kundapura constituency; ಕುಂದಾಪುರ- ಮುಚ್ಚಿದ ಶಾಲೆಗಳಲ್ಲಿ ಮತಗಟ್ಟೆ

ಕಟ್ಟಡ ಉಪಯೋಗ ರಹಿತವಾಗುವುದನ್ನು ತಪ್ಪಿಸಲು ಈ ಉಪಾಯ ಫ‌ಲಿಸಲಿದೆ.

Team Udayavani, Apr 22, 2023, 12:20 PM IST

kundapura constituency; ಕುಂದಾಪುರ- ಮುಚ್ಚಿದ ಶಾಲೆಗಳಲ್ಲಿ ಮತಗಟ್ಟೆ

ಕುಂದಾಪುರ: ವಿದ್ಯಾರ್ಥಿ ಕೊರತೆ ಸೇರಿದಂತೆ ಹಲವು ಕಾರಣಕ್ಕೆ ಶಾಲೆಗಳು ಮುಚ್ಚಿದರೂ ಅದೇ ಶಾಲೆಗಳು ಮತಗಟ್ಟೆಗಳಾಗಿ ಕಾರ್ಯಾ ಚರಿಸುವುದರಿಂದ ಚುನಾವಣೆ ಬರುವಾಗ ಕೇವಲ ಒಂದು ದಿನಕ್ಕಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ದುರಸ್ತಿ ಪಡಿಸಬೇಕಾದ ಸ್ಥಿತಿ ಇದ್ದು, ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಮುಚ್ಚಿರುವ 8 ಸರಕಾರಿ ಶಾಲೆಗಳನ್ನು ಚುನಾವಣೆಗಾಗಿ ಮತಗಟ್ಟೆಯಾಗಿಸಲಾಗಿದೆ. ಸಣ್ಣಪುಟ್ಟ ದುರಸ್ತಿ ಕಾರ್ಯ ಮಾಡಿಸಲಾಗಿದೆ.

ಮುಚ್ಚುಗಡೆ
ಕುಂದಾಪುರ ನಗರ ವ್ಯಾಪ್ತಿಯಲ್ಲೇ ಇರುವ ದಶಕಗಳ ಇತಿಹಾಸದ ಖಾರ್ವಿಕೇರಿ ಸರಕಾರಿ ಪ್ರಾಥಮಿಕ ಶಾಲೆಯು ಕಳೆದ ವರ್ಷ ವಿದ್ಯಾರ್ಥಿಗಳಿಲ್ಲದೆ ಮುಚ್ಚಲ್ಪಟ್ಟಿದ್ದು, ಉಪಯೋಗ ಇಲ್ಲದಿರುವ ಕಟ್ಟಡವನ್ನು ಚುನಾವಣೆಗಾಗಿ ಸಿದ್ಧಪಡಿಸಲಾಗಿದೆ. ಹೀಗೆ ಈ ಚುನಾವಣೆ ಮುಗಿದರೆ ಮತ್ತೆ ಕಟ್ಟಡ ಉಪಯೋಗ ಇಲ್ಲದೇ ಮತ್ತೂಂದು ಚುನಾವಣೆಗೆ ಸಿದ್ಧಪಡಿಸಲಾಗುತ್ತದೆ.

