ಕುಂದಾಪುರ : ಪೊಲೀಸರ ಮೇಲೆ ಹಲ್ಲೆ ಪ್ರಕರಣ: ಇಬ್ಬರಿಗೆ ನಿರೀಕ್ಷಣ ಜಾಮೀನು
Team Udayavani, Jun 18, 2022, 10:30 PM IST
ಕುಂದಾಪುರ : ಕೋಟದ ಕೊರಗರ ಕಾಲನಿಯ ರಾಜೇಶ್ ಅವರ ಮೆಹೆಂದಿ ಕಾರ್ಯಕ್ರಮದಲ್ಲಿ ಕೊರಗರ ಮೇಲಿನ ಕೋಟ ಪೊಲೀಸರ ದೌರ್ಜನ್ಯ ಕುರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಾಗರಾಜ್ ಪುತ್ರನ್ ಹಾಗೂ ನಾಗೇಂದ್ರ ಪುತ್ರನ್ ಅವರಿಗೆ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣ ಜಾಮೀನು ಮಂಜೂರು ಮಾಡಿದೆ.
ಕೊರಗ ಸಮುದಾಯದ ರಾಜೇಶ್ ಕೋಟ ಎಸ್ಐ ಸಂತೋಷ್ ಬಿ. ಪಿ. ಮತ್ತಿತರರ ವಿರುದ್ಧ ದಾಖಲಿಸಿದ ದೂರಿಗೆ ಪ್ರತಿಯಾಗಿ, ರಾಜೇಶ್, ನಾಗೇಂದ್ರ ಪುತ್ರನ್ ಹಾಗೂ ನಾಗರಾಜ ಪುತ್ರನ್ ಮತ್ತಿತರರು ಹಲ್ಲೆ ನಡೆಸಿ, ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿರುವುದಲ್ಲದೆ ಜಾತಿ ನಿಂದನೆ ಮಾಡಿರುವುದಾಗಿ ಕೋಟ ಠಾಣೆಯ ಕಾನ್ಸ್ಟೆಬಲ್ ಜಯರಾಮ್ ಪ್ರತಿದೂರು ನೀಡಿದ್ದರು.
ಈ ಕುರಿತಂತೆ ಕೋಟ ಠಾಣೆಯಲ್ಲಿ ದೂರು – ಪ್ರತಿದೂರು ದಾಖಲಾಗಿತ್ತು. ಆರೋಪಿಗಳ ಪರ ಕುಂದಾಪುರದ ವಕೀಲರಾದ ಶ್ಯಾಮ ಸುಂದರ ನಾಯರಿ ಹಾಗೂ ನೀಲ್ ಬ್ರಿಯಾನ್ ಪಿರೇರಾ ವಾದಿಸಿದ್ದರು.
ಇದನ್ನೂ ಓದಿ : ಹುಣಸೂರು : ಕಾರಿನ ಟೈರ್ ಪಂಚರ್ ಆಗಿ ಟ್ಯಾಂಕರ್ ಗೆ ಢಿಕ್ಕಿ; ಯುವತಿಯರಿಬ್ಬರ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು