ಕುಂದಾಪುರ: ಅಪಾಯದಲ್ಲಿ ಕೋಡಿ ಸೀವಾಕ್‌- ಇಲಾಖೆ ನಿರ್ಲಕ್ಷ್ಯ

ಸಂಭವನೀಯ ಅಪಾಯ ತಡೆಯುವ ನಿಟ್ಟಿನಲ್ಲಿ ಸಂಬಂಧಿತ ಇಲಾಖೆ ಎಚ್ಚೆತ್ತುಕೊಳ್ಳಬೇಕು

Team Udayavani, May 22, 2024, 4:48 PM IST

ಕುಂದಾಪುರ: ಅಪಾಯದಲ್ಲಿ ಕೋಡಿ ಸೀವಾಕ್‌- ಇಲಾಖೆ ನಿರ್ಲಕ್ಷ್ಯ

ಕುಂದಾಪುರ: ಸಾವಿರಾರು ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದುವಾದ ಕುಂದಾಪುರದ ಕೋಡಿ ಸೀ ವಾಕ್‌ ಅಪಾಯದಲ್ಲಿದೆಯೇ ಎಂಬ ಅನುಮಾನ ಕಾಡುತ್ತಿದೆ. ಸದ್ಯ ಪರಿಸ್ಥಿತಿ ಸರಿ ಇದ್ದರೂ ಮುಂಬರುವ ಮಳೆಗಾಲದಲ್ಲಿ ಕಡಲ ಅಲೆಯ ಅಬ್ಬರಕ್ಕೆ ಸೀವಾಕ್‌ ಗೋಡೆಗೆ ಅಪಾಯವಾಗುವ ಸಾಧ್ಯತೆ ದಟ್ಟವಾಗಿದೆ. ಅದರ ಬುಡದಲ್ಲಿದ್ದ ಕಲ್ಲುಗಳು, ವಿಶಿಷ್ಟ ವಿನ್ಯಾಸದ ಕಾಂಕ್ರಿಟ್‌ ಸ್ಲಾಬ್‌ಗಳು ಜಾರಿವೆ.

ಕಳೆದ ಮಳೆಗಾಲದಲ್ಲಿ ಅಲೆಗಳ ಅಬ್ಬರಕ್ಕೆ ನಲುಗಿದ್ದ ಕೋಡಿ ಸೀವಾಕ್‌ ಸೈಡ್‌ವಾಲ್‌ ಇನ್ನೂ ದುರಸ್ತಿಯಾಗಿಲ್ಲ. ಮಳೆಗಾಲ ಆಗಮಿಸಿದಾಗಲೆಲ್ಲ ಅಪಾಯಕಾರಿ ಹಂತದ ನೆನಪಾಗುತ್ತದೆ. ದಿನೇ ದಿನೇ ಹೆಚ್ಚುತ್ತಿರುವ ಅಲೆಗಳ ಅಬ್ಬರಕ್ಕೆ ಕಲ್ಲುಗಳು ಕಡಲಿಗೆ ಜಾರುತ್ತಿದ್ದು, ತಡೆಗೋಡೆಯಲ್ಲಿ ಬಿರುಕು ಮೂಡಿದೆ. ಮುಂಗಾರು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಂಭವನೀಯ ಅಪಾಯ ತಡೆಯುವ ನಿಟ್ಟಿನಲ್ಲಿ ಸಂಬಂಧಿತ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂಬ ಸ್ಥಳೀಯರು ಆಗ್ರಹಿಸಿದ್ದಾರೆ.