ದುರಸ್ತಿ
ಪ್ರಸ್ತುತ ಮತದಾನದ ದೃಷ್ಟಿಯಿಂದ ವಿವಿಧ ಶಾಲೆಗಳನ್ನು ದುರಸ್ತಿ ಪಡಿಸಲಾಗಿದೆ. ಜತೆಗೆ ಕೆಲವೆಡೆ ಶಿಥಿಲಗೊಂಡಿದ್ದ ಬಾಗಿಲುಗಳನ್ನು ಕೂಡ ದುರಸ್ತಿ ಪಡಿಸಿ ಬೀಗ ಹಾಕುವ ಕಾರ್ಯ ಮಾಡಲಾಗಿದೆ. ವಿದ್ಯುತ್‌ ಸಂಪರ್ಕ, ಶೌಚಾಲಯ ದುರಸ್ತಿ, ನೀರಿನ ಸಂಪರ್ಕ ಕೂಡ ಮಾಡಲಾಗಿದೆ. ಹೀಗೆ ಈ ಚುನಾವಣೆಗೆ ದುರಸ್ತಿ ನಡೆದಿದೆ. ಮುಂದಿನ ಚುನಾವಣೆಗೆ ಮತ್ತದೇ ಕಥೆ. ಇಂತಹ ದುರಸ್ತಿ ಕಾರ್ಯಗಳಿಗೆ ಹೇಗೆ ಅನುದಾನ ಹೊಂದಿಸಲಾಗುತ್ತದೆ ಎಂದರೆ, ಇದಕ್ಕಾಗಿ ಪ್ರತ್ಯೇಕ ಅನುದಾನ ಬರುವುದಿಲ್ಲ. ಆದರೆ ಬೇರೆ ಹೊಸ ಕಟ್ಟಡಗಳಿಗೆ ಬಂದ ಅನುದಾನಗಳಲ್ಲಿ ಕಡಿಮೆ ಮೊತ್ತಕ್ಕೆ ಟೆಂಡರ್‌ ಆಗಿ ಉಳಿದ ಅನುದಾನವನ್ನು ಇಂತಹ ದುರಸ್ತಿ ಕಾರ್ಯಗಳಿಗೆ ಬಳಸಲಾಗುತ್ತದೆ ಎಂದು ಅಧಿಕಾರಿಗಳು ಗುಟ್ಟಿನಲ್ಲಿ ಹೇಳುತ್ತಾರೆ.

ಉಪಯೋಗ ಶೂನ್ಯ
ಮುಚ್ಚಿರುವ ಅನುದಾನಿತ, ಖಾಸಗಿ ಶಾಲೆಗಳು ಖಾಸಗಿಯವರ ಒಡೆತನ ದಲ್ಲಿರುವ ಕಾರಣ ಅದನ್ನು ಏನೂ ಮಾಡುವಂತಿಲ್ಲ. ಆದರೆ ಪಾಳು ಬಿದ್ದಿರುವ, ಉಪಯೋಗ ಇಲ್ಲದಿರುವ ಸರಕಾರಿ ಶಾಲಾ ಕಟ್ಟಡಗಳನ್ನು ಬೇರೆ ಯಾವುದಾದರೂ ಸರಕಾರಿ ಉದ್ದೇಶಗಳಿಗೆ ಬಳಕೆ ಮಾಡಬಹುದು. ಉಪಯೋಗ ಇಲ್ಲದ ಶಾಲೆಗಳನ್ನು ಚುನಾವಣೆ ಸಂದರ್ಭದಲ್ಲಿ ಖರ್ಚು ಮಾಡಿ ದುರಸ್ತಿ ಪಡಿಸಲಾಗುತ್ತದೆ. ಸಾಕಷ್ಟು ಸರಕಾರಿ ಕಚೇರಿಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯಾಚರಿಸುತ್ತಿದ್ದು, ಒಂದು ವೇಳೆ ಕಟ್ಟಡವನ್ನು ಯಾವುದಾದರೂ ಸರಕಾರಿ ಉದ್ದೇಶಕ್ಕೆ ಬಳಕೆ ಮಾಡಿದರೆ ಕಟ್ಟಡ ಉಳಿಯುವ ಜತೆಗೆ ಪರಿಸರವೂ ಸ್ವಚ್ಛವಾಗಿರುತ್ತದೆ. ಜತೆಗೆ ಪ್ರತೀ ಬಾರಿ ಚುನಾವಣೆಯ ಸಂದರ್ಭದಲ್ಲಿ ಲಕ್ಷಾಂತರ ರೂ. ಖರ್ಚು ಮಾಡಿ ದುರಸ್ತಿ ಪಡಿಸುವುದು ಉಳಿಯುತ್ತದೆ. ಮತದಾನ ನಡೆದು ಬೀಗ ಹಾಕಿ ತೆರಳಿದರೆ ಮುಂದಿನ ದಿನಗಳಲ್ಲಿ ಶಾಲೆಗೆ ಯಾರು ಬಂದರೂ ಇಲಾಖೆಗೆ ಗೊತ್ತಾಗುವುದಿಲ್ಲ.

