ಕುಂದಾಪುರ- ಬೈಂದೂರು: 82 ಕೆರೆ ಅಭಿವೃದ್ಧಿ

 ನರೇಗಾದಡಿ ಜಲಮೂಲಗಳ ಪುನಶ್ಚೇತನ ;  ಹಕ್ಲಾಡಿ ಗ್ರಾ.ಪಂ. ಗರಿಷ್ಠ - 12, ಆಲೂರು ಗ್ರಾ.ಪಂ. 9 ಕೆರೆಗೆ ಮರುಜೀವ

Team Udayavani, Feb 5, 2022, 4:40 PM IST

ಕುಂದಾಪುರ- ಬೈಂದೂರು: 82 ಕೆರೆ ಅಭಿವೃದ್ಧಿ

ಕುಂದಾಪುರ: ನರೇಗಾ ಯೋಜನೆ ವೈಯಕ್ತಿಕ ಕೆಲಸ ಅಥವಾ ಕೇವಲ ಕೂಲಿಗಾಗಿ ಕೆಲಸ ಮಾಡುವ ಯೋಜನೆಯಾಗದೇ, ಜಲಮೂಲಗಳ ಪುನಶ್ಚೇತನಕ್ಕೂ ವರದಾನವಾಗುತ್ತಿದೆ. ನರೇಗಾದಡಿ ಪ್ರತಿ ಗ್ರಾಮದಲ್ಲೊಂದು ಕೆರೆ ಅಭಿವೃದ್ಧಿಗೆ ಮುಂದಾಗಿದ್ದು, ಇದರಿಂದ ಅಂತರ್ಜಲ ಮಟ್ಟ ಸುಧಾರಣೆಗೆ ನರೇಗಾ ಸಹಕಾರಿಯಾಗಿದೆ. ಅವಿಭಜಿತ ಕುಂದಾಪುರ ತಾಲೂಕಿನಲ್ಲಿ ಕಳೆದೊಂದು ವರ್ಷದಿಂದ 82 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ.

ಗ್ರಾಮೀಣ ಜನರ ಜೀವನೋಪಾಯಕ್ಕಾಗಿವರದಾನವಾಗಿರುವ ನರೇಗಾ ಯೋಜನೆಯು ಜಲಮೂಲಗಳ ಪುನಶ್ಚೇತನದತ್ತಲೂ ಮಹತ್ತರ ಹೆಜ್ಜೆಯಾಗಿದೆ. ಕಳೆದ ವರ್ಷದ ಏಪ್ರಿಲ್‌ನಿಂದ ಈ ವರ್ಷದ ಜನವರಿಯವರೆಗೆ ಕುಂದಾಪುರ ತಾಲೂಕಿನಲ್ಲಿ 68 ಹಾಗೂ ಬೈಂದೂರು ತಾಲೂಕಿನಲ್ಲಿ 14 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ.

ಹಕ್ಲಾಡಿ ಗರಿಷ್ಠ
ಕುಂದಾಪುರ ತಾಲೂಕಿನ ಕೆರೆ ಅಭಿವೃದ್ಧಿಯ ಪೈಕಿ ಹಕ್ಲಾಡಿ ಪಂ.ನದ್ದು ಸಿಂಹಪಾಲು. ಈ ವರ್ಷದಲ್ಲಿ ಹಕ್ಲಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಬರೋಬ್ಬರಿ 12 ಕೆರೆಗಳು ಅಭಿವೃದ್ಧಿಯಾಗಿವೆ. ಇನ್ನು ಈ ಯಾದಿಯಲ್ಲಿ ಎರಡನೇ ಸ್ಥಾನ ಆಲೂರಿನದ್ದಾಗಿದೆ. ಈ ಸಾಲಿನಲ್ಲಿ ಆಲೂರು ಗ್ರಾ.ಪಂ.ವ್ಯಾಪ್ತಿಯಲ್ಲಿ 9,ಬೈಂದೂರು ತಾಲೂಕಿನ ನಾಡದಲ್ಲಿ ಗರಿಷ್ಠ 4 ಹಾಗೂ ಹೇರೂರಲ್ಲಿ 3 ಕೆರೆಗಳು ಅಭಿವೃದ್ಧಿಯಾಗಿದೆ.

