ಕೋಟಿಲಿಂಗೇಶ್ವರ ದೇಗುಲ ಕೊಡಿ ಹಬ್ಬ: ಕೋವಿಡ್‌-19ರ ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ


Team Udayavani, Nov 28, 2020, 8:30 PM IST

ಕೋವಿಡ್‌-19ರ ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ

ಕೊಡಿ ಹಬ್ಬಕ್ಕೆ ಅಲಂಕಾರಗೊಂಡ ಕೋಟಿಲಿಂಗೇಶ್ವರ ದೇಗುಲ.

ಕೋಟೇಶ್ವರ: ಇಲ್ಲಿನ ಶ್ರೀ ಕೋಟಿಲಿಂಗೇಶ್ವರ ದೇಗುಲದ ಕೊಡಿ ಹಬ್ಬ ನ. 30ರಂದು ನಡೆಯಲಿದೆ. ಈ ಬಾರಿ ಕೋವಿಡ್‌-19ರ ಕಾನೂನಿನಂತೆ ಸರಳ ಉತ್ಸವ ಆಚರಣೆಗೆ ಅವಕಾಶ ಕಲ್ಪಿಸಲಾಗಿದೆ, ಹಾಗಾಗಿ ಉತ್ಸವಕ್ಕೆ ಆಗಮಿಸುವ ಭಕ್ತರಿಗೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ.

ಹಬ್ಬಕ್ಕೆ ಮಾರ್ಗ ಸೂಚಿ
65 ವರ್ಷಕ್ಕೆ ಮೇಲ್ಪಟ್ಟವರು ಹಾಗೂ 10 ವರ್ಷದ ಒಳಗಿನ ಮಕ್ಕಳು ಅಲ್ಲದೇ ಗರ್ಭಿಣಿಯರು ಮನೆಯಲ್ಲೇ ಕುಳಿತು
ದೃಶ್ಯ ಮಾಧ್ಯಮದ ಮೂಲಕ ಬಿತ್ತರಿಸುವ ಕೊಡಿ ಹಬ್ಬದ ನೇರ ಪ್ರಸಾರ ವೀಕ್ಷಿಸ ಬಹುದು. ಭಕ್ತರು ಹಣ್ಣು ಕಾಯಿಯನ್ನು ತಂದು ದೇಗುಲದಲ್ಲಿ ಮಾತ್ರ ಸಮರ್ಪಿಸಬಹುದಾಗಿದ್ದು, ರಥೋತ್ಸವದಲ್ಲಿ ರಥಕ್ಕೆ ಸಲ್ಲಿಸುವ ಹಣ್ಣುಕಾಯಿ ಸೇವೆಗೆ ಅವಕಾಶವಿರುವು ದಿಲ್ಲ, ದೇಗುಲವನ್ನು ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಒಳ ಪ್ರವೇಶಿಸಬೇಕು.

ಜಾತ್ರೆಯ ಅನ್ನಸಂತರ್ಪಣೆ ರದ್ದುಗೊಳಿಸಲಾಗಿದೆ. ಕೋಟಿತೀರ್ಥ ಸರೋವರದಲ್ಲಿ ತೀರ್ಥಸ್ನಾನ, ಸಂಪ್ರೋಕ್ಷಣೆ ಇತ್ಯಾದಿಗಳಿಗೆ ಅವಕಾಶವಿರುವುದಿಲ್ಲ. ರಥಾರೋಹಣ, ರಥಾವರೋಹಣಕ್ಕೆ ಅಗತ್ಯವಿರುವಷ್ಟು ಮಂದಿಗೆ ಸೀಮಿತಗೊಳಿಸಲಾಗಿದ್ದು ಪಾಸ್‌ ಹೊಂದಿದ ಭಕ್ತರು ಮಾತ್ರ ಭಾಗವಹಿಸಲು ಅವಕಾಶವಿದೆ, ದೇವರ ದರ್ಶನಕ್ಕೆ ಆಗಮಿಸುವ ಭಕ್ತರು ಪೂರ್ವ ದಿಕ್ಕಿನ ಮಹಾದ್ವಾರದಿಂದ ಪ್ರವೇಶಿಸಿ ಮುಖ್ಯ ಪ್ರವೇಶ ದ್ವಾರದಲ್ಲಿ ಇರಿಸಲಾದ ಸ್ಯಾನಿಟೈಸರ್‌ ಬಳಸಿ ಬಲ ಭಾಗದಲ್ಲಿರುವ ಸೇವಾ ರಶೀದಿ ಕೌಂಟರ್‌ ಮತ್ತು ಹಣ್ಣು ಕಾಯಿ ಮಾಡುವ ಸ್ಥಳದಲ್ಲಿ ಸೇವೆ ಸಲ್ಲಿಸಿ ಆಗ್ನೇಯ ಮೂಲೆಯಲ್ಲಿರುವ ದ್ವಾರದ ಮೂಲಕ ದೇಗುಲದ ಒಳಸುತ್ತು ಪ್ರವೇಶಿಸಿ ದೇವರ ದರ್ಶನ ಪಡೆದು ಪೂರ್ವ ದಿಕ್ಕಿನ ಬಾಗಿಲಿನಿಂದ ಹೊರಹೋಗಲು ವ್ಯವಸ್ಥೆ ಮಾಡಲಾಗಿದೆ. ಸರಕಾರದ ಆದೇಶ ಪ್ರಕಾರ ಸರಳವಾಗಿ ರಥೋತ್ಸವ ನಡೆಯಲಿದೆ ಎಂದು ದೇಗುಲದ ಆಡಳಿತ ಸಮಿತಿಯವರು ತಿಳಿಸಿದ್ದಾರೆ.

ದೇಗುಲ ಅಲಂಕಾರ
ದೇಗುಲದ ಹೊರ ಆವರಣ ಸುಂದರವಾಗಿ ಅಲಂಕಾರಗೊಂಡಿದ್ದು, ಒಳಪೌಳಿ ಹೂವಿನಿಂದ ಅಲಂಕೃತಗೊಂಡಿದೆ. ರಥದ ಅಲಂಕಾರ ಭರದಿಂದ ಸಾಗಿದೆ. ರಥಬೀದಿ ಹಾಗೂ ಪೇಟೆಯಲ್ಲಿ ದೀಪಾಲಂಕಾರಗೊಳಿಸ ಲಾಗಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಈ ಬಾರಿ ಸಾಂಸ್ಕೃತಿಕ ಹಾಗೂ
ಇನ್ನಿತರ ಕಾರ್ಯಕ್ರಮ ರದ್ದುಗೊಳಿಸಲಾ ಗಿದೆ. ಅಂಗಡಿ ಮುಂಗಟ್ಟುಗಳಿಗೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಪೇಟೆಯಲ್ಲಿ ಹಬ್ಬದ ಕಳೆ ಒಂದಿಷ್ಟು ಕುಂದಿದೆ. ಹಬ್ಬದ ಪೂರ್ವಭಾವಿಯಾಗಿ ತೆಂಕು ಹಾಗೂ ಬಡಗು ಕಟ್ಟೆ ಪೂಜೆಗಳು ದೇಗುಲದ ತಂತ್ರಿ ಪ್ರಸನ್ನ ಕುಮಾರ್‌ ಐತಾಳ ಅವರ ನೇತೃತ್ವದಲ್ಲಿ ಸರಳವಾಗಿ ನಡೆದವು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.