ಕೊಲ್ಲೂರು: ವಾಗ್ದೇವಿ ಸನ್ನಿಧಿಯಲ್ಲಿ ನೀರಿನ‌ ಬರ; ಬತ್ತಿಹೋದ ಸೌಪರ್ಣಿಕಾ ನದಿ


Team Udayavani, May 27, 2023, 4:13 PM IST

ಕೊಲ್ಲೂರು: ವಾಗ್ದೇವಿ ಸನ್ನಿಧಿಯಲ್ಲಿ ನೀರಿನ‌ ಬರ; ಬತ್ತಿಹೋದ ಸೌಪರ್ಣಿಕಾ ನದಿ

ಕೊಲ್ಲೂರು: ಸೌಪರ್ಣಿಕಾ ನದಿ ನೀರು ಬರಿದಾಗು ತ್ತಿದ್ದು, ಮುಂದಿನ ಎರಡು ದಿನದೊಳಗೆ ಕೊಲ್ಲೂರಿನ ಪರಿಸರದಲ್ಲಿ ಮಳೆ ಆರಂಭಗೊಳ್ಳದಿದ್ದಲ್ಲಿ ಈ ಭಾಗದ ನಿವಾಸಿಗಳು ಕುಡಿಯುವ ನೀರಿಗಾಗಿ ವಲಸೆ ಹೋಗ ಬೇಕಾದ ಸಂದಿಗ್ಧ ಪರಿಸ್ಥಿತಿ ಎದುರಾಗುವ ಭೀತಿ ಇದೆ.

ಕೊಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಲಾದ ವೆಂಟೆಡ್‌ ಡ್ಯಾಮ್‌ಗೆ ನೀರಿನ ಅಭಾವ ಕಾಡುತ್ತಿದ್ದು, ಕೊಡಚಾದ್ರಿ ಬೆಟ್ಟದಿಂದ ಹರಿದುಬರುವ ನೀರು ಕೂಡ ಮಳೆಯಿಲ್ಲದೇ ಬರಿದಾಗಿದ್ದು, ವೆಂಟೆಡ್‌ ಡ್ಯಾಮ್‌ನಲ್ಲಿ ನೀರಿನ ಕೊರತೆ ಎದುರಾಗಿದೆ.

ನಿರ್ವಹಣೆಯ ಕೊರತೆ
ಒಳಚರಂಡಿ ಹಾಗೂ ಕುಡಿಯುವ ನೀರಿನ ಮಂಡಳಿಯ ನಿರ್ವಹಣೆಯ ಕೊರತೆ ವೆಂಟೆಡ್‌ ಡ್ಯಾಮ್‌ ನಲ್ಲಿ ನೀರು ಇಂಗಲು ಕಾರಣವಾಯಿತೇ ಎಂಬ ಪ್ರಶ್ನೆ ಕಾಡುತ್ತಿದೆ. ಮಾರ್ಚ್‌ ತಿಂಗಳಲ್ಲೇ ಡ್ಯಾಮ್‌ನ ಗೇಟ್‌ ವಾಲ್‌ ಬಳಸಿದಲ್ಲಿ ಒಂದಿಷ್ಟು ನೀರು ಸಂಗ್ರಹವಾಗುತ್ತಿದ್ದು, ಬಳಕೆಗೆ ಉಪಯೋಗವಾದೀತೆಂಬ ಮಾತು ಎಲ್ಲೆಡೆ ಕೇಳಿ ಬರುತ್ತಿದೆ.

ಕೊಲ್ಲೂರು ದೇಗುಲದ ವಸತಿಗೃಹ ಸಹಿತ ದೇಗುಲದ ನಿತ್ಯ ಕಾರ್ಯಗಳು. ಊಟದ ಹಾಲ್‌, ಶೌಚಾಲಯಗಳಿಗೆ ಪ್ರತಿದಿನ ಕನಿಷ್ಠ 56 ಸಾವಿರ ಲೀಟರ್‌ನಷ್ಟು ನೀರಿನ ಅಗತ್ಯವಿದೆ. ಈವರೆಗೆ ಅಚ್ಚುಕಟ್ಟಾಗಿ ನೀರನ್ನು ಬಳಸಲಾಗುತ್ತಿದ್ದು, ಮುಂದಿನ ಒಂದು ವಾರದಲ್ಲಿ ಮಳೆ ಬಾರದಿದ್ದಲ್ಲಿ ನೀರಿನ ûಾಮ ಎದುರಾಗುವ ಭೀತಿ ಇದೆ.

ಟ್ಯಾಂಕರ್‌ ಮೂಲಕ ನೀರು ಸರಬರಾಜು
ಇಲ್ಲಿನ ಖಾಸಗಿ ವಸತಿ ಗೃಹಗಳಲ್ಲಿ ನೀರಿನ ಅಭಾವ ಎದುರಾಗಿದ್ದು, ಬಹುತೇಕರು ಟ್ಯಾಂಕರ್‌ ಮೂಲಕ ನೀರನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ.

