Kundapura 39 ವರ್ಷದ ಹಿಂದಿನ ಪ್ರಕರಣದ ಆರೋಪಿ ಸೆರೆ
Team Udayavani, Nov 11, 2023, 10:46 PM IST
ಕುಂದಾಪುರ: ಕಳೆದ 39 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ, ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ. ಗುಜ್ಜಾಡಿಯ ನಿವಾಸಿ ಪ್ರಕಾಶ್ (62) ಬಂಧಿತ ಆರೋಪಿ.
1984ರಲ್ಲಿ ಹಲ್ಲೆ ಪ್ರಕರಣವೊಂದರ ಆರೋಪಿಯಾಗಿರುವ ಪ್ರಕಾಶ್ ಕಳೆದ 39 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಮುಂಬಯಿಯಲ್ಲಿ ಗಣೇಶ್ ಎಂಬ ಹೆಸರು ಬದಲಾಯಿಸಿಕೊಂಡು, ತಿರುಗಾಡುತ್ತಿದ್ದರು. ಅನೇಕ ವರ್ಷಗಳಿಂದ ಊರಿಗೆ ಬಂದಿರಲಿಲ್ಲ.
ಮುಂಬಯಿಯಲ್ಲಿರುವ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಕುಂದಾಪುರದ ನಿರೀಕ್ಷಕ ನಂದ ಕುಮಾರ್ಯು.ಬಿ. ನೇತೃತ್ವದಲ್ಲಿ ಎಸ್ ಐ ವಿನಯ ಎಂ. ಕೊರ್ಲಹಳ್ಳಿ, ಸಿಬಂದಿಯಾದ ಶ್ರೀಧರ, ರಾಮ, ಸಂತೋಷ್, ಚಂದ್ರಶೇಖರ ಅವರ ತಂಡ ಕಾರ್ಯಾಚರಣೆ ನಡೆಸಿ, ಮುಂಬಯಿನ ಅಂಧೇರಿ ಈಸ್ಟ್ ಪರಿಸರದ ಸಾಕಿನಾಕ ಎಂಬಲ್ಲಿ ಗುರುವಾರ ಬಂಧಿಸಿದ್ದಾರೆ. ಸೆರೆ ಸಿಕ್ಕ ಆರೋಪಿಯನ್ನು ಶುಕ್ರವಾರ ಕುಂದಾಪುರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ
Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!
ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼKGF -3ʼ.. ಬಿಗ್ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