ಕುಂದಾಪುರ: ಕೊಂಕಣ ಖಾರ್ವಿ ಹೋಳಿ ಸಂಪನ್ನ


Team Udayavani, Mar 20, 2022, 4:20 AM IST

ಕುಂದಾಪುರ: ಕೊಂಕಣ ಖಾರ್ವಿ ಹೋಳಿ ಸಂಪನ್ನ

ಕುಂದಾಪುರ: ಕೊಂಕಣ ಖಾರ್ವಿ ಸಮುದಾಯದವರು 7 ದಿನಗಳ ಕಾಲ ಸಡಗರ, ಸಂಭ್ರಮದಿಂದ ಆಚರಿಸುವ ಹೋಳಿ ಉತ್ಸವವು ಬಣ್ಣದ ಪೂಜೆ, ಓಕುಳಿಯೊಂದಿಗೆ ವೈಭವದ ಪುರ ಮೆರವಣಿಗೆಯೊಂದಿಗೆ ಶನಿವಾರ ಸಂಪನ್ನಗೊಂಡಿತು.

ಶತಮಾನಗಳ ಇತಿಹಾಸವಿರುವ ಕೊಂಕಣ ಖಾರ್ವಿ ಸಮುದಾಯದವರ ಹೋಳಿ ಉತ್ಸವವನ್ನು ಕುಂದಾಪುರ, ಗಂಗೊಳ್ಳಿ, ಬಸ್ರೂರು ಮತ್ತಿತರ ಭಾಗಗಳಲ್ಲಿ  ಆಚರಿಸುವ ಮೂಲಕ  ಸಂಭ್ರಮಿಸಿದರು.

ಬಣ್ಣದ ಪೂಜೆ :

ಹೋಳಿ ಹಬ್ಬದ ಕೊನೆಯ ದಿನವಾದ ಶನಿವಾರ ಓಕುಳಿ, ಮೆರವಣಿಗೆಗೂ ಮುಂಚಿತವಾಗಿ ಕೊಂಕಣ ಖಾರ್ವಿ ಸಮುದಾಯದವರ ಆರಾಧ್ಯ ದೇವತೆಯಾದ ಖಾರ್ವಿಕೇರಿ ಶ್ರೀ ಮಹಾಂಕಾಳಿ ಅಮ್ಮನವರ ಸನ್ನಿಧಾನದಲ್ಲಿ ಬಣ್ಣದ ಪೂಜೆ ನೆರವೇರಿಸಲಾಯಿತು.

ಬಣ್ಣದ ಪೂಜೆಯ ಅಂಗವಾಗಿ ಮಹಾಕಾಳಿ ದೇವಿಗೆ ಅರಿಶಿನ ಕುಂಕುಮ, ಗಂಧ, ವಿವಿಧ ಬಣ್ಣಗಳನ್ನು ಸಮರ್ಪಿಸಿ, ವಿಶೇಷ ಪೂಜೆ ನೆರವೇರಿಸಲಾಯಿತು. ಈ ವೇಳೆ ಉಪಸ್ಥಿತರಿದ್ದ ಗಣ್ಯರು, ಹೋಳಿ ಮನೆಯವರು, ಸಮುದಾಯದ ಪ್ರತಿ ಮನೆಯವರು ಪರಸ್ಪರ ಬಣ್ಣಗಳನ್ನು ಹಚ್ಚಿಕೊಂಡರು.

ಶ್ರೀ ಕುಂದೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೃಷ್ಣಾನಂದ ಚಾತ್ರ, ಸದಸ್ಯ ಸತೀಶ್‌ ಶೆಟ್ಟಿ, ಕುಂದಾಪುರ ಡಿವೈಎಸ್‌ಪಿ ಶ್ರೀಕಾಂತ್‌, ಶ್ರೀ ಮಹಾಂಕಾಳಿ ದೇವಸ್ಥಾನದ ಅಧ್ಯಕ್ಷ ಜಯಾನಂದ ಖಾರ್ವಿ, ಪ್ರಧಾನ ಕಾರ್ಯದರ್ಶಿ ಕೆ. ಕೇಶವ ಖಾರ್ವಿ, ಸಲಹೆಗಾರರಾದ ಪ್ರಕಾಶ್‌ ಖಾರ್ವಿ, ಗಣಪತಿ ಖಾರ್ವಿ, ದೇವಸ್ಥಾನದ ಮೊಕ್ತೇಸರರಾದ ಶಂಕರ ನಾಯ್ಕ, ಪಾಂಡು ಸಾರಂಗ, ಆನಂದ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

ಹೋಳಿ ಓಕುಳಿ: ಬೃಹತ್‌ ಮೆರವಣಿಗೆ :

ಹೋಳಿ ಆಚರಣೆಯ ಕೊನೆಯ ದಿನ ಕೊಂಕಣ ಖಾರ್ವಿ ಸಮುದಾಯದ ಸಹಸ್ರಾರು ಬಂಧುಗಳು ಹೋಳಿ ಓಕುಳಿ ಹಾಗೂ ವೈಭವದ ಮೆರವಣಿಗೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಮೇಲ್‌ ಖಾರ್ವಿಕೇರಿ, ಮುಖ್ಯ ಖಾರ್ವಿಕೇರಿ, ಮಧ್ಯ ಖಾರ್ವಿಕೇರಿ, ಕೆಳಾ ಖಾರ್ವಿಕೇರಿ, ಬಹಾದ್ದೂರ್‌ ಷಾ ರಸ್ತೆ, ಹೊರ ವಲಯದ ಕೊಂಕಣ ಭಾಷಿಕ ಖಾರ್ವಿ ಸಮುದಾಯದ ಸುಮಾರು 5 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು.

ಗಂಗೊಳ್ಳಿ : ಹೋಳಿ ಓಕುಳಿ

ಕುಂದಾಪುರ ಮಾತ್ರವಲ್ಲದೆ ಗಂಗೊಳ್ಳಿ ಯಲ್ಲಿಯೂ ತ್ರಾಸಿ, ಕಂಚುಗೋಡು ಮತ್ತಿತರ ಭಾಗದ ಕೊಂಕಣ ಖಾರ್ವಿ ಸಮುದಾಯದವರು ಹೋಳಿ ಓಕುಳಿಯನ್ನು ಅದ್ದೂರಿ ಮೆರವಣಿಗೆ, ಓಕುಳಿ ಉತ್ಸವದೊಂದಿಗೆ ಆಚರಿಸಿದರು. ಬಸ್ರೂರಲ್ಲಿಯೂ ಖಾರ್ವಿ ಭಾಷಿಕರು ಹೋಳಿ ಓಕುಳಿ ಯಲ್ಲಿ ಮಿಂದೆದ್ದರು.

ಬಿಗಿ ಪೊಲೀಸ್‌ ಬಂದೋಬಸ್ತ್ :

ಕುಂದಾಪುರ ಹಾಗೂ ಗಂಗೊಳ್ಳಿಯಲ್ಲಿ ಕುಂದಾಪುರ ಡಿವೈಎಸ್‌ಪಿ ಶ್ರೀಕಾಂತ್‌ ನೇತೃತ್ವದಲ್ಲಿ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ ಹಾಗೂ ಸಂತೋಷ್‌ ಕಾಯ್ಕಿಣಿ, ವಿವಿಧ ಠಾಣೆಗಳ ಠಾಣಾ ಧಿಕಾರಿಗಳ ಉಸ್ತುವಾರಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಪೊಲೀಸ್‌ ಬಂದೋಬಸ್ತ್ ವಹಿಸಲಾಗಿತ್ತು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.