ನವರಾತ್ರಿ ಉತ್ಸವಕ್ಕೆ ಕೇತ್ರ ಸಜ್ಜು; ರಸ್ತೆಗಳೂ ದುರಸ್ತಿಯಾಗಲಿ

ಕೊಲ್ಲೂರು ಮುಖ್ಯ ರಸ್ತೆ ಹೊಂಡಮಯ: ಸುಗಮ ವಾಹನ ಸಂಚಾರಕ್ಕೆ ತೊಡಕು

Team Udayavani, Sep 25, 2022, 10:53 AM IST

5

ಕೊಲ್ಲೂರು: ರಾಷ್ಟ್ರೀಯ ಹೆದ್ದಾರಿಯ ಸುಪರ್ದಿಯಲ್ಲಿರುವ ಕೊಲ್ಲೂರು ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟು 2 ತಿಂಗಳು ಕಳೆದರೂ ರಸ್ತೆ ದುರಸ್ತಿ ಕಾರ್ಯ ಇನ್ನೂ ನಡೆಯದಿರುವುದು ನವರಾತ್ರಿ ಉತ್ಸವಕ್ಕೆ ಕ್ಷೇತ್ರಕ್ಕೆ ಆಗಮಿಸಲಿರುವ ಭಕ್ತರಿಗೆ ಸುಗಮ ವಾಹನ ಸಂಚಾರಕ್ಕೆ ತೊಡಕಾಗಲಿದೆ.

ಹೊಂಡಮಯವಾದ ಕೊಲ್ಲೂರು ಮುಖ್ಯ ರಸ್ತೆ:- ಮಾಸ್ತಿಕಟ್ಟೆಯಿಂದ ಕೊಲ್ಲೂರಿನ ಗಡಿಭಾಗದ ದಳಿವರೆಗಿನ ರಸ್ತೆಯು ಬಹುತೇಕ ಕಡೆ ಹೊಂಡಗಳಿಂದ ಕೂಡಿದ್ದು, ತೇಪೆ ಕಾರ್ಯ ನಡೆದಿದ್ದರೂ ಅದೂ ಕೂಡ ಕಿತ್ತು ಹೋಗಿದ್ದು, ರಸ್ತೆ ಸ್ಥಿತಿ ಅಧೋಗತಿಯಾಗಿದೆ. ನಿತ್ಯ ಪ್ರಯಾಣಿಕರು ಹರಸಾಹಸ ಪಟ್ಟು ಸಾಗಬೇಕಾಗಿದೆ.

ಯಾತ್ರಾರ್ಥಿಗಳಿಗೆ ಸಮಸ್ಯೆ

ಸೆ.26 ರಿಂದ ನವರಾತ್ರಿ ಉತ್ಸವ ಆರಂಭಗೊಳ್ಳಲಿದ್ದು, ಈಗಾಗಲೇ ವಿವಿಧ ರಾಜ್ಯಗಳಿಂದ ಆಗಮಿಸಿದ ಭಕ್ತರು ದೇಗುಲದ ಪರಿಸರದ ವಸತಿಗೃಹಗಳಲ್ಲಿ ವಾಸ್ತವ್ಯ ಹೂಡಿದ್ದಾರೆ. ರಸ್ತೆಯ ದುಃಸ್ಥಿತಿಯಿಂದಾಗಿ ಪಾದಚಾರಿಗಳು ಸಹಿತ ದ್ವಿಚಕ್ರ ವಾಹನ ಸಂಚಾರಕ್ಕೂ ಕಷ್ಟಕರವಾಗಿ ಪರಿಣಮಿಸಿದೆ.

ಕೊಲ್ಲೂರು ಗ್ರಾ.ಪಂ., ಲೋಕೋಪಯೋಗಿ ಇಲಾಖೆ ಅಧಿಧೀನದಿಂದ ಬೇರ್ಪಟ್ಟಿರುವ ಕೊಲ್ಲೂರು ಪೇಟೆ ಮುಖ್ಯ ರಸ್ತೆಯ ನಿರ್ವಹಣೆಯ ಜವಾಬ್ದಾರಿ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಸೇರಿದೆ.

ಈ ಬಗ್ಗೆ ಸಂಸದರು ಹಾಗೂ ಜನಪ್ರತಿನಿಧಿಗಳ ಗಮನ ಸೆಳೆಯಲಾಗಿತ್ತು. ಸಂಸದರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರೂ ಕೂಡ ತಾತ್ಕಾಲಿಕ ನೆಲೆಯಲ್ಲಿ ಹೊಂಡ ಮುಚ್ಚುವ ಕಾರ್ಯಕ್ಕೆ ಮುಂದಾಗದ ಇಲಾಖೆಯ ವರ್ತನೆಯಿಂದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಲಾಗುತ್ತಿರುವ ಯುಜಿಡಿ ನೀರು

ಯುಜಿಡಿಯಿಂದ ಕಾರ್ಯಾರಂಭಗೊಂಡ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷದಿಂದಾಗಿ ಕೆಲವೆಡೆ ಚೇಂಬರ್‌ ನಿಂದ ನೀರು ಹೊರಹರಿಯುತ್ತಿದ್ದು, ಆ ಭಾಗದಲ್ಲಿ ನಿಂತ ನೀರಿನಿಂದಾಗಿ ಸಾಂಕ್ರಾಮಿಕ ರೋಗ ಭೀತಿ ಎದುರಾಗುತ್ತಿದೆ. ಗ್ರಾ.ಪಂ. ಹಾಗೂ ಕೊಲ್ಲೂರು ದೇಗುಲ ಇಲಾಖೆಯ ಗಮನಕ್ಕೆ ತಂದಿದ್ದರೂ ಈವರೆಗೆ ಎದುರಾದ ಸಮಸ್ಯೆ ನಿವಾರಣೆಯಾಗಿಲ್ಲವೆನ್ನುವುದು ಗ್ರಾಮಸ್ಥರ ಅಭಿಮತ.

ತುರ್ತು ಕ್ರಮ ಅಗತ್ಯ: ಚಿತ್ತೂರಿನಿಂದ ಕೊಲ್ಲೂರುವರೆಗಿನ ಮುಖ್ಯ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದೆ.ಕೊಲ್ಲೂರು ಪೇಟೆಯ ರಸ್ತೆಯ ಸ್ಥಿತಿಗತಿ ಹೇಳತೀರದು.ದೇಗುಲದ ಮುಂಭಾಗದ ಮುಖ್ಯ ರಸ್ತೆಯು ಹೊಂಡಮಯ ವಾಗಿದ್ದು, ಯಾತ್ರಾರ್ಥಿಗಳ ಗೋಳು ಹೇಳತೀರದು. ನವರಾತ್ರಿಯ ಈ ಸಂದರ್ಭದಲ್ಲಿ ಇಲಾಖೆ ತತ್‌ಕ್ಷಣ ಕ್ರಮಕೈಗೊಳ್ಳಬೇಕು.-ಕೆರಾಡಿ ಚಂದ್ರಶೇಖರ ಶೆಟ್ಟಿ, ಅಧ್ಯಕ್ಷರು, ವ್ಯವಸ್ಥಾಪನ ಸಮಿತಿ, ಶ್ರೀ ಮೂಕಾಂಬಿಕಾ ದೇಗುಲ ಕೊಲ್ಲೂರು

ಸಂಚಾರಕ್ಕೆ ಅಡ್ಡಿ: ರಾಷ್ಟ್ರೀಯ ಹೆದ್ದಾರಿಯ ಮೇಲುಸ್ತುವಾರಿ ಯಲ್ಲಿರುವ ಕೊಲ್ಲೂರು ಮುಖ್ಯ ರಸ್ತೆಯ ಸ್ಥಿತಿಗತಿ ಬಗ್ಗೆ ಇಲಾಖೆಯ ಗಮನ ಸೆಳೆಯಲಾಗಿದೆ. ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಆದರೆ ಈವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ವಾಹನ ಸಂಚಾರಕ್ಕೆ ತೊಡಕಾಗಿದೆ.- ಶಿವರಾಮಕೃಷ್ಣ ಭಟ್‌, ಅಧ್ಯಕ್ಷರು, ಗ್ರಾ.ಪಂ. ಕೊಲ್ಲೂರು  

-ಡಾ| ಸುಧಾಕರ ನಂಬಿಯಾರ್‌

 

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.