ಇಂದಿನಿಂದ “ಕುಡುಬಿ’ ಹೋಳಿ ಹಬ್ಬ


Team Udayavani, Mar 17, 2019, 4:01 AM IST

kudubi.png

ಕುಂದಾಪುರ: ಫಾಲ್ಗುಣ ಮಾಸದ ಏಕಾದಶಿಯಿಂದ ಆರಂಭವಾಗಿ ಹುಣ್ಣಿಮೆಯವರೆಗೆ ವಿವಿಧ ಸಮುದಾ ಯದವರು ಹೋಳಿ ಹಬ್ಬವನ್ನು ಆಚರಿಸುತ್ತಿದ್ದಾರೆ.  ಕುಡುಬಿ, ಖಾರ್ವಿ, ಮರಾಠಿ ಸಮಾಜದವರೆಲ್ಲರೂ ವಿಶಿಷ್ಟ ರೀತಿಯಲ್ಲಿ ಹೋಳಿ ಆಚರಿಸುತ್ತಾರೆ. ಅದರಲ್ಲೂ ಜಿಲ್ಲೆಯ ಕುಡುಬಿ ಜನಾಂಗದವರು 5 ದಿನಗಳ ಕಾಲ ತನ್ನದೇ ಆದ ರೀತಿಯಲ್ಲಿ ವೈಶಿಷ್ಟ ಪೂರ್ಣವಾಗಿ ಹಬ್ಬ ಆಚರಿಸುತ್ತಾರೆ.

ಹೋಳಿ ಹಬ್ಬದ ಆಚರಣೆಗೆ ಹಲವಾರು ವರ್ಷಗಳ ಇತಿಹಾಸವಿದೆ. ಫಾಲ್ಗುಣ ಮಾಸದ ಏಕಾದಶಿಯಿಂದ ಹುಣ್ಣಿಮೆ ಯವರೆಗೆ (ಅಂದರೆ ಈ ವರ್ಷ ಮಾ. 17 ರಿಂದ ಮಾ. 22ರವರೆಗೆ) ಕುಡುಬಿ ಜನಾಂಗದವರು ಹೋಳಿ ಹಬ್ಬವನ್ನು ಆಚರಿಸುತ್ತಾರೆ. 

ಹಬ್ಬದ ಆಚರಣೆ ಹೇಗೆ?
ಮುನ್ನ ದಿನವೇ ಹಬ್ಬದ ಸಿದ್ಧತೆಗಳು ಆರಂಭಗೊಂಡಿದ್ದು, ಏಕಾದಶಿಯ ದಿನ ಬೆಳಗಿನ ಜಾವಕ್ಕೂ ಮುನ್ನವೇ ಎಲ್ಲ ಕೂಡು ಕಟ್ಟುಗಳ ಸದಸ್ಯರೆಲ್ಲ ಆಯಾಯ ಭಾಗದ ಗುರಿಕಾರರ ಮನೆಗೆ ಬಂದು ಸೇರಬೇಕು. ಅಲ್ಲಿ ದೇವರ ಪ್ರತಿಷ್ಠಾಪನೆ, ಹಾಡುಗಳ ಮೂಲಕವೇ ವಿಧಿ- ವಿಧಾನ ಪೂರೈಸಿ, ಕೋಲಾಟ, ಗುಮ್ಮಟೆ ನೃತ್ಯ ಮಾಡಿ, ಬಳಿಕ ಗ್ರಾಮ ದೇವಸ್ಥಾನದಲ್ಲಿ ಕೋಲಾಟ, ಗುಮ್ಮಟೆ ನೃತ್ಯ ಮಾಡಲಾಗುತ್ತದೆ. ಬಳಿಕ ಮೊದಲೆರಡು ದಿನಗಳ ಕಾಲ ಹೊರ ಗ್ರಾಮಗಳ ಕುಡುಬಿ ಸಮುದಾಯದವರ ಮನೆಗೆ ಹೋಗಿ, 3 ನೇ ದಿನ ಅವರದೇ ಗ್ರಾಮಕ್ಕೆ ಬಂದು ಅಲ್ಲಿನ ಎಲ್ಲರ ಮನೆಗೂ ಹೋಗುತ್ತಾರೆ. 5 ನೇ ದಿನ ಮತ್ತೆ ಗುರಿಕಾರರ ಮನೆಯಲ್ಲಿ ಸೇರುತ್ತಾರೆ. 

