ಪೂರ್ಣಕಾಲಿಕ ವೈದ್ಯರಿಲ್ಲದ ಕೊಲ್ಲೂರು ಪಶು ಚಿಕಿತ್ಸಾಲಯ

ವಂಡ್ಸೆ, ಕುಂದಾಪುರ ಮುಂತಾದೆಡೆಗೆ ಪಶುಗಳನ್ನು ಒಯ್ಯಬೇಕಾಗಿದೆ.

Team Udayavani, Jan 12, 2023, 3:31 PM IST

ಪೂರ್ಣಕಾಲಿಕ ವೈದ್ಯರಿಲ್ಲದ ಕೊಲ್ಲೂರು ಪಶು ಚಿಕಿತ್ಸಾಲಯ

ಕೊಲ್ಲೂರು : ಇಲ್ಲಿನ ಪಶು ಚಿಕಿತ್ಸಾಲಯ ಕಳೆದ 2 ತಿಂಗಳಿನಿಂದ ಮುಚ್ಚಿಕೊಂಡಿದ್ದು, ಹಸುಗಳ ಚಿಕಿತ್ಸೆಗೆಂದು ಬಂದ ಮಂದಿ ವಾಪಾಸು ಹೋಗಬೇಕಾದ ಪರಿಸ್ಥಿತಿ ಕಂಡುಬಂದಿದೆ. ಆಸುಪಾಸಿನಲ್ಲಿ 1,000ಕ್ಕೂ ಮಿಕ್ಕಿ ವಿವಿಧ ತಳಿಗಳ ಗೋವುಗಳಿದ್ದು, ಅವುಗಳ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಇಲ್ಲದೇ ಗ್ರಾಮ ನಿವಾಸಿಗಳು ಆತಂಕಗೊಂಡಿರುತ್ತಾರೆ, ಕೊಲ್ಲೂರು ದೇಗುಲದ ಗೋಶಾಲೆಯಲ್ಲಿರುವ 200ಕ್ಕೂ ಮಿಕ್ಕಿ ಗೋವುಗಳಿಗೆ ಪಶು ಚಿಕಿತ್ಸಾಲಯವನ್ನು ಅವಲಂಬಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಹಸುಗಳಲ್ಲಿ ಕಂಡುಬರುತ್ತಿರುವ ಚರ್ಮರೋಗ ಸಹಿತ ವಿವಿಧ ಕಾಯಿಲೆಗಳಿಗೆ ಔಷಧೋಪಚಾರ ಮಾಡುವಲ್ಲಿ ಎದುರಾಗಿರುವ ವೈದ್ಯರ ಕೊರತೆ ಗ್ರಾಮಸ್ಥರನ್ನು ಆತಂಕಕ್ಕೆ ಎಡೆಮಾಡಿದೆ.

ಪೂರ್ಣಕಾಲಿಕ ವೈದ್ಯರ ಕೊರತೆ ಇಲ್ಲಿನ ಪಶು ಚಿಕಿತ್ಸಾಲಯದಲ್ಲಿ ಪೂರ್ಣಕಾಲಿಕ ವೈದ್ಯರು ಹಾಗೂ ಕಾಂಪೌಂಡ್‌ರ ಕೊರತೆ ಇದ್ದು, ಕಳೆದ 2 ತಿಂಗಳಿನಿಂದ ಚಿಕಿತ್ಸಾಲಯ ತೆರೆಯದಿರುವುದು ನಾನಾ ಪ್ರಶ್ನೆಗಳಿಗೆ ಎಡೆಮಾಡಿದೆ. ಅನೇಕರು ಗೋವುಗಳ ಚಿಕಿತ್ಸೆಗಾಗಿ ಬಹುದೂರದಿಂದ ಇಲ್ಲಿಗೆ ಆಗಮಿಸಿದರೂ ವೈದ್ಯರಿಲ್ಲದೇ ಚಿಕಿತ್ಸೆ ಪಡೆಯಲಾಗದೇ ವಾಪಾ ಸಾಗಬೇಕಾದ ಪರಿಸ್ಥಿತಿ ಕಂಡುಬಂದಿದೆ.

