Kundapura: ಆಜ್ರಿಯ ಯುವಕನನ್ನು ವರಿಸಿದ ಜರ್ಮನಿ ಯುವತಿ
Team Udayavani, Jan 2, 2024, 9:54 AM IST
ಸಿದ್ದಾಪುರ: ಕುಂದಾಪುರದ ಆಜ್ರಿಯ ಯುವಕ ಮತ್ತು ಜರ್ಮನಿಯ ಯುವತಿ ಹಿಂದೂ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಜ. 1ರಂದು ಕಾಲಿರಿಸಿದರು.
ಕುಂದಾಪುರ ತಾಲೂಕಿನ ಗ್ರಾಮೀಣ ಭಾಗವಾದ ಆಜ್ರಿಯ ಕರಿಮನೆ ಸುವರ್ಣ ಮತ್ತು ಪಂಜು ಪೂಜಾರಿ ದಂಪತಿಯ ಪುತ್ರ ಚಂದನ್ ಹಾಗೂ ಜರ್ಮನಿಯ ಪೆಟ್ರ ಶ್ರೂಆರ್ ಮತ್ತು ಪೀಟರ್ ಶ್ರೂಆರ್ ದಂಪತಿಯ ಪುತ್ರಿ ಕಾರಿನ್ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವ ಜೋಡಿ. ಎರಡೂ ಕುಟುಂಬಗಳು ಮದುವೆಗೆ ಸಾಕ್ಷಿಯಾದವು.
ನಿವೃತ್ತ ಸೇನಾಧಿಕಾರಿಯಾದ ಪಂಜು ಪೂಜಾರಿ ಅವರ ಪುತ್ರ ಚಂದನ್ ಅವರು ಜರ್ಮನಿಯಲ್ಲಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶಿಕ್ಷಕಿಯಾಗಿರುವ ಕಾರಿನ್ ಅವರೊಂದಿಗೆ ಪ್ರೇಮಾಂಕುರವಾಗಿತ್ತು.
ಇಬ್ಬರು ತಮ್ಮ ಪ್ರೇಮಾಂಕುರದ ಬಗ್ಗೆ ತಮ್ಮ ತಂದೆ ತಾಯಿಯೊಂದಿಗೆ ಚರ್ಚಿಸಿದರು. ಈ ಮದುವೆಗೆ ಎರಡು ಕುಟುಂಬಗಳು ಪರಸ್ಪರ ಚರ್ಚಿಸಿ, ಒಪ್ಪಿಗೆ ಸೂಚಿಸಿದರು. ಎರಡು ಕುಟುಂಬಗಳ ಒಪ್ಪಿಗೆಯ ಮೇರೆಗೆ ನವ ಜೋಡಿಗಳು ಸಿದ್ದಾಪುರ ಸಮೀಪದ ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಎರಡು ಕಡೆಯ ಬಂಧು-ಮಿತ್ರರು, ಹಿತೈಷಿಗಳು ಪಾಲ್ಗೊಂಡು ನವಜೋಡಿಗಳಿಗೆ ಶುಭಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