ಕುಂದಾಪುರ ಕೋಡಿ ಸೇತುವೆ ಕಾಮಗಾರಿ ವಾರದಲ್ಲಿ ಆರಂಭ
ಸಂಪರ್ಕ ಸೇತುವೆ ಪೂರ್ಣ ಪ್ರಮಾಣದಲ್ಲಿ ಶಿಥಿಲ
Team Udayavani, Jan 19, 2021, 3:00 AM IST
ಕುಂದಾಪುರ: ವಿನಾಯಕ ಥಿಯೇ ಟರ್ ಬಳಿಯಿಂದ ಕೋಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಶಿಥಿಲ ಸೇತುವೆಯ ಕಾಮಗಾರಿ ವಾರದಲ್ಲಿ ಆರಂಭವಾಗುವ ನಿರೀಕ್ಷೆಯಿದೆ.
ಬೇಗ ಆರಂಭ :
ಇಲ್ಲಿನ ಬಸ್ರೂರು ಮೂರುಕೈ ಸಮೀಪದಿಂದ ವಿನಾಯಕ ಥಿಯೇಟರ್ ಪಕ್ಕದ ರಸ್ತೆಯಲ್ಲಿ ಕೋಡಿಗೆ ಸಂಪರ್ಕ ಕಲ್ಪಿಸುವ ಸೇತುವೆ ಪೂರ್ಣ ಪ್ರಮಾಣದಲ್ಲಿ ಶಿಥಿಲಗೊಂಡಿದೆ. ಆದರೆ ಇದರಲ್ಲೇ ಕೋಡಿಗೆ ಹೋಗುವ ಬಸ್ಗಳು, ಘನ ವಾಹನಗಳ ಸಂಚಾರ ಮುಂದುವರಿದಿದ್ದು ತೀವ್ರ ಅಪಾಯಕಾರಿಯಾಗಿದೆ. ಈ ಬಗ್ಗೆ “ಉದಯವಾಣಿ’ “ಸುದಿನ’ ವರದಿ ಮಾಡಿತ್ತು. ಇದಕ್ಕೆ ಶಾಸಕರು 2 ಕೋ. ರೂ. ಅನುದಾನ ಮಂಜೂರು ಮಾಡಿದ್ದು ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಬಸೂÅರಿನ ವಿಜಯಾನಂದ ಶೆಟ್ಟಿ ಅವರಿಗೆ ಗುತ್ತಿಗೆಯಾಗಿದ್ದು ಕಾಮಗಾರಿ ಶೀಘ್ರ ಆರಂಭವಾಗಲಿದೆ. ಮೂರು ತಿಂಗಳ ಒಳಗೆ ಕಾಮಗಾರಿ ಮುಗಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅನುದಾನ ಮಂಜೂರು :
ರಾಷ್ಟ್ರೀಯ ಹೆದ್ದಾರಿ ಹಂಗಳೂರು ಜಂಕ್ಷನ್ನಿಂದ ಬಸ್, ರಿಕ್ಷಾ, ಲಾರಿ ಎಂದು ನೂರಾರು ವಾಹನಗಳು ಪ್ರತಿನಿತ್ಯ ಓಡಾಡುವ ಶ್ರೀರಾಮ ವಿದ್ಯಾ ಕೇಂದ್ರದ ಬಳಿಯ ಹಾಗೂ ಬಡಾಕೆರೆಯ ಸೇತುವೆಗಳು ಶಿಥಿಲವಾಗಿವೆ. ಪೂರ್ಣ ನಾದುರಸ್ತಿಯಲ್ಲಿರುವ ಈ ಎರಡು ಸೇತುವೆಗಳನ್ನು ತೆಗೆದು ಹೊಸದಾಗಿ ರಚಿಸಲು 2 ಕೋ.ರೂ. ಮಂಜೂರಾಗಿದೆ. ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಸೇತುವೆ ರಚನೆಗಾಗಿ ಫೆಬ್ರವರಿಯಲ್ಲೇ ಅನುದಾನವನ್ನು ಮುಖ್ಯಮಂತ್ರಿಗಳಿಂದ ಖುದ್ದು ಮಂಜೂರು ಮಾಡಿಸಿಕೊಂಡು ಬಂದಿದ್ದಾರೆ. ಆದರೆ ಕೊರೊನಾ ಲಾಕ್ಡೌನ್ ಕಾರಣದಿಂದ ಈ ವರೆಗೂ ಯಾವುದೇ ಪ್ರಕ್ರಿಯೆಗಳು ನಡೆದಿರಲಿಲ್ಲ.
ಅಪಾಯದಲ್ಲಿ :
ಸೇತುವೆ ಮೇಲೆ ಹಾಕಿದ್ದ ಡಾಮರು ಎಂದೋ ಎದ್ದು ಹೋಗಿದೆ. ತಡೆಹಿಡಿಕೆಗಳು ತುಕ್ಕು ಹಿಡಿದಿವೆ. ಸೇತುವೆ ಸ್ತಂಭದ ಕಲ್ಲುಗಳು ಕುಸಿಯಲಾರಂಭವಿಸಿವೆ. ಅನೇಕ ಸಮಯದಿಂದ ಈ ಕುರಿತು ಬೇಡಿಕೆ ಇದ್ದರೂ ಸೂಕ್ತ ಸ್ಪಂದನೆ ದೊರೆತಿಲ್ಲ ಎಂಬ ದೂರು ಕೂಡ ಕೇಳಿಬಂದಿತ್ತು.
ಮಳೆಗಾಲದ ಭಯ :
ಇಲ್ಲಿ ಕಾಮಗಾರಿ ಬೇಗ ಆರಂಭಿಸಬೇಕಾದ ಅನಿವಾರ್ಯವೂ ಇದೆ. ಏಕೆಂದರೆ ಒಂದೆಡೆ ಸೇತುವೆ ಶಿಥಿಲವಾಗಿದೆ. ಇನ್ನೊಂದೆಡೆ ಸಮೀಪದ ರಸ್ತೆ, ಮೋರಿ ಕುಸಿತಕ್ಕೊಳಗಾಗುತ್ತಿದೆ. ಅಷ್ಟಲ್ಲದೇ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಬೇಕಿದ್ದು ಬೇಗ ಕಾಮಗಾರಿ ಪೂರ್ಣಗೊಳ್ಳದೇ ಇದ್ದರೆ ಓಡಾಟಕ್ಕೆ ತೊಂದರೆ ಯಾಗಲಿದೆ. ಮಳೆಗಾಲ ಆರಂಭವಾದರೆ ಅರೆಬರೆ ಕಾಮಗಾರಿಯಾದರೆ ಎಲ್ಲವೂ ಅಯೋಮಯ ಆಗಲಿದೆ. ಇಲ್ಲಿ ಫಿಶ್ಮಿಲ್ ಕಾರ್ಖಾನೆಗಳಿಗೆ ಹೋಗುವ ದೊಡ್ಡ ಲಾರಿಗಳು ಸೇರಿದಂತೆ ಘನ ವಾಹನಗಳು ಓಡಾಡುವ ಕಾರಣ ಸೇತುವೆ ಮೇಲಿನ ಓಡಾಟ ತಂತಿ ಮೇಲಿನ ಓಡಾಟದಷ್ಟೇ ಗಂಭೀರವಾಗಿದೆ.
ಕಳೆದ ಒಂದು ವರ್ಷದಿಂದ ಹಂಗಳೂರು, ಎಂ-ಕೋಡಿ, ಹಳೆ ಅಳಿವೆ, ಕೋಡಿ ಬೀಚ್ಗೆ ಸಂಬಂಧಿಸಿದಂತೆ ಓಡಾಟಕ್ಕೆ ವಾಹನಗಳು ಈ ಸೇತುವೆ ಮೇಲೆಯೇ ಭಯದಿಂದ ಸಂಚಾರ ನಡೆಸುತ್ತಿದ್ದವು. ಆದಷ್ಟು ಶೀಘ್ರ ಕಾಮಗಾರಿ ಆರಂಭಿಸಬೇಕು ಎನ್ನುವುದು ಒತ್ತಾಯ. – ಮಹೇಶ್ ಶೆಣೈ ಕುಂಭಾಶಿ ರಿಕ್ಷಾ ಚಾಲಕ, ವಿನಾಯಕ ಪಾರ್ಕಿಂಗ್
ಎರಡು ಸೇತುವೆಗಳ ಕಾಮಗಾರಿಗೆ 2 ಕೋ.ರೂ.ಮಂಜೂರಾಗಿದ್ದು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕೆಲಸಕ್ಕೆ ಆದೇಶ ನೀಡಲಾಗಿದೆ. 1 ವಾರದಲ್ಲಿ ಗುತ್ತಿಗೆ ಪಡೆದವರು ಕೆಲಸ ಆರಂಭಿಸಲಿದ್ದಾರೆ. –ದುರ್ಗಾದಾಸ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಲೋಕೋಪಯೋಗಿ ಇಲಾಖೆ, ಕುಂದಾಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