ಗೋವುಗಳಲ್ಲಿ ಕಂಡುಬರುತ್ತಿರುವ ಮರಣಾಂತಿಕ ಕಾಯಿಲೆಯಾಗಿರುವ ಚರ್ಮಗಂಟು ರೋಗ ನಿವಾರಣೆಗೆ ಚಿಕಿತ್ಸೆ ನೀಡಲು ವೈದ್ಯರಿಲ್ಲದೇ ಅನೇಕ ಮಂದಿ ದೂರದ ಆಲೂರು, ವಂಡ್ಸೆ, ಕುಂದಾಪುರ ಮುಂತಾದೆಡೆಗೆ ಪಶುಗಳನ್ನು ಒಯ್ಯಬೇಕಾಗಿದೆ. ಬೈಂದೂರು, ಕಿರಿಮಂಜೇಶ್ವರ, ಕೊಲ್ಲೂರು, ಜಡ್ಕಲ್‌, ಹಳ್ಳಿಹೊಳೆಯ ಪಶು ಚಿಕಿತ್ಸಾಲಯದಲ್ಲಿ 5 ಮಂದಿ ವೈದ್ಯರಿರಬೇಕಿತ್ತು. ಆದರೆ ಕೇವಲ ಇಬ್ಬರು ವೈದ್ಯರನ್ನು ನೇಮಿಸಲಾಗಿದೆ.

ನಾಡಾ ವೈದ್ಯಾಧಿಕಾರಿ ಕೊಲ್ಲೂರು ಹಾಗೂ ಹಳ್ಳಿಹೊಳೆ ಆಸ್ಪತ್ರೆಗಳ ಜವಾಬ್ದಾರಿ ಹೊಂದಿರುತ್ತಾರೆ. ಕುಂದಾಪುರ ತಾಲೂಕಿನಲ್ಲಿ 92 ಹುದ್ದೆಗಳಿದ್ದು, 25 ವೈದ್ಯರು
ಹಾಗೂ ಸಿಬಂದಿ ಹುದ್ದೆ ಭರ್ತಿಯಾಗಿದೆ. 3 ಆಸ್ಪತ್ರೆ 6 ಪಶು ಚಿಕಿತ್ಸಾಲಯ, 9 ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಗಳಿವೆ. 11 ಪಶು ವೈದ್ಯಾಧಿಕಾರಿಗಳಿರಬೇಕಾದಲ್ಲಿ 3 ಜನ ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅದರಲ್ಲೂ ಗ್ರಾ.ಪಂ ನೋಡಲ್‌ ಅಧಿಕಾರಿಗಳಾಗಿ ಜಮಾಬಂದಿ ಕಾರ್ಯಕ್ರಮಗಳು ಇನ್ನಿತರ ತಾಲೂಕಿನ ಆಡಳಿತ ಉಸ್ತುವಾರಿ ಅವರೇ ನೋಡಬೇಕಾಗಿದೆ. ಬೈಂದೂರು ಹಾಗೂ ಕುಂದಾಪುರ ತಾಲೂಕಿನ ವಿವಿಧ ಪಶು ಚಿಕಿತ್ಸಾಲಯದಲ್ಲಿ ವೈದ್ಯರು ಹಾಗೂ ಸಿಬಂದಿ ಕೊರತೆ ಇದೆ. ಇದಕ್ಕೊಂದು ಶಾಶ್ವತ ಪರಿಹಾರ ಒದಗಿಸುವಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕಾಗಿದೆ.

ಸಕಾಲದಲ್ಲಿ ಚಿಕಿತ್ಸೆ ಸಿಗುತ್ತಿಲ್ಲ
ಪಶು ವೈದಾಧಿಕಾರಿಗಳ ಕೊರತೆಯಿಂದ ಕೊಲ್ಲೂರು ಪರಿಸರ ನಿವಾಸಿಗಳ ಗೋಸಂರಕ್ಷಣೆ ಕಷ್ಟಕರವಾಗಿದೆ. ಸುಸೂತ್ರ ಚಿಕಿತ್ಸೆ ಲಭಿಸದೆ ಕೆಲವೊಂದು ಗೋವುಗಳು ಸಾವನ್ನಪ್ಪಿದ ಘಟನೆ ನಡೆದಿದೆ.
*ಗ್ರಾಮಸ್ಥರು, ಕೊಲ್ಲೂರು

ಸರಕಾರಕ್ಕೆ ಮನವಿ
ನೇಮಕಾತಿಗೊಂಡಿರುವ ವೈದ್ಯಾಧಿಕಾರಿಗಳು ವಿವಿಧ ಪಶು ಚಿಕಿತ್ಸಾಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇರುವ ವ್ಯವಸ್ಥೆಯಲ್ಲಿ ಹೊಂದಾಣಿಕೆ ಮಾಡಿ ಕೆಲಸ ಕಾರ್ಯ ಮಾಡಬೇಕಾಗಿದೆ. ಈ ಬಗ್ಗೆ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ.
*ಡಾ| ಬಾಬಣ್ಣ ಪೂಜಾರಿ,
ಸಹಾಯಕ ನಿರ್ದೇಶಕರು, ಪಶು ಸಂಗೋಪನ ಇಲಾಖೆ ಕುಂದಾಪುರ

 ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.