46 ಕೂಡು ಕಟ್ಟುಗಳು
ಉಡುಪಿ ಜಿಲ್ಲೆಯಲ್ಲಿ ಒಟ್ಟು 46 ಕೂಡು ಕಟ್ಟುಗಳಿವೆ. ಮಂದಾರ್ತಿ, ಕೊಕ್ಕರ್ಣೆ, ಹಾಲಾಡಿ, ಬೆಳ್ವೆ, ಬಾಕೂìರು, ಮುದ್ದೂರು, ಯಳಂತೂರು, ಶೇಡಿಮನೆ, ಹಿಲಿಯಾಣ, ಕಕ್ಕುಂಜೆ ಕಡೆಗಳೆಲ್ಲ ಕುಡುಬಿ ಮನೆತನಗಳಿವೆ. ಕುಡುಬಿಯವರ ಪ್ರಕಾರ ಕೂಡು ಕಟ್ಟು ಅಂದರೆ 1 ಗ್ರಾಮ ಅಂತ ಅರ್ಥ. ಗ್ರಾಮಕ್ಕೊಬ್ಬರು ಗುರಿಕಾರರಿರುತ್ತಾರೆ. 46 ಕೂಡು ಕಟ್ಟುಗಳು ಸಂಖ್ಯೆಗೆ ಅನುಗುಣವಾಗಿ 2 ಅಥವಾ ಅದಕ್ಕಿಂತ ಹೆಚ್ಚು ಪಂಗಡಗಳಾಗಿ ವಿಂಗಡಿಸಿ ಮನೆ – ಮನೆಗೆ ತೆರಳಿ ಗುಮ್ಮಟೆ ಹಾಗೂ ಕೋಲಾಟ ನೃತ್ಯ ಪ್ರದರ್ಶಿಸುತ್ತಾರೆ.
 
ಹಬ್ಬದ ಮುಕ್ತಾಯ

5ನೇ ದಿನ ಎಲ್ಲರೂ ಗುರಿಕಾರರ ಮನೆಯಲ್ಲಿ ಸೇರಿ ಅಲ್ಲಿಗೆ ಹಬ್ಬ ಮುಕ್ತಾಯ. ಗೆಜ್ಜೆ, ವೇಷ ಭೂಷಣ ಕಳಚಿ, ಎಲ್ಲರೂ ಸಾಮೂಹಿಕವಾಗಿ ಸ್ನಾನ ಮಾಡುತ್ತಾರೆ. ಆ ಬಳಿಕ ಪರಿಕರಗಳಿಗೆಲ್ಲ ಗುರಿಕಾರರು ಪೂಜೆ ಮಾಡಿದ ಅನಂತರ ಬೆಂಕಿ (ಕಾಮದಹನ ಮಾಡುವುದು) ಹಾಯುತ್ತಾರೆ. ಬಳಿಕ ಸಾಮೂಹಿಕವಾಗಿ ಊಟ ಮಾಡಿದ ಬಳಿಕ ಯುವಕರು, ಮಕ್ಕಳೆಲ್ಲ ಸೇರಿ ಗ್ರಾಮದಲ್ಲಿರುವ ಮನೆ- ಮನೆಗೆ ಹೋಗಿ ಬಣ್ಣ ಹಚ್ಚುವ ಮೂಲಕ ಹೋಳಿ ಹಬ್ಬ ಮುಗಿಯಿತು ಎನ್ನುವ ಸಂದೇಶ ರವಾನಿಸುತ್ತಾರೆ. 

ಆಚರಣೆಯ ಉದ್ದೇಶ
ವ್ರತಾಚರಣೆಯಲ್ಲಿರುವ ಶಿವನು ಮನ್ಮಥನಿಂದಾಗಿ ವ್ರತಭಂಗವಾಗಿ ಕೋಪಗೊಂಡಿರುತ್ತಾನೆ. ಅವನ ಕೋಪ ತಣಿಸುವ ಕಾರಣಕ್ಕಾಗಿ ಬುಡಕಟ್ಟು ಸಮುದಾಯದ ಕುಡುಬಿ ಜನರೆಲ್ಲ ಸೇರಿ ಹೋಳಿ ಹಬ್ಬವನ್ನು ಆಚರಿಸುತ್ತಾರೆ ಎನ್ನುವ ಹಿನ್ನೆಲೆಯಿದೆ. ಇದರಿಂದ ಶಿವನ ಕೋಪವು ಶಾಂತವಾಗಿ ಒಳಿತಾಗುತ್ತದೆ ಎನ್ನುವ ಪ್ರತೀತಿಯಿದೆ. 

ವ್ರತಾಚರಣೆ ಮಹತ್ವ
ಹೋಳಿ ಹಬ್ಬಕ್ಕೆ ನಮ್ಮಲ್ಲಿ ವಿಶೇಷ ಅರ್ಥವಿದೆ. ಹಬ್ಬಕ್ಕೆ 5 ಅಥವಾ 3 ದಿನಕ್ಕೆ ಮುಂಚೆ ಕೋಲು ಹಿಡಿಯುವುದು ಅಂದರೆ ವ್ರತಾಚರಣೆ ಆರಂಭಗೊಳ್ಳುತ್ತದೆ. ಕೋಲು ಹಿಡಿದವರು ಚಪ್ಪಲಿ ಹಾಕಬಾರದು, ಭಾರ ಹೊರಬಾರದು, ಬೇರೆಯವರ ಮನೆಯಲ್ಲಿ ಊಟ ಮಾಡಬಾರದು, ಮದಿರೆ – ಮಾನಿನಿ – ಮಾಂಸ ಸೇವನೆ ಮಾಡಬಾರದು. 
ನಾರಾಯಣ ನಾಯ್ಕ,  ಗೋಳಿಯಂಗಡಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.