ಕುಂದಾಪುರ ತಾ|: 29 ಗ್ರಾ.ಪಂ.
ಕುಂದಾಪುರ ತಾಲೂಕಿನ 45 ಗ್ರಾ.ಪಂ.ಗಳ ಪೈಕಿ 29 ಗ್ರಾ.ಪಂ.ವ್ಯಾಪ್ತಿಯಲ್ಲಿ ಕೆರೆ ಅಭಿವೃದ್ಧಿಯಾಗಿದೆ. ಕಟ್‌ಬೆಲೂ¤ರು -5, ಬೀಜಾಡಿ – 4, ಕಂದಾವರ, ಬಸೂÅರು ತಲಾ 3, ಹಂಗಳೂರು, ಹೊಸಾಡು, ಕಾಳಾವರ, ವಂಡ್ಸೆ, ತ್ರಾಸಿ ತಲಾ 2, ಆನಗಳ್ಳಿ, ಉಳ್ಳೂರು, ಬಳ್ಕೂರು, ಗಂಗೊಳ್ಳಿ, ಗೋಪಾಡಿ, ಗುಜ್ಜಾಡಿ, ಗುಲ್ವಾಡಿ, ಹಾರ್ದಳ್ಳಿ – ಮಂಡಳ್ಳಿ, ಹಟ್ಟಿಯಂಗಡಿ, ಹೆಮ್ಮಾಡಿ, ಹೆಂಗವಳ್ಳಿ, ಇಡೂರು- ಕುಂಜ್ಞಾಡಿ, ಕೆದೂರು, ಕೆರಾಡಿ, ಕೋಣಿ, ಕೊರ್ಗಿ, ಕುಂಭಾಶಿ, ಸಿದ್ದಾಪುರ ಗ್ರಾ.ಪಂ.ವ್ಯಾಪ್ತಿಯಲ್ಲಿ ತಲಾ ಒಂದೊಂದು ಕೆರೆ ಅಭಿವೃದ್ಧಿಪಡಿಸಲಾಗಿದೆ.

ಬೈಂದೂರು ತಾ| : 8 ಗ್ರಾ.ಪಂ.
ಬೈಂದೂರು ತಾಲೂಕಿನ 13 ಗ್ರಾ.ಪಂ.ಗಳ ಪೈಕಿ 8 ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಕೆರೆ ಅಭಿವೃದ್ಧಿಪಡಿಸಲಾಗಿದೆ. ನಾಡ- 4, ಹೇರೂರು – 3, ಶಿರೂರು -2, ನಾವುಂದ, ಮರವಂತೆ, ಕೊಲ್ಲೂರು, ಬಿಜೂರು, ಕೆರ್ಗಾಲ್‌ ಗ್ರಾ.ಪಂ. ವ್ಯಾಪ್ತಿಯಲ್ಲಿ ತಲಾ ಒಂದೊಂದು ಕೆರೆಗೆ ಉದ್ಯೋಗ ಖಾತರಿ ಯೋಜನೆಯಡಿ ಮರುಜೀವ ನೀಡಲಾಗಿದೆ.

14 ಅಭಿವೃದ್ಧಿ
ನರೇಗಾದಡಿ ಬೈಂದೂರು ತಾಲೂಕಿನಲ್ಲಿ ಈ ವರ್ಷದಲ್ಲಿ 14 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಕೆರೆ ಮಾತ್ರವಲ್ಲದೆ ನದಿ ಹೂಳೆತ್ತುವ ಕಾರ್ಯ, ಮಳೆ ನೀರು ಕೊಯ್ಲುಗಳನ್ನು ಅಳವಡಿಸಲಾಗಿದೆ. ವೈಯಕ್ತಿಕ ಕೂಲಿ ಜತೆಗೆ, ಕೆರೆ, ನದಿ ಸ್ವತ್ಛತೆ ಇನ್ನಿತರ ಸಾಮುದಾಯಿಕ ಕಾರ್ಯಗಳಿಗೂ ಸಾಕಷ್ಟು ಪ್ರಯೋಜನವಾಗುತ್ತಿದೆ. ಗ್ರಾಮೀಣ ಭಾಗದ ಇನ್ನಷ್ಟು ಮಂದಿ ಇದರ ಪ್ರಯೋಜನವನ್ನು
ಪಡೆದುಕೊಳ್ಳಬಹುದು.
-ಭಾರತಿ,
ಕಾರ್ಯನಿರ್ವಾಹಣಾಧಿಕಾರಿ, ಬೈಂದೂರು ತಾ.ಪಂ.

ಕೆರೆ ಪುನಶ್ಚೇತನ
ನರೇಗಾದಡಿ ಕುಂದಾಪುರ ತಾಲೂಕಿನಲ್ಲಿ 68 ಕೆರೆಗಳನ್ನು ಪುನಶ್ಚೇತನಗೊಳಿಸಲಾಗಿದೆ. ಗ್ರಾಮೀಣ ಭಾಗದ ಜನರಿಗೆ ವೈಯಕ್ತಿಕ ಮಾತ್ರವಲ್ಲದೆ ಸಾಮುದಾಯಿಕವಾಗಿಯೂ ಸಾಕಷ್ಟು ಪ್ರಯೋಜನವಾಗುತ್ತಿದೆ. ಮಾರ್ಚ್‌ವರೆಗೆ ಇನ್ನಷ್ಟು ಕೆರೆ, ನದಿ ಹೂಳೆತ್ತುವ ಕಾರ್ಯ ಆಗಲಿದೆ.
-ಶ್ವೇತಾ ಎನ್‌,
ಕಾರ್ಯನಿರ್ವಾಹಣಾಧಿಕಾರಿ
ಕುಂದಾಪುರ ತಾ.ಪಂ.

– ಪ್ರಶಾಂತ್‌ ಪಾದೆ

 

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.