ಕೊಲ್ಲೂರು: ತ್ಯಾಜ್ಯದಿಂದ ಸಾಂಕ್ರಾಮಿಕ ರೋಗ ಭೀತಿ
ನಿರೀಕ್ಷೆಗೂ ಮೀರಿದ ಭಕ್ತರು ದಾಖಲೆಯ ಸಂಖ್ಯೆಯಲ್ಲಿ ಕ್ಷೇತ್ರ ದರ್ಶನಕ್ಕೆ ಆಗಮಿಸುತ್ತಿದ್ದಾರೆ.
Team Udayavani, Jan 2, 2023, 1:47 PM IST
ಕೊಲ್ಲೂರು: ಶಾಲಾ ಮಕ್ಕಳ ಶೆ„ಕ್ಷಣಿಕ ಪ್ರವಾಸದ ನಡುವೆ ಹೆಚ್ಚುತ್ತಿರುವ ಅಯ್ಯಪ್ಪ ಭಕ್ತರ ತೀರ್ಥ ಕ್ಷೇತ್ರ ದರ್ಶನವು ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಪರಿಸರದ ಸ್ವಚ್ಛತೆ ಮೇಲೆ ಪರಿಣಾಮ ಬೀರಿದ್ದು, ವಿವಿಧೆಡೆಯಲ್ಲಿ ಎಸೆಯಲಾಗಿರುವ ತ್ಯಾಜ್ಯ ಸಹಿತ ಪರಿಸರ ಮಾಲಿನ್ಯದಿಂದ ಸಾಂಕ್ರಾಮಿಕ ರೋಗ ಭೀತಿ ಎದುರಾಗಿದೆ.
ಸ್ವಚ್ಛತೆಗೆ ಆದ್ಯತೆ ಅಗತ್ಯ
ಪ್ರತಿದಿನ ಕನಿಷ್ಠ 200ಕ್ಕೂ ಮಿಕ್ಕಿ ಶಾಲಾ ಮಕ್ಕಳ ಪ್ರವಾಸದ ಬಸ್ ಗಳು ಕೊಲ್ಲೂರಿಗೆ ಆಗಮಿಸುತ್ತಿವೆ. ಅದರೊಡನೆ ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರು ಕೂಡ ರಾಜ್ಯದ ವಿವಿಧ ಜಿಲ್ಲೆ, ರಾಜ್ಯಗಳಿಂದ ಆಗಮಿಸುತ್ತಿದ್ದಾರೆ. ಬಹುತೇಕ ಶಾಲಾ ಮಕ್ಕಳು ರಾತ್ರಿ ಉಳಿದುಕೊಳ್ಳಲು ಸರಿಯಾದ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ರಸ್ತೆಯ ಇಕ್ಕೆಲಗಳಲ್ಲಿ ಪ್ರವಾಸದ ದಣಿವಾರಿಸಲು ಇದನ್ನು ಬಳಸುತ್ತಿದ್ದಾರೆ. ಅನೇಕ ವಿದ್ಯಾರ್ಥಿಗಳು ಹಾಲ್ಕಲ್ ಪರಿಸರದ ರಸ್ತೆ ಬದಿಯಲ್ಲಿ ವಿಶ್ರಾಂತಿಗಾಗಿ ತಂಗುತ್ತಿರುವುದು ಕಂಡುಬಂದಿದ್ದು ರಾತ್ರಿ ಕೂಡ ಅದೇ ಪ್ರದೇಶವನ್ನು ಆಶ್ರಯಿಸುತ್ತಿದ್ದಾರೆ.
ವಿವಿಧ ಕಾಡು ಪ್ರಾಣಿಗಳು ಸಂಚರಿಸುತ್ತಿರುವ ಈ ಭಾಗದಲ್ಲಿ ಹೆದ್ದಾರಿಯನ್ನೇ ವಿಶ್ರಾಂತಿಗೋಸ್ಕರ ಬಳಸುತ್ತಿರುವ ವಿದ್ಯಾರ್ಥಿಗಳಿಗೆ ರಾತ್ರಿ ಪ್ರಾಣಿಗಳ ದಾಳಿಯ ಭೀತಿ ಇದೆ. ದೇಗುಲದ ವಿವಿಧೆಡೆ ಖಾಲಿ ಜಾಗದಲ್ಲಿ ಪ್ರವಾಸಿಗರು ಬಹಿರ್ದೆಸೆ ಮಾಡುತ್ತಿರುವುದರಿಂದ ಈ ಪರಿಸರದಲ್ಲಿ ಮಾಲಿನ್ಯ ಹೆಚ್ಚುತ್ತಿದೆ.
ಶೀಘ್ರ ಲೋಪ ಸರಿಪಡಿಸಲಾಗುವುದು
ನಿರೀಕ್ಷೆಗೂ ಮೀರಿದ ಭಕ್ತರು ದಾಖಲೆಯ ಸಂಖ್ಯೆಯಲ್ಲಿ ಕ್ಷೇತ್ರ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಅದರಲ್ಲೂ ಈ ಬಾರಿ ಶಾಲಾ ಮಕ್ಕಳ ಶೆ„ಕ್ಷಣಿಕ ಪ್ರವಾಸದ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದ ಸೌಕರ್ಯ ಒದಗಿಸುವಲ್ಲಿ ಲೋಪದೋಷ ಎದುರಾಗಿರಬಹುದು. ಎಲ್ಲವನ್ನೂ ಸರಿಪಡಿಸಲಾಗುವುದು.
ಕೆರಾಡಿ ಚಂದ್ರಶೇಖರ
ಶೆಟ್ಟಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಕೊಲ್ಲೂರು ದೇಗುಲ
ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಿ ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸದಲ್ಲಿ ಮಕ್ಕಳ ಸುರಕ್ಷತೆಗಾಗಿ ಹೆಚ್ಚಿನ ನಿಗಾ ವಹಿಸಬೇಕಾಗಿದೆ. ಅಂತೆಯೇ ಕೊಲ್ಲೂರಿನ ಪರಿಸರ ಸ್ವಚ್ಛತೆಗೆ ಇಲಾಖೆ ಹಾಗೂ ದೇಗುಲ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ.
ಜಗದೀಶ ಕೊಲ್ಲೂರು,
ವಿಹಿಂಪ ಬೈಂದೂರು ತಾಲೂಕು ಅಧ್ಯಕ್ಷರು
* ಡಾ| ಸುಧಾಕರ ನಂಬಿಯಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