ಕುಂದಾಪುರ:  ಜನರ ಬೇಡಿಕೆಗಳು ಹತ್ತು ಹಲವು


Team Udayavani, Apr 22, 2018, 6:05 AM IST

Namma-Pranalike-600.jpg

ಉಡುಪಿ ಜಿಲ್ಲೆಯ ಅತಿ ದೊಡ್ಡ ವಿಧಾನಸಭಾ ಕ್ಷೇತ್ರ ಎನ್ನುವ ಹೆಗ್ಗಳಿಕೆಯ ಕುಂದಾಪುರದಲ್ಲಿ ಬಹುಮುಖ್ಯವಾಗಿ ಆಗಲೇಬೇಕಾದ
ಬೇಡಿಕೆಗಳ ಪಟ್ಟಿ ಇಲ್ಲಿದೆ. ಉತ್ತರ ಕರ್ನಾಟಕ ಮತ್ತು ಕರಾವಳಿ-ತುಳುನಾಡಿನ ನಡುವೆ ಕೊಂಡಿಯಂತಿರುವ ಇಲ್ಲಿ ಪ್ರವಾಸೋದ್ಯಮ, ವಾರಾಹಿ, ಅರಣ್ಯ ಹೀಗೆ ಈಡೇರಬೇಕಾದ ಬೇಡಿಕೆಗಳಿರುವ ಹಲವು ರಂಗಗಳಿವೆ.

ಫ್ಲೆ ಓವರ್‌
ಕಾಮಗಾರಿ ಆರಂಭವಾಗಿ 5 ವರ್ಷ ಕಳೆದರೂ ಕುಂದಾಪುರದ ಶಾಸ್ತ್ರಿ ಸರ್ಕಲ್‌ ಬಳಿ ಫ್ಲೆ$çಓವರ್‌ ಕಾಮಗಾರಿ ಚುರುಕುಗೊಂಡಿಲ್ಲ. ಈ ಕಾರ್ಯ ಪೂರ್ಣಗೊಳ್ಳದೆ ಕುಂದಾಪುರ ಪೇಟೆ ಭಾಗದ ಅಭಿವೃದ್ಧಿಯೂ ಕುಂಠಿತಗೊಂಡಿದೆ.

ಹೆದ್ದಾರಿ ವಿಸ್ತರಣೆ
ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ವಿಸ್ತರಣೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವ ಕಾರಣ ಸಂಚಾರ ಸಮಸ್ಯೆ ಗಂಭೀರವಾಗಿದೆ. ಕೆಲವು ಕಡೆ ಅಪಘಾತ ಗಳೂ ಸಂಭವಿಸುತ್ತಿವೆ. ಕೆಲಸ ಚುರುಕಾಗಬೇಕಿದೆ.

ಗಂಗೊಳ್ಳಿ- ಕೋಡಿ ಸೇತುವೆ
ಕುಂದಾಪುರದಿಂದ ಗಂಗೊಳ್ಳಿಗೆ ರಸ್ತೆಯಲ್ಲಿ 15 ಕಿ.ಮೀ. ಕ್ರಮಿಸಬೇಕು. ಕೋಡಿ- ಗಂಗೊಳ್ಳಿ ಸೇತುವೆ ನಿರ್ಮಾಣವಾದರೆ ಕುಂದಾಪುರ – ಗಂಗೊಳ್ಳಿ ಸಂಪರ್ಕ ಇನ್ನಷ್ಟು ಹತ್ತಿರವಾಗಲಿದೆ. ಮೀನುಗಾರಿಕೆಗೂ ಪ್ರಯೋಜನವಾಗಲಿದೆ.

ಆರ್‌ಟಿಒ ಕಚೇರಿ
ಜನರು ವಾಹನ ನೋಂದಣಿಗೆ ಕುಂದಾಪುರ ದಿಂದ 45 ಕಿ.ಮೀ., ಬೈಂದೂರಿನಿಂದ 75 ಕಿ.ಮೀ. ದೂರದ ಮಣಿಪಾಲಕ್ಕೆ ಹೋಗಬೇಕು. ಕುಂದಾಪುರದಲ್ಲಿ ಪ್ರಾದೇಶಿಕ ಸಾರಿಗೆ (ಆರ್‌ಟಿಒ) ಕಚೇರಿ ಅತ್ಯಂತ ಜರೂರಾಗಿ ಆಗಬೇಕು.

ಮಹಿಳಾ ಠಾಣೆ
ಹಿಂದೆ ಇದ್ದ ಮಹಿಳಾ ಪೊಲೀಸ್‌ ಠಾಣೆ ಯನ್ನು ಉಡುಪಿಗೆ ವರ್ಗಾಯಿಸಿದ್ದು, ಈಗ ಮತ್ತೆ ಇಲ್ಲಿ ಮಹಿಳಾ ಸಂಬಂಧಿ ದೂರು, ಪ್ರಕರಣ ಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಮತ್ತೆ ಮಹಿಳಾ ಠಾಣೆಗೆ ಬೇಡಿಕೆ ಕೇಳಿಬಂದಿದೆ.

ವಾರಾಹಿ “ಮುಕ್ತಿ ‘ ಸಿಗಬಹುದೇ?
ಮೂರು ದಶಕಗಳಿಂದ ನನೆಗುದಿಗೆ ಬಿದ್ದಿ ರುವ ಬಹುಕೋಟಿ ರೂ. ವೆಚ್ಚದ ವಾರಾಹಿ ನದಿ ನೀರಿನ ಯೋಜನೆ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಂಡರೆ ಸಿದ್ದಾಪುರ, ಶಂಕರನಾರಾಯಣ ಭಾಗದ ಕೃಷಿ ಭೂಮಿಗೆ ಅನುಕೂಲವಾಗಲಿದೆ. 

ಮೀನುಗಾರಿಕೆಗೆ ಒತ್ತು
ಕುಂದಾಪುರದ 15,000ಕ್ಕೂ ಅಧಿಕ ಮಂದಿ ಮೀನುಗಾರಿಕೆ ವೃತ್ತಿ ಅವಲಂಬಿಸಿದ್ದಾರೆ. ಜೆಟ್ಟಿ ವಿಸ್ತರಣೆ, ಜೆಟ್ಟಿ , ಕೆರೆಯಂತಹ ಒಳನಾಡು ಮೀನುಗಾರಿಕೆಗೆ ಪ್ರಾತಿನಿಧ್ಯ ಸಿಗುತ್ತಿಲ್ಲ. ಐಸ್‌ ಪ್ಲಾಂಟ್‌, ಸಂಸ್ಕರಣ ಘಟಕಗಳು ಹೆಚ್ಚಾಗಬೇಕು.

ಸಿಆರ್‌ಝಡ್‌ ಸಮಸ್ಯೆ
ಕುಂದಾಪುರದ ಹೆಚ್ಚಿನ ಭಾಗ ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್‌) ವ್ಯಾಪ್ತಿಯಲ್ಲಿರುವುದರಿಂದ ನಿರ್ಮಾಣ ಕಾರ್ಯಗಳಿಗೆ ತೊಡಕಾಗಿದೆ. ಸಿಆರ್‌ಝಡ್‌ ಪ್ರದೇಶವನ್ನು ಸರಿಯಾದ ರೀತಿಯಲ್ಲಿ ಶೀಘ್ರ ಗುರುತಿಸಬೇಕಿದೆ.

ಸರಕಾರಿ ಎಂಜಿನಿಯರಿಂಗ್‌ ಕಾಲೇಜು
ತಾಲೂಕಿನಲ್ಲಿ ಕೇವಲ ಒಂದು ಖಾಸಗಿ ಎಂಜಿನಿಯರಿಂಗ್‌ ಕಾಲೇಜು ಇದೆ. ಸರಕಾರಿ ಕಾಲೇಜಿನ ಕೊರತೆಯಿಂದಾಗಿ ಗ್ರಾಮೀಣ ವಿದ್ಯಾರ್ಥಿ ಗಳು ಎಂಜಿನಿಯರಿಂಗ್‌ನಲ್ಲಿ ಆಸಕ್ತಿ ಇದ್ದರೂ ಶಿಕ್ಷಣ ಪಡೆಯಲು ಅಸಾಧ್ಯವಾಗಿದೆ.

ಪುರಭವನ ಬೇಕು
ಸಾಕಷ್ಟು ನಾಟಕ, ಸಭೆ, ಸಮಾರಂಭಗಳು ನಡೆಯುತ್ತಿದ್ದರೂ ತಾಲೂಕು ಕೇಂದ್ರವಾಗಿ ರುವ ಕುಂದಾಪುರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ದೊಡ್ಡ ಮಟ್ಟದಲ್ಲಿ ಆಯೋಜಿಸಲು ಪುರಭವನದ‌ಂತಹ ಸರಿಯಾದ ವೇದಿಕೆಗಳಿಲ್ಲ.

ರಸಗೊಬ್ಬರ ದಾಸ್ತಾನು ಕೇಂದ್ರ
ಕೃಷಿಗೆ ಉತ್ತೇಜನ ನೀಡುವ ಸಲುವಾಗಿ ರಸಗೊಬ್ಬರ ದಾಸ್ತಾನು ಕೇಂದ್ರ ನಿರ್ಮಾಣವಾಗಬೇಕಿದೆ. ಸಕಾಲದಲ್ಲಿ ಸೂಕ್ತ ರಸಗೊಬ್ಬರಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಾಗದೆ ಕೃಷಿಕರಿಗೆ ಸಮಸ್ಯೆಯಾಗಿದೆ.

ಡೀಮ್ಡ್ ಫಾರೆಸ್ಟ್‌
ಡೀಮ್ಡ್ ಫಾರೆಸ್ಟ್‌ ಸಮಸ್ಯೆಯಿಂದಾಗಿ ಈ ಭಾಗದ ಜನತೆ ಗೃಹ ನಿರ್ಮಾಣಕ್ಕೆ ಪಡಿಪಾಟಲು ಅನುಭವಿಸುತ್ತಿದ್ದಾರೆ. ಕೂಡಲೇ ಈ ಬಗ್ಗೆ ಸ್ಪಂದಿಸಿ ಸಮಸ್ಯೆ ನಿವಾರಿಸಿ ಜನರ ಸ್ವಂತ ಮನೆ ಕನಸನ್ನು ನನಸಾಗಿಸಬೇಕು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Gangolli “ವರ್ಕ್‌ ಫ್ರಂ ಹೋಮ್‌’ಹೆಸರಲ್ಲಿ ವಂಚನೆ

Gangolli “ವರ್ಕ್‌ ಫ್ರಂ ಹೋಮ್‌’ಹೆಸರಲ್ಲಿ ವಂಚನೆ

Kundapura: ಕಾಲು ಜಾರಿ ಹೊಳೆಗೆ ಬಿದ್ದು ಮಹಿಳೆ ಮೃತ್ಯು

Kundapura: ಕಾಲು ಜಾರಿ ಹೊಳೆಗೆ ಬಿದ್ದು ಮಹಿಳೆ ಮೃತ್ಯು

Siddapura: ಬೈಕ್‌ ಮುಖಾಮುಖಿ ಢಿಕ್ಕಿ; ಗಂಭೀರ ಗಾಯ

Siddapura: ಬೈಕ್‌ ಮುಖಾಮುಖಿ ಢಿಕ್ಕಿ; ಗಂಭೀರ ಗಾಯ

Road Mishap; ಮುಳ್ಳಿಕಟ್ಟೆ: ಸರಣಿ ಅಪಘಾತ; ನಾಲ್ವರಿಗೆ ಗಾಯ

Road Mishap; ಮುಳ್ಳಿಕಟ್ಟೆ: ಸರಣಿ ಅಪಘಾತ; ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.