ಬ್ರೇಕ್‌ವಾಟರ್‌
2016ರಲ್ಲಿ ಗಂಗೊಳ್ಳಿ-ಕೋಡಿ ಅಳಿವೆ ಪ್ರದೇಶದಲ್ಲಿ 102 ಕೋಟಿ ರೂ. ವೆಚ್ಚದ ಬ್ರೇಕ್‌ ವಾಟರ್‌ ನಿರ್ಮಾಣ ಆರಂಭಗೊಂಡು ಕೋಡಿ ಭಾಗದಿಂದ 900 ಮೀ. ಪಶ್ಚಿಮಕ್ಕೆ ಸಮುದ್ರದಲ್ಲಿ ಬ್ರೇಕ್‌ ವಾಟರ್‌ ಕಾಮಗಾರಿ ನಡೆದಿತ್ತು. ಗಂಗೊಳ್ಳಿಯಲ್ಲೂ ಇದೇ ಮಾದರಿಯಲ್ಲಿದೆ. ಬ್ರೇಕ್‌ ವಾಟರ್‌ ತಡೆಗೋಡೆಯನ್ನೇ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ  ಇಲಾಖೆ ಸೀವಾಕ್‌ ಆಗಿ ಪರಿವರ್ತಿಸಿದೆ.

ಮನವಿ
ಕಳೆದ ಮಳೆಗಾಲದಲ್ಲಿ ಅಲೆಯ ಅಬ್ಬರಕ್ಕೆ ತಡೆಗೋಡೆ ಅಪಾಯಕ್ಕೆ ಸಿಲುಕಿತ್ತು. ಗೋಡೆ ರಕ್ಷಣೆಗೆಂದು ಸುತ್ತಲೂ ಹಾಕಿರುವ ಟೆಟ್ರಾ ಪೋಡ್‌, ಶಿಲೆಯ ಕಲ್ಲುಗಳು ಜಾರಿದ್ದವು. ಸ್ಥಳೀಯರು ಈ ವಿಚಾರವಾಗಿ ಸ್ಥಳೀಯ ಶಾಸಕರಿಗೆ ಮನವಿ ಸಲ್ಲಿಸಿದ್ದು, ಅವರು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಿ ತ ಇಲಾಖಾಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ವರ್ಷ ಸಂದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕಳೆದ ಕೆಲವು ದಿನಗಳಿಂದ ಅಲೆಗಳ ಅಬ್ಬರ ತೀವ್ರಗೊಂಡಿದ್ದು, ಸೀವಾಕ್‌ ತಡೆಗೋಡೆ ಅಪಾಯ ಎದುರಿಸುತ್ತಿದೆ. ಕಲ್ಲುಗಳು ಒಂದೊಂದಾಗಿ ಕಡಲಿಗೆ ಸೇರುತ್ತಿದ್ದರೂ ಯಾವುದೇ ಕ್ರಮ ವಹಿಸದ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾವಿರಾರು ಪ್ರವಾಸಿಗರು
ಇಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಸಾರ್ವಜನಿಕ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಪುರಸಭೆ ನೇತೃತ್ವದಲ್ಲಿ ಕಲ್ಲಿನ ಬೆಂಚು, ಸೋಲಾರ್‌ ದೀಪ ಅಳವಡಿಕೆ ಮಾಡಲಾಗಿದೆ. ಸೀವಾಕ್‌ನಲ್ಲಿ ಅನೈತಿಕ ಚಟುವಟಿಕೆಗಳು, ಮದ್ಯಪಾನಾದಿ ಗೋಷ್ಠಿಗಳು, ಗಾಂಜಾದಂತಹ ಅಮಲು ಸೇವನೆ, ಜೂಜಿನಂತಹ ಅಡ್ಡೆಗಳು ನಡೆಸಲ್ಪಡುತ್ತವೆ ಎನ್ನುವ ಸಾರ್ವಜನಿಕ ದೂರಿನ ಅನ್ವಯ ಭದ್ರತೆಗಾಗಿ ಸೈನ್‌ ಇನ್‌ ಸೆಕ್ಯುರಿಟಿ ಮೂಲಕ ಸಿಸಿ ಕೆಮರಾ ಅಳವಡಿಸಲಾಗಿದೆ. ಪುರಸಭೆ ಮೂಲಕ ಹಾಕಿದ ಸಿಸಿ ಕೆಮೆರಾಗಳು ದಿನದ 24 ತಾಸು ಕಣ್ಗಾವಲಿನಲ್ಲಿ ಇರುತ್ತವೆ. ಇದರ ಒಂದು ಚಿತ್ರಣ ಪೊಲೀಸ್‌ ಠಾಣೆಯಲ್ಲಿ ಇರುತ್ತದೆ.

ವಾರಾಂತ್ಯದಲ್ಲಿ ಮಕ್ಕಳು, ಮಹಿಳೆಯರು ಎಂದು 5ರಿಂದ 7 ಸಾವಿರ ಪ್ರವಾಸಿಗರು ಆಗಮಿಸುತ್ತಾರೆ. ಅಂದಾಜು 1.5 ಕಿ.ಮೀ. ಉದ್ದದ ಸೀವಾಕ್‌ ಪಥ ಸದ್ಯ ಆಕರ್ಷಣೆಯ ಕೇಂದ್ರಬಿಂದು. ಪ್ರವಾಸಿಗರು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ಅಲೆಗಳ ಹೊಡೆತದಿಂದ ಕಲ್ಲುಗಳು ಜಾರಿದ್ದು ಸೀವಾಕ್‌ ತುದಿಗೆ ಹೋಗುವವರು ಮುನ್ನೆಚ್ಚರಿಕೆ ವಹಿಸಬೇಕು ಎನ್ನುತ್ತಾರೆ ಪುರಸಭೆ ಮಾಜಿ ಸದಸ್ಯ ನಾಗರಾಜ್‌ ಕಾಂಚನ್‌.

ಅಪಾಯದಲ್ಲಿದೆ
ಕೋಡಿ ಬೀಚ್‌ ಸೀವಾಕ್‌ ತಡೆಗೋಡೆ ಅಪಾಯ ಎದುರಿಸುತ್ತಿದೆ. ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಸಂಬಂಧಪಟ್ಟ ಇಲಾಖೆಯವರಿಗೆ ಸೂಚನೆ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದೀಗ ಅಲೆಯ ಹೊಡೆತಕ್ಕೆ ಅಳಿದುಳಿದ ಕಾಂಕ್ರೀಟ್‌ ಸ್ಲಾಬ್‌ಗಳು, ಕಲ್ಲುಗಳು ಸಮುದ್ರಪಾಲಾಗಿದೆ. ತಡೆಗೋಡೆಯಲ್ಲಿ ಬಿರುಕು ಮೂಡಿದೆ.
*ಅಶೋಕ ಪೂಜಾರಿ ಕೋಡಿ, ಸ್ಥಳೀಯರು

ತತ್‌ಕ್ಷಣ ದುರಸ್ತಿಗೆ ಸೂಚನೆ ಕೋಡಿ ಸೀವಾಕ್‌ ಅಪಾಯದಲ್ಲಿದ್ದರೆ ಪ್ರವಾಸಿಗರಿಗೆ ತೊಂದರೆಯಾಗದಂತೆ, ತತ್‌ಕ್ಷಣ ಪರಿಶೀಲಿಸಿ ದುರಸ್ತಿಪಡಿಸಲು ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡುತ್ತೇನೆ. ಕುಂದಾಪುರಕ್ಕೆ ಪ್ರವಾಸಿಗರ ಆಗಮನ ಹೆಚ್ಚಾಗಲು, ಕುಂದಾಪುರ ಪ್ರವಾಸೋದ್ಯಮ ಕೇಂದ್ರವಾಗಲು ಸೀವಾಕ್‌ ಕೂಡ ಕಾರಣ.
*ರಶ್ಮೀ ಎಸ್‌.ಆರ್‌. ಸಹಾಯಕ ಕಮಿಷನರ್‌, ಕುಂದಾಪುರ

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

Uppunda ಶಾರ್ಟ್ ಸರ್ಕ್ಯೂಟ್: ಅಂಗಡಿ ಭಸ್ಮ

Uppunda ಶಾರ್ಟ್ ಸರ್ಕ್ಯೂಟ್: ಅಂಗಡಿ ಭಸ್ಮ

Kolluru Mookambika: ದರ್ಶನ್‌ ಬಂಧಮುಕ್ತಿಗಾಗಿ ಮೂಕಾಂಬಿಕೆಯ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ

Kollur Mookambika: ದರ್ಶನ್‌ ಬಂಧಮುಕ್ತಿಗಾಗಿ ಮೂಕಾಂಬಿಕೆಯ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.