ಗ್ರಾಮಸ್ಥರ ಬವಣೆ
ಕಳೆದ 15 ದಿನಗಳಿಂದ ಬರಿದಾದ ಬಾವಿಯಿಂದಾಗಿ ಕುಡಿಯುವ ನೀರಿನ ಯೋಜನೆಗೆ ಮೊರೆಹೋಗಿರುವ ಇಲ್ಲಿನ ನಿವಾಸಿಗಳಿಗೆ ನಿತ್ಯ ನೀರಿನ ಸರಬರಾಜಿನ ಕೊರತೆಯಿಂದಾಗಿ ನೀರಿಗಾಗಿ ಬವಣಿಸುವಂತಾಗಿದೆ. ನಿಗಮವು 2-3 ದಿನಕ್ಕೊಮ್ಮೆ ನೀರನ್ನು ಒದಗಿಸುತ್ತಿದ್ದರೂ, ಗ್ರಾಮಸ್ಥರು ನೀರಿಗಾಗಿ ವಲಸೆ ಹೋಗುವ ಭೀತಿ ಕಂಡುಬಂದಿದೆ.

ಪ್ರಾ.ಆರೋಗ್ಯ ಕೇಂದ್ರದಲ್ಲಿ ನೀರಿನ ಕೊರತೆ
ಆಸುಪಾಸಿನ 5 ಗ್ರಾಮಗಳ ಜೀವನಾಡಿಯಾಗಿರುವ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೀರಿನ ಕೊರತೆ ಎದುರಾಗಿದೆ. ಹಾಗಾಗಿ ಚಿಕಿತ್ಸೆ ಸಹಿತ ಇನ್ನಿತರ ದೈನಂದಿನ ಉಪಯೋಗಕ್ಕೆ ಬಳಸಲಾಗುವ ನೀರಿಗಾಗಿ ವೈದ್ಯರು ಹಾಗೂ ದಾದಿಯರು ಖಾಸಗಿ ವ್ಯವಸ್ಥೆಯನ್ನು ಅವಲಂಬಿಸಬೇಕಾಗಿದೆ.

ಸೌಪರ್ಣಿಕಾ ನದಿಯಲ್ಲಿ
ಸಾಯುತ್ತಿವೆ ಮೀನುಗಳು
ಕೊಲ್ಲೂರು: ಸೌಪರ್ಣಿಕಾ ನದಿಯಲ್ಲಿ ಬಹಳಷ್ಟು ಮೀನುಗಳು ಜಲಕ್ಷಾಮದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಸಾಮಾನ್ಯವಾಗಿ ಎಪ್ರಿಲ್‌ ಮೇ ತಿಂಗಳಲ್ಲಿ ಈ ಭಾಗದಲ್ಲಿ ಮಳೆಯಾಗುತ್ತಿದ್ದು, ಈ ಬಾರಿ ತಡವಾಗಿ ಆರಂಭಗೊಳ್ಳುತ್ತಿರುವ ಮುಂಗಾರು ಮಳೆಯಿಂದಾಗಿ ಅನೇಕ ಕಡೆ ನದಿಗಳು ಬತ್ತಿಹೋಗುತ್ತಿದ್ದು, ಸೌಪರ್ಣಿಕಾ ನದಿ ನೀರು ಕೂಡ ದಿನೇ-ದಿನೇ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ನೀರಿನ ಅಭಾವ ಹಾಗೂ ಕಲುಷಿತಗೊಂಡ ನೀರಿನಿಂದಾಗಿ ಮೀನುಗಳು ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ.

ಸ್ಥಳೀಯ ನಿವಾಸಿಗಳು ಹಾಗೂ ಭಕ್ತರು ಕೊಳೆತ ಮೀನುಗಳನ್ನು ನದಿಯಿಂದ ಎತ್ತಿ ಕ್ರಮ ಕೈಗೊಳ್ಳುವಂತೆ ದೇಗುಲ ಹಾಗೂ ಪಂಚಾಯತ್‌ ಗೆ ಮೊರೆಹೋಗಿದ್ದಾರೆ.

ಸುಮಾರು 3,500 ಜನಸಂಖ್ಯೆ ಹೊಂದಿರುವ ಕೊಲ್ಲೂರಿನಲ್ಲಿ 350 ಮನೆಗಳಿದ್ದು, 150 ವಾಣಿಜ್ಯ ಸಂಕೀರ್ಣಗಳಿವೆ. ಕೊಲ್ಲೂರಿನಲ್ಲಿ ನೀರಿನ ಅಭಾವ ಕಂಡುಬಂದಿದೆ. ಅತೀ ಅಗತ್ಯತೆ ಎದುರಾದಲ್ಲಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುವ ಬಗ್ಗೆ ಜಿಲ್ಲಾ ಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಮನವಿ ಮಾಡಲಾಗುವುದು.
-ರುಕ್ಕನ ಗೌಡ, ಪಿಡಿಒ ಕೊಲ್ಲೂರು ಗ್ರಾ.ಪಂ.

– ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.