ಕುಂದಾಪುರ: ಆರೋಗ್ಯ ಸಿಬ್ಬಂದಿಗಳ ಎಡವಟ್ಟು, ಸ್ಮಶಾನದಲ್ಲಿ ಮೃತದೇಹ ಅದಲು ಬದಲು!
Team Udayavani, Aug 23, 2020, 12:19 PM IST
ಕುಂದಾಪುರ: “ನಿಮ್ಮ ತಂದೆ ಕೋವಿಡ್ ಸೋಂಕಿನಿಂದ ಮೃತರಾಗಿದ್ದಾರೆ ಎಂದು ಆಸ್ಪತ್ರೆಯಿಂದ ಕರೆ ಬರುತ್ತದೆ. ಮೃತದೇಹ ಅಂತ್ಯಸಂಸ್ಕಾರಕ್ಕೆಂದು ಸ್ಮಶಾನಕ್ಕೆಂದು ಹೋದಾಗ ಅಲ್ಲಿ ಅಪ್ಪನ ಮೃತದೇಹ ನೋಡಲು ಅವಕಾಶವಿಲ್ಲ. ಆದರೂ ಒತ್ತಾಯಪೂರ್ವಕವಾಗಿ ಕೊನೆಯ ಬಾರಿಗೆ ಅಪ್ಪನ ಮುಖ ನೋಡಿದ ಮಗನಿಗೆ ಕಾದಿತ್ತು ಆಘಾತ. ಕಾರಣ ಅಲ್ಲಿ ಹೆಣವಾಗಿ ಮಲಗಿದ್ದು ಅಪ್ಪನಲ್ಲ, ಬದಲಾಗಿ ಇನ್ಯಾರೋ ಯುವಕ!”
ಇದು ಉಡುಪಿ ಜಿಲ್ಲೆಯ ಕುಂದಾಪುರದ ಸ್ಮಶಾನದಲ್ಲಿ ಕಂಡುಬಂದ ವಿಚಿತ್ರ ದೃಶ್ಯ. ಯಾರದ್ದೋ ಹೆಸರಿನಲ್ಲಿ ಇಲ್ಲಿ ಬೇರೆ ಯಾರದ್ದೋ ದೇಹದ ಅಂತ್ಯ ಸಂಸ್ಕಾರಕ್ಕೆ ಇಲ್ಲಿ ಸಿದ್ದತೆ ನಡೆದಿತ್ತು.
ಕುಂದಾಪುರದ ನೇರಂಬಳ್ಳಿ ನಿವಾಸಿ 60 ವರ್ಷದ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಕುಂದಾಪುರ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ನಂತರ ಕೋವಿಡ್ ಪಾಸಿಟವ್ ಆಗಿದೆ ಎಂದು ಅವರನ್ನು ಉಡುಪಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬೆಳಿಗ್ಗೆ ಉಡುಪಿ ಆಸ್ಪತ್ರೆಯಿಂದ ವ್ಯಕ್ತಿಯ ಮನೆಗೆ ಕರೆ ಮಾಡಿ, ನಿಮ್ಮ ತಂದೆ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ನಾವೇ ಅಂತ್ಯ ಸಂಸ್ಕಾರ ಮಾಡುತ್ತೇವೆ ಎಂದಿದ್ದರು. ನಂತರ ಮನೆಯವರ ಒತ್ತಾಯಕ್ಕೆ ಆರೋಗ್ಯ ಸಿಬ್ಬಂದಿಗಳು ಮೃತದೇಹವನ್ನು ಕುಂದಾಪುರ ಸ್ಮಶಾನಕ್ಕೆ ತಂದಿದ್ದರು.
ಇದನ್ನೂ ಓದಿ: ಪೊಲೀಸ್ ಇಲಾಖೆಯಲ್ಲೋರ್ವ ಪಾಕ್ ಪ್ರೇಮಿ: ಪವರ್ ಆಫ್ ಪಾಕಿಸ್ತಾನ ಪೇಜ್ ಶೇರ್ ಮಾಡಿದ ಪೇದೆ
ಸ್ಮಶಾನದಲ್ಲಿ ಮೃತದೇಹದ ಅಂತಿಮ ದರ್ಶನ ಪಡೆಯಲು ಮನೆಯವರು ಒತ್ತಾಯಿಸಿದಾಗ ಆರಂಭದಲ್ಲಿ ಅನುಮತಿ ನೀಡಿರಲಿಲ್ಲ. ಆದರೆ ಐವರಿಗೆ ಅವಕಾಶ ನೀಡಲಾಗಿತ್ತು. ಈ ವೇಳೆ ಮೃತದೇಹ ಅದಲು ಬದಲಾಗಿರುವುದು ಬೆಳಕಿಗೆ ಬಂದಿದೆ.
ಆರೋಗ್ಯ ಸಿಬ್ಬಂದಿಯ ನಿರ್ಲ್ಯಕ್ಷ್ಯದ ಕುರಿತು ವ್ಯಕ್ತಿಯ ಮನೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಮಶಾನದಲ್ಲಿ ನೂರಾರು ಮಂದಿ ಆಗಮಿಸಿದ್ದು, ಅಸಮಧಾನ ವ್ಯಕ್ತಪಡಿಸಿದ್ದಾರೆ. ತಾಲೂಕು ಅರೋಗ್ಯಾಧಿಕಾರಿ ನಾಗಭೂಷಣ್, ಸಹಾಯಕ ಆಯುಕ್ತ ರಾಜು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಘಟನೆಯ ನಂತರ ನೇರಂಬಳ್ಳಿ ನಿವಾಸಿಯ ಮೃತದೇಹವನ್ನು ಸ್ಮಶಾನಕ್ಕೆ ತರಲಾಯಿತು. ಸ್ಮಶಾನದಲ್ಲಿ ಮನೆಯವರ ಎದುರಿಗೆ ಪರೀಕ್ಷೆ ನಡೆಸಿದ ನಂತರ ಅಂತ್ಯಸಂಸ್ಕಾರ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು