ಕುಂದಾಪುರ:ಕೊನೆಗೂ ಬಂತು ತಾ.ಪಂ. ಅನುದಾನದ ಕಂತು
Team Udayavani, May 27, 2022, 11:52 PM IST
ಕುಂದಾಪುರ: ಕುಂದಾಪುರ ತಾ.ಪಂ. ವ್ಯಾಪ್ತಿಯಲ್ಲಿ ನಡೆದ ಕಾಮಗಾರಿಗಳಿಗೆ ಎರಡು ವರ್ಷಗಳಿಂದ ಅನುದಾನ ಬಿಡುಗಡೆ ಯಾಗದ ಪ್ರಕರಣ ಕೊನೆಗೂ ಇತ್ಯರ್ಥಗೊಂಡಿದೆ. ಪೂರ್ಣಗೊಂಡ 13 ಕಾಮಗಾರಿಗಳ 47.69 ಲಕ್ಷ ರೂ. ಬಿಡುಗಡೆಯಾಗಿದೆ.
ರಾಜ್ಯದ ಉಳಿದೆಲ್ಲ ತಾ.ಪಂ.ಗಳಿಗೆ ಹಣ ಬಂದರೂ ಕುಂದಾ ಪುರ ಮಾತ್ರ ಬಾಕಿಯಾಗಿತ್ತು. 15ನೇಹಣಕಾಸು ಯೋಜನೆಯಡಿ 2020-21 ನೇ ಸಾಲಿನಲ್ಲಿ ಉಡುಪಿ ಜಿಲ್ಲೆಗೆ 8 ಕೋ.ರೂ., ದ.ಕ. ಜಿಲ್ಲೆಗೆ 10 ಕೋ.ರೂ. ಬಿಡುಗಡೆ ಯಾಗಿತ್ತು. 2020ರ ಜೂ. 19ರಂದು ಒಂದನೇ ಕಂತಿನ ಅನಿರ್ಬಂಧಿತ ಅನುದಾನ, ಜೂ. 22ರಂದು ಅನಿರ್ಬಂಧಿತ ಅನುದಾನ, 2021ರ ಫೆ. 3ರಂದು ಎರಡನೇ ಕಂತಿನ ಅನಿರ್ಬಂಧಿತ ಅನುದಾನ, 2021ರ ಮಾ. 30ರಂದು ಎರಡನೇ ಕಂತಿನ ನಿರ್ಬಂಧಿತ ಅನುದಾನ ಬಿಡುಗಡೆಯಾಗಿತ್ತು. ಮೊದಲ ಕಂತಿನ ಅನುದಾನ 47.69 ಲಕ್ಷ ರೂ. 2020ರ ಆ. 29ರಂದು ಬಿಡುಗಡೆಯಾಗಿತ್ತು. ಎರಡನೇ ಕಂತು 47.69 ಲಕ್ಷ ರೂ. ತಾ.ಪಂ. ಖಾತೆಗೆ ಜಮೆಯಾಗಲು ಬಾಕಿಯಾಗಿತ್ತು. ಈ ಕುರಿತು ಪತ್ರ ವ್ಯವಹಾರ ನಡೆಸಿದ್ದರೂ ಪ್ರತಿ ಕ್ರಿಯೆ ಸಕಾರಾತ್ಮಕವಾಗಿರಲಿಲ್ಲ.
ತಾ.ಪಂ. ಅನುದಾನ ಬಾಕಿ ಯಾದ ಕುರಿತು “ಉದಯವಾಣಿ’ ಮೇ 1ರಂದು “ಕುಂದಾಪುರ ತಾ.ಪಂ.: 2 ವರ್ಷವಾದರೂ ಬಾರದ ಅನುದಾನ, ರಾಜ್ಯದ ಬೇರೆಲ್ಲ ಕಡೆಗೂ ಬಿಡುಗಡೆ; ಇದೊಂದು ಮಾತ್ರ ಬಾಕಿ’ ಎಂದು ವರದಿ ಪ್ರಕಟಿಸಿತ್ತು. ವರದಿಗೆ ಉಡುಪಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಡಾ| ನವೀನ್ ಭಟ್, ಜಿ.ಪಂ. ಯೋಜನಾ ನಿರ್ದೇಶಕ ಶ್ರೀನಿವಾಸ ರಾವ್ ಮೊದಲಾದವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!