಾಥಮಿಕ (ಈಗ ಹಿ.ಪ್ರಾ. ಶಾಲೆ) ಶಾಲೆಯು ಇನ್ನು 5 ವರ್ಷ ಪೂರೈಸಿದರೆ ಶತಮಾನೋತ್ಸವ ಆಚರಿಸಲಿದೆ. ಕಳೆದ ವರ್ಷದ ಜೂನ್ನಲ್ಲಿ ಈ ಶಾಲೆಯು ಹಿರಿಯ ಪ್ರಾಥಮಿಕ ಶಾಲೆಯಾಗಿ ಮುಂಭಡ್ತಿ ಪಡೆಯಿತು.
ಕೊಠಡಿ ತುರ್ತು ಅಗತ್ಯ:
ಕಳೆದ ವರ್ಷದಿಂದ ಕಿ.ಪ್ರಾ.ದಿಂದ ಹಿರಿಯ ಪ್ರಾಥಮಿಕ ಶಾಲೆಯಾಗಿ ಮೇಲ್ದರ್ಜೆಗೇರಿದೆ. ಆದರೆ 7 ತರಗತಿಗಳಿರುವ ಈ ಶಾಲೆಯಲ್ಲಿ ಇರುವುದು ಒಂದೇ ಕಟ್ಟಡ. ಅದರಲ್ಲಿ 3 ತರಗತಿಗಳಿವೆ. ಇನ್ನುಳಿದ ತರಗತಿಗಳಿಗಾಗಿ ಹೊಸ ಕಟ್ಟಡದ ಅಗತ್ಯವಿದೆ. ಎಸ್ಡಿಎಂಸಿ, ಊರವರು ಈ ಬಗ್ಗೆ ಇಲಾಖಾ ಅಧಿಕಾರಿಗಳ ಮೂಲ ಕ ಮನವಿ ಸಲ್ಲಿಸಿದ್ದು, ಇನ್ನಷ್ಟು ಅನುದಾನ ಮಂಜೂರಾಗಬೇಕಿದೆ. ಆದಷ್ಟು ಬೇಗ ಕಟ್ಟಡ ಮಂಜೂರಾದರೆ ಗ್ರಾಮೀಣ ಭಾಗದ ಸರಕಾರಿ ಶಾಲೆಗೆ ಮತ್ತಷ್ಟು ಚೈತನ್ಯ ಸಿಗಲಿದೆ. ಇದರೊಂದಿಗೆ ಈಗಿರುವ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶೌಚಾಲಯದ ಅಗತ್ಯವೂ ಇದೆ. ಇನ್ನು ಮಕ್ಕಳ ಸಂಖ್ಯೆ ಹೆಚ್ಚಿರುವುದರಿಂದ ಬೆಂಚ್, ಡೆಸ್ಕ್ನಂತಹ ಪೀಠೊಪಕರಣಗಳು ಸಹ ಬೇಕಾಗಿವೆ.
ದಾನಿಗಳ ನೆರವು:
ಒಂದು ಹಂತದಲ್ಲಿ ಮಕ್ಕಳ ಸಂಖ್ಯೆ ಕುಸಿತಗೊಂಡು, ಮುಚ್ಚುವ ಹಂತಕ್ಕೆ ತಲುಪಿದ್ದ ಶಾಲೆಗೆ ಮತ್ತೆ ಪುನಶ್ಚೇತನ ನೀಡುವಲ್ಲಿ ಸ್ಥಳೀಯರಾದ, ವಕ್ವಾಡಿ ಗುರುಕುಲ ಶಿಕ್ಷಣ ಸಂಸ್ಥೆಗಳ ಜಂಟಿ ಕಾರ್ಯನಿರ್ವಾಹಕ ಬಾಂಡ್ಯ ಸುಭಾಶ್ಚಂದ್ರ ಶೆಟ್ಟರ ಪಾತ್ರ ಮಹತ್ತರವಾಗಿದೆ. ಶಾಲೆಗೆ ಒಂದಷ್ಟು ಅಗತ್ಯ ಸೌಕರ್ಯಗಳ ಜತೆಗೆ ಶಿಕ್ಷಕರ ಕೊರತೆಯನ್ನು ನೀಗಿಸಿದ್ದಾರೆ. ಇವರಿಗೆ ಎಸ್ಡಿಎಂಸಿ, ಊರವರು ಸಹಕಾರ ನೀಡಿದ್ದಾರೆ.
