ಬದಲಾವಣೆಗೆ ಆಗ್ರಹ: ಕುಂದಾಪುರ ತಾ.ಪಂ. ಕಚೇರಿಯೆದುರು ಧರಣಿ

ಕೆದೂರು ಪಿಡಿಒ ಕರ್ತವ್ಯ ಲೋಪ

Team Udayavani, Mar 24, 2022, 12:02 PM IST

dharani

ಕುಂದಾಪುರ: ತಾಲೂಕಿನ ಕೆದೂರು ಗ್ರಾ.ಪಂ.ನಲ್ಲಿ ಅಧಿಕಾರಿಗಳಿಂದ ಸಮರ್ಪಕ ಕೆಲಸವಾಗುತ್ತಿಲ್ಲ ಎಂದು ಅಧಿಕಾರಿಗಳ ಕರ್ತವ್ಯ ಲೋಪದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಹಾಗೂ ಪಿಡಿಒ ಬದಲಾವಣೆಗೆ ಆಗ್ರಹಿಸಲಾಗಿದೆ. ಕೆದೂರು ಗ್ರಾ.ಪಂ. ಜನಪ್ರತಿನಿಧಿಗಳು ಹಾಗೂ ನಾಗರಿಕರು ಕುಂದಾಪುರ ತಾ.ಪಂ. ಎದುರು ಬುಧವಾರ ಧರಣಿ ನಡೆಸಿದರು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕೆದೂರಿನಲ್ಲಿ ನಡೆದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ’ ಕಾರ್ಯಕ್ರಮದಲ್ಲಿ ನೀಡಲಾದ ಯಾವ ಮನವಿ, ಕೋರಿಕೆ, ಸಮಸ್ಯೆಗಳಿಗೆ ಒಂದಷ್ಟೂ ಗಮನ ನೀಡದ ಸರಕಾರದ ಅಧಿಕಾರಿಗಳ ಬಗ್ಗೆ ನಂಬಿಕೆಯಿಲ್ಲ ಎಂದು ದೂರಿದರು. ನಾಗರಿಕರ ಪರವಾಗಿ ಮಾತನಾಡಿದ ನಿವೃತ್ತ ಶಿಕ್ಷಣಾಧಿಕಾರಿ ಕೆ. ಸೀತಾರಾಮ ಶೆಟ್ಟಿ, ಪಂ.ನ ಆಡಳಿತ ಹದಗೆಟ್ಟರೆ, ನ್ಯಾಯ, ಕಾನೂನು ಹಾಗೂ ಸಾಮಾಜಿಕ ಭದ್ರತೆ ಮುರಿದು ಬಿದ್ದರೆ, ಜನ ಯಾವ ಸರಕಾರವನ್ನು, ಆಡಳಿತ, ಕಾನೂನನ್ನು ನಂಬುವುದಿಲ್ಲ ಎಂದರು.

ಪಿಡಿಒ ಹಾಗೂ ಇತರ ಅಧಿಕಾರಿಗಳು ಕಚೇರಿಗೆ ಸರಿಯಾಗಿ ಹಾಜರಾಗುವುದಿಲ್ಲ. ಪಿಡಿಒ ವಾರಕ್ಕೆ ಎರಡೇ ದಿನ ಬರುತ್ತಾರೆ. ಅದೂ ಮಧ್ಯಾಹ್ನ! ಮೀಟಿಂಗ್‌ ನಡೆದರೆ ಎರಡೂವರೆ ತಿಂಗಳ ಬಳಿಕ ನಿರ್ಣಯ ಬರೆಯುತ್ತಾರೆ. ನರೇಗಾ ಕಾಮಗಾರಿ ಸೇರಿದಂತೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಗ್ರಾ.ಪಂ.ಗೆ 4 ಲಕ್ಷ ರೂ. ತೆರಿಗೆ ಬಾಕಿ ಇದೆ. ಕುಂದಾಪುರ ತಾಲೂಕಿನಲ್ಲಿ ಮೊತ್ತಮೊದಲು ಆರ್‌ಟಿಐ ತರಬೇತಿ ನೀಡಿದ ನನಗೇ ಆರ್‌ಟಿಐ ಮಾಹಿತಿ ತಿರುಚಿ ನೀಡಲಾಗುತ್ತದೆ ಎಂದರು. ಪಂ.ಸದಸ್ಯರು ನಮಗೆ ಈ ಪಿಡಿಒ ಬೇಡ, ಬದಲಿಸಿ ಎಂದು ಒತ್ತಾಯಿಸಿದರು.