ಶಾಲಾ ಕಟ್ಟಡ ಉಪಯೋಗ
ಈ ನಿಟ್ಟಿನಲ್ಲಿ ಜಿ.ಪಂ. ಸಿಇಒ ಪ್ರಸನ್ನ ಅವರು ಕೆಲವು ದಿನಗಳ ಹಿಂದೆ ತಾ.ಪಂ. ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಚುನಾವಣೆ ಬಳಿಕ ಸರಕಾರದ ವಿವಿಧ ಇಲಾಖೆಗಳ ಉಪಯೋಗಕ್ಕೆ ಬಾಡಿಗೆ ಕಟ್ಟಡದ ಬದಲಿಗೆ ಶಾಲಾ ಕಟ್ಟಡವನ್ನು ಸುವ್ಯವಸ್ಥಿತವಾಗಿ ಬಳಸುವ ಕುರಿತು ಯೋಚಿಸೋಣ. ಜಾಗದ ಹಸ್ತಾಂತರ, ಕಟ್ಟಡವನ್ನಷ್ಟೇ ತಾತ್ಕಾಲಿಕವಾಗಿ ಆಯಾ ಇಲಾಖೆಗೆ ಅಧೀನಕ್ಕೆ ನೀಡಿ ಉಪಯೋಗವಾಗುವಂತೆ ಮಾಡೋಣ ಎಂದಿದ್ದಾರೆ.

ಕಟ್ಟಡ ಉಪಯೋಗ ರಹಿತವಾಗುವುದನ್ನು ತಪ್ಪಿಸಲು ಈ ಉಪಾಯ ಫ‌ಲಿಸಲಿದೆ. ಸರಕಾರಕ್ಕೆ ಖಾಸಗಿಯವರಿಗೆ ನೀಡುವ ಬಾಡಿಗೆಯೂ ಉಳಿತಾಯವಾಗಲಿದೆ.

ಯಾವೆಲ್ಲ ಶಾಲೆ
ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕುಂದಾಪುರ ತಾಲೂಕಿನ ಪುರಸಭೆ ವ್ಯಾಪ್ತಿಯ ಖಾರ್ವಿಕೇರಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎರಡು ಮತಗಟ್ಟೆಗಳು, ಕೋಡಿ ಸೋನ್ಸ್‌ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಬ್ರಹ್ಮಾವರ ತಾಲೂಕಿನ ಮಣೂರಿನ ಶ್ರೀರಾಮ ಪ್ರಸಾದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಪಾರಂಪಳ್ಳಿಯ ಗಜಾನನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, 33 ಶಿರೂರಿನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಹನೆಹಳ್ಳಿಯ ನವಭಾರತ ಅನುದಾನಿತ ಹಿರಿಯ ಪ್ರಾಥಮಿಕ
ಶಾಲೆ ಕೂರಾಡಿ.

ಸಿದ್ಧಪಡಿಸಲಾಗಿದೆ.
ಕುಂದಾಪುರ ಶೈಕ್ಷಣಿಕ ವಲಯದಲ್ಲಿ ತಾತ್ಕಾಲಿಕವಾಗಿ ಮುಚ್ಚಿದ್ದ ಎರಡು ಶಾಲೆಗಳನ್ನು ಚುನಾವಣೆಗಾಗಿ ಸಿದ್ಧಪಡಿಸಲಾಗಿದೆ.
-ಕಾಂತರಾಜು ಸಿ.ಎಸ್‌.
ಶಿಕ್ಷಣಾಧಿಕಾರಿ, ಕುಂದಾಪುರ

*ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.