ಇಬ್ಬರು ಶಿಕ್ಷಕರು ಅಗತ್ಯ:
ಈ ಶಾಲೆಯಲ್ಲಿ ಕಳೆದ ವರ್ಷದವರೆಗೆ ಇಬ್ಬರು ಶಿಕ್ಷಕರಿದ್ದು, ಅದರಲ್ಲಿ ಒಬ್ಬರು ನಿವೃತ್ತರಾಗಿದ್ದಾರೆ. ಈಗ ಇಲ್ಲಿ ಖಾಯಂ ಶಿಕ್ಷಕರಾಗಿರುವುದು ಒಬ್ಬರು ಮಾತ್ರ. ಸುಭಾಶ್ಚಂದ್ರ ಶೆಟ್ಟರು ಗೌರವ ಶಿಕ್ಷಕರನ್ನು ನೀಡಿದ್ದಾರೆ. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಇನ್ನು ಇಬ್ಬರು ಶಿಕ್ಷಕರ ಬೇಡಿಕೆಯಿದೆ.
ವರ್ಷದಿಂದ ವರ್ಷಕ್ಕೆ ಏರಿಕೆ:
ಸರಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಎನ್ನುವ ಮಾತಿಗೆ ತದ್ವಿರುದ್ಧವಾಗಿ ಈ ಶಾಲೆಯಲ್ಲಿ ಕಳೆದ 3 ವರ್ಷಗಳಿಂದ ಮಕ್ಕಳ ಸಂಖ್ಯೆ ಏರುತ್ತಲೇ ಇದೆ. 2018-19ನೇ ಶೈಕ್ಷಣಿಕ ಸಾಲಿನಲ್ಲಿ 18ರಲ್ಲಿದ್ದ ಮಕ್ಕಳ ಸಂಖ್ಯೆಯು, 2019-20ರಲ್ಲಿ 29ಕ್ಕೇರಿತು. 2020-21ನೇ ಸಾಲಿನಲ್ಲಿ 70ಕ್ಕೇರಿದರೆ, 2021-22ನೇ ಸಾಲಿನಲ್ಲಿ ಮೂರಂಕಿ ಅಂದರೆ 100ಕ್ಕೇರಿದೆ. ಅಂದರೆ ಕಳೆದ 3 ವರ್ಷಗಳಲ್ಲಿಯೇ ಈ ಶಾಲೆಯ ಮಕ್ಕಳ ಸಂಖ್ಯೆಯೂ 82ರಷ್ಟು ಹೆಚ್ಚಾಗಿದೆ.
ಮಂಜೂರಾಗುವ ನಿರೀಕ್ಷೆ:
ಶಾಲೆಯು ಕಳೆದ ವರ್ಷ ಹಿ.ಪ್ರಾ. ಶಾಲೆಯಾಗಿ ಮೇಲ್ದರ್ಜೆಗೇರಿದೆ. ಅದರಂತೆ ಹೆಚ್ಚುವರಿ ಕೊಠಡಿ ಬೇಡಿಕೆ ಬಗ್ಗೆ ಮನವಿ ಸಲ್ಲಿಸಿದ್ದೆವು. ಶೀಘ್ರ ಅನುದಾನ ಮಂಜೂರಾಗುವ ನಿರೀಕ್ಷೆಯಿದೆ. ಇನ್ನು ಶಿಕ್ಷಕರ ಬೇಡಿಕೆ, ಶೌಚಾಲಯ, ಪೀಠೊಪಕರಣಗಳ ಅಗತ್ಯದ ಬಗ್ಗೆಯೂ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಲಾಗಿದೆ. ಶಾಲೆಗೆ ಊರ ದಾನಿಗಳು ನೆರವು ನೀಡಿದ್ದಾರೆ. – ಜನಾರ್ದನ ಪಟಗಾರ್, ಮುಖ್ಯ ಶಿಕ್ಷಕರು ಕೊಡ್ಲಾಡಿ ಸರಕಾರಿ ಹಿ.ಪ್ರಾ. ಶಾಲೆ
-ಪ್ರಶಾಂತ್ ಪಾದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