ತಾ.ಪಂ. ಕಾರ್ಯನಿರ್ವಹಣಾಧಿಕಾರಿ, ಸಮಾಜ ಕಲ್ಯಾಣಾಧಿಕಾರಿ ಅವರು ಧರಣಿ ನಿರತರ ಬಳಿ ಮನವಿ ಮಾಡಿದರು. ಮೊದಲು ಮನವಿಗೆ ಒಪ್ಪದೇ ಇದ್ದರೂ ಬಳಿಕ ಅಧಿಕಾರಿಗಳ ಮಾತಿಗೆ ಬೆಲೆ ನೀಡಿದರು. ಕಾರ್ಯ ನಿರ್ವಹಣಾಧಿಕಾರಿ ಶ್ವೇತಾ ಅವರು ಮನವಿ ಸ್ವೀಕರಿಸಿ ಎಪ್ರಿಲ್‌ ತಿಂಗಳ ಒಳಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಕೆದೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ, ಉಪಾಧ್ಯಕ್ಷೆ ಮಾಲತಿ, ಸದಸ್ಯರಾದ ಭುಜಂಗ ಶೆಟ್ಟಿ, ಸತೀಶ್‌ ಶೆಟ್ಟಿ, ಪ್ರಶಾಂತ್‌ ಶೆಟ್ಟಿ, ಗುಬ್ಬಿ, ಜಲಜಾ, ವಿಜಯ ಶೆಟ್ಟಿ, ಉಲ್ಲಾಸ್‌ ಹೆಗ್ಡೆ, ಜ್ಯೋತಿ, ಸ್ಥಳೀಯರಾದ ಧರ್ಮರಾಜ್‌ ಮೊದಲಿಯಾರ್‌, ಶಾರದಾ, ಪ್ರಕಾಶ್‌ ಮೊದಲಾದವರಿದ್ದರು. ತಾ.ಪಂ. ಕಚೇರಿಯ ಪ್ರವೇಶದ್ವಾರ ದಲ್ಲೇ ಧರಣಿ ಕುಳಿತಿದ್ದ ಕಾರಣ ಅಧಿಕಾರಿಗಳಿಗೆ ಪ್ರತಿಭಟನಕಾರರನ್ನು ದಾಟಿ ಕಚೇರಿಗೆ ಒಳಪ್ರವೇಶಿಸುವುದು ಸಾಧ್ಯವಿರಲಿಲ್ಲ. ಅಹವಾಲು ಕೇಳಿಯೇ ಹೋಗಬೇಕಿತ್ತು. ಅಧಿಕಾರಿಗಳ ಭರವಸೆ ಆರಂಭವಾಗುತ್ತಿದ್ದಂತೆಯೇ ಪ್ರತಿಭಟನ ಕಾರರು ಕೈ ಮುಗಿದು ನಿಮ್ಮ ಭರವಸೆ ಕೇಳಿ ಸಾಕಾಗಿದೆ ಎನ್ನುತ್ತಿದ್ದರು.

ಕರ್ತವ್ಯ ಪಾಲಿಸಲ್ಲ

ಪಿಡಿಒ ಸರಿಯಾಗಿ ಕರ್ತವ್ಯ ಪಾಲಿಸದ ಕಾರಣ ಇತರ ಅಧಿಕಾರಿಗಳೂ ಅದೇ ದಾರಿಯಲ್ಲಿದ್ದಾರೆ. ಸಾರ್ವಜನಿಕ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ನರೇಗಾ ಅನುದಾನ ಬಂದಿಲ್ಲ. ಗ್ರಾ.ಪಂ. ಗೆ ತೆರಿಗೆ ವಸೂಲಿಗೆ ಬಾಕಿ ಇದ್ದರೂ ಮಾಡಿಲ್ಲ. ಆದ್ದರಿಂದ ಈ ಪಿಡಿಒ ನಮ್ಮ ಪಂಚಾಯತ್‌ಗೆ ಬೇಡ. -ಕೆ. ಸೀತಾರಾಮ ಶೆಟ್ಟಿ ನಿವೃತ್ತ ಅಧಿಕಾರಿ

